ಬುಧವಾರ, 07-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಅಲ್ಲಿ ಮಹಾಸ್ಫೋಟ, ಇಲ್ಲಿ ಮಹಾಪ್ರಯೋಗ

ಮೈಸೂರು: ನ್ಯೂಟ್ರಿನೋ ಮೂಲ ಕಣ ಛೇದನ ಸಾಹಸ

ನ್ಯೂಟ್ರಿನೋ ಕಣಗಳು ಗಂಟೆಗೆ 3 ಲಕ್ಷ ಕಿ.ಮೀ. ರಭಸದಲ್ಲಿ ಪ್ರವಹಿಸುತ್ತದೆ. ಯಾವ ಬಂಧನಕ್ಕೂ ಸಿಲುಕದ ಈ ಮೂಲ ಕಣಗಳನ್ನು ಹಿಡಿದಿಟ್ಟುಕೊಳ್ಳಲು ಇದುವರೆಗೆ ಸಾಧ್ಯವಾಗಿಲ್ಲ. ವಾತಾವರಣ ಆಧರಿಸಿ ನಡೆಯುವ ಈ ಪ್ರಯೋಗ ದಟ್ಟಾರಣ್ಯ ಪ್ರದೇಶದಲ್ಲಿ ಬೆಳಕು ಕಿಂಚಿತ್ತೂ ಇರದ ಭೂಗರ್ಭದಲ್ಲಿ ಮಾತ್ರ ಸಾಧ್ಯ ಎಂಬುದು ವಿಜ್ಞಾನಿಗಳ ಅಭಿಪ್ರಾಯ.

ಮೈಸೂರು, ಸೆ. ೧೨: ಬ್ರಹ್ಮಾಂಡ ಸೃಷ್ಟಿಯ ರಹಸ್ಯ ಭೇದಿಸಲು ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ಜಗತ್ತಿನ 2 ಸಾವಿರ ವಿಜ್ಞಾನಿಗಳು ‘ಮಹಾಸ್ಫೋಟ’ ಕಾರ್‍ಯದಲ್ಲಿ ತನ್ಮಯರಾಗಿದ್ದರೆ ಇತ್ತ ಭಾರತ ತನ್ನ 50 ಮಂದಿ ವಿಜ್ಞಾನಿಗಳ ನೇತೃತ್ವದಲ್ಲಿ ‘ನ್ಯೂಟ್ರಿನೋ’ ಮೂಲ ಕಣಗಳನ್ನು ಛೇದಿಸುವ ಅಂಥದ್ದೇ ‘ಮಹಾಪ್ರಯೋಗ’ ಆರಂಭಿಸಿದೆ.

ಸುಮಾರು 60 ರಾಷ್ಟ್ರಗಳು ಕೈಜೋಡಿಸಲಿವೆ ಎಂದು ಹೇಳಲಾಗುತ್ತಿರುವ ಈ ‘ನ್ಯೂಟ್ರಿನೋ ರಹಸ್ಯ ಬಯಲು’ ಯೋಜನೆ ಸದ್ಯಕ್ಕೆ ಜಗತ್ತಿನ 3 ಕಡೆ ಮಾತ್ರ ಆರಂಭಗೊಂಡಿವೆ.

ಭಾರತ ಈ ಯೋಜನೆಗೆ ಕರ್ನಾಟಕ- ತಮಿಳುನಾಡು ಗಡಿ ಪ್ರದೇಶಕ್ಕೆ ಹೊಂದಿ ಕೊಂಡಿರುವ ‘ಮಸಿನಗುಡಿ’ ಅರಣ್ಯ ಪ್ರದೇಶವನ್ನು ಆಯ್ಕೆ ಮಾಡಿದೆ.

‘ಇಂಡಿಯಾ ಬೇಸ್ಡ್ ನ್ಯೂಟ್ರಿನೊ ಅಬ್ಸರ್ವೇಟರಿ’ ಎಂಬ ವಿಜ್ಞಾನಿಗಳನ್ನು ಒಳಗೊಂಡ ಭಾರತ ಸರಕಾರ ಪ್ರಾಯೋಜಿತ ಸಂಸ್ಥೆ ಈ ಮಹತ್ಕಾರ್ಯಕ್ಕೆ ಕೈಹಾಕಿದೆ. ಐ‌ಎನ್‌ಓ ಕೈಗೊಳ್ಳುತ್ತಿರುವ ಯೋಜನೆಗೆ ಮಸಿನಗುಡಿ ಪ್ರದೇಶ ಆಯ್ಕೆಯಾಗಿದ್ದರೆ, ಇದನ್ನು ನಿಯಂತ್ರಿಸುವ ಪ್ರಯೋಗಾಲಯ ಮೈಸೂರಿನಲ್ಲಿ ಸ್ಥಾಪನೆಯಾಗುತ್ತಿದೆ. ಇದಕ್ಕಾಗಿ ಮೈಸೂರು ವಿವಿ ಮತ್ತು ರೇರ್ ಮೆಟೀರಿಯಲ್ ಪ್ಲಾಂಟ್ (ಆರ್ ಎಂಪಿ) ಬಳಿ ಇರುವ ಆಲೋಕ ಅಕ್ಕಪಕ್ಕದ ಭೂಮಿಕೊಡಲು ರಾಜ್ಯ ಸರಕಾರ ಒಪ್ಪಿದೆ.

ಮೈಸೂರಿನಿಂದ ಊಟಿಗೆ ತೆರಳುವ ಮಾರ್ಗದಲ್ಲಿ ಗುಂಡ್ಲುಪೇಟೆಯಿಂದ 20 ಕಿ.ಮೀ. ದೂರದಲ್ಲಿರುವ ಮೂಡುಮಲೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಗೆ ಈ ಪ್ರದೇಶ ಒಳಪಟ್ಟಿದೆ. ಇಲ್ಲಿಗೆ ಸಮೀಪದ ಸಿಂಗಾರಗುಡ್ಡ ಎಂಬಲ್ಲಿ ಇರುವ ‘ಪೈಕಾರಹಳ್ಳ’ ಸ್ಥಳದಲ್ಲಿ ಈಗಾಗಲೇ ತಮಿಳುನಾಡು ಸರಕಾರ ಭಾರೀ ಎತ್ತರದಿಂದ ಧುಮುಕುವ ನೀರನ್ನು ಬಳಸಿ ಜಲವಿದ್ಯುತ್ ಘಟಕವನ್ನು ಪ್ರಾರಂಭಿಸಿದೆ. ಇದಕ್ಕಾಗಿ ಈ ಜಾಗದಲ್ಲಿ ಚಿಕ್ಕ ಪ್ರಮಾಣದ ಸುರಂಗವೊಂದನ್ನು ಕೊರೆಯಲಾಗಿದೆ.

ಈಗ ಐ‌ಎನ್‌ಓ ಕೈಗೊಳ್ಳುತ್ತಿರುವ ‘ನ್ಯೂಟ್ರಿನೊ’ ಯೋಜನೆಗೆ ಇದೇ ಪ್ರದೇಶ ಆಯ್ಕೆಯಾಗಿದ್ದು, ಈ ಜಾಗದಲ್ಲಿ 2.4 ಕಿ.ಮೀ. ವ್ಯಾಸದ ಬೃಹತ್ ಸುರಂಗವನ್ನು ಕೊರೆಯಲು ಸಿದ್ಧತೆಗಳು ನಡೆದಿವೆ. ಇಲ್ಲಿ ಭೂಮಿ ಕೊರೆದಾಗ ‘ಚೆಕ್ಲೊಯಾಟ್’ ಎಂಬ ಅಪ್ಪಟ ಕಲ್ಲುಬಂಡೆಗಳು ಪತ್ತೆಯಾಗಿದ್ದು, ‘ನೂಟ್ರಿನೊ’ ಬಂಧನಕ್ಕೆ ಸರಿಯಾದ ಸ್ಥಳ ಎಂಬ ಅಭಿಪ್ರಾಯವನ್ನು ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ.

ನ್ಯೂಟ್ರಿನೋ ಎಂದರೇನು?
ನ್ಯೂಟ್ರಿನೊ ಎಂಬುದು ವಾತಾವರಣದಲ್ಲಿ ಲಭ್ಯವಾಗುವ ಮೂಲಭೂತ ಕಣ. ಇದು ಸದಾ ಕಾಲ ಆಕಾಶದಿಂದ ಧರೆಗೆ ಸುರಿಯುತ್ತಲೇ ಇರುತ್ತದೆ ಎಂಬುದು ವಿಜ್ಞಾನಿಗಳ ವಾದ. ಆದರೆ ಈ ನ್ಯೂಟ್ರಿನೊ ಕಣಗಳು ಬರಿಗಣ್ಣಿಗೆ ಅಥವಾ ಸೂಕ್ಷ್ಮದರ್ಶಕ ಯಂತ್ರಗಳಿಗೂ ಗೋಚರವಾಗ ದಷ್ಟು ಸೂಕ್ಷ್ಮ ವಸ್ತು. ಆದರೆ ಇದರ ಶಕ್ತಿ ಅಪಾರ. ಇವು ಬೆಳಕಿನ ವೇಗದಲ್ಲಿ ಗಂಟೆಗೆ 3ಲಕ್ಷ ಕಿ.ಮೀ. ರಭಸದಲ್ಲಿ ಪ್ರವಹಿಸುತ್ತವೆ.

ಸಾಮಾನ್ಯವಾಗಿ ಯಾವ ಬಂಧನಕ್ಕೂ ಸಿಲುಕದ ಈ ಮೂಲಭೂತ ಕಣಗಳನ್ನು ಹಿಡಿದಿಟ್ಟುಕೊಳ್ಳಲು ಜಗತ್ತಿನಲ್ಲಿ ಇದುವರೆಗೆ ನಡೆದ ಯಾವ ಪ್ರಯೋಗಗ ಳಿಂದಲೂ ಸಾಧ್ಯವಾಗಿಲ್ಲ.

ವಾತಾವರಣ ಆಧರಿಸಿ ನಡೆಯುವ ಈ ಪ್ರಯೋಗ ದಟ್ಟಾರಣ್ಯ ಪ್ರದೇಶದಲ್ಲಿ ಬೆಳಕು ಸಂಪೂರ್ಣ ನಿಷಿದ್ಧಗೊಳ್ಳುವ ಭೂಗರ್ಭ ಪ್ರದೇಶದಲ್ಲಿ ಮಾತ್ರ ಸಾಧ್ಯ ಎಂಬುದು ವಿಜ್ಞಾನಿಗಳ ಅಭಿಪ್ರಾಯ. ಈ ಪ್ರಯೋಗಕ್ಕೆ ಪಶ್ಚಿಮಬಂಗಾಳದ ‘ರಮ್ಮನ್’ ಹಾಗೂ ತಮಿಳು ನಾಡು ಗಡಿಯಲ್ಲಿರುವ ‘ಮಸಿನಗುಡಿ’ ಪ್ರದೇಶಗಳನ್ನು ಗುರುತಿಸಲಾಗಿತ್ತು. ನ್ಯೂಟ್ರಿನೊ ಕಣಗಳನ್ನು ಒಳಗೆ ಸೆಳೆದುಕೊಳ್ಳುವ ಸಲುವಾಗಿ ಸುರಂಗ ಕೊರೆದ ನಂತರ ಅದರ ವಿನ್ಯಾಸಕ್ಕೆ ತಕ್ಕಂತೆ ಕಬ್ಬಿಣದ ಕೊಳಾಯಿ ಅಳವಡಿಸುವುದು ಯೋಜನೆಯ ಪ್ರಮುಖ ಭಾಗ. ಇದಕ್ಕಾಗಿ ಭಾರೀ ಪ್ರಮಾಣದ ಅದಿರು ಸಾಗಣೆ ಮಾಡಲು ಸ್ಥಳ ಯೋಗ್ಯವಾಗಿರಲೂಬೇಕು. ಆದರೆ ಪಶ್ಚಿಮ ಬಂಗಾಳದ ‘ರಮ್ಮನ್’ ಎಂಬ ಜಾಗ ದಟ್ಟಾರಣ್ಯದಿಂದ ಕೂಡಿದ್ದರೂ ಎತ್ತರದ ಪ್ರದೇಶವಾಗಿದ್ದು, ಅದಿರು ಸಾಗಣೆ ಕಷ್ಟ ಎಂಬ ಕಾರಣಕ್ಕೆ ಮಸಿನಗುಡಿ ಪ್ರದೇಶವೇ ಆಯ್ಕೆಯಾಗಿದೆ.

ಕೆಜಿ‌ಎಫ್‌ನಲ್ಲಿ ವಿಫಲ
‘ನ್ಯೂಟ್ರಿನೊ’ ಸೆರೆ ಹಿಡಿಯುವ ಇಂಥದ್ದೇ ಒಂದು ಪ್ರಯತ್ನ ಕೆಲ ವರ್ಷಗಳ ಹಿಂದೆ ಕೋಲಾರ ಜಿಲ್ಲೆ ಕೆಜಿ‌ಎಫ್‌ನಲ್ಲಿ ಚಿನ್ನದ ಗಣಿಗಾಗಿ ಕೊರೆಯಲಾಗಿರುವ ಸುರಂಗ ಮಾರ್ಗದಲ್ಲಿ ನಡೆದಿತ್ತು ಎನ್ನಲಾಗಿದೆ. ಆದರೆ ಆಗ ‘ನ್ಯೂಟ್ರಿನೊ’ ಸೆರೆ ಹಿಡಿಯುವ ಪ್ರಯೋಗ ವಿಫಲವಾಗಿದೆ. ಆದರೆ ಈಗ ‘ನ್ಯೂಟ್ರಿನೊ’ ವಾಸ್ತವತೆ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿರುವ ದೇಶದ ನುರಿತ ವಿಜ್ಞಾನಿಗಳು ಈ ಯೋಜನೆಯ ನೇತೃತ್ವ ವಹಿಸಿಕೊಂಡಿದ್ದಾರೆ.

900 ಕೋಟಿ ರೂ. ಯೋಜನೆ:

ಭಾರತದಲ್ಲಿ ನಡೆಯುತ್ತಿರುವ ‘ನ್ಯೂಟ್ರಿನೊ’ ಯೋಜನೆಗೆ ಸಹಭಾಗಿತ್ವ ವಹಿಸಿಕೊಳ್ಳಲು 60 ದೇಶಗಳು ಮುಂದಾಗಿವೆ. ಆದರೆ ಭಾರತ ಸರಕಾರ ಈ ಬೃಹತ್ ಯೋಜನೆಗಾಗಿ ತಗುಲುವ 900 ಕೋಟಿ ರೂ.ಗಳನ್ನು ತಾನೇ ಭರಿಸಲು ಮುಂದಾಗಿದೆ.

ಕೇಂದ್ರ ಸರಕಾರ ಈಗಾಗಲೇ ರೂ. 600 ಕೋಟಿ ಹಣವನ್ನು ಮಂಜೂರು ಮಾಡಿದೆ. ಈ ‘ನ್ಯೂಟ್ರಿನೊ’ ಯೋಜನೆಯನ್ನು ಇನ್ನು 3 ವರ್ಷಗಳಲ್ಲಿ ಪೂರ್ಣ ಗೊಳಿಸಬೇಕೆಂಬ ಸ್ವಯಂ ಕಾಲಮಿತಿಯನ್ನು ನೇತೃತ್ವ ವಹಿಸಿರುವ ವಿಜ್ಞಾನಿಗಳೇ ವಿಧಿಸಿಕೊಂಡಿದ್ದಾರೆ.

ಪ್ರಯೋಗ ಏತಕ್ಕಾಗಿ:

ವೈಜ್ಞಾನಿಕ ಪ್ರಗತಿ ಸಾಧಿಸುವಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾರತ ಮುಂಚೂಣಿಗೆ ಬರುತ್ತಿದ್ದು, ವಿಶ್ವದಲ್ಲಿ ಇದುವರೆಗೆ ಯಾವ ದೇಶವೂ ‘ನ್ಯೂಟ್ರಿನೊ’ ವಿಷಯದಲ್ಲಿ ಅಷ್ಟಾಗಿ ಆಸಕ್ತಿ ತಳೆದಿರಲಿಲ್ಲ. ಈಗ ಭಾರತ ವಿಶೇಷ ಆಸಕ್ತಿ ತೋರಿದೆ. ಒಂದೊಮ್ಮೆ ‘ನ್ಯೂಟ್ರಿನೊ’ ಪ್ರಯೋಗ ಯಶಸ್ವಿಯಾದರೆ ಮೂಲಭೂತ ಕಣಗಳನ್ನು ‘ಇಂಧನ’ವಾಗಿ ಪರಿವರ್ತಿಸಬೇಕೆಂಬ ಉದ್ದೇಶವನ್ನು ಭಾರತ ಸರಕಾರ ಹೊಂದಿದೆ. ನಿರೀಕ್ಷೆಯಂತೆ ಯೋಜನೆ ಸಫಲವಾದರೆ ಮುಂದಿನ 20 ವರ್ಷಗಳಲ್ಲಿ ಭಾರತ ‘ಇಂಧನ’ ಕೊರತೆಯಿಂದ ಸಂಪೂರ್ಣ ಮುಕ್ತ ಗೊಳ್ಳಲಿದೆ.

ಉದ್ಯಾನಕ್ಕೆ ಆಪತ್ತು:

ನ್ಯೂಟ್ರಿನೊ ಯೋಜನೆ ಅನುಷ್ಠಾನಗೊಂಡರೆ ಕರ್ನಾಟಕ-ತಮಿಳುನಾಡು ಗಡಿಯನ್ನು ಹೊಂದಿಕೊಂಡಿರುವ ‘ಮಧುಮಲೈ’ ಮತ್ತು ‘ಬಂಡೀಪುರ’ ರಾಷ್ಟ್ರೀಯ ಉದ್ಯಾನದ ವನ್ಯಸಂಪತ್ತು ಹಾಗೂ ಜೀವವೈವಿಧ್ಯತೆಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂಬ ಕಾರಣಕ್ಕೆ ಯೋಜನೆಗೆ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ದಟ್ಟವಾದ ಕಾಡಿನೊಳಗೆ ಈ ಪ್ರಯೋಗ ನಡೆಯುವುದರಿಂದ ಪ್ರಾಣಿಸಂಕುಲ ನಾಶಗೊಳ್ಳಬಹುದು ಎಂಬ ಆತಂಕ ಎದುರಾಗಿದೆ.

ಪರಿಸರ ಅನುಮತಿ:

ದೇಶದ ರಾಷ್ಟ್ರೀಯ ಉದ್ಯಾನಗಳಲ್ಲಿ ಯಾವುದೇ ಹೊಸ ಯೋಜನೆಗಳನ್ನು ಕೈಗೊಳ್ಳಲು ಅನುಮತಿ ನಿರಾಕರಿಸುವ ಕೇಂದ್ರ ಪರಿಸರ ಇಲಾಖೆ ‘ನ್ಯೂಟ್ರಿನೊ’ ಯೋಜನೆಗೆ ಮಾತ್ರ ಹಸಿರುನಿಶಾನೆ ತೋರಿದೆ. ‘ನ್ಯೂಟ್ರಿನೊ’ ಭಾರತದ ಪಾಲಿಗೆ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರಲ್ಲಿ ರಾಷ್ಟ್ರೀಯ ಹಿತಾಸಕ್ತಿ ಅಡಗಿದೆ.

ಯೋಜನೆ ಕಾಡಿನ ಭೂಗರ್ಭದಲ್ಲಿ ಗೋಪ್ಯವಾಗಿ ನಡೆಯುವುದರಿಂದ ವನ್ಯಮೃಗಗಳ ನೆಮ್ಮದಿಗೆ ಭಂಗ ಉಂಟಾಗದು ಎಂಬ ಅಭಿಪ್ರಾಯವನ್ನು ಪರಿಸರ ಇಲಾಖೆ ತಾಳಿದೆ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-09-13


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಅಮಾಯಕರನ್ನು ಹಿಂಸಿಸುವುದು ನಮ್ಮನ್ನು ನಾವೆ ಹಿಂಸಿಸಿಕೊಂಡಂತೆ
»ಕುಂಕುಮವಿಟ್ಟರೆ ಗೆಟ್ ಔಟ್!
»ಸಬಕೋ ಸನ್ಮತಿ ದೇ ಭಗವಾನ್ .....
»ಟಾಪ್ ಸಿ.ಎಮ್
»ಸರ್ ಎಂ.ವಿಶ್ವೇಶ್ವರಯ್ಯನವರಿಗೆ ನಮನ
»ಅಪ್ಪಿಕೋ ಚಳವಳಿ ನೆನಪಿನ ಹಬ್ಬ
»ಮನೆಯೊಳಗೆ ಬೇರುಗಳ ಸುಂದರ ಲೋಕ
»ಈ ಸಂದಿಗ್ಧ ಕಾಲದಲ್ಲಿ ನೀವು ಯಾರ ಪರ?
»ಅವನಿಗೆ ಅಬ್ದುಲ್ ಕಲಾಂ ಕಾಗದ ಬರೆದರು!
»ದಿನದ ಸುದ್ದಿ- ಹಾಡು ಹಕ್ಕಿಗೆ ಕೃತಕ ಗೂಡು
»ಜೀವಕ್ಕೆ ಬೆಲೆಯೆಲ್ಲಿದೆ? ಹೈದರಾಬಾದ್, ಜೈಪುರ, ಬೆಂಗಳೂರು, ಅಹ್ಮದಾಬಾದ್, ದೆಹಲಿ...
»ಕೋಮು ದ್ವೇಷದ ಸುಗ್ಗಿಯ ಕುಯಿಲು...
»ಅಲ್ಲಿ ಮಹಾಸ್ಫೋಟ, ಇಲ್ಲಿ ಮಹಾಪ್ರಯೋಗ
»ಮಧ್ಯ ಬೆರಳಿನ ಪುರಾಣ - History of the Middle Finger
»ಸಮುದ್ರ ಮಥನ-1 ಏಳು, ಏಳೆನ್ನುವ ಶ್ರೀರಾಮ
»ಹೋದವರು ಮತ್ತೆ ಬರಲಾರರು
»ವಿಶ್ವದ ಹುಟ್ಟಿನ ಪತ್ತೆ ಯತ್ನ...ವಿಜ್ಞಾನಿಗಳಿಂದ ಪ್ರೊಟಾನ್ ಸ್ಪೋಟ
»ಕಂದನ ನಗು ಕಸಿದಹೃದಯ ಬೇನೆ .....
»ಡಾ. ರಾಜ್‌ಕುಮಾರ್ ಉದ್ಯಾನವನ, ಬೆಂಗಳೂರು
»ಭಗತ್ ಸಿಂಗ್ ರ ಅಣಿಮುತ್ತುಗಳು.
»ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
»ಮನೆ ಮನಗಳಲ್ಲಿ ಬರಲಿವೆ ಕರೆಂಟ್ ಹೋಗದ ದಿನಗಳು
»ಬೆರಳು ತುಂಡಾಯಿತೇ? ವರಾಹ ಚೂರ್ಣ ಹಚ್ಚಿ ಹೊಸ ಬೆರಳು ಪಡೆಯಿರಿ!
»ವಿಜ್ಞಾನಿಗೆ ಕೈಕೊಟ್ಟ ಕಂಪ್ಯೂಟರ್ ಉಪಕರಣಗಳು..!
»ವಾರದಲ್ಲಿ ಹೊಸಮನೆ ರೆಡಿ
»ಹೆಕ್ಕಿಕೋ, ಪ್ಲಾಸ್ಟಿಕ್ ಹೆಕ್ಕಿಕೋ...
»ಮುದ್ರಿಸುವ ಮುನ್ನ ಯೋಚಿಸಿ...
»ಸಾಫ್ಟ್ವೇರ್ ಕಂಪೆನೀಲಿ ಏನು ಮಾಡ್ತಾರೆ…?
»ಧಾರ್ಮಿಕ ಅಂಧಾರಾಧನೆಯ ಸೋಗಿನಲ್ಲಿ...
»ಮಳೆಗೆ ನಾವೆಷ್ಟು ಸಿದ್ಧ?
»ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ
»ನೀರಿನ ಮೇಲೆ ತೇಲುವ ಕಾರು ಪಾರ್ಕಿಂಗ್ ವ್ಯವಸ್ಥೆ
»Virginity: A virtue or a curse?
»ಭೂಮಿಯ ತಾಪಮಾನದ ಹೆಚ್ಚಳ...ಮನುಕುಲ ತಳಮಳ
»ತಾಯಿಯ ಹಾಲಿನಲ್ಲಿ ಮೊಟ್ಟೆಯ ವಾಸನೆ!
»ನೋವಿಗೆಷ್ಟು ಕಾಸು!
»ಭವಿಷ್ಯದ ತಿಜೋರಿಯಲ್ಲಿ ಭಾರತದ ಬೀಜಗಳು!
»ಪತ್ರೊಡೆಯ ಘಮಕ್ಕೆ ಒಸರುವ ಜೊಲ್ಲು
»ಅಂದು ಸ್ವಾತಂತ್ರ್ಯಕ್ಕೂ ಸಾರ್ಥಕತೆ!
»ಕೆ‌ಆರ್‌ಎಸ್ ಕ್ರೆಸ್ಟ್‌ಗೇಟ್ ಹಿಂದಿನ ಇತಿಹಾಸ
»ಗಂಡಸರೂ ಬಸುರಿ ಆಗುವುದಾಗಿದ್ದರೆ...?!
»ಮೊಬೈಲ್ ಸಿಮ್: ಉಪೇಕ್ಷೆ ಮಾಡದಿರಿ - ಹೀಗೊಂದು ಉಪಯುಕ್ತ ಮಾಹಿತಿ
»ಪ್ರಚಂಡ ಸವಾಲು
»ಅಣ್ಣಾ ನಿನ್ನ ಸೋದರಿಯನ್ನ ಮರೆಯದಿರು..........
»ಸ್ವಾತಂತ್ರ್ಯಕ್ಕಾಗಿ ಜೈಲುವಾಸ: ರಾಜ್ಯದ ಮೊದಲ ಮಹಿಳೆ ಸ್ದಿದಮ್ಮ
»ಛಿದ್ರವಾಗುವ ಮುನ್ನ ಭದ್ರವಾಗೋಣ
» ಮುನ್ನುಗ್ಗುತ್ತಿರುವ ಭಾರತ ಮುಂದಿನ ಸೂಪರ್ ಪವರ್..?
»ವಿಶ್ವಾಸದ ಮೂರು ಮುಖಗಳು ....
»ನೀರಿನ ಹೆಸರಿನಲ್ಲಿ ಕಣ್ಣೀರು.....
»‘ಅರಣ್ಯ’ ರೋದನ.....
»ಸರಕಾರಿ ಬಸ್ಸುಗಳಿರುವುದು ಲಾಭ ಗಳಿಸುವುದಕ್ಕಲ್ಲ
»ಕಲ್ಲು ಗಣಿಗಾರಿಕೆ; ಪಶ್ಚಿಮಘಟ್ಟ ನಾಶಕ್ಕೆ ನಾಂದಿ
»ದಿನವೂ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಅಬ್ಬಿ ಫಾಲ್ಸ್
»ಮರುಪೂರಣದಿಂದ ಹತ್ತಡಿ ಏರಿದ ನೀರು
»ಜನ, ವಾಹನ ದಟ್ಟಣೆಯ ಸುಳಿಯಲ್ಲಿ ಕೆ‌ಆರ್ ಮಾರ್ಕೆಟ್ ಸದಾ ಗಜಿಬಿಜಿ, ಗೌಜು ಗ್ದದಲ, ಗಲೀಜಿನ ವಾತಾವರಣ
»ಬೆಂಗಳೂರು ಸರಣಿ ಸ್ಪೋಟ : ರವಿ ಬೆಳೆಗೆರೆ ಅಭಿಪ್ರಾಯ
»ಕನ್ನಡ ಆಡಳಿತ ಭಾಷೆ ಅನ್ನೋದು ನೆನಪಿರಲಿ!
»ಗಣಿ: ನಿಸರ್ಗ, ಬೊಕ್ಕಸ ಕೊಳ್ಳೆ
»ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂದು ಮಂಜು ಕವಿದ ಮಧ್ಯಾಹ್ನ
»ಬಹುಜನ ಹಿತಾಯ ಬಹುಜನ ಸುಖಾಯ : ಹೋರಾಟ ನಿಮ್ಮದು ಬೆಂಬಲ ನಮ್ಮದು
»ಮುಂಬೈ ರೊಟ್ಟಿ ಕಾರ್ಖಾನೆಯೊಂದರೊಳಗಣ ನೋಟ
»ಅತಿಯಾದ ಸೆಖೆಯೇ? ಟ್ರೈ ಮಾಡಿ-ಯು.ಎಸ್.ಬಿ. ಎಸಿ ಶರ್ಟ್
»ಕಣ್ಣಿಲ್ಲದ ಅಜ್ಜಿಯ ಬಳಿ ದಾರಿ ಕಾಣದ ತಬ್ಬಲಿಗಳು
»ಅರವತ್ತು ವರ್ಷಗಳ ಬಳಿಕ ಹಿಂದಕ್ಕೆ ಬಂದ ಪತ್ರ
»ತೋಟವನ್ನೇ ನುಂಗುತ್ತಿರುವ ಬೇರುಹುಳಗಳು : ಕಂಗಾಲಾದ ಅಡಿಕೆ ಬೆಳೆಗಾರರು
»ತುಂಗೆಯ ಮಡಿಲಿಗೆ ಪಕ್ಷಿ ಜೀವಗಳ ಬಾಗಿನ!
»ಬಾಂಬ್ ಸೂಟ್ ಎಂಬ ರಕ್ಷಾ ಕವಚ
»ಕಾವೇರಿ ಕಣಿವೆಯಲ್ಲಿ :ಚುಕ್...ಪುಕ್... ಬಾಬಾ ಎಕ್ಸ್‌ಪ್ರೆಸ್
»ಶ್ರೀರಾಮ ಸೇತುವೆಯನ್ನು ಧ್ವಂಸಗೈದವರು ಯಾರು?
» ‘ಪವರ್ ಕಿಂಗ್’ ನಿಂದ ‘ಪವರ್ ಕ್ವೀನ್’ ಅಗುತ್ತಿರುವ ನಮ್ಮ ಮಹಿಳೆಯರು
»ಸಡಿಲ ಪ್ಯಾಂಟ್ ಧರಿಸಿದರೆ ದಂಡ
»ಮೋಡ ಬಿತ್ತನೆ: ಹೆರಿಗೆಯೋ ಗರ್ಭಪಾತವೋ?
»ಸಂಪ್ರದಾಯಸ್ಥ ಹವ್ಯಕರಲ್ಲಿ ಹೊಸ ಗಾಳಿ...
»ರೈತರನ್ನು ಕೊಂದು ಪ್ರತಿಮೆ ಸ್ಥಾಪಿಸಲು ಹೊರಟವರು
»ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಮುನ್ನ
»ಅಣು ಬಂಧ: ಅನಿರೀಕ್ಷಿತ ಮತ್ತು ಆಕಸ್ಮಿಕ
»ಇಹಲೋಕ ತ್ಯಜಿಸಿದ ಬ್ಲಾಗ್‌ಲೋಕದ ಹಿರಿಯಜ್ಜಿ
»ಗಾಳಿ ಶಕ್ತಿಯಿಂದ ಚಲಿಸಲಿದೆ ವಾಹನ !
»ಓಪನ್ ಆಫೀಸ್ ಬಗ್ಗೆ ಒಂದಿಷ್ಟು ಮಾಹಿತಿ
»ಮೂರೂ ಬಿಟ್ಟವರ ಅಮೆರಿಕ ಯಾತ್ರೆ .......
»ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
»ಎಪ್ಪತ್ತರ ಅಜ್ಜಿಗೆ ಅವಳಿ ಮಕ್ಕಳು
»ರೈತರಿಗೆ ಅನ್ನದಾತರಾಗಿರುವ ಐಟಿ ಇಂಜಿನಿಯರ್‌ಗಳು!!
»ಅಮೆರಿಕೆಗಾಗಿ ದೇಶದ ಹಿತ ಬಲಿ
»ದುಬೈ : ಖರ್ಜೂರದಾಕಾರದ ಹೊಸ ಕಟ್ಟಡ : ದುಬೈ ಕ್ರೌನ್
»ಸಿದ್ದರಾಮಯ್ಯ: ಬಾಣಲೆಯಿಂದ ಬೆಂಕಿಗೆ, ಬೆಂಕಿಯಿಂದ ಎಲ್ಲಿಗೆ?
»ಬಿಜೆಪಿಯ ದುರಂತಕ್ಕೆ ಪೀಠಿಕೆ .....?
»ಚಮ್ಮಾರಿಕೆಯೊಂದಿಗೆ ಪುಸ್ತಕ ಪ್ರಕಟಿಸುವ ಧನರಾಜ
»ಹೊಸ ಬ್ಯಾಟರಿ ಕಂಡುಹಿಡಿಯಿರಿ : 300 ಮಿಲಿಯನ್ ಡಾಲರ್ ಗೆಲ್ಲಿರಿ
»ಮುತ್ತು ವೈಜ್ಞಾನಿಕ ಸತ್ಯಾಂಶಗಳು ..ಇಂದು( ಜು 6) ಅಂತಾರಾಷ್ಟ್ರೀಯ ‘ಕಿಸ್ಸಿಂಗ್ ಡೇ’
»ತರೀಕೆರೆ ಏರಿಯಾ - ಚಿಟ್ಟೆಗಳ ಕಲಾವಿದೆ
»ಹುಲಿ ಸಾಮ್ರಾಜ್ಯದಲ್ಲಿ ಕಾಫಿ ಎಸ್ಟೇಟ್!
»ವೈದ್ಯಕೀಯ ಜ್ಞಾನನಿಧಿ ಡಾ| ಕೆ.ಜಿ.ಎಸ್. ಭಟ್
»ಚಳ್ಳಕೆರೆ : ಮಾನವ ರಹಿತ ವಿಮಾನ ಹಾರಾಟ ಕೇಂದ್ರ
»ಏನಿದು ಭಾರತ-ಅಮೆರಿಕ ಅಣು ಒಪ್ಪಂದ? ಇದರಿಂದ ಏನು ಲಾಭ? ವಿರೋಧ ಏಕೆ? ಸಮಗ್ರ ನೋಟ
»ಹಣದುಬ್ಬರವೆಂದರೇನು ಗೊತ್ತಾ?
»ಹೊಳೆ ದಾಟಿದ ಮೇಲೆ...
»ಅಂತರಿಕ್ಷದಲ್ಲಿ ಮದುವೆ ಮಾಡಿಸುತ್ತದೆ ಈ ಸಂಸ್ಥೆ!
»ಜಿರಾಫೆಯನ್ನು ಬಂಧಿಸಿದ ಪೊಲೀಸರು
»ಆ ಸಿಗರೇಟು ಬಿಡಿ ಇ-ಸಿಗರೇಟು ಸೇದಿ
»ರೈತರ ಸರಣಿ ಆತ್ಮಹತ್ಯೆ : ದೊರಕದ ಸಹಾಯ
»ಪಠ್ಯಪುಸ್ತಕ ಬದಲಾವಣೆಗೆ ಸಚಿವರ ‘ಕೇಸರಿ ನಕಾಶೆ’
»’ಮೊಬೈಲ್’ ಗಾದೆಗಳು!!
»ಭಾರತೀಯ ಭಾಷಾ ಗಣಕಲೋಕದ ಪಿತಾಮಹ - ಶ್ರೀ ಕೆ.ಪಿ ರಾವ್
»ಒಂದು ಸಾವಿನ ಮನೆಯ ವೃತ್ತಾಂತ .....
»ಕನ್ನಡ ಕಲಿಸುವುದಕ್ಕೆ ಇಷ್ಟವಿರುವವರಿಗೆ ಅರ್ಪಣೆ
»ಅನಾಥ ಅಜ್ಜಿಗೆ ಸ್ಪೂರ್ಥಿಯ ಆಸರೆ
»ರಾಜಕೀಯ ಚದುರಂಗದಾಟದ ಕಾಯಿಗಳಾಗುತ್ತಿರುವ ರೈತರು
»ಅನ್ನ ತಿನ್ನುವವರು ನೀರುಳಿಸುವ ವಿಧಾನ
»ಗಂಗೆ ಅಂತರ್ಧಾನಳಾದಾಳೇ... !?
»ಚಿಕುನ್‌ಗುನ್ಯಾದಿಂದ ಕರಾವಳಿ ಕಲಿಯಬೇಕಾದ ಪಾಠ
»ಕಾಲ್ ಸೆಂಟರ್‌ಗಳಲ್ಲಿ ತೆರೆಯಲಿ ಏಡ್ಸ್ ಜಾಗೃತಿ ಅಂಗಡಿಗಳು
»ಕರಾವಳಿಯನ್ನು ಕಾಡುತ್ತಿದೆ ಕಮ್ಯುನಿಸ್ಟ್ ಕಳೆ
»ಗಣಿಗಾರಿಕೆ ರಾಷ್ಟ್ರೀಕರಣವಾಗಲಿ
»ಕಳೆ ಪಡೆಯುತ್ತಿರುವ ಹೊಳೆ ಮೀನುಗಾರಿಕೆ ....
» 'Housewives' out of fashion in metros!
»ನನ್ನಜ್ಜನಿಗೊಂದಾನೆಯಿತ್ತು !
»ಕೊಂಕಣಿ ರಾಜ್ಯದ ಕನಸು ಕಂಡಿದ್ದ ಕಾಮತರು
»ಪದ್ಮಪ್ರಿಯಾ ಪ್ರಕರಣದ ಸುತ್ತ...
»... ಆ ಒಂದು ಮುತ್ತಿನ ಕತೆ
»ಈ ಭೇಟಿ ನ್ಯಾಯವೇ?
»ಪಾಸ್‌ಪೋರ್ಟ್ ಅರ್ಜಿಗೆ ಕನ್ನಡ, ಇಂಗ್ಲಿಷ್‌ನ ವೆಬ್‌ಸೈಟ್
»some ಪದ ಕೇಡಿ
»ಈ-ಮೆಲ್ ರಚನೆಯ ಪರಿಚಯ
»ರೈತರಿಗೆ ಮಾತ್ರ ರಬ್ಬರ್ ಗುಂಡು: ಉಳಿದವರಿಗೆ?
»ಇ-ಮೇಲ್ ಅಕೌಂಟನ್ನು ತೆರೆಯುವುದು
»ನೀರಿನಿಂದ ಓಡುವ ಕಾರು!
»ನಾಡಿನ ಒಳಿತಿನ ಚುಕ್ಕಾಣಿ ಅರ್ಚಕನ ಕೈಗೆ?
»ಕೆಂಪಾಯಿತು ಯಡಿಯೂರಪ್ಪನವರ ಹೆಗಲಿನ ಹಸಿರು ಶಾಲು
»ರೈತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀ