ಗುರುವಾರ, 08-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಒಂದು ಕಲಿತವನಿಗೆ ಇನ್ನೊಂದು ಸುಲಭ

ಒಂದು ಭಾಷೆಯನ್ನು ಚೆನ್ನಾಗಿ ಕಲಿತವನಿಗೆ ಇನ್ನೊಂದು ಭಾಷೆ ಕಲಿಯುವುದು ಕಷ್ಟವಲ್ಲ ಬಿಡಿ.

ಅನುಮಾನ ಬಂದರೆ, ನಿಮ್ಮ ಭಾಷಾ ಕಲಿಕೆ ಸಾಮರ್ಥ್ಯವನ್ನು ಒಮ್ಮೆ ನೆನಪಿಸಿಕೊಳ್ಳಿ. ಹಾಲು ಎಂಬ ಶಬ್ದದ ಅರ್ಥ ಗೊತ್ತಿದ್ದವನಿಗೆ ಮಿಲ್ಕ್ ಎಂಬ ಇಂಗ್ಲಿಷ್ ಶಬ್ದದ ಅರ್ಥ ಸಹಜವಾಗಿ ಮನದಟ್ಟಾಗುತ್ತದೆ. ದೂದ್ ಎಂಬ ಹಿಂದಿ ಶಬ್ದ ಸಹ ಸಹಜವಾಗಿ ಮನವರಿಕೆಯಾಗುತ್ತದೆ. ಯಾವಾಗ ಮಿಲ್ಕ್ ಅಥವಾ ದೂದ್ ಎಂಬ ಶಬ್ದಗಳು ಬರುತ್ತವೋ ಆಗ ಹಾಲು ಎಂಬ ಕನ್ನಡ ಶಬ್ದ ಸಹಜವಾಗಿ ಮೆದುಳಿನಲ್ಲಿ ಮಿನುಗುತ್ತ ಹೊಸ ಶಬ್ದದ ವ್ಯಾಪ್ತಿಯನ್ನು ಮನದಟ್ಟು ಮಾಡುತ್ತ ಹೋಗುತ್ತದೆ. ಈ ಪ್ರಕ್ರಿಯೆ ಎಷ್ಟು ಸಹಜವಾಗುತ್ತದೆಂದರೆ, ಮಿಲ್ಕ್ ಅಥವಾ ದೂದ್ ಶಬ್ದಗಳು ಪರಕೀಯ ಅನಿಸುವುದಿಲ್ಲ.

ಹೊಸ ಹೊಸ ಶಬ್ದಗಳ ಕಲಿಕೆ ಸುಲಭವಾಗುತ್ತ ಹೋಗುವುದು ಹೀಗೆ.

ಹೀಗಾಗಿ ಇನ್ನೊಂದು ಭಾಷೆ ನಿಧಾನವಾಗಿ ಮನಸ್ಸಿನಲ್ಲಿ ಇಳಿಯುತ್ತ ಹೋಗುತ್ತದೆ. ಪ್ರತಿಯೊಂದು ಹೊಸ ಶಬ್ದಕ್ಕೂ ಪರ್ಯಾಯವಾಗಿ ಕನ್ನಡದ ಶಬ್ದ ಮನಸ್ಸಿನಲ್ಲಿ ನಿಲ್ಲುತ್ತದೆ. ಅದರ ಅರ್ಥವನ್ನು ಹೋಲಿಸಿ ನೋಡುತ್ತದೆ. ನಿಧಾನವಾಗಿ ಅದನ್ನು ಜೀರ್ಣಿಸಿಕೊಳ್ಳುತ್ತದೆ. ಒಂಚೂರು ಆಸಕ್ತಿ ತೋರಿಸಿದರೂ ಸಾಕು, ಇನ್ನೊಂದು ಭಾಷೆಯನ್ನು ಸುಲಭವಾಗಿ ಕಲಿಯಬಹುದು. ನಮ್ಮ ಮಾತೃಭಾಷೆಗೂ ಇನ್ನೊಂದು ಭಾಷೆಗೂ ಇರುವ ಸಾಮ್ಯತೆ ಹಾಗೂ ಭಿನ್ನತೆಯನ್ನು ಗುರುತಿಸುವ ಮೂಲಕ ಅದನ್ನು ಅರ್ಥ ಮಾಡಿಕೊಳ್ಳುತ್ತೇವೆ. ಎಷ್ಟು ಸಮರ್ಥವಾಗಿ ನಮ್ಮ ಮಾತೃಭಾಷೆಯನ್ನು ನಾವು ವ್ಯಕ್ತಪಡಿಸುತ್ತೇವೆಯೋ, ಅಷ್ಟೇ ಸುಲಭವಾಗಿ ಇನ್ನೊಂದು ಭಾಷೆಯಲ್ಲಿಯೂ ಅಭಿವ್ಯಕ್ತಿ ಸಾಧ್ಯವಾಗುತ್ತದೆ.

ಪ್ರತಿಯೊಂದು ಕಲಿಕೆಯೂ ಸುಲಭವಾಗುತ್ತ ಹೋಗುವುದು ಹೀಗೆ. ಒಂದು ಮಾದರಿಯ ಬೈಕ್ ಓಡಿಸಬಲ್ಲವನಿಗೆ ಇನ್ನೊಂದು ವಿನ್ಯಾಸದ ಬೈಕ್ ಕಲಿಯುವುದು ಕಷ್ಟವಾಗುವುದಿಲ್ಲ. ಮೊದಮೊದಲು ಒಂಚೂರು ಹಿಂಜರಿಕೆ ಇದ್ದರೂ, ಕೆಲವೇ ದಿನಗಳಲ್ಲಿ ಅದು ರೂಢಿಯಾಗುತ್ತದೆ. ಯಾವುದೇ ಒಂದು ಪರಿಸರವನ್ನು ಚೆನ್ನಾಗಿ ಅರ್ಥ ಮಾಡಿಕೊಂಡ ವ್ಯಕ್ತಿ ಇನ್ನೊಂದು ಪರಿಸರವನ್ನು ಬಲುಬೇಗ ತನ್ನದಾಗಿಸಿಕೊಳ್ಳುತ್ತಾನೆ. ಒಂದು ವೃತ್ತಿಯ ಸೂಕ್ಷ್ಮವನ್ನು ಅರ್ಥ ಮಾಡಿಕೊಂಡವನಿಗೆ ಇನ್ನೊಂದು ವೃತ್ತಿಯ ಸೂಕ್ಷ್ಮಗಳು ಬೇಗ ಗೊತ್ತಾಗುತ್ತವೆ. ಬಹುಶಃ ಉಪನಿಷತ್ತಿನಲ್ಲಿ ಹೇಳಿದ್ದು ಅನಿಸುತ್ತದೆ:’ಒಂದು ಹಿಡಿ ಮಣ್ಣನ್ನು ಚೆನ್ನಾಗಿ ಅರಿಯಬಲ್ಲೆಯಾದರೆ, ಇಡೀ ಭೂಮಿಯನ್ನೇ ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು’. ಇದು ಎಲ್ಲ ರೀತಿಯ ಕಲಿಕೆಗಳಿಗೂ ಅನ್ವಯಿಸುತ್ತದೆ.

ಇಂಥ ಕಲಿಕೆ ಕೊಡುವ ಆತ್ಮವಿಶ್ವಾಸ ಅಪಾರ. ನಮ್ಮಲ್ಲಿ ಬಹುತೇಕ ಜನ ಓದಿದ್ದು ಕನ್ನಡದಲ್ಲಿ. ಅವರು ಯೋಚಿಸಲು ಪ್ರಾರಂಭಿಸಿದ್ದು, ಅಭಿವ್ಯಕ್ತಿ ತೋರಿದ್ದು ಕನ್ನಡದಲ್ಲಿ. ಇದ್ದಕ್ಕಿದ್ದಂತೆ ಇನ್ನೊಂದು ಭಾಷೆ ಕಲಿಯುವ, ಅದರಲ್ಲೇ ತಮ್ಮ ವಿಚಾರಗಳನ್ನು ವ್ಯಕ್ತಪಡಿಸುವ ಅನಿವಾರ್ಯತೆ ಒದಗಿದಾಗ, ಹಿನ್ನೆಲೆಯಲ್ಲಿ ಕನ್ನಡ ಇದ್ದೇ ಇರುತ್ತದೆ. ಅವರ ಕನ್ನಡ ಎಷ್ಟು ಬಲವಾಗಿರುತ್ತದೋ, ಇನ್ನೊಂದು ಭಾಷೆಯಲ್ಲಿ ಅಭಿವ್ಯಕ್ತಿಗೊಳಿಸುವುದು ಅಷ್ಟೇ ಸುಲಭವಾಗುತ್ತದೆ.

ಇದನ್ನು ಎಷ್ಟು ಬೇಕಾದರೂ ವಿಸ್ತರಿಸಬಹುದು. ಈ ಮಾದರಿಯನ್ನು ಜೀವನದ ಯಾವುದೇ ರಂಗಕ್ಕೂ ಅನ್ವಯಿಸಿ ನೋಡಬಹುದು. ಕಲಿಕಾ ಸಾಮರ್ಥ್ಯ ವಿಸ್ತಾರವಾಗಬೇಕೆಂದರೆ, ಯಾವುದೋ ಒಂದು ಮಾದರಿಯ ಬಗ್ಗೆ, ವಿಶೇಷತೆಯ ಬಗ್ಗೆ ಹೆಚ್ಚು ಗೊತ್ತಿದ್ದಷ್ಟೂ ಉತ್ತಮ. ನಮಗೆ ಕನ್ನಡ ಕಾವ್ಯದ ಬಗ್ಗೆ ಚೆನ್ನಾಗಿ ಗೊತ್ತಿದ್ದರೆ, ಆಸಕ್ತಿ ಇದ್ದರೆ, ಇನ್ನೊಂದು ಭಾಷೆಯ ಕಾವ್ಯವೂ ಸುಲಭವಾಗಿ ಗೊತ್ತಾಗುತ್ತದೆ, ಅರ್ಥವಾಗುತ್ತದೆ. ಅದೇ ರೀತಿ ಕನ್ನಡ ರಂಗಭೂಮಿಯ ಬಗ್ಗೆ ಗೊತ್ತಿದ್ದರೆ, ಬೇರೆ ಭಾಷೆಯ ರಂಗಭೂಮಿಯ ವಿಶೇಷತೆಗಳು ಸುಲಭವಾಗಿ ಗೋಚರವಾಗುತ್ತವೆ. ಸರಳವಾಗಿ ಅರ್ಥವಾಗುತ್ತವೆ. ಸಂಗೀತ, ಚಿತ್ರಕಲೆ, ತಂತ್ರಜ್ಞಾನ, ಪತ್ರಿಕೆ, ಬರವಣಿಗೆ- ಹೀಗೆ ಬಹುತೇಕ ಕ್ಷೇತ್ರಗಳು ಸುಲಭವಾಗಿ ತಿಳಿಯುತ್ತ ಹೋಗುವುದು ಹೀಗೆ.

ಆದ್ದರಿಂದ ಕನ್ನಡವನ್ನಷ್ಟೇ ಓದಿದವರು ಖಂಡಿತ ಹಿಂಜರಿಯಬೇಕಾಗಿಲ್ಲ. ನಿಮಗೆ ಕನ್ನಡ ಚೆನ್ನಾಗಿ ಗೊತ್ತಿದ್ದರೆ, ಕೊಂಚ ಆಸಕ್ತಿ ಹಾಗೂ ಶ್ರಮ ಹಾಕುವ ಮೂಲಕ ಇನ್ನೊಂದು ಭಾಷೆಯನ್ನು ಸುಲಭವಾಗಿ ಕಲಿಯಬಹುದು. ನಮ್ಮ ಸುತ್ತಮುತ್ತ ಇರುವ ಬಹುತೇಕ ಜನ ಇನ್ನೊಂದು ಭಾಷೆಯನ್ನು ಸುಲಭವಾಗಿ ಕಲಿತಿದ್ದೇ ಹೀಗೆ.

ಹೀಗಾಗಿ, ಕೀಳರಿಮೆ ಬೇಡ. ಹಿಂಜರಿಯುವ ಅವಶ್ಯಕತೆಯಿಲ್ಲ. ನಡೆಯುವುದನ್ನು ಕಲಿತವ ಕರ್ನಾಟಕದಲ್ಲೂ ನಡೆದಾಡಬಲ್ಲ, ಇಂಗ್ಲಂಡ್‌ನಲ್ಲೂ ನಡೆಯಬಲ್ಲ. ಅದೇ ರೀತಿ ಒಂದು ನುಡಿಯನ್ನು ಚೆನ್ನಾಗಿ ಕಲಿತವ ಇನ್ನೊಂದು ಭಾಷೆಯನ್ನೂ ಅಷ್ಟೇ ಚೆನ್ನಾಗಿ ನುಡಿಯಬಲ್ಲ. ಒಂಚೂರು ಆಸಕ್ತಿ ಇದ್ದರೆ ಕಲಿಕೆ ಸುಲಭವಾಗುತ್ತ ಹೋಗುತ್ತದೆ.

ಅಂಥದೊಂದು ಮನಃಸ್ಥಿತಿ ನಮ್ಮಲ್ಲಿರಬೇಕಷ್ಟೇ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಚಾಮರಾಜ ಸವಡಿ
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-10-12


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»2008 ನಲ್ಲಿ ಕಾಲ್ತುಳಿತಕ್ಕೆ 360 ಕ್ಕೂ ಹೆಚ್ಚು ಬಲಿ , ಬಾಂಬ್ ಸ್ಪೋಟಕ್ಕೆ 156
»ಆಗಾಗ ಬದುಕಿ ಬರುವವರು...!! ಸಮಾಜವ ಹಿಂಡಲು..??
»The dilemma of an educated Muslim youth
»ಅಮಾಯಕರನ್ನು ಹಿಂಸಿಸುವುದು ನಮ್ಮನ್ನು ನಾವೆ ಹಿಂಸಿಸಿಕೊಂಡಂತೆ
»ಕುಂಕುಮವಿಟ್ಟರೆ ಗೆಟ್ ಔಟ್!
»ಸಬಕೋ ಸನ್ಮತಿ ದೇ ಭಗವಾನ್ .....
»ಟಾಪ್ ಸಿ.ಎಮ್
»ಸರ್ ಎಂ.ವಿಶ್ವೇಶ್ವರಯ್ಯನವರಿಗೆ ನಮನ
»ಅಪ್ಪಿಕೋ ಚಳವಳಿ ನೆನಪಿನ ಹಬ್ಬ
»ಮನೆಯೊಳಗೆ ಬೇರುಗಳ ಸುಂದರ ಲೋಕ
»ಈ ಸಂದಿಗ್ಧ ಕಾಲದಲ್ಲಿ ನೀವು ಯಾರ ಪರ?
»ಅವನಿಗೆ ಅಬ್ದುಲ್ ಕಲಾಂ ಕಾಗದ ಬರೆದರು!
»ದಿನದ ಸುದ್ದಿ- ಹಾಡು ಹಕ್ಕಿಗೆ ಕೃತಕ ಗೂಡು
»ಜೀವಕ್ಕೆ ಬೆಲೆಯೆಲ್ಲಿದೆ? ಹೈದರಾಬಾದ್, ಜೈಪುರ, ಬೆಂಗಳೂರು, ಅಹ್ಮದಾಬಾದ್, ದೆಹಲಿ...
»ಕೋಮು ದ್ವೇಷದ ಸುಗ್ಗಿಯ ಕುಯಿಲು...
»ಅಲ್ಲಿ ಮಹಾಸ್ಫೋಟ, ಇಲ್ಲಿ ಮಹಾಪ್ರಯೋಗ
»ಮಧ್ಯ ಬೆರಳಿನ ಪುರಾಣ - History of the Middle Finger
»ಸಮುದ್ರ ಮಥನ-1 ಏಳು, ಏಳೆನ್ನುವ ಶ್ರೀರಾಮ
»ಹೋದವರು ಮತ್ತೆ ಬರಲಾರರು
»ವಿಶ್ವದ ಹುಟ್ಟಿನ ಪತ್ತೆ ಯತ್ನ...ವಿಜ್ಞಾನಿಗಳಿಂದ ಪ್ರೊಟಾನ್ ಸ್ಪೋಟ
»ಕಂದನ ನಗು ಕಸಿದಹೃದಯ ಬೇನೆ .....
»ಡಾ. ರಾಜ್‌ಕುಮಾರ್ ಉದ್ಯಾನವನ, ಬೆಂಗಳೂರು
»ಭಗತ್ ಸಿಂಗ್ ರ ಅಣಿಮುತ್ತುಗಳು.
»ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
»ಮನೆ ಮನಗಳಲ್ಲಿ ಬರಲಿವೆ ಕರೆಂಟ್ ಹೋಗದ ದಿನಗಳು
»ಬೆರಳು ತುಂಡಾಯಿತೇ? ವರಾಹ ಚೂರ್ಣ ಹಚ್ಚಿ ಹೊಸ ಬೆರಳು ಪಡೆಯಿರಿ!
»ವಿಜ್ಞಾನಿಗೆ ಕೈಕೊಟ್ಟ ಕಂಪ್ಯೂಟರ್ ಉಪಕರಣಗಳು..!
»ವಾರದಲ್ಲಿ ಹೊಸಮನೆ ರೆಡಿ
»ಹೆಕ್ಕಿಕೋ, ಪ್ಲಾಸ್ಟಿಕ್ ಹೆಕ್ಕಿಕೋ...
»ಮುದ್ರಿಸುವ ಮುನ್ನ ಯೋಚಿಸಿ...
»ಸಾಫ್ಟ್ವೇರ್ ಕಂಪೆನೀಲಿ ಏನು ಮಾಡ್ತಾರೆ…?
»ಧಾರ್ಮಿಕ ಅಂಧಾರಾಧನೆಯ ಸೋಗಿನಲ್ಲಿ...
»ಮಳೆಗೆ ನಾವೆಷ್ಟು ಸಿದ್ಧ?
»ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ
»ನೀರಿನ ಮೇಲೆ ತೇಲುವ ಕಾರು ಪಾರ್ಕಿಂಗ್ ವ್ಯವಸ್ಥೆ
»Virginity: A virtue or a curse?
»ಭೂಮಿಯ ತಾಪಮಾನದ ಹೆಚ್ಚಳ...ಮನುಕುಲ ತಳಮಳ
»ತಾಯಿಯ ಹಾಲಿನಲ್ಲಿ ಮೊಟ್ಟೆಯ ವಾಸನೆ!
»ನೋವಿಗೆಷ್ಟು ಕಾಸು!
»ಭವಿಷ್ಯದ ತಿಜೋರಿಯಲ್ಲಿ ಭಾರತದ ಬೀಜಗಳು!
»ಪತ್ರೊಡೆಯ ಘಮಕ್ಕೆ ಒಸರುವ ಜೊಲ್ಲು
»ಅಂದು ಸ್ವಾತಂತ್ರ್ಯಕ್ಕೂ ಸಾರ್ಥಕತೆ!
»ಕೆ‌ಆರ್‌ಎಸ್ ಕ್ರೆಸ್ಟ್‌ಗೇಟ್ ಹಿಂದಿನ ಇತಿಹಾಸ
»ಗಂಡಸರೂ ಬಸುರಿ ಆಗುವುದಾಗಿದ್ದರೆ...?!
»ಮೊಬೈಲ್ ಸಿಮ್: ಉಪೇಕ್ಷೆ ಮಾಡದಿರಿ - ಹೀಗೊಂದು ಉಪಯುಕ್ತ ಮಾಹಿತಿ
»ಪ್ರಚಂಡ ಸವಾಲು
»ಅಣ್ಣಾ ನಿನ್ನ ಸೋದರಿಯನ್ನ ಮರೆಯದಿರು..........
»ಸ್ವಾತಂತ್ರ್ಯಕ್ಕಾಗಿ ಜೈಲುವಾಸ: ರಾಜ್ಯದ ಮೊದಲ ಮಹಿಳೆ ಸ್ದಿದಮ್ಮ
»ಛಿದ್ರವಾಗುವ ಮುನ್ನ ಭದ್ರವಾಗೋಣ
» ಮುನ್ನುಗ್ಗುತ್ತಿರುವ ಭಾರತ ಮುಂದಿನ ಸೂಪರ್ ಪವರ್..?
»ವಿಶ್ವಾಸದ ಮೂರು ಮುಖಗಳು ....
»ನೀರಿನ ಹೆಸರಿನಲ್ಲಿ ಕಣ್ಣೀರು.....
»‘ಅರಣ್ಯ’ ರೋದನ.....
»ಸರಕಾರಿ ಬಸ್ಸುಗಳಿರುವುದು ಲಾಭ ಗಳಿಸುವುದಕ್ಕಲ್ಲ
»ಕಲ್ಲು ಗಣಿಗಾರಿಕೆ; ಪಶ್ಚಿಮಘಟ್ಟ ನಾಶಕ್ಕೆ ನಾಂದಿ
»ದಿನವೂ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಅಬ್ಬಿ ಫಾಲ್ಸ್
»ಮರುಪೂರಣದಿಂದ ಹತ್ತಡಿ ಏರಿದ ನೀರು
»ಜನ, ವಾಹನ ದಟ್ಟಣೆಯ ಸುಳಿಯಲ್ಲಿ ಕೆ‌ಆರ್ ಮಾರ್ಕೆಟ್ ಸದಾ ಗಜಿಬಿಜಿ, ಗೌಜು ಗ್ದದಲ, ಗಲೀಜಿನ ವಾತಾವರಣ
»ಬೆಂಗಳೂರು ಸರಣಿ ಸ್ಪೋಟ : ರವಿ ಬೆಳೆಗೆರೆ ಅಭಿಪ್ರಾಯ
»ಕನ್ನಡ ಆಡಳಿತ ಭಾಷೆ ಅನ್ನೋದು ನೆನಪಿರಲಿ!
»ಗಣಿ: ನಿಸರ್ಗ, ಬೊಕ್ಕಸ ಕೊಳ್ಳೆ
»ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂದು ಮಂಜು ಕವಿದ ಮಧ್ಯಾಹ್ನ
»ಬಹುಜನ ಹಿತಾಯ ಬಹುಜನ ಸುಖಾಯ : ಹೋರಾಟ ನಿಮ್ಮದು ಬೆಂಬಲ ನಮ್ಮದು
»ಮುಂಬೈ ರೊಟ್ಟಿ ಕಾರ್ಖಾನೆಯೊಂದರೊಳಗಣ ನೋಟ
»ಅತಿಯಾದ ಸೆಖೆಯೇ? ಟ್ರೈ ಮಾಡಿ-ಯು.ಎಸ್.ಬಿ. ಎಸಿ ಶರ್ಟ್
»ಕಣ್ಣಿಲ್ಲದ ಅಜ್ಜಿಯ ಬಳಿ ದಾರಿ ಕಾಣದ ತಬ್ಬಲಿಗಳು
»ಅರವತ್ತು ವರ್ಷಗಳ ಬಳಿಕ ಹಿಂದಕ್ಕೆ ಬಂದ ಪತ್ರ
»ತೋಟವನ್ನೇ ನುಂಗುತ್ತಿರುವ ಬೇರುಹುಳಗಳು : ಕಂಗಾಲಾದ ಅಡಿಕೆ ಬೆಳೆಗಾರರು
»ತುಂಗೆಯ ಮಡಿಲಿಗೆ ಪಕ್ಷಿ ಜೀವಗಳ ಬಾಗಿನ!
»ಬಾಂಬ್ ಸೂಟ್ ಎಂಬ ರಕ್ಷಾ ಕವಚ
»ಕಾವೇರಿ ಕಣಿವೆಯಲ್ಲಿ :ಚುಕ್...ಪುಕ್... ಬಾಬಾ ಎಕ್ಸ್‌ಪ್ರೆಸ್
»ಶ್ರೀರಾಮ ಸೇತುವೆಯನ್ನು ಧ್ವಂಸಗೈದವರು ಯಾರು?
» ‘ಪವರ್ ಕಿಂಗ್’ ನಿಂದ ‘ಪವರ್ ಕ್ವೀನ್’ ಅಗುತ್ತಿರುವ ನಮ್ಮ ಮಹಿಳೆಯರು
»ಸಡಿಲ ಪ್ಯಾಂಟ್ ಧರಿಸಿದರೆ ದಂಡ
»ಮೋಡ ಬಿತ್ತನೆ: ಹೆರಿಗೆಯೋ ಗರ್ಭಪಾತವೋ?
»ಸಂಪ್ರದಾಯಸ್ಥ ಹವ್ಯಕರಲ್ಲಿ ಹೊಸ ಗಾಳಿ...
»ರೈತರನ್ನು ಕೊಂದು ಪ್ರತಿಮೆ ಸ್ಥಾಪಿಸಲು ಹೊರಟವರು
»ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಮುನ್ನ
»ಅಣು ಬಂಧ: ಅನಿರೀಕ್ಷಿತ ಮತ್ತು ಆಕಸ್ಮಿಕ
»ಇಹಲೋಕ ತ್ಯಜಿಸಿದ ಬ್ಲಾಗ್‌ಲೋಕದ ಹಿರಿಯಜ್ಜಿ
»ಗಾಳಿ ಶಕ್ತಿಯಿಂದ ಚಲಿಸಲಿದೆ ವಾಹನ !
»ಓಪನ್ ಆಫೀಸ್ ಬಗ್ಗೆ ಒಂದಿಷ್ಟು ಮಾಹಿತಿ
»ಮೂರೂ ಬಿಟ್ಟವರ ಅಮೆರಿಕ ಯಾತ್ರೆ .......
»ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
»ಎಪ್ಪತ್ತರ ಅಜ್ಜಿಗೆ ಅವಳಿ ಮಕ್ಕಳು
»ರೈತರಿಗೆ ಅನ್ನದಾತರಾಗಿರುವ ಐಟಿ ಇಂಜಿನಿಯರ್‌ಗಳು!!
»ಅಮೆರಿಕೆಗಾಗಿ ದೇಶದ ಹಿತ ಬಲಿ
»ದುಬೈ : ಖರ್ಜೂರದಾಕಾರದ ಹೊಸ ಕಟ್ಟಡ : ದುಬೈ ಕ್ರೌನ್
»ಸಿದ್ದರಾಮಯ್ಯ: ಬಾಣಲೆಯಿಂದ ಬೆಂಕಿಗೆ, ಬೆಂಕಿಯಿಂದ ಎಲ್ಲಿಗೆ?
»ಬಿಜೆಪಿಯ ದುರಂತಕ್ಕೆ ಪೀಠಿಕೆ .....?
»ಚಮ್ಮಾರಿಕೆಯೊಂದಿಗೆ ಪುಸ್ತಕ ಪ್ರಕಟಿಸುವ ಧನರಾಜ
»ಹೊಸ ಬ್ಯಾಟರಿ ಕಂಡುಹಿಡಿಯಿರಿ : 300 ಮಿಲಿಯನ್ ಡಾಲರ್ ಗೆಲ್ಲಿರಿ
»ಮುತ್ತು ವೈಜ್ಞಾನಿಕ ಸತ್ಯಾಂಶಗಳು ..ಇಂದು( ಜು 6) ಅಂತಾರಾಷ್ಟ್ರೀಯ ‘ಕಿಸ್ಸಿಂಗ್ ಡೇ’
»ತರೀಕೆರೆ ಏರಿಯಾ - ಚಿಟ್ಟೆಗಳ ಕಲಾವಿದೆ
»ಹುಲಿ ಸಾಮ್ರಾಜ್ಯದಲ್ಲಿ ಕಾಫಿ ಎಸ್ಟೇಟ್!
»ವೈದ್ಯಕೀಯ ಜ್ಞಾನನಿಧಿ ಡಾ| ಕೆ.ಜಿ.ಎಸ್. ಭಟ್
»ಚಳ್ಳಕೆರೆ : ಮಾನವ ರಹಿತ ವಿಮಾನ ಹಾರಾಟ ಕೇಂದ್ರ
»ಏನಿದು ಭಾರತ-ಅಮೆರಿಕ ಅಣು ಒಪ್ಪಂದ? ಇದರಿಂದ ಏನು ಲಾಭ? ವಿರೋಧ ಏಕೆ? ಸಮಗ್ರ ನೋಟ
»ಹಣದುಬ್ಬರವೆಂದರೇನು ಗೊತ್ತಾ?
»ಹೊಳೆ ದಾಟಿದ ಮೇಲೆ...
»ಅಂತರಿಕ್ಷದಲ್ಲಿ ಮದುವೆ ಮಾಡಿಸುತ್ತದೆ ಈ ಸಂಸ್ಥೆ!
»ಜಿರಾಫೆಯನ್ನು ಬಂಧಿಸಿದ ಪೊಲೀಸರು
»ಆ ಸಿಗರೇಟು ಬಿಡಿ ಇ-ಸಿಗರೇಟು ಸೇದಿ
»ರೈತರ ಸರಣಿ ಆತ್ಮಹತ್ಯೆ : ದೊರಕದ ಸಹಾಯ
»ಪಠ್ಯಪುಸ್ತಕ ಬದಲಾವಣೆಗೆ ಸಚಿವರ ‘ಕೇಸರಿ ನಕಾಶೆ’
»’ಮೊಬೈಲ್’ ಗಾದೆಗಳು!!
»ಭಾರತೀಯ ಭಾಷಾ ಗಣಕಲೋಕದ ಪಿತಾಮಹ - ಶ್ರೀ ಕೆ.ಪಿ ರಾವ್
»ಒಂದು ಸಾವಿನ ಮನೆಯ ವೃತ್ತಾಂತ .....
»ಕನ್ನಡ ಕಲಿಸುವುದಕ್ಕೆ ಇಷ್ಟವಿರುವವರಿಗೆ ಅರ್ಪಣೆ
»ಅನಾಥ ಅಜ್ಜಿಗೆ ಸ್ಪೂರ್ಥಿಯ ಆಸರೆ
»ರಾಜಕೀಯ ಚದುರಂಗದಾಟದ ಕಾಯಿಗಳಾಗುತ್ತಿರುವ ರೈತರು
»ಅನ್ನ ತಿನ್ನುವವರು ನೀರುಳಿಸುವ ವಿಧಾನ
»ಗಂಗೆ ಅಂತರ್ಧಾನಳಾದಾಳೇ... !?
»ಚಿಕುನ್‌ಗುನ್ಯಾದಿಂದ ಕರಾವಳಿ ಕಲಿಯಬೇಕಾದ ಪಾಠ
»ಕಾಲ್ ಸೆಂಟರ್‌ಗಳಲ್ಲಿ ತೆರೆಯಲಿ ಏಡ್ಸ್ ಜಾಗೃತಿ ಅಂಗಡಿಗಳು
»ಕರಾವಳಿಯನ್ನು ಕಾಡುತ್ತಿದೆ ಕಮ್ಯುನಿಸ್ಟ್ ಕಳೆ
»ಗಣಿಗಾರಿಕೆ ರಾಷ್ಟ್ರೀಕರಣವಾಗಲಿ
»ಕಳೆ ಪಡೆಯುತ್ತಿರುವ ಹೊಳೆ ಮೀನುಗಾರಿಕೆ ....
» 'Housewives' out of fashion in metros!
»ನನ್ನಜ್ಜನಿಗೊಂದಾನೆಯಿತ್ತು !
»ಕೊಂಕಣಿ ರಾಜ್ಯದ ಕನಸು ಕಂಡಿದ್ದ ಕಾಮತರು
»ಪದ್ಮಪ್ರಿಯಾ ಪ್ರಕರಣದ ಸುತ್ತ...
»... ಆ ಒಂದು ಮುತ್ತಿನ ಕತೆ
»ಈ ಭೇಟಿ ನ್ಯಾಯವೇ?
»ಪಾಸ್‌ಪೋರ್ಟ್ ಅರ್ಜಿಗೆ ಕನ್ನಡ, ಇಂಗ್ಲಿಷ್‌ನ ವೆಬ್‌ಸೈಟ್
»some ಪದ ಕೇಡಿ
»ಈ-ಮೆಲ್ ರಚನೆಯ ಪರಿಚಯ
»ರೈತರಿಗೆ ಮಾತ್ರ ರಬ್ಬರ್ ಗುಂಡು: ಉಳಿದವರಿಗೆ?
»ಇ-ಮೇಲ್ ಅಕೌಂಟನ್ನು ತೆರೆಯುವುದು
»ನೀರಿನಿಂದ ಓಡುವ ಕಾರು!
»ನಾಡಿನ ಒಳಿತಿನ ಚುಕ್ಕಾಣಿ ಅರ್ಚಕನ ಕೈಗೆ?
»ಕೆಂಪಾಯಿತು ಯಡಿಯೂರಪ್ಪನವರ ಹೆಗಲಿನ ಹಸಿರು ಶಾಲು
»ರೈತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಗೆ ಮೊದಲ ಬಲಿ ರೈತನೇ!
»ಮುದುಡಿದ ಮನದಲ್ಲಿ ನಗುವೊಂದು ಅರಳಿದಾಗ..
»ಇಲ್ಲಿದೆ ಬ್ರಿಟಿಷರ ಕಾಲದ ನ್ಯಾಯಪೀಠ !
»ಸುವರ್ಣ ಗಣಕನ್ನಡ
»