| ಇತ್ತೀಚಿನ 20 ಪ್ರಮುಖ ವರದಿಗಳು |
|
|
|
‘ಗೋಹತ್ಯೆ ನಿಷೇಧ: ಕೆಲವು ಪ್ರಶ್ನೆಗಳು’ ಕರಪತ್ರ ಬಿಡುಗಡೆ: ಗೋಹತ್ಯೆ ನಿಷೇಧ ಬ್ರಾಹ್ಮಣ-ಶೂದ್ರರ ನಡುವಿನ ಸಂಘರ್ಷ: ಹನುಮಂತಯ್ಯ |
ಪ್ರಕಟಿಸಿದ ದಿನಾಂಕ : 2010-03-11
ಮಂಡ್ಯ, ಮಾ.೧೦: ರಾಜ್ಯ ಸರಕಾರ ಮಂಡಿಸಿರುವ ಕರ್ನಾಟಕ ಜಾನು ವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಮಸೂದೆ ಬ್ರಾಹ್ಮಣರು ಹಾಗೂ ಶೂದ್ರರ ನಡುವಿನ ಸಂಘರ್ಷವಾಗಿದ್ದು, ಈ ಬಗ್ಗೆ ಶೂದ್ರ ಸಮುದಾಯ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಮಾಜಿ ಶಾಸಕ ಹಾಗೂ ಕವಿ ಡಾ. ಎಲ್. ಹನುಮಂತಯ್ಯ ಕರೆ ನೀಡಿದ್ದಾರೆ.
ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ವತಿಯಿಂದ ನಗರದಲ್ಲಿ ಬುಧವಾರ ನಡೆದ ಗೋಮಾಂಸ ಭಕ್ಷಣೆ ಮತ್ತು ಗೋಹತ್ಯೆ ನಿಷೇಧ ಕುರಿತ ವಿಚಾರಸಂಕಿರಣದಲ್ಲಿ ‘ಗೋಹತ್ಯೆ ನಿಷೇಧ: ಕೆಲವು ಪ್ರಶ್ನೆಗಳು’ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಮಸೂದೆಯ ಉದ್ದೇಶ ಹಿಂದೂ ಧರ್ಮದ ಪಾವಿತ್ರತೆ ಎತ್ತಿಹಿಡಿಯುವುದು ಅಲ್ಲ. ರೈತರು ಮತ್ತು ಗೋವು ಗಳ ರಕ್ಷಣೆಯೂ ಅಲ್ಲ. ಮಸೂದೆಯ ಆಂತರ್ಯದಲ್ಲಿರುವುದು ಬ್ರಾಹ್ಮಣರು ಹಾಗೂ ಬ್ರಾಹ್ಮಣೇತರರ ನಡುವಿನ ಹೋರಾಟವಾಗಿದೆ ಎಂದು ಅವರು ವಿವರಿಸಿದರು.
ನಿಮ್ಮ ಪೂರ್ವಿಜರ (ಬ್ರಾಹ್ಮಣರು) ನಮ್ಮ ಪೂರ್ವಿಜರ (ಬ್ರಾಹ್ಮಣೇತ ರರು) ನಡುವೆ ಎಂದೋ ನಡೆದ ಹೋರಾಟವನ್ನು ಮತ್ತೆ ಏಕೆ ಮರುಸ್ಥಾ ಪಿಸಲು ಹೊರಟಿದ್ದೀರಿ ಎಂಬುದಾಗಿ ದಲಿತ ಹಾಗೂ ಶೂದ್ರ ಶಾಸಕರು ಮಸೂದೆ ಜಾರಿಗೊಳಿಸುತ್ತಿರುವವರನ್ನು ಪ್ರಶ್ನಿಸಬೇಕಾಗಿದೆ ಎಂದು ಅವರು ಸಲಹೆ ನೀಡಿದರು.
ಗೋವುಗಳನ್ನು ಸಾಕಿ, ಗಂಜಲ, ಸೆಗಣಿ ಎತ್ತುವ ರೈತರು ಗೋಹತ್ಯೆ ನಿಷೇಧ ಕಾಯ್ದೆ ಬೇಕೆ ಅಥವಾ ಬೇಡವೆ ಎಂಬುದನ್ನು ನಿರ್ಧಾರ ಮಾಡಬೇಕಾಗಿದೆಯೇ ಹೊರತು, ವಿಧಾನಸೌಧದಲ್ಲಿ ಕುಳಿತಿರುವ ಪುರೋಹಿತರಲ್ಲ ಎಂದು ಹನುಮಂತಯ್ಯ ಆಕ್ರೋಶ ವ್ಯಕ್ತ ಪಡಿಸಿದರು.
ರೈತ ಪ್ರತಿನಿಧಿಗಳನ್ನು ಕರೆದು ತಾನು ಯಾವ ಕಾರಣಕ್ಕೆ ಮಸೂದೆ ಜಾರಿಗೆ ತರುತ್ತಿದ್ದೇನೆಂದು ಕನಿಷ್ಠ ಪರಿಜ್ಞಾನವನ್ನು ಸರಕಾರ ನಡೆಸುವವರು ಹೊಂದಿರ ಬೇಕಾಗಿತ್ತು. ಕೆಲವು ಸಂಘಪರಿವಾರದ ಪುಂಡರ ತಾಳಕ್ಕೆ ತಕ್ಕಂತೆ ಸರಕಾರ ಕುಣಿಯುತ್ತಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.
ಗೋವುಗಳ ಆಧಾರಿತ ಉದ್ಯಮ ದಲ್ಲಿ ತೊಡಗಿಸಿಕೊಂಡಿರುವ ೨.೫ ಲಕ್ಷ ಕುಟುಂಬಗಳ ಹೊಟ್ಟೆಯ ಮೇಲೆ ಹೊಡೆಯುವ ಹುನ್ನಾರ ಮಸೂದೆ ಜಾರಿಯ ಹಿಂದಿನ ಮರ್ಮವಾಗಿದ್ದು, ಇದು ಶ್ರಮಿಕ ವರ್ಗವನ್ನು ಮತ್ತಷ್ಟು ಅಶಕ್ತರನ್ನಾಗಿಸುವ ಮಸೂದೆಯಾಗಿದೆ ಎಂದು ಅವರು ಆಪಾದಿಸಿದರು.
ಮನಸ್ಮತಿ, ವೇದ, ಉಪನಿಷತ್ ಗಳಲ್ಲಿ ಬ್ರಾಹ್ಮಣರಿಗೆ ಗೋಮಾಂಸ ಇಷ್ಟವಾದ ಆಹಾರವೆಂದು ಹೇಳ ಲಾಗಿದೆ. ಸದನದಲ್ಲಿ ಪ್ರಸ್ತಾಪಿಸಿದಾಗ ಇದನ್ನು ಗೃಹ ಸಚಿವ ವಿ.ಎಸ್. ಆಚಾರ್ಯ ಒಪ್ಪಿಕೊಂಡಿದ್ದಾರೆ. ಆದರೂ, ಮಸೂದೆ ಜಾರಿಗೆ ಹೊರಟಿದ್ದಾರೆ ಎಂದು ಅವರು ಕಿಡಿಕಾರಿದರು.
ಮಸೂದೆಯಿಂದಾಗಿ ವರ್ಷಕ್ಕೆ ೧೫೦ ಲಕ್ಷ ಮೆ.ಟನ್ ಮೇವಿನ ಅಭಾವ ತಲೆದೋರುತ್ತದೆ. ಇದನ್ನು ಸರಕಾರ ಎಲ್ಲಿಂದ ಒದಗಿಸುತ್ತದೆ ಎಂದು ಪ್ರಶ್ನಿಸಿದ ಅವರು, ಸರಕಾರ ಮಸೂದೆ ಯನ್ನು ಕೈಬಿಟ್ಟು, ಒತ್ತುವರಿಯಾಗಿ ರುವ ಗೋಮಾಳ, ಗುಂಡುತೋಪು ತೆರವಿಗೆ ಕ್ರಮ ಕೈಗೊಳ್ಳಬೇಕೆಂದು ತಾಕೀತು ಮಾಡಿದರು.
‘ಮಸೂದೆಯ ಸಾಮಾಜಿಕ, ಸಾಂಸ್ಕೃ ತಿಕ, ರಾಜಕೀಯ ಮತ್ತು ಆರ್ಥಿಕ ಆಯಾಮಗಳು’ ಕುರಿತು ವಿಷಯ ಮಂಡಿಸಿದ ಸಾಹಿತಿ ಡಾ. ರಾಜಪ್ಪ ದಳವಾಯಿ, ಸಮಾಜವನ್ನು ಒಡೆದು ಸಾಮರಸ್ಯಕ್ಕೆ ಭಂಗ ತಂದು ರಾಜಕೀಯ ಲಾಭಗಳಿಸುವ ಹುನ್ನಾರ ಮಸೂದೆ ಯಲ್ಲಿದೆ ಎಂದು ಟೀಕಿಸಿದರು.
ಆಹಾರ ಪದ್ಧತಿ ಅದೊಂದು ಜೀವನ ಕ್ರಮ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ದಲಿತರು, ಕ್ರಿಶ್ಚಿಯನ್ನರು ಹಾಗೂ ಮುಖ್ಯವಾಗಿ ಮುಸ್ಲಿಮರನ್ನು ಸಮಾಜದಿಂದ ಪ್ರತ್ಯೇಕಗೊಳಿಸುವುದು ಕಾಯ್ದೆಯ ಉದ್ದೇಶ. ಇಂತಹ ಕಾಯ್ದೆ ವಿರುದ್ಧ ಜನರಲ್ಲಿ ಅರಿವು ಮೂಡಿಸ ಬೇಕಾಗಿದೆ ಎಂದವರು ಹೇಳಿದರು.
ಕಾಯ್ದೆ ಜಾರಿಗೊಂಡರೆ ಜಾನು ವಾರುಗಳನ್ನು ಜಾತ್ರೆ ಮುಂತಾದ ಕಡೆ ಸಾಗಿಸುವುದೇ ಕಷ್ಟವಾಗುತ್ತದೆ. ಕಾಯ್ದೆ ಉಲ್ಲಂಘನೆ ಹೆಸರಿನಲ್ಲಿ ೭ ವರ್ಷ ಸೆರೆವಾಸ, ಒಂದು ಲಕ್ಷ ರೂ. ದಂಡ ತೆರಬೇಕಾಗುತ್ತದೆ. ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳುವ ಅವಕಾಶಗಳು ಹೆಚ್ಚಾಗುತ್ತವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಜಿಲ್ಲಾಧ್ಯಕ್ಷ ಪ್ರೊ. ಎಚ್. ಎಲ್. ಕೇಶವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ದಲಿತ ಸಂಘರ್ಷ ಸಮಿತಿ ರಾಜ್ಯ ಮುಖಂಡ ಎಂ.ಬಿ. ಶ್ರೀನಿವಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವರದಿಯ ವಿವರಗಳು |
 |
ಕೃಪೆ : ವಾರ್ತಾಭಾರತಿ ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-11 00:00:00
|
|
|
|
| »ಶೋಭಾ ತಂದೆ ವೈಕುಂಠಕ್ಕೆ ಯಡ್ಡಿ ಪಟಾಲಂ ಹಾಜರ್ | | »ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ' | | »ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು? | | »ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ | | »ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated) | | »ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು | | »ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್ನ ನಾಲ್ವರ ಅವಾನತು | | »ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ | | »ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ | | »ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ | | »ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ | | »ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ | | »ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ | | »ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್ | | »ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ | | »ಕಾಂಗ್ರೆಸ್ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ | | »ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ | | » ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ | | »ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ | | »ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ | | »ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ | | »ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ.. | | »ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು | | »ಅಶ್ಲೀಲ ಕಲಾಪಕ್ಕೆ ಸದನ ಬಲಿ | | »ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ | | »ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ | | »ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ | | »ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ | | »ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ | | »‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ | | »ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ | | »ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ? | | »ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ | | »ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ | | »ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ | | »ಬಿಬಿಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ | | »ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್ ಚಾರಿಯಟ್' 'ಹೌಸ್ ಫುಲ್ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು | | »ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು | | »ಯೋಗ ವಿಜ್ಞಾನ ಶಿಬಿರ: ಬಜೆಟ್ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿಎಂ | | »ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update) | | »ಸದನದಲ್ಲಿ ಮೊಬೈಲ್ ಫೋನ್ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್ ಮಂತ್ರಿ ಸ್ಥಾನಕ್ಕೆ ರಾಜಿನಾಮೆ | | »ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು | | »ಆಧಾರ್ ಕಾರ್ಡ್ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ | | »50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ | | »ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ | | »ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ | | »ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್ | | »ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ | | »ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ | | »ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ | |