ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮಂಗಳೂರು: ಅನ್ಯಾಯದ ವಿರುದ್ಧ ಹೋರಾಟ ಮುಂದುವರಿಯಲಿ: ‘ಕೋಮುವಾದ ಮತ್ತು ಭಯೋತ್ಪಾದನೆ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಸನತ್‌ಕುಮಾರ್ ಬೆಳಗಲಿ

ಮಂಗಳೂರು, ಫೆ.೭: ಕರ್ನಾಟಕದ ಮಟ್ಟಿಗೆ ದ.ಕ. ಜಿಲ್ಲೆ ಸಂಘ ಪರಿವಾರದ ಪ್ರಯೋಗ ಶಾಲೆಯಂತಿದ್ದು, ಇಲ್ಲಿ ಕೋಮುವಾದ ವಿಜೃಂಭಿಸುತ್ತಿದೆ. ಯಾರು ಏನು ಮಾಡಬೇಕು ಮತ್ತು ತಿನ್ನಬೇಕು ಎಂದು ನಿರ್ಧರಿಸುವ ಫ್ಯಾಶಿಸ್ಟ್ ಶಕ್ತಿಗಳ ಅಟ್ಟಹಾಸ ಹೆಚ್ಚುತ್ತಿದೆ. ಪ್ರಗತಿಪರರು ಧ್ವನಿ ಎತ್ತಿದರೆ ನಕ್ಸಲರು ಮತ್ತು ಮುಸ್ಲಿಮರು ಧ್ವನಿ ಎತ್ತಿದರೆ ಭಯೋತ್ಪಾದಕರು ಎಂಬ ಹಣೆ ಪಟ್ಟಿ ಕಟ್ಟಲಾಗುತ್ತದೆ. ಈ ಬಗ್ಗೆ ಭ್ರಮನಿರಸಗೊಳ್ಳದೆ ಎಲ್ಲ ಅನ್ಯಾಯ ಮತ್ತು ಅಕ್ರಮದ ವಿರುದ್ಧ ಹೋರಾಟ ಮುಂದುವರಿಯಬೇಕು ಎಂದು ಹಿರಿಯ ಪತ್ರಕರ್ತ, ಅಂಕಣಗಾರ ಸನತ್‌ಕುಮಾರ್ ಬೆಳಗಲಿ ಅಭಿಪ್ರಾಯಪಟ್ಟರು.

ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಮತ್ತು ವಿಜ್ಞಾನ ಜ್ಯೋತಿ ಪ್ರಕಾಶನ ನಗರದಲ್ಲಿ ರವಿವಾರ ಏರ್ಪಡಿಸಿದ್ದ ಹಿರಿಯ ವಿಚಾರವಾದಿ ಸಿ.ಎನ್.ಶೆಟ್ಟಿ ಸಂಪಾದಿಸಿದ ‘ಕೋಮುವಾದ ಮತ್ತು ಭಯೋತ್ಪಾದನೆ’ ಕೃತಿಯ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.


ದೇಶದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ ಎಂಬಂತಾಗಿದೆ. ಅವರಿಗೆ ಅಭದ್ರತೆ ಕಾಡುತ್ತಿದೆ. ರಾಜ್ಯ ಗೃಹ ಸಚಿವರು ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಇದರ ವಿರುದ್ಧ ಎಲ್ಲ ಪ್ರಗತಿಪರರು ಜಾಗೃತರಾಗಬೇಕು. ಪ್ರಗತಿಪರರು ಧರ್ಮ ವಿರೋಧಿಗಳು ಎಂಬ ಭಾವನೆ ಕೆಲವರಿಗೆ ಇದೆ. ಆದರೆ, ಪ್ರಗತಿಪರರು ಎಂದೂ ಧರ್ಮ ವಿರೋಧಿಗಳಲ್ಲ. ಮಹಾತ್ಮಾಗಾಂಧಿ, ರಾಮಕೃಷ್ಣ ಪರಮಹಂಸ, ಬಸವಣ್ಣ ರಂತಹ ಮೇಧಾವಿಗಳು ಹೇಳುವ ಧರ್ಮದ ಮಾರ್ಗದಲ್ಲಿ ನಡೆಯೋಣ. ಪ್ರಣ್ ತೋಗಾಡಿಯಾ, ನರೇಂದ್ರ ಮೋದಿ, ಪ್ರಮೋದ್ ಮುತಾಲಿಕ್‌ರಂತಹವರ ಮಾತನ್ನು ತಿರಸ್ಕರಿಸೋಣ ಎಂದ ಸನತ್, ನವ ಪೀಳಿಗೆ ಈ ಶಕ್ತಿಗಳ  ಕಪಿ ಮುಷ್ಠಿಯಿಂದ ದೂರ ಸರಿದಿದೆ ಎಂಬುದಕ್ಕೆ ಇತ್ತೀಚಿನ ಚುನಾವಣೆಗಳಲ್ಲಿ ಜಾತ್ಯತೀತ ಶಕ್ತಿಗಳ ಗೆಲುವು ಸಾಕ್ಷಿಯಾಗುತ್ತಿದೆ ಎಂದು ನುಡಿದರು.

ಕೃತಿಯನ್ನು ಬಿಡಗಡೆಗೊಳಿಸಿದ ಹಿರಿಯ ವಿಚಾರವಾದಿ, ಸಾಹಿತಿ ಕೆ.ಎಸ್.ಭಗವಾನ್‘ ಭಯೋತ್ಪಾದನೆ ಇತ್ತೀಚಿನದ್ದಲ್ಲ. ಅದಕ್ಕೂ ಸಾವಿರಾರು ವರ್ಷಗಳ ಇತಿಹಾಸವಿದೆ. ಬಹುತೇಕ ಧರ್ಮಗಳು ಈ ಭಯೋತ್ಪಾದನೆಗೆ ಅವಕಾಶ ನೀಡಿದ್ದು, ಅದರಿಂದ ಎಲ್ಲರೂ ದೂರವಿದ್ದು,ಮನುಷ್ಯನ ಉಳಿವಿಗೆ ಚಿಂತನೆ ನಡೆಸುವ ಮನಸ್ಸುಗಳಿಗೆ ಗೌರವ ಕೊಡೋಣ’ ಎಂದು ಹೇಳಿದರು.


ಪುಸ್ತಕವನ್ನು ಪರಿಚಯಿಸಿ ಮಾತನಾಡಿದ ಮತ್ತೋರ್ವ ಹಿರಿಯ ಸಾಹಿತಿ, ವಿಚಾರವಾದಿ ಹಾಸನದ ಜ.ಹೋ. ನಾರಾಯಣ ಸ್ವಾಮಿ ‘ವಿಚಾರ ಮತ್ತು ಚಿಂತನೆಗಳಿಗೆ ವಯಸ್ಸಿನ ಮಿತಿಯಿಲ್ಲ. ಈ ಕೃತಿಯನ್ನು ಸಂಪಾದಿಸಿದ ಸಿ.ಎನ್.ಶೆಟ್ಟಿ ವಯಸ್ಸಿನಲ್ಲಿ ಹಿರಿಯರಾದರೂ ತಮ್ಮ ಚಿಂತನೆಗಳಿಂದ ವಿಮುಖರಾಗಬಾರದು. ಒಂದು ಕಾಲದಲ್ಲಿ ಅವರು ಬೆಂಕಿಯಲ್ಲೇ ಬೆಂದಿದ್ದರು. ಇದೀಗ ಆ ಸಂಘಟನೆಯಿಂದ ಹೊರ ಬಂದು ನಮಗೆಲ್ಲರಿಗೂ ಬೆಳಕಾಗುತ್ತಿದ್ದಾರೆ’ ಎಂದು ಹೇಳಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್, ಸ್ವಾತಂತ್ರ ಹೋರಾಟಗಾರರು ಕಂಡ ಕನಸು ಇಂದು ನುಚ್ಚು ನೂರಾಗುತ್ತಿದೆ. ಆರ್‌ಎಸ್‌ಎಸ್ ಎಳೆಯ ಮಕ್ಕಳಿಗೆ ಕೋಮುವಾದದ ಬೀಜ ಬಿತ್ತುತ್ತಿದೆ. ಅದರ ಅಧೀನದಲ್ಲಿರುವ ಇತರ ೮೦ ಸಂಘಟನೆಗಳು ಕೂಡ ಅದೇ ಕೆಲಸವನ್ನು ಮಾಡುತ್ತಿವೆ. ಲಷ್ಕರೆ ತೊಯ್ಬಾ, ಜೈಶೇ ಮುಹಮ್ಮದ್ ಇತ್ಯಾದಿ ಮುಸ್ಲಿಮ್ ಹೆಸರಿನ ಸಂಘಟನೆಗಳು ಇಸ್ರೇಲ್ ರಾಷ್ಟ್ರದ ಕೂಸಾಗಿದ್ದು, ಮುಸ್ಲಿಮ್ ಸಮಾಜದ  ಮೇಲೆ ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿಲ್ಲ. ಬದಲಾಗಿ ಅವು ಮುಸ್ಲಿಮ್ ಸಮುದಾಯಕ್ಕೆ ಕೆಟ್ಟ ಹೆಸರನ್ನು ತರುತ್ತಿದೆ. ಇದರ ಹಿಂದೆ ಇಸ್ರೇಲ್ ಮತ್ತು ಆರೆಸ್ಸೆಸ್ ವ್ಯವಸ್ಥಿತ ಷಡ್ಯಂತ್ರವಿದ್ದು, ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ನುಡಿದರು.

ಉಪನ್ಯಾಸಕಿ ಮಂಜುಳ ‘ಮಹಿಳೆಯರು ವಿಚಾರಶೀಲರಾಗಬೇಕು. ಪ್ರಗತಿಪರ ಸಂಘಟನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.


ಯುವ ಲೇಖಕ ಮತ್ತು ಕೋಮು ಸೌಹಾರ್ದ ವೇದಿಕೆಯ ಕೋಶಾಧಿಕಾರಿ ಇಸ್ಮತ್ ಫಜೀರ್ ಪ್ರಾಸ್ತಾವಿಕ ಮಾತನಾಡಿದರು. ಕೃತಿಯ ಸಂಪಾದಕ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷ ಸಿ.ಎನ್.ಶೆಟ್ಟಿ ಸ್ವಾಗತಿಸಿದರು.

ವೇದಿಕೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಕಕ್ಕಿಂಜೆ ಕಾರ್ಯಕ್ರಮ ನಿರೂಪಿಸಿದರು. ಆಸಿಫ್ ಮೂಲ್ಕಿ ವಂದಿಸಿದರು.

ಇದೇ ವೇಳೆ ವಿಚಾರವಾದಿ ಸಿ.ಎನ್.ಶೆಟ್ಟಿಯವರನ್ನು ಕೋಮು ಸೌಹಾರ್ದ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್ ಸನ್ಮಾನಿಸಿದರು.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-02-08 00:00:00

Tell a Friend

ಪ್ರತಿಸ್ಪಂದನ
Ibrahim Hussain, Udipi, Karnataka
2010-02-09
ಜಾತಿಯ ಶಕ್ತಿಗಳನ್ನು ನಿಯಂತ್ರಣದಲ್ಲಿರಿಸಲು ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಮತ್ತು ವಿಜ್ಞಾನ ಜ್ಯೋತಿ ಪ್ರಕಾಶನ ಮುದ್ರಿಸಿದ ಕೋಮುವಾದ ಮತ್ತು ಭಯೋತ್ಪಾದನೆ’ ಕೃತಿಯು ಜನ ಸಾಮನ್ಯರಿಗೂ ತಲಪಲಿ. ಕೋಮುವಾದಿಗಳ ಬಣ್ಣ ಬಯಲಾದಲ್ಲಿ ಸಮಾಜದಲ್ಲಿ ಎಲ್ಲರೂ ಸಹಬಾಳ್ವೆ ಮತ್ತು ಶಾಂತಿಯಿಂದ ಇರಬಹುದು. ಇಂತಹ ಕಾರ್ಯಕ್ರಮಗಳು ಕೋಮು ಸೌಹಾರ್ದತೆಗೆ ನಾಂದಿಯಾಗಲಿ. ನನ್ನ ಸಹಕಾರ ನಿಮ್ಮೊಂಗಿದೆ.
ಬದ್ರುದ್ದೀನ್ ಹೆಂತಾರ್, ದುಬೈ
2010-02-08
ಹಿಂದೆ ಕರಾವಳಿಗೆ ಬುದ್ದಿವಂತರ ನಾಡೆಂಬ ಕೀರ್ತಿ ಇತ್ತು ಅದರೆ ಈಗ ಅದೇ ಬುದ್ದಿವಂತರ ಮಕ್ಕಳು ಅಕ್ರಮಿಗಳ ನಾಡೆಂಬ ಹೆಗ್ಗಳಿಕೆಯನ್ನು ಇದೇ ಕರಾವಳಿಗೆ ದೊರಕಿಸಿ ಕೊಟ್ಟಿರುವುದು ಗತಿಸಿ ಹೋದ ಆ ಪುಣ್ಯಾತ್ಮರ ಆತ್ಮಕ್ಕೆ ಎಷ್ಟು ನೋವುಂಟು ಮಾಡಿದೆಯೋ ಅದಕ್ಕಿಂತಲೂ ಹೆಚ್ಹು ಬದುಕುಳಿದ ಶಾಂತಿ ಪ್ರಿಯ ಜನತೆಗೂ ವ್ಯಸನವನ್ನು ನೀಡ್ತಾ ಇದೆ. ಇಲ್ಲೂ ಕೂಡ ಶಾಂತಿಗಾಗಿ ಹೋರಾಡುವ ಒಂದು ವಿಭಾಗ ಜನರಿದ್ದಾರೆ. ಅವ್ರೀಗೆ ಜಾತಿಗಿಂತಲೂ ಜೀವ ಮುಖ್ಯ.ಹರಿತವಿರುವ ಖಡ್ಗವು ಕೂಡಾ ಇಂತಹ ಶಾಂತಿಪ್ರಿಯ ಜನತೆಯ ಮುಂದೆ ತಲೆ ಬಾಗಿದ ಎಷ್ಟೋ ಚರಿತ್ರೆ ನಮ್ಮ ಮುಂದೆ ಇದೆ.ಕೋಮುವಾದಿ ವಿರುದ್ದ ಹೋರಾಟ ಮುಂದುವರಿಸಿ ನಾಡಿಗೆ ನೆಮ್ಮದಿ ತರುವ ಸಲುವಾಗಿ ನಡೆಸುವ ಎಲ್ಲಾ ಪ್ರಯತ್ನಗಳೀಗೆ ನಮ್ಮೆಲ್ಲರ ಸಹಕಾರ ಖಂಡಿತಾ ಇದೆ.ಈ ಸಂದರ್ಭದಲ್ಲಿ ಶ್ರೀಮಾನ್ ಸನತ್ ಬೆಳಗಲಿ,ಸಿ.ಎನ್ ಶೆಟ್ಟಿ,ಕೆ.ಯಸ್ ಭಗವಾನ್,ನರಾಯಣ ಸ್ವಾಮಿ, ಅನ್ವರ್ ಸಾದಾತ್, ಸುರೇಶ್ ಭಟ್ ಹಾಗೂ ಶ್ರೀಮತಿ ಮಂಜುಳ ರವರನ್ನು ಹೃತ್ಪೂರ್ವಕ ಅಭಿನಂದಿಸುತ್ತೇವೆ.ಅಕ್ರಮಿಗಳು ನಾಶವಾಗಲಿ,ಶಾಂತಿಯು ತಾಂಡವಾಡಲಿ,ಪ್ರ‍ೀತಿಯು ಚಿರಾಯುವಾಗಲಿ. ಜೈ ಹಿಂದ್. ಜೈ ಹಿಂದ್, ಜೈ ಹಿಂದ್
elyas muhammad , thumbe, mangalore
2010-02-08
Valuable and useful work by Sri CNShetty. Peace and communal harmony still exist in coastal districts of karnataka because of such kind of peace loving citizens and activists. We are always with you.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
»ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
»ಡಾ. ಗೀತಾ ನಾಗಭೂಷಣಗೆ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ
»ಮುಳಿಯ ಪ್ರಶಸ್ತಿ ಪ್ರದಾನ: ರೋಚಕ ಕೃತಿಗಳು ಕಡಿಮೆಯಾದಾಗ ಸಾಂಸ್ಕೃತಿಕ ಶ್ರೀಮಂತಿಕೆ ಮರೆಯಾಗುತ್ತದೆ: ಮಾಧವ ಆಚಾರ್ಯ
»ಕನ್ನಡ ಭಾಷೆ, ಸಾಹಿತ್ಯ ಪರಂಪರೆಗೆ ಐತಿಹಾಸಿಕ ಹಿನ್ನೆಲೆಗಳಿವೆ: ಮೂಡಿಗೆರೆ: 3ನೆ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಸಮ್ಮೇಳನಾಧ್ಯಕ್ಷ ಡಿ.ಬಿ.ಸುಬ್ಬೇಗೌಡ
»ರಷ್ಯನ್‌ ಕಥೆಗಳು ಪುಸ್ತಕ ಬಿಡುಗಡೆ: ಕನ್ನಡ ಸಾಹಿತ್ಯ ಲೋಕದಲ್ಲಿ ಅನುವಾದಕರಿಗೆ ವಿಪುಲ ಅವಕಾಶ: ಪ್ರೋ.ಸಿ. ನಾಗಣ್ಣ
» ಪ್ರಶಂಸೆಗೆ ಪಾತ್ರವಾದ ಸಿಕ್ಕಿಂ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ : ನೆರೆದವರ ರಂಜಿಸಿದ ಜಟಾಯು ಮೋಕ್ಷ
»ಜಾತಿ, ಮತದ ಗಡಿ ದಾಟಿದರೆ ಮಾತ್ರ ಕವಿಯಾಗಬಲ್ಲ: ಎಚ್.ಎಸ್.ವೆಂಕಟೇಶಮೂರ್ತಿ
»2011ನೇ ಸಾಲಿನ ಪ.ಗೋ. ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ
»ಕುಕ್ಕೆ ಸುಬ್ರಹ್ಮಣ್ಯ: ಮಲೆ ಮಾದೇಶ್ವರಕ್ಕೆ ISO ಅಂತಾರಾಷ್ಟ್ರೀಯ ಮಾನ್ಯತೆ
»ಕವನ : ಕ್ಲಾಸ್ ಶಯನ...
»ಮಾತು ಬೇರೆ ಬೇಕೆ ಗೆಳೆಯ....
»ಚಂದ್ರಶೇಖರ ಕೆದ್ಲಾಯರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ; ಫೆ.4ರಂದು ಪ್ರಶಸ್ತಿ ಪ್ರದಾನ
»ಉಡುಪಿ :ದಿವಂಗತ ಸೂರ್ಯನಾರಾಯಣ ಚಡಗ ಸ್ಮಾರಕ ಪ್ರಶಸ್ತಿ ಪ್ರದಾನ
»ಕವಿ, ಪ್ರಾಧ್ಯಾಪಕ ಡಾ| ಧನಂಜಯ ಕುಂಬ್ಳೆ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಯಕ್ಷಗಾನಕ್ಕೆ ನಿರ್ದಿಷ್ಟ ಸ್ವರೂಪ ಅಗತ್ಯ- ಗೋವಿಂದ ಭಟ್‌
»ತೋನ್ಸೆ ಕಾಂತಪ್ಪ ಮಾಸ್ತರರ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ: ಪರಿಪೂರ್ಣ ಕಲಾವಿದನಾಗಬೇಕಾದರೆ ಯಕ್ಷಗಾನದ ಬಗ್ಗೆ ಆಸಕ್ತಿ ಜ್ಞಾನ ಅಗತ್ಯ- ಡಾ. ಭಾಸ್ಕರಾನಂದ ಕುಮಾರ್
»ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರಿಗೆ ಸನ್ಮಾನ
»ಕವನ : ನನ್ನ ಸುಬ್ಬಿ
»ಮಲಯಾಳಂನ ಖ್ಯಾತ ಸಾಹಿತಿ ಸುಕುಮಾರ್ ಅಝಿಕೋಡ್ ನಿಧನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೋವಿಂದ ಭಟ್ಟ
»ಭಾರತದ ಪ್ರಪಿತಾಮಹನೆ ...
»ಖ್ಯಾತ ಸಾಹಿತಿ ನಾಡೋಜ ಪ್ರೊ. ಹಂಪ. ನಾಗರಾಜಯ್ಯರಿಗೆ ‘ವಿಶ್ವಮಾನವ ಪ್ರಶಸ್ತಿ’; ಕನ್ನಡ ಸಾಹಿತ್ಯಕ್ಕೆ ಸಂಕುಚಿತತೆ ಇಲ್ಲ: ಎಚ್.ಆರ್.ಭಾರದ್ವಾಜ್
» ಅನಂತಮೂರ್ತಿ ವಿಚಾರಧಾರೆ : ಅನಂತಮೂರ್ತಿ ಸೃಜನಶೀಲ ಸಾಹಿತಿ:ಡಾ.ನ. ರತ್ನ
»ಅದೆರಳಿದೆ....
»ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನೂ ಆಕಾಂಕ್ಷಿ: ಚಂಪಾ
»ಡಾ| ಪಾಟೀಲ ಪುಟ್ಟಪ್ಪಗೆ ನಾಗರಿಕ ಸಮ್ಮಾನ: ಗಾಂಧೀಜಿ ತತ್ವ ಪ್ರಚುರಪಡಿಸಲು ಗಾಂಧಿ ಗ್ರಾಮ ಸ್ಥಾಪನೆ:ಜಗದೀಶ ಶೆಟ್ಟರ್
»ಆಸ್ಟ್ರೋ ಮೋಹನ್ ರವರ ’ಪಿಕ್ಟೋರಿಯಲ್ ಜರ್ನಿ ಟು ಉಡುಪಿ”ಪುಸ್ತಕ ಬಿಡುಗಡೆ ಸಮಾರಂಭ
»ಮತ್ತೆ ಮಳೆ ಬರುವುದೆ....
»ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ:ಗಣಿತ ನನಗೆ ಕಬ್ಬಿಣದ ಕಡಲೆಯಾಗಿತ್ತು: ಡಾ. ಚಂದ್ರಶೇಖರ ಕಂಬಾರ
»ಡಾ.ಜಿ.ಎನ್. ಉಪಾಧ್ಯಗೆ ‘ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’
»ಕಾಳಿಂಗ ನಾವಡ ಯಶೋಗಾಥೆ ಸಾಕ್ಷ್ಯಚಿತ್ರ ವಿಡಿಯೋ
»ಕುವೆಂಪು ಕಂಚಿನ ಪ್ರತಿಮೆಗೆ ಪ್ಲಾಸ್ಟಿಕ್ ಮುಸುಕು!: ರಾಷ್ಟ್ರ ಕವಿ ಪ್ರತಿಮೆಗೂ ಬಿಜೆಪಿ ಭಿನ್ನಮತದ ಕರಿನೆರಳು; ಸಿಎಂಗಾಗಿ ಕಾದು ಕುಳಿತಿರುವ ಅಧಿಕಾರಿಗಳು
»ಗಾಯಕಿ ಎಸ್.ಜಾನಕಿಗೆ ಬಸವಭೂಷಣ ಪ್ರಶಸ್ತಿ ಪ್ರದಾನ
»ಜ್ಞಾನಪೀಠ ಶ್ರೇಷ್ಠವಾದದ್ದಲ್ಲ; ನಾಟಕ ಬರೆದದ್ದೇ ಆಕಸ್ಮಿಕ: ಡಾ| ಗಿರೀಶ ಕಾರ್ನಾಡ
»ಪಾರ್ಥಸಾರಥಿಯವರಿಗೆ ಕೊಲರಾಡೋ ಕನ್ನಡ ಪ್ರಶಸ್ತಿ
»ಯಕ್ಷಗಾನದ ಮೇರುನಟರ ಕ್ಯಾಲೆಂಡರ್‌ ಬಿಡುಗಡೆ; ಸಮಗ್ರ ಮಾಹಿತಿಯುಳ್ಳ ವೆಬ್‌ಸೈಟ್‌ ಕೂಡ ತಯಾರಿಯಲ್ಲಿ.
»30 ಜಿಲ್ಲೆಗಳಲ್ಲಿ ಕಂಬಾರರ ನಾಟಕಗಳ ಉತ್ಸವ
»ಎಲೆಯ ಮರೆಯ ಹೂ...
»ಪುತಿನ ಕಲಾಮಂದಿರ ಲೋಕಾರ್ಪಣೆ
»ಸುಳ್ಯ ಯಶಸ್ವೀ ಸಂಗೀತ ಸಂಭ್ರಮ 2011
»ಹಿರಿಯ ಸಾಹಿತಿ ಏರ್ಯ ಲಕ್ಷಿನಾರಾಯಣ ಆಳ್ವ ರಿಂದ ಡಾ| ಮೋಹನ ಆಳ್ವರಿಗೆ ಕಿಲ್ಲೆ ಪ್ರಶಸ್ತಿ ಪ್ರಧಾನ
»`ಕುವೆಂಪು ಪ್ರಭಾವ ಎಲ್ಲೆಡೆ ಪಸರಿಸಲಿ' ....
»ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚಂಪಾ, ಹಾಲಂಬಿ ಸ್ಪರ್ಧೆ?
»ಕವನ : ಕನಸಿನಾಳದಿಂದ .....
»ನಾಲ್ವರು ಸಾಧಕರಿಗೆ `ನಾಡೋಜ' ಗೌರವ ಪದವಿ ನೀಡಿ ಸನ್ಮಾನ
»ಸಂತೆ ಶಿವಾರದಲ್ಲಿ ಸಾಹಿತಿ ಡಾ ಭೈರಪ್ಪರಿಗೆ ಸನ್ಮಾನ
»ಕವನ...
»ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ 2009ನೇ ಸಾಲಿನ ಪಂಪ ಪ್ರಶಸ್ತಿ: ಬೇನಾಮಿ ಇಂಗ್ಲಿಷ್ ಶಾಲೆ ಮುಚ್ಚಿ: ಪ್ರೊ. ಚಂದ್ರ ಶೇಖರ ಪಾಟೀಲ
»ಇಂದು ಸರಸ್ವತಿ ಪುತ್ರನಿಗೆ ಹುಟ್ಟೂರ ಸನ್ಮಾನ: ಸಾಹಿತಿ ಡಾ. ಭೈರಪ್ಪ ಅವರಿಗೆ ಸಂತೇಶಿವರದಲ್ಲಿ ಅಭಿನಂದನೆ, ವಿಚಾರಸಂಕಿರಣ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri