ಬುಧವಾರ, 07-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ನೀರಿನ ಹೆಸರಿನಲ್ಲಿ ಕಣ್ಣೀರು.....

ಈ ನೀರು, ರಸ್ತೆ, ವಿದ್ಯುತ್ ಮೊದಲಾವುಗಳು ಜನಸಾಮಾನ್ಯರಿಗಾಗಿ ಇರುವುದಲ್ಲ ಎನ್ನುವುದು ಮಂಗಳೂರಿನಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ನೀರಿನ ಖಾಸಗೀಕರಣ ಮತ್ತು ದರ ಏರಿಕೆಯನ್ನು ವಿರೋದಿಸಿ ಮಂಗಳೂರು ಮಹಾನಗರ ಪಾಲಿಕೆಯ ಮುಂದೆ ಪ್ರತಿಭಟಿಸಿದವರನ್ನು ಯದ್ವಾತದ್ವಾ ಥಳಿಸಿದುದೇ ಅಲ್ಲದೆ, ಈ ದಬ್ಬಾಳಿಕೆಯನ್ನು ಅಷ್ಟೇ ಆತ್ಮವಿಶ್ವಾಸದಿಂದ ಸಮರ್ಥಿಸಿಕೊಂಡಿದ್ದಾರೆ ಬಿಜೆಪಿ ನಾಯಕರು. ಜನರ ಮೇಲೆ ದೌರ್ಜನ್ಯ ಎಸಗಿದ ಅಕಾರಿಗಳ ವಿರುದ್ಧ ಯಾವ ಕ್ರಮವೂ ತೆಗೆದುಕೊಂಡಿಲ್ಲ.

ಪೊಲೀಸ್ ಅಕಾರಿಗಳಿಗೆ ಬಹುಮಾನ ಘೋಷಿಸಿಲ್ಲ’ ಎನ್ನುವುದೊಂದೇ ಸಮಾಧಾನಕರ ಸಂಗತಿ. ಮಂಗಳೂರು ಎಂದಲ್ಲ, ಇಡೀ ರಾಜ್ಯದ ರಸ್ತೆಗಳತ್ತ ಒಮ್ಮೆ ಕಣ್ಣು ಹಾಯಿಸಿದರೆ ಸಾಕು; ಈ ರಸ್ತೆಗಳು ಯಾರವು?, ಯಾರಿಗಾಗಿ ಇರುವಂಥವು? ಎಂಬ ಪ್ರಶ್ನೆ ಕಾಡದೇ ಇರುವುದಿಲ್ಲ. ಅದಿರು ಲಾರಿಗಳ ಹೆಣ ಭಾರವನ್ನು ಹೊರಲು ಸಾಧ್ಯವಾಗದೆ ಛಿದ್ರವಾಗಿ ಬಿದ್ದಿರುವ ರಸ್ತೆಗಳು, ಜನಸಾಮಾನ್ಯರ ಪಾಲಿಗೆ ಬಳಸಿ ಎಸೆದ ಎಂಜಲು ಊಟ ಮಾತ್ರ. ಮಂಗಳೂರಿನಂತಹ ನಗರದಲ್ಲಿ ರಸ್ತೆಗಳ ದುಸ್ಥಿತಿಯಿಂದ ಜನರು ಅನುಭವಿಸುವ ದೈನಂದಿನ ಸಂಕಟ, ವಿವರಣೆಗೆ ನಿಲುಕಂದಥದು. ಇದೀಗ ರಸ್ತೆಯ ಬೆನ್ನಿಗೇ ನೀರು ಕೂಡ ಮಂಗಳೂರಿನ ಜನರಿಗೆ ತುಟ್ಟಿಯಾಗತೊಡಗಿದೆ.

ನೇತ್ರಾವತಿ ನದೀ ಪಾತ್ರದಲ್ಲೇ ಮಂಗಳೂರು ಹರಡಿದ್ದರೂ, ನೀರಿಗಾಗಿ ಈ ನಗರದ ಜನಸಾಮಾನ್ಯರು ಲಾಠಿ ಏಟುಗಳನ್ನು ತಿನ್ನಬೇಕಾಗಿದೆ. ಇದು ಭವಿಷ್ಯದಲ್ಲಿ ಈ ನಾಡು ಏನೇನು ಅನುಭವಿಸಬೇಕಾಗಿದೆ ಎನ್ನುವುದಕ್ಕೆ ಒಂದು ಸ್ಯಾಂಪಲ್ ಆಗಿದೆ. ಇಲ್ಲಿ ಕುಡಿಯುವುದಕ್ಕೆ ಬಳಸುವ ನೀರಿಗಾಗಿ ಜನರು ಲಾಠಿ ಏಟನ್ನು ತಿನ್ನಬೇಕಾಗುತ್ತದೆ.

ಹಾಗೆಂದು ನೀರಿನ ಕೊರತೆಯಿದೆಯೆಂದು ಘೋಷಿಸುವುದಕ್ಕಾಗುವುದಿಲ್ಲ. ಯಾಕೆಂದರೆ, ಇಲ್ಲಿರುವ ಎಂಆರ್‌ಪಿ‌ಎಲ್, ಯುಬಿ, ಎಂಸಿ‌ಎಫ್ ಇದ್ಯಾವುದೂ ನೀರಿಗಾಗಿ ಒದ್ದಾಡಿದ ಉದಾಹರಣೆಗಳಿಲ್ಲ.

ಜನಸಾಮಾನ್ಯರು ಯಾಕೆ ದೈನಂದಿನ ಬಳಕೆಯ ವಿದ್ಯುತ್‌ಗಾಗಿ ಒದ್ದಾಡಬೇಕಾಗಿದೆ, ಕುಡಿಯುವ ನೀರಿಗಾಗಿ ಭಾರೀ ಬೆಲೆಯನ್ನು ತೆರಬೇಕಾಗಿದೆ ಎನ್ನುವುದಕ್ಕೆ ಇಲ್ಲಿದೆ ಉತ್ತರ.

ಜನಸಾಮಾನ್ಯರ ಮೂಲಭೂತ ಅವಶ್ಯಕತೆಗಳು ಮುಗಿದ ಬಳಿಕವೇ ನೀರನ್ನು ಇತರ ಉದ್ಯಮಗಳಿಗೆ ಬಳಸಲು ಅವಕಾಶ ನೀಡಬಹುದೆಂಬ ಜಲನೀತಿಯೇ ಇದ್ದರೂ, ಇಂದು ಉದ್ಯಮಗಳು ಬಳಸಿ ಉಳಿದ ನೀರನ್ನು ಆಡಳಿತವು ಜನಸಾಮಾನ್ಯರ ಬಳಕೆಗೆ ನೀಡುತ್ತಿದೆ. ಇದು ಬರೇ ಮಂಗಳೂರಿನಂತಹ ನಗರಗಳಿಗೆ ಸೀಮಿತವಾಗಿಲ್ಲ. ಇಡೀ ದೇಶದ ’ಕ-ಣ್ಣೀರಿನ ಕತೆ ಇದು.

ಒಂದು ಸಣ್ಣ ಉದಾಹರಣೆಯನ್ನು ನೀಡುವುದಾದರೆ, ಗಣಿಗಾರಿಕೆಗಾಗಿ ಈ ದೇಶದಲ್ಲಿ 77 ದಶಲಕ್ಷ ಲೀಟರ್ ನೀರನ್ನು ಬಳಸಲಾಗುತ್ತಿದೆ. ಇದೇ ಹೊತ್ತಿನಲ್ಲಿ ಕುಡಿಯುವ ನೀರಿಗೂ ತತ್ತ್ವಾರವಿರುವ ಲಕ್ಷಾಂತರ ಜನರು, ಕೊಳಕು ನೀರನ್ನು ಬಳಸುತ್ತಾ ಸಾವಿನಂಚಿನಲ್ಲಿ ನಿಂತಿದ್ದಾರೆ.

ಜನರು ಮೂಲಭೂತ ಅವಶ್ಯಕತೆಗಾಗಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರತಿಭಟನೆಗೆ ಇಳಿದಾಗ ಅದನ್ನು ಗೌರವಿಸುವುದು ಸರಕಾರದ ಕರ್ತವ್ಯವಾಗಿರುತ್ತದೆ. ಒಂದು ರಾಜಕೀಯ ಸಂಘಟನೆಯೇ ಆಗಿರಲಿ, ಅದು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸಿದಾಗ ಅದನ್ನು ಹಿಂಸೆಯ ಮೂಲಕ ಮಣಿಸಲು ಹೊರಡುವುದು ಪ್ರಜಾಸತ್ತೆಗೆ ಮಾಡುವ ಅವಮಾನವಾಗುತ್ತದೆ.

ಹಾವೇರಿಯಲ್ಲಿ ಗೊಬ್ಬರ ಕೇಳಿದ ರೈತರ ವಿರುದ್ಧ ಸರಕಾರ ಏನನ್ನು ಮಾಡಿತೋ, ಮಂಗಳೂರಿನಲ್ಲಿ ನೀರು ಕೇಳಿದ ಜನಸಾಮಾನ್ಯರ ಮೇಲೂ ಅದನ್ನೇ ಮಾಡಿತು. ಒಂದು ವೇಳೆ ಅಮಾನವೀಯ ಲಾಠಿ ಚಾರ್ಜ್‌ನಲ್ಲಿ ಪೊಲೀಸರ ವೈಫಲ್ಯವಿದೆ ಎಂದಾದರೆ, ಆ ವೈಫಲ್ಯವನ್ನು ಒಪ್ಪಿಕೊಂಡು ಅಕಾರಿಗಳನ್ನು ಅಮಾನತುಗೊಳಿಸುವುದು ಸರಕಾರದ ಕರ್ತವ್ಯವಾಗಿತ್ತು. ಆದರೆ ಈವರೆಗೆ ಯಾವನೇ ಅಕಾರಿಯನ್ನು ಅಮಾನತುಗೊಳಿಸಿಲ್ಲ. ಬದಲಿಗೆ ಪೊಲೀಸರ ಕೃತ್ಯವನ್ನು ಸ್ಥಳೀಯ ಜನಪ್ರತಿನಿಗಳು ಸಮರ್ಥಿಸಿಕೊಂಡಿದ್ದಾರೆ.

ಒಂದನ್ನು ಸರಕಾರ ನೆನಪಿನಲ್ಲಿಟ್ಟುಕೊಳ್ಳಬೇಕು. ಪ್ರಜಾಸತ್ತಾತ್ಮಕವಾಗಿ, ಅಹಿಂಸೆಯ ಮೂಲಕ ನಡೆಸಿದ ಪ್ರತಿಭಟನೆಗೆ ಸರಕಾರ ಕಿವುಡಾದಾಗ ಅದು ಅಸಾಂವಿಧಾನಿಕ ಪ್ರತಿಭಟನೆಗೆ ದಾರಿಯನ್ನು ತೆರೆದುಕೊಡುತ್ತದೆ. ಪ್ರಜಾಸತ್ತಾತ್ಮಕ ಪ್ರತಿಭಟನೆ ಸೋತಷ್ಟೂ, ಅದು ಹಿಂಸಾತ್ಮಕ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತದೆ. ನರ್ಮದಾ ಬಚಾವೋ’ ಆಂದೋಲನವನ್ನೇ ಉದಾಹರಣೆಯಾಗಿ ತೆಗೆದುಕೊಳ್ಳೋಣ. ಹಲವು ದಶಕಗಳಿಂದ ಸರಕಾರದ ಜನವಿರೋ ಯೋಜನೆಯ ವಿರುದ್ಧ ಮೇಧಾ ಪಾಟ್ಕರ್ ಹೋರಾಟವನ್ನು ನಡೆಸುತ್ತಾ ಬಂದಿದ್ದಾರೆ. ಆದರೆ ಸರಕಾರವಾಗಲಿ, ನ್ಯಾಯಾಲಯ ವಾಗಲಿ ಅವರ ಹೋರಾಟವನ್ನು ಗಂಭೀರವಾಗಿ ತೆಗೆದುಕೊಂಡು ನ್ಯಾಯವನ್ನು ಕೊಡಲು ಈವರೆಗೆ ಮುಂದಾಗಿಲ್ಲ.

ಇದೇ ಸಂದರ್ಭದಲ್ಲಿ ಕೊಲ್ಕತಾ ಸೇರಿದಂತೆ ಈಶಾನ್ಯ ಭಾಗದಲ್ಲಿ ನಕ್ಸಲೀಯ ಚಳವಳಿಗೆ ಹೆದರಿದ ಸರಕಾರ ತಕ್ಷಣವೇ ವಿವಿಧ ಪ್ಯಾಕೇಜುಗಳನ್ನು ಘೋಷಿಸಿದೆ. ನಂದಿಗ್ರಾಮದಿಂದ ಹಿಂದೆ ಸುರಿಯುವ ಕುರಿತಂತೆ ಸರಕಾರ ತಾಳಿಕೊಂಡು ಬಂದ ದಿವ್ಯ ನಿರ್ಲಕ್ಷ್ಯವೇ ಈ ದೇಶದಲ್ಲಿ ನಕ್ಸಲ್ ಚಳವಳಿಯನ್ನು ಬೆಳೆಸಿತು.

ಮಂಗಳೂರಿನಲ್ಲಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ನೀರಿನ ದರದ ವಿರುದ್ಧ ಪ್ರತಿಭಟನೆ ನಡೆಸಿದ ಜನಸಾಮಾನ್ಯರ ವಿರುದ್ಧ ಲಾಠಿಯನ್ನು ಪ್ರಯೋಗಿಸಿದ ಸರಕಾರ, ಬೆಳ್ತಂಗಡಿ, ಚಿಕಮಗಳೂರಿನಂತಹ ಪ್ರದೇಶಗಳಲ್ಲಿ ಪ್ಯಾಕೇಜ್’ಗಳನ್ನು ಘೋಷಿಸುತ್ತದೆ. ಈ ಮೂಲಕ ಸರಕಾರವೇ ನಕ್ಸಲರ ಹಿಂಸಾತ್ಮಕ ಚಳವಳಿಯನ್ನು ಗೌರವಿಸಿದಂತಾಗುವುದಿಲ್ಲವೇ?

ಆದುದರಿಂದ ಮಂಗಳೂರಿನಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಅಮಾನ ವೀಯವಾಗಿ ದಾಳಿ ನಡೆಸಿದ ಪೊಲೀಸರ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಬೇಕು.

ಅಷ್ಟೇ ಅಲ್ಲ, ಘಟನೆಗಾಗಿ ಮನಪಾ ಮೇಯರ್ ಜನರ ಕ್ಷಮೆ ಯಾಚಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯ ನೀರಿನ ಸಮಸ್ಯೆಯ ಕುರಿತು ಕೂಲಂಕಷವಾಗಿ ಚರ್ಚೆ ನಡೆಸಿ ಒಂದು ತೀರ್ಮಾನಕ್ಕೆ ಬರಬೇಕು.

ಮಳೆಗಾಲದಲ್ಲಿ, ನೇತ್ರಾವತಿ ನದಿ ತುಂಬಿ ಹರಿಯುವ ಹೊತ್ತಿನಲ್ಲಿ ನೀರಿಗಾಗಿ ಆಗ್ರಹಿಸಿ ಜನತೆ ಲಾಠಿ ಏಟು ತಿನ್ನುವುದು ಮಂಗಳೂರು ಮಹಾನಗರ ಪಾಲಿಕೆಗೆ ಮಾತ್ರವಲ್ಲ, ಕರ್ನಾಟಕಕ್ಕೇ ಶೋಭೆಯಲ್ಲ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಗ.ಕ.ಕರಾವಳಿ ವರದಿಗಾರರು
ಪ್ರಕಟಿಸಿದ ದಿನಾಂಕ : 2008-08-13

ಇತರ ಸಂಭಂದಪಟ್ಟ ವರದಿಗಳು
»
»ಭಾರತದ ಚೊಚ್ಚಲ ಒಲಿಂಪಿಕ್ಸ್ ಸ್ವರ್ಣ ಗೆದ್ದ ಅಭಿನವ್ ಬಿಂದ್ರಾ
»ಆಶ್ರಮ ವಿದ್ಯಾರ್ಥಿಗಳ ಸಾವು: ರಿತುರಾಜ್ ಬಂಧನ
»

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಅಮಾಯಕರನ್ನು ಹಿಂಸಿಸುವುದು ನಮ್ಮನ್ನು ನಾವೆ ಹಿಂಸಿಸಿಕೊಂಡಂತೆ
»ಕುಂಕುಮವಿಟ್ಟರೆ ಗೆಟ್ ಔಟ್!
»ಸಬಕೋ ಸನ್ಮತಿ ದೇ ಭಗವಾನ್ .....
»ಟಾಪ್ ಸಿ.ಎಮ್
»ಸರ್ ಎಂ.ವಿಶ್ವೇಶ್ವರಯ್ಯನವರಿಗೆ ನಮನ
»ಅಪ್ಪಿಕೋ ಚಳವಳಿ ನೆನಪಿನ ಹಬ್ಬ
»ಮನೆಯೊಳಗೆ ಬೇರುಗಳ ಸುಂದರ ಲೋಕ
»ಈ ಸಂದಿಗ್ಧ ಕಾಲದಲ್ಲಿ ನೀವು ಯಾರ ಪರ?
»ಅವನಿಗೆ ಅಬ್ದುಲ್ ಕಲಾಂ ಕಾಗದ ಬರೆದರು!
»ದಿನದ ಸುದ್ದಿ- ಹಾಡು ಹಕ್ಕಿಗೆ ಕೃತಕ ಗೂಡು
»ಜೀವಕ್ಕೆ ಬೆಲೆಯೆಲ್ಲಿದೆ? ಹೈದರಾಬಾದ್, ಜೈಪುರ, ಬೆಂಗಳೂರು, ಅಹ್ಮದಾಬಾದ್, ದೆಹಲಿ...
»ಕೋಮು ದ್ವೇಷದ ಸುಗ್ಗಿಯ ಕುಯಿಲು...
»ಅಲ್ಲಿ ಮಹಾಸ್ಫೋಟ, ಇಲ್ಲಿ ಮಹಾಪ್ರಯೋಗ
»ಮಧ್ಯ ಬೆರಳಿನ ಪುರಾಣ - History of the Middle Finger
»ಸಮುದ್ರ ಮಥನ-1 ಏಳು, ಏಳೆನ್ನುವ ಶ್ರೀರಾಮ
»ಹೋದವರು ಮತ್ತೆ ಬರಲಾರರು
»ವಿಶ್ವದ ಹುಟ್ಟಿನ ಪತ್ತೆ ಯತ್ನ...ವಿಜ್ಞಾನಿಗಳಿಂದ ಪ್ರೊಟಾನ್ ಸ್ಪೋಟ
»ಕಂದನ ನಗು ಕಸಿದಹೃದಯ ಬೇನೆ .....
»ಡಾ. ರಾಜ್‌ಕುಮಾರ್ ಉದ್ಯಾನವನ, ಬೆಂಗಳೂರು
»ಭಗತ್ ಸಿಂಗ್ ರ ಅಣಿಮುತ್ತುಗಳು.
»ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
»ಮನೆ ಮನಗಳಲ್ಲಿ ಬರಲಿವೆ ಕರೆಂಟ್ ಹೋಗದ ದಿನಗಳು
»ಬೆರಳು ತುಂಡಾಯಿತೇ? ವರಾಹ ಚೂರ್ಣ ಹಚ್ಚಿ ಹೊಸ ಬೆರಳು ಪಡೆಯಿರಿ!
»ವಿಜ್ಞಾನಿಗೆ ಕೈಕೊಟ್ಟ ಕಂಪ್ಯೂಟರ್ ಉಪಕರಣಗಳು..!
»ವಾರದಲ್ಲಿ ಹೊಸಮನೆ ರೆಡಿ
»ಹೆಕ್ಕಿಕೋ, ಪ್ಲಾಸ್ಟಿಕ್ ಹೆಕ್ಕಿಕೋ...
»ಮುದ್ರಿಸುವ ಮುನ್ನ ಯೋಚಿಸಿ...
»ಸಾಫ್ಟ್ವೇರ್ ಕಂಪೆನೀಲಿ ಏನು ಮಾಡ್ತಾರೆ…?
»ಧಾರ್ಮಿಕ ಅಂಧಾರಾಧನೆಯ ಸೋಗಿನಲ್ಲಿ...
»ಮಳೆಗೆ ನಾವೆಷ್ಟು ಸಿದ್ಧ?
»ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ
»ನೀರಿನ ಮೇಲೆ ತೇಲುವ ಕಾರು ಪಾರ್ಕಿಂಗ್ ವ್ಯವಸ್ಥೆ
»Virginity: A virtue or a curse?
»ಭೂಮಿಯ ತಾಪಮಾನದ ಹೆಚ್ಚಳ...ಮನುಕುಲ ತಳಮಳ
»ತಾಯಿಯ ಹಾಲಿನಲ್ಲಿ ಮೊಟ್ಟೆಯ ವಾಸನೆ!
»ನೋವಿಗೆಷ್ಟು ಕಾಸು!
»ಭವಿಷ್ಯದ ತಿಜೋರಿಯಲ್ಲಿ ಭಾರತದ ಬೀಜಗಳು!
»ಪತ್ರೊಡೆಯ ಘಮಕ್ಕೆ ಒಸರುವ ಜೊಲ್ಲು
»ಅಂದು ಸ್ವಾತಂತ್ರ್ಯಕ್ಕೂ ಸಾರ್ಥಕತೆ!
»ಕೆ‌ಆರ್‌ಎಸ್ ಕ್ರೆಸ್ಟ್‌ಗೇಟ್ ಹಿಂದಿನ ಇತಿಹಾಸ
»ಗಂಡಸರೂ ಬಸುರಿ ಆಗುವುದಾಗಿದ್ದರೆ...?!
»ಮೊಬೈಲ್ ಸಿಮ್: ಉಪೇಕ್ಷೆ ಮಾಡದಿರಿ - ಹೀಗೊಂದು ಉಪಯುಕ್ತ ಮಾಹಿತಿ
»ಪ್ರಚಂಡ ಸವಾಲು
»ಅಣ್ಣಾ ನಿನ್ನ ಸೋದರಿಯನ್ನ ಮರೆಯದಿರು..........
»ಸ್ವಾತಂತ್ರ್ಯಕ್ಕಾಗಿ ಜೈಲುವಾಸ: ರಾಜ್ಯದ ಮೊದಲ ಮಹಿಳೆ ಸ್ದಿದಮ್ಮ
»ಛಿದ್ರವಾಗುವ ಮುನ್ನ ಭದ್ರವಾಗೋಣ
» ಮುನ್ನುಗ್ಗುತ್ತಿರುವ ಭಾರತ ಮುಂದಿನ ಸೂಪರ್ ಪವರ್..?
»ವಿಶ್ವಾಸದ ಮೂರು ಮುಖಗಳು ....
»ನೀರಿನ ಹೆಸರಿನಲ್ಲಿ ಕಣ್ಣೀರು.....
»‘ಅರಣ್ಯ’ ರೋದನ.....
»ಸರಕಾರಿ ಬಸ್ಸುಗಳಿರುವುದು ಲಾಭ ಗಳಿಸುವುದಕ್ಕಲ್ಲ
»ಕಲ್ಲು ಗಣಿಗಾರಿಕೆ; ಪಶ್ಚಿಮಘಟ್ಟ ನಾಶಕ್ಕೆ ನಾಂದಿ
»ದಿನವೂ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಅಬ್ಬಿ ಫಾಲ್ಸ್
»ಮರುಪೂರಣದಿಂದ ಹತ್ತಡಿ ಏರಿದ ನೀರು
»ಜನ, ವಾಹನ ದಟ್ಟಣೆಯ ಸುಳಿಯಲ್ಲಿ ಕೆ‌ಆರ್ ಮಾರ್ಕೆಟ್ ಸದಾ ಗಜಿಬಿಜಿ, ಗೌಜು ಗ್ದದಲ, ಗಲೀಜಿನ ವಾತಾವರಣ
»ಬೆಂಗಳೂರು ಸರಣಿ ಸ್ಪೋಟ : ರವಿ ಬೆಳೆಗೆರೆ ಅಭಿಪ್ರಾಯ
»ಕನ್ನಡ ಆಡಳಿತ ಭಾಷೆ ಅನ್ನೋದು ನೆನಪಿರಲಿ!
»ಗಣಿ: ನಿಸರ್ಗ, ಬೊಕ್ಕಸ ಕೊಳ್ಳೆ
»ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂದು ಮಂಜು ಕವಿದ ಮಧ್ಯಾಹ್ನ
»ಬಹುಜನ ಹಿತಾಯ ಬಹುಜನ ಸುಖಾಯ : ಹೋರಾಟ ನಿಮ್ಮದು ಬೆಂಬಲ ನಮ್ಮದು
»ಮುಂಬೈ ರೊಟ್ಟಿ ಕಾರ್ಖಾನೆಯೊಂದರೊಳಗಣ ನೋಟ
»ಅತಿಯಾದ ಸೆಖೆಯೇ? ಟ್ರೈ ಮಾಡಿ-ಯು.ಎಸ್.ಬಿ. ಎಸಿ ಶರ್ಟ್
»ಕಣ್ಣಿಲ್ಲದ ಅಜ್ಜಿಯ ಬಳಿ ದಾರಿ ಕಾಣದ ತಬ್ಬಲಿಗಳು
»ಅರವತ್ತು ವರ್ಷಗಳ ಬಳಿಕ ಹಿಂದಕ್ಕೆ ಬಂದ ಪತ್ರ
»ತೋಟವನ್ನೇ ನುಂಗುತ್ತಿರುವ ಬೇರುಹುಳಗಳು : ಕಂಗಾಲಾದ ಅಡಿಕೆ ಬೆಳೆಗಾರರು
»ತುಂಗೆಯ ಮಡಿಲಿಗೆ ಪಕ್ಷಿ ಜೀವಗಳ ಬಾಗಿನ!
»ಬಾಂಬ್ ಸೂಟ್ ಎಂಬ ರಕ್ಷಾ ಕವಚ
»ಕಾವೇರಿ ಕಣಿವೆಯಲ್ಲಿ :ಚುಕ್...ಪುಕ್... ಬಾಬಾ ಎಕ್ಸ್‌ಪ್ರೆಸ್
»ಶ್ರೀರಾಮ ಸೇತುವೆಯನ್ನು ಧ್ವಂಸಗೈದವರು ಯಾರು?
» ‘ಪವರ್ ಕಿಂಗ್’ ನಿಂದ ‘ಪವರ್ ಕ್ವೀನ್’ ಅಗುತ್ತಿರುವ ನಮ್ಮ ಮಹಿಳೆಯರು
»ಸಡಿಲ ಪ್ಯಾಂಟ್ ಧರಿಸಿದರೆ ದಂಡ
»ಮೋಡ ಬಿತ್ತನೆ: ಹೆರಿಗೆಯೋ ಗರ್ಭಪಾತವೋ?
»ಸಂಪ್ರದಾಯಸ್ಥ ಹವ್ಯಕರಲ್ಲಿ ಹೊಸ ಗಾಳಿ...
»ರೈತರನ್ನು ಕೊಂದು ಪ್ರತಿಮೆ ಸ್ಥಾಪಿಸಲು ಹೊರಟವರು
»ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಮುನ್ನ
»ಅಣು ಬಂಧ: ಅನಿರೀಕ್ಷಿತ ಮತ್ತು ಆಕಸ್ಮಿಕ
»ಇಹಲೋಕ ತ್ಯಜಿಸಿದ ಬ್ಲಾಗ್‌ಲೋಕದ ಹಿರಿಯಜ್ಜಿ
»ಗಾಳಿ ಶಕ್ತಿಯಿಂದ ಚಲಿಸಲಿದೆ ವಾಹನ !
»ಓಪನ್ ಆಫೀಸ್ ಬಗ್ಗೆ ಒಂದಿಷ್ಟು ಮಾಹಿತಿ
»ಮೂರೂ ಬಿಟ್ಟವರ ಅಮೆರಿಕ ಯಾತ್ರೆ .......
»ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
»ಎಪ್ಪತ್ತರ ಅಜ್ಜಿಗೆ ಅವಳಿ ಮಕ್ಕಳು
»ರೈತರಿಗೆ ಅನ್ನದಾತರಾಗಿರುವ ಐಟಿ ಇಂಜಿನಿಯರ್‌ಗಳು!!
»ಅಮೆರಿಕೆಗಾಗಿ ದೇಶದ ಹಿತ ಬಲಿ
»ದುಬೈ : ಖರ್ಜೂರದಾಕಾರದ ಹೊಸ ಕಟ್ಟಡ : ದುಬೈ ಕ್ರೌನ್
»ಸಿದ್ದರಾಮಯ್ಯ: ಬಾಣಲೆಯಿಂದ ಬೆಂಕಿಗೆ, ಬೆಂಕಿಯಿಂದ ಎಲ್ಲಿಗೆ?
»ಬಿಜೆಪಿಯ ದುರಂತಕ್ಕೆ ಪೀಠಿಕೆ .....?
»ಚಮ್ಮಾರಿಕೆಯೊಂದಿಗೆ ಪುಸ್ತಕ ಪ್ರಕಟಿಸುವ ಧನರಾಜ
»ಹೊಸ ಬ್ಯಾಟರಿ ಕಂಡುಹಿಡಿಯಿರಿ : 300 ಮಿಲಿಯನ್ ಡಾಲರ್ ಗೆಲ್ಲಿರಿ
»ಮುತ್ತು ವೈಜ್ಞಾನಿಕ ಸತ್ಯಾಂಶಗಳು ..ಇಂದು( ಜು 6) ಅಂತಾರಾಷ್ಟ್ರೀಯ ‘ಕಿಸ್ಸಿಂಗ್ ಡೇ’
»ತರೀಕೆರೆ ಏರಿಯಾ - ಚಿಟ್ಟೆಗಳ ಕಲಾವಿದೆ
»ಹುಲಿ ಸಾಮ್ರಾಜ್ಯದಲ್ಲಿ ಕಾಫಿ ಎಸ್ಟೇಟ್!
»ವೈದ್ಯಕೀಯ ಜ್ಞಾನನಿಧಿ ಡಾ| ಕೆ.ಜಿ.ಎಸ್. ಭಟ್
»ಚಳ್ಳಕೆರೆ : ಮಾನವ ರಹಿತ ವಿಮಾನ ಹಾರಾಟ ಕೇಂದ್ರ
»ಏನಿದು ಭಾರತ-ಅಮೆರಿಕ ಅಣು ಒಪ್ಪಂದ? ಇದರಿಂದ ಏನು ಲಾಭ? ವಿರೋಧ ಏಕೆ? ಸಮಗ್ರ ನೋಟ
»ಹಣದುಬ್ಬರವೆಂದರೇನು ಗೊತ್ತಾ?
»ಹೊಳೆ ದಾಟಿದ ಮೇಲೆ...
»ಅಂತರಿಕ್ಷದಲ್ಲಿ ಮದುವೆ ಮಾಡಿಸುತ್ತದೆ ಈ ಸಂಸ್ಥೆ!
»ಜಿರಾಫೆಯನ್ನು ಬಂಧಿಸಿದ ಪೊಲೀಸರು
»ಆ ಸಿಗರೇಟು ಬಿಡಿ ಇ-ಸಿಗರೇಟು ಸೇದಿ
»ರೈತರ ಸರಣಿ ಆತ್ಮಹತ್ಯೆ : ದೊರಕದ ಸಹಾಯ
»ಪಠ್ಯಪುಸ್ತಕ ಬದಲಾವಣೆಗೆ ಸಚಿವರ ‘ಕೇಸರಿ ನಕಾಶೆ’
»’ಮೊಬೈಲ್’ ಗಾದೆಗಳು!!
»ಭಾರತೀಯ ಭಾಷಾ ಗಣಕಲೋಕದ ಪಿತಾಮಹ - ಶ್ರೀ ಕೆ.ಪಿ ರಾವ್
»ಒಂದು ಸಾವಿನ ಮನೆಯ ವೃತ್ತಾಂತ .....
»ಕನ್ನಡ ಕಲಿಸುವುದಕ್ಕೆ ಇಷ್ಟವಿರುವವರಿಗೆ ಅರ್ಪಣೆ
»ಅನಾಥ ಅಜ್ಜಿಗೆ ಸ್ಪೂರ್ಥಿಯ ಆಸರೆ
»ರಾಜಕೀಯ ಚದುರಂಗದಾಟದ ಕಾಯಿಗಳಾಗುತ್ತಿರುವ ರೈತರು
»ಅನ್ನ ತಿನ್ನುವವರು ನೀರುಳಿಸುವ ವಿಧಾನ
»ಗಂಗೆ ಅಂತರ್ಧಾನಳಾದಾಳೇ... !?
»ಚಿಕುನ್‌ಗುನ್ಯಾದಿಂದ ಕರಾವಳಿ ಕಲಿಯಬೇಕಾದ ಪಾಠ
»ಕಾಲ್ ಸೆಂಟರ್‌ಗಳಲ್ಲಿ ತೆರೆಯಲಿ ಏಡ್ಸ್ ಜಾಗೃತಿ ಅಂಗಡಿಗಳು
»ಕರಾವಳಿಯನ್ನು ಕಾಡುತ್ತಿದೆ ಕಮ್ಯುನಿಸ್ಟ್ ಕಳೆ
»ಗಣಿಗಾರಿಕೆ ರಾಷ್ಟ್ರೀಕರಣವಾಗಲಿ
»ಕಳೆ ಪಡೆಯುತ್ತಿರುವ ಹೊಳೆ ಮೀನುಗಾರಿಕೆ ....
» 'Housewives' out of fashion in metros!
»ನನ್ನಜ್ಜನಿಗೊಂದಾನೆಯಿತ್ತು !
»ಕೊಂಕಣಿ ರಾಜ್ಯದ ಕನಸು ಕಂಡಿದ್ದ ಕಾಮತರು
»ಪದ್ಮಪ್ರಿಯಾ ಪ್ರಕರಣದ ಸುತ್ತ...
»... ಆ ಒಂದು ಮುತ್ತಿನ ಕತೆ
»ಈ ಭೇಟಿ ನ್ಯಾಯವೇ?
»ಪಾಸ್‌ಪೋರ್ಟ್ ಅರ್ಜಿಗೆ ಕನ್ನಡ, ಇಂಗ್ಲಿಷ್‌ನ ವೆಬ್‌ಸೈಟ್
»some ಪದ ಕೇಡಿ
»ಈ-ಮೆಲ್ ರಚನೆಯ ಪರಿಚಯ
»ರೈತರಿಗೆ ಮಾತ್ರ ರಬ್ಬರ್ ಗುಂಡು: ಉಳಿದವರಿಗೆ?
»ಇ-ಮೇಲ್ ಅಕೌಂಟನ್ನು ತೆರೆಯುವುದು
»ನೀರಿನಿಂದ ಓಡುವ ಕಾರು!
»ನಾಡಿನ ಒಳಿತಿನ ಚುಕ್ಕಾಣಿ ಅರ್ಚಕನ ಕೈಗೆ?
»ಕೆಂಪಾಯಿತು ಯಡಿಯೂರಪ್ಪನವರ ಹೆಗಲಿನ ಹಸಿರು ಶಾಲು
»