ನಾಳೆ ನಗರದಲ್ಲಿ ಕಾರಂತ ಹುಟ್ಟು ಹಬ್ಬ |
ಪ್ರಕಟಿಸಿದ ದಿನಾಂಕ : 2008-10-09
ಮಂಗಳೂರು: ಸಾಹಿತಿ ಡಾ. ಶಿವರಾಮ 107 ನೆ ಹುಟ್ಟುಹಬ್ಬವನ್ನು ಅಕ್ಟೋಬರ್ 10 ರಂದು ನಗರದ ಶಿವರಾಮ ಕಾರಂತ ರಸ್ತೆಯಲ್ಲಿರುವ ಡಾನ್ಬಾಸ್ಕೋ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕ್ಲಕೂರ ಪ್ರತಿಷ್ಠಾನದ ಅಶ್ರಯದಲ್ಲಿ ಜರಗಲಿರುವ ಕಾರಂತರ ಹುಟ್ಟು ಹಬ್ಬ ಸಮಾರಂಭದ ಅಧ್ಯಕ್ಷತೆಯನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ವಹಿಸಲಿರುವರು.
ಉಡುಪಿ ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಅಮಬಾತನಯ ಮುದ್ರಾಡಿ ಉಪನ್ಯಾಸ ನೀಡಲಿದ್ದಾರೆ. ಕಾರ್ಪೋರೇಶನ್ ಬ್ಯಾಂಕಿನ ಮಹಾಪ್ರಬಂಧಕ ಬಿ. ಅರ್. ಭಟ್ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಅರ್. ಎಸ್. ದಳವಾಯಿ, ಸಾಲಿಗ್ರಾಮ ಯಕ್ಷಗಾನ ಮೇಳದ ಯಜಮಾನ ಕಿಶನ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಬಳ್ಕೂರು ಕೃಷ್ಣ ಮಾಜಿ ಅವರನ್ನು ಕರ್ನಾಟಕ ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ಪಿ. ಜಯರಾಮ ಭಟ್ ಸನ್ಮಾನಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯ್ಕಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವರದಿಯ ವಿವರಗಳು |
 |
ಕೃಪೆ : ವಾರ್ತಾಭಾರತಿ ವರದಿಗಾರರು : ಗ.ಕ.ಕರಾವಳಿ ವರದಿಗಾರರು
ಪ್ರಕಟಿಸಿದ ದಿನಾಂಕ : 2008-10-09
|
|
|