ಬುಧವಾರ, 07-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ದೋಹಾ: ಇಫ್ತಾರ್ ಕೂಟ ಆಚರಿಸಿದ ಕೆ.ಎಮ್.ಸಿ.ಎ.

ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಖಂಡನೆ : ರಮಧಾನ್ ತಿಂಗಳ ಮಹತ್ವಕ್ಕೆ ಆದ್ಯತೆ

ದೋಹಾ, ಸೆಪ್ಟೆಂಬರ್ 20: ನಗರದಲ್ಲಿ ಕಾರ್ಯನಿರತವಗಿರುವ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಸೋಸಿಯೇಶನ್ (ಕೆ.ಎಮ್.ಸಿ.ಎ) ತನ್ನ ಸದಸ್ಯರು ಹಾಗೂ ಕುಟುಂಬವರ್ಗದವರಿಗಾಗಿ ಇಫ್ತಾರ್ ಕೂಟವನ್ನು ಏರ್ಪಡಿಸಿತ್ತು.

ಗೋಲ್ಡನ್ ಫೋರ್ಕ್ ರೆಸ್ಟೋರೆಂಟ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ಶುಕ್ರವಾರ ೧೯ನೇ ಸೆಪ್ಟೆಂಬರ್ ಸಂಜೆ ಇಪ್ತಾರ್ ವೇಳೆಯಿಂದ ಪ್ರಾರಂಭವಾಯಿತು.

ಸರಳ ಉಪಾಹಾರದೊಂದಿಗೆ 19ನೇ ಉಪವಾಸವನ್ನು ಸಂಪೂರ್ಣಗೊಳಿಸಿದ ಬಳಿಕ ಮಗ್ರಿಬ್ ಪ್ರಾರ್ಥನೆಯನ್ನು ನಿರ್ವಹಿಸಲಾಯಿತು. ಆ ಬಳಿಕ ಪ್ರಾರಂಭವಾದ ಸಭೆಯನ್ನು ಕೆ.ಎಮ್.ಸಿ.ಎ. ಅಧ್ಯಕ್ಷರಾದ ಜನಾಬ್ ಸೈಯದ್ ಅಬ್ದುಲ್ ಹಾಯ್ ಅವರು ಸ್ವಾಗತಿಸಿದರು. ರಮಧಾನ್ ತಿಂಗಳ ಮಹತ್ವ ಹಾಗೂ ಉಪವಾಸಗಳ ಪ್ರಾಮುಖ್ಯತೆಯನ್ನು ಅವರು ಸಭೆಯಲ್ಲಿ ಮಂಡಿಸಿದರು.  ಉಪವಾಸವನ್ನು ಆಚರಿಸುವ ಮೂಲಕ ಮುಸ್ಲಿಂ ಭಾಂಧವರಲ್ಲಿ ಪರಸ್ಪರ ಪ್ರೇಮ, ಭ್ರಾತೃತ್ವ ಬೆಳೆಯಲು ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.  ಇತ್ತೀಚೆಗೆ ಊರಿನಲ್ಲಿ ಹಾಗೂ ದೆಹಲಿಯಲ್ಲಿ ನಡೆದ ಹಿಂಸಾಚಾರಗಳನ್ನು  ಉಲ್ಲೇಖಿಸಿದ ಅವರು ಹಿಂಸೆಯನ್ನು ಖಂಡಿಸಿ ತಪ್ಪಿತಸ್ಥರಿಗೆ ಆದಷ್ಟು ಬೇಗನೇ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು. ಈ ಹಿಂಸಾಚಾರದಿಂದ ಮುಗ್ಧ ಜನರಿಗೆ ಹೆಚ್ಚಿನ ತೊಂದರೆಯಾಗಿದ್ದು ಶಾಂತಿ ಕಾಪಾಡಲು ಸಮಾಜದ ಎಲ್ಲಾ ವರ್ಗಗಳು ಸಹಕರಿಸಬೇಕೆಂದು ಕರೆಯಿತ್ತರು.

ಇಫ್ತಾರ್ ಕೂಟದಲ್ಲಿ ಸುಮಾರು ನೂರಕ್ಕೂ ಹೆಚ್ಚು ಸದಸ್ಯರು ಉಪಸ್ಥಿತರಿದ್ದರು.  ಮಹಿಳೆಯರಿಗೆ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಅವರಲ್ಲಿ ತುಳುಕೂಟದ ಅಧ್ಯಕ್ಷರಾದ ರವಿಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಶೆಟ್ಟಿ, ಕತರ್ ಕರ್ನಾಟಕ ಸಂಘದ ಅಧ್ಯಕ್ಷರಾದ ಅರವಿಂದ ಪಾಟಿಲ್, ನ್ಯಾಶನಲ್ ಎಕ್ಸ್ ಚೇಂಜ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಕೆ. ಮಂಜುನಾಥಪ್ಪ, ದಕ್ಷಿಣ ಕನ್ನಡ ಸುನ್ನಿ ಸೆಂಟರ್ ಅಧ್ಯಕ್ಷ ಜನಾಬ್ ಅಬ್ದುಲ್ಲಾ ಮೋನೋ, ಇಂಡೋ-ಕತರ್ ಉರ್ದು ಮರ್ಕಜ್ ಅಧ್ಯಕ್ಷರಾದ ಜನಾಬ್ ಸುಲೇಮಾನ್ ದೆಹಲವಿ, ಸಾಟ್ಕೋ ಇಂಟರ್ನ್ಯಾಶನಲ್ ಸಂಸ್ಥೆಯ ಪ್ರಧಾನ ನಿರ್ದೇಶಕರಾದ ಸೈಯದ್ ಸುಹೇಲ್ ಬುಖಾರಿ ಪ್ರಮುಖರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಸೈಯದ್ ಅಬ್ದುಲ್ ಹಾಯ್ ಅವರು ಸ್ವಾಗತಿಸಿ ಅಂತಿಮವಾಗಿ ವಂದನಾರ್ಪಣೆಯನ್ನೂ ಸಲ್ಲಿಸಿದರು.  ಈ ಕಾರ್ಯಕ್ರಮ ಜನಾಬ್ ಎಮ್. ಇಕ್ಬಾಲ್ ಮನ್ನಾ ಅವರಿಂದ ವ್ಯವಸ್ಥಿತವಾಗಿ ನಿಯೋಜಿಸಲ್ಪಟ್ಟಿತ್ತು.

ಚಿತ್ರ, ವರದಿ: ಇಕ್ಬಾಲ್ ಮನ್ನಾ, ದೋಹಾ, ಕತರ್.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಚಿತ್ರ, ವರದಿ: ಇಕ್ಬಾಲ್ ಮನ್ನಾ
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-09-20


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕತಾರ್]

»ಏಷ್ಯನ್ ಒಳಾಂಗಣ ಕ್ರೀಡಾಕೂಟಕ್ಕೆ ೩೨ ಸದಸ್ಯರ ದಂಡು; ಭಾರತ ತಂಡಕ್ಕೆ ಅಂಜು ಬಾಬಿ ಜಾರ್ಜ್ ನೇತೃತ್ವ
»ಗಿನ್ನೆಸ್ ದಾಖಲೆ ಸೇರಿದ ಕತರ್ ಕೆ.ಎಫ್.ಸಿ.
»ತುಂಡಾದ ಕೇಬಲ್ : ಅಸ್ತವ್ಯಸ್ತವಾದ ಕತರ್ ಟೆಲಿಫೋನ್ ವ್ಯವಸ್ಥೆ
»ಅನಿವಾಸಿಗಳಿಂದ ಆಚರಿಸಲ್ಪಟ್ಟ ಗಣತಂತ್ರ ದಿವಸ : ಹಬ್ಬದ ವಾತಾವರಣ
»ಇನ್ನಷ್ಟು ದುಬಾರಿಯಾಗಲಿರುವ ಭಾರತದ ಅಕ್ಕಿ.
»ತಿಜೋರಿ ಕದ್ದು ಒಡೆಯಲನುವಾಗುತ್ತಿರುವಾಗಲೇ ಪೋಲೀಸರಿಗೆ ಸಿಕ್ಕಿಬಿದ್ದ ಕಳ್ಳರು
»ಜೆಟ್ ಏರ್ ವೇಸ್ ಪ್ರಾರಂಭಿಸಿರುವ ದೋಹಾ-ಮುಂಬೈ,ಕಲ್ಲಿಕೋಟೆ ನೇರ ವಿಮಾನಯಾನ
»ಉದ್ಯೋಗಕ್ಕಾಗಿ ಬಂದವರು ಒಂಟೆಕಾವಲಿಗೆ: ಭಾರತೀಯದ ಅಳಲು
»ದೋಹ: ಕರ್ನಾಟಕ ಶಾಸ್ತ್ರೀಯ ಸಂಗೀತಪ್ರಿಯರಿಗೆ ಅಪರೂಪದ ಉಪಚಾರ
»ಸಾರಿಗೆ ಕಾನೂನುಗಳ ಅನುವಾದ ಅಗತ್ಯ: ಏಶಿಯಾ ಮೂಲದ ಅನಿವಾಸಿಗಳ ಬೇಡಿಕೆ
»ಸುಗಮ ವಾಹನ ಸಂಚಾರಕ್ಕೆ ಅಡ್ಡಿ ಬಂದರೆ ದಂಡ: ಕತರ್ ಸಾರಿಗೆ ಸಚಿವಾಲಯ
»ಏರುತ್ತಿರುವ ಮೊಟ್ಟೆ ಬೆಲೆ, ಆತಂಕದಲ್ಲಿ ಬೇಕರಿಗಳು.
»ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ವಿದೇಶಿಯರ ಸಂಖ್ಯೆ ೭೦ ಮಿಲಿಯನ್!
»ಡಾಲರ್ ಮೇಲಿನ ಅವಲಂಬನೆಯಲ್ಲಿ ಬದಲಾವಣೆ ಇಲ್ಲ, ಜಿಸಿಸಿ.
»ದಾನಿಗಳಿಗೆ ಸನ್ಮಾನ:(THE Indian Community Benevolent Fund (ICBF)
»ಐಸಿಸಿ ಉತ್ಸವದಲ್ಲಿ ಮನಸೆಳೆದ ಮಕ್ಕಳ ನೃತ್ಯ
»ಆಯಾಗಳ ನೇಮಕಕ್ಕೆ ತಾತ್ಕಾಲಿಕ ತಡೆಯಾಜ್ಞೆ ಇನ್ನೂ ಪ್ರಸ್ತುತ
»ಐಡಿಯಲ್ ಇಂಡಿಯನ್ ಸ್ಕೂಲ್ ವಿಧ್ಯಾರ್ಥಿ ಅಕಾಲಿಕ ಮ್ರತ್ಯು
»೧೫ ವರ್ಷ ಒಳಗಿನವರ ಕ್ರಿಕೆಟ್-ನಾಯಕತ್ವ ವಹಿಸಿದ ಮಂಗಳೂರಿನ ಬಾಲಕ
»500ಕ್ಕೂ ಹೆಚ್ಚು ಮಕ್ಕಳ ಉಚಿತ ನೇತ್ರ ತಪಾಸಣೆ
»2016ರ ಒಲಿಂಪಿಕ್ಸ್ ಕ್ರೀಡೆಗಳ ಪ್ರಯೋಜಕತೆಗೆ ಕತಾರ್ ಯತ್ನ
»೨೦ನೆ ಮಾಂಟ್ರಿಯಲ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಕತಾರ್
»ಇಪ್ಪತ್ತು ವರ್ಷ ಪೂರೈಸಿದ ಮೊಬೈಲ್ ಟೆಲಿಕಾಂ ಕಂಪನಿ

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri