ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ: ಸಚಿವ ಜನಾರ್ದನ ರೆಡ್ಡಿ ಅನಿವಾಸಿ ಕನ್ನಡಿಗರಿಗೆ ಆಹ್ವಾನ |
ಪ್ರಕಟಿಸಿದ ದಿನಾಂಕ : 2008-08-25
ಪ್ರವಾಸೋದ್ಯಮದಲ್ಲಿ ಕರ್ನಾಟಕವನ್ನು ವಿಶ್ವಮಟ್ಟದಲ್ಲಿ ಮುಂಚೂಣಿಗೆ ತರಲು ಅನಿವಾಸಿ ಕನ್ನಡಿಗರು ನೆರವಾಗಬೇಕೆಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನರೆಡ್ಡಿ ಇಲ್ಲಿ ಹೇಳಿದರು.
ಚೆಷೈರ್ (ಲಂಡನ್): ಇಂಗ್ಲೆಂಡ್ ಮತ್ತು ಅಮೆರಿಕದ ಹಲವು ನಗರಗಳಲ್ಲಿ ರಾಜ್ಯದ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮದ ಅಂಗವಾಗಿ ಅಧಿಕಾರಿಗಳ ನಿಯೋಗದೊಂದಿಗೆ ಪ್ರವಾಸ ಕೈಗೊಂಡಿರುವ ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು.
ರಾಜ್ಯದ ಪ್ರವಾಸಿ ತಾಣಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಹೆಚ್ಚಿನ ಸೌಲಭ್ಯ ನೀಡಲು ಸರ್ಕಾರ ಮತ್ತು ಖಾಸಗಿಯವರ ನಡುವೆ ಒಪ್ಪಂದ ಮಾಡಿಕೊಂಡು ಜಂಟಿ ಸಹಯೋಗದಲ್ಲಿ ಯೋಜನೆ ಜಾರಿಗೆ ಆದ್ಯತೆ ನೀಡಲಾಗುವುದು ಎಂದರು.
ಏಕಗವಾಕ್ಷಿ ಪದ್ಧತಿ ಮೂಲಕ ಅಗತ್ಯ ನೆರವು ನೀಡುವ ಕಾರ್ಯಕ್ರಮವನ್ನು ಸರ್ಕಾರ ಈಗಾಗಲೇ ಜಾರಿಗೆ ತಂದಿದೆ. ಇದರಿಂದ ಹೊಸದಾಗಿ ಬಂಡವಾಳ ಹೂಡುವವರಿಗೆ ಸರ್ಕಾರದ ನೆರವು ಪಡೆಯಲು ಯಾವುದೇ ವಿಳಂಬಕ್ಕೆ ಅವಕಾಶ ಇಲ್ಲ. ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ವನ್ಯಪ್ರಾಣಿಗಳ ರಾತ್ರಿ ಸಫಾರಿ ಆರಂಭಿಸುವು ದಾಗಿ ಹೇಳಿದ ಅವರು ಚಿಕ್ಕಮಗಳೂರಿನ ಮಲೈಮಾರುತ, ಹಂಪಿಯ ದರೋಜಿ ಕರಡಿಧಾಮ ಹಾಗೂ ಜೋಗ ಬಳಿಯ ತಲಕಳಲೆಗಳಲ್ಲಿ ಹೊಸದಾಗಿ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಗಳನ್ನು ತೆರೆಯುವುದಾಗಿ ಪ್ರಕಟಿಸಿದರು.
ಕರ್ನಾಟಕ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ನ ವ್ಯವಸ್ಥಾಪಕ ನಿರ್ದೇಶಕ ಎನ್.ಡಿ. ತಿವಾರಿ, ಕೆ.ಎಸ್.ಡಿ.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕ ವಿನಯ್ ಲೂತ್ರ ಹಾಗೂ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ವಿಶ್ವನಾಥರೆಡ್ಡಿ ಸಚಿವರ ಜತೆ ನಿಯೋಗದಲ್ಲಿದ್ದಾರೆ.
ವರದಿಯ ವಿವರಗಳು |
 |
ಕೃಪೆ : ಇ.ವಿ. ಸತ್ಯನಾರಾಯಣ | ಪ್ರಜಾವಾಣಿ ವಾರ್ತೆ ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-08-25
|
|
|