ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ವಿಶ್ವದಲ್ಲೆ ಅಪರೂಪ ಎನಿಸುವ ವನ್ಯ ಜೀವಿಗಳ ತಾಣ ಅ೦ಬಾರಗುಡ್ಡ

ವಿಶ್ವದಲ್ಲಿ ಗುರುತಾದ ಪ್ರಮುಖ ಅರಣ್ಯ ಪ್ರದೇಶದಲ್ಲಿ ಪಶ್ಚಿಮಘಟ್ಟವೂ ಒಂದು. ಆ ಶ್ರೇಣಿಯ ಹೃದಯ ಭಾಗದಲ್ಲಿ ಅಂಬಾರಗುಡ್ಡ ಗಿರಿಯಿದೆ. ಭುವನಗಿರಿ ಕೊಡಚಾದ್ರಿಗೆ ತಾಗಿಕೊಂಡಂತಿದೆ ಅಂಬಾರಗುಡ್ಡ. ಮೂಕಾಂಬಿಕಾ ಅಭಯಾರಣ್ಯದಿಂದ ಶರಾವತಿ ಅಭಯಾರಣ್ಯಕ್ಕೆ ಸಾಗುವ ವನ್ಯಜೀವಿಗಳ ಕಾರಿಡಾರ್ ಇದು.

-ಜೀವ ವೈವಿಧ್ಯತೆ: ಸಹಸ್ರಾರು ಕುಟುಂಬಗಳ ಬದುಕಿನ ಜೀವಸೆಲೆಯಾದ ಅಂಬಾರಗುಡ್ಡ ಪ್ರದೇಶ ವಿಶ್ವದಲ್ಲೇ ಅಪರೂಪ ಎನಿಸುವ ವನ್ಯಜೀವಿಗಳ ತಾಣ ಎಂಬ ಸತ್ಯ ವಿಜ್ಞಾನಿಗಳ ಸಂಶೋಧನೆ ಹೊರಹಾಕಿದೆ. ಪ್ರಪಂಚದ ಎಲ್ಲೂ ಕಾಣ ಸಿಗದ ಸಿಸ್ಟುರಾ ನಾಗೋಡಿಯನ್ಸಿಸ್ ಮತ್ತು ಸಿಸ್ಟುರಾ ಶರಾವತಿಯನ್ಸಿಸ್ ಎಂಬ ವಿಶಿಷ್ಟ ಮೀನುಗಳು ಗುಡ್ಡ ತಪ್ಪಲಿನಲ್ಲಿ ಹರಿಯುವ ನಾಗೋಡಿಹೊಳೆ ಮತ್ತು ಶರಾವತಿ ಹಿನ್ನೀರಿನಲ್ಲಿದೆ.

ಜಗತ್ತಿನಲ್ಲೇ ಅಪರೂಪದ ೪೨ ವಿವಿಧ ಜಾತಿಯ ಕಪ್ಪೆಗಳು, ಹೆಬ್ಬಾವು, ಕಾಳಿಂಗಸರ್ಪ, ಸೇರಿ ದಂತೆ ೬೦೦ಕ್ಕೂ ಹೆಚ್ಚು ಹಾವಿನ ಪ್ರಭೇದಗಳು ಇಲ್ಲಿವೆ. ಅತ್ಯಂತ ಅಪರೂಪದ ಬೆಕ್ಕುಗಳು, ೧೭೫ ಕ್ಕೂ ಹೆಚ್ಚು ವಿವಿಧ ವಿನ್ಯಾಸದ ಆಕರ್ಷಕ ಚಿಟ್ಟೆಗಳ ಸಂತತಿ ಈ ಪ್ರದೇಶದಲ್ಲಿದೆ.

ಸಸ್ಯ ಪ್ರಭೇದ: ಎಕ್ಕೆ, ಕಾಡುಬೆಂಡೆ, ಅಮೃತಬಳ್ಳಿ, ರಂಜಲು, ಕಾರೆ, ಒಂದಲಗ, ತೊರಂಗಲು, ಅತ್ತಿ, ವಾಟೆ, ನೆಲನೆಲ್ಲಿ, ಮುಳ್ಳಣ್ಣು, ಆಡುಸೋಗೆ ಸೇರಿ ಸುಮಾರು ೨೦೯ ಜಾತಿಯ ಔಷಧೀಯ ಸಸ್ಯಗಳು, ೧೩೪ ವಿವಿಧ ಜಾತಿಯ ಮರಗಳು, ೫೭ ಜಾತಿಯ ವಿಶಿಷ್ಟ ಪೊದೆಗಳು, ೧೮ ಜಾತಿಯ ಮರಬಳ್ಳಿಗಳು ಈ ಗಿರಿಪ್ರದೇಶದಲ್ಲಿ ಅಡಕವಾಗಿವೆ.

ಶೇ.೪೭ರಷ್ಟು ಹರಿದ್ವರ್ಣ ಕಾಡು, ೩೦೪೦ರಷ್ಟು ಗಿಡಮೂಲಿಕೆ ಸಸ್ಯಗಳ ಸಂಗಮವಾಗಿರುವ ಇಲ್ಲಿ ಶೇ.೫೫೬೦ ರಷ್ಟು ಆರ್ಥಿಕ ಮಹತ್ವ ಹೊಂದಿದ ಹಳ್ಳ, ಹೊಳೆ, ತೊರೆ, ಜರಿಗಳ ಉಗಮ ಇಲ್ಲಿಂದ ಲೇ. ಅವಕ್ಕೆಲ್ಲಾ ಅಂಬಾರಗುಡ್ಡವೇ ಮೂಲ ಜಲಸೆಲೆ.

ಈ ಭಾಗದಲ್ಲಿ ಮಳೆಗಾಲದ ದಿನಂಪ್ರತಿ ೨೫೩೦ಸೆಂ.ಮೀ ಮಳೆ ಬೀಳುವ ಪ್ರದೇಶವಾಗಿದ್ದು ಇಲ್ಲಿ ಯ ನಾಗೋಡಿಹೊಳೆ, ಎಣ್ಣೆಹೊಳೆ, ಚಂದವಳ್ಳಿಹೊಳೆ ಸಮೃದ್ಧವಾಗಿ ಹರಿದರೆ ಮಾತ್ರ ನಾಡಿಗೆ ವಿದ್ಯುತ್ ಸರಬರಾಜು ಮಾಡುವ ಲಿಂಗನಮಕ್ಕಿ ಡ್ಯಾಂಗೆ ನೀರು. ಮಾತ್ರವಲ್ಲ ಗಿರಿಯ ತಪ್ಪಲಿನಲಿ ಬದುಕು ಕಟ್ಟಿಕೊಂಡ ಮರಾಠಿ, ಮುರಳ್ಳಿ, ಯರನಬೀಳು, ಕಸಗೋಡು, ಆವಿಗೆ, ಹೊಸೂರು, ಸುಳ್ಳ ಳ್ಳಿ, ಇಕ್ಕಿಬೀಳು, ನಾಗೋಡಿ ಸೇರಿದಂತೆ ಹತ್ತಾರು ಗ್ರಾಮದ ನೂರಾರು ಕುಟುಂಬಗಳ ಪಾಲಿಗೆ ಜೀವಸೆಲೆ ಕೂಡ ಅಂಬಾರಗುಡ್ಡವೇ.

ಗಣಿಗಾರಿಕೆ: ಅತ್ಯಮೂಲ್ಯ ವನ್ಯಜೀವಿ ಸಂಪತ್ತಿನ ಆಗರವಾದ ಅಂಬಾರಗುಡ್ಡ ಪ್ರದೇಶ ಸಮೃದ್ಧ ಅದಿರಿನ ನಿಕ್ಷೇಪವೂ ಹೌದು. ಹಾಗಾಗಿ ಗಣಿಮಾಲೀಕರ ಕಣ್ಣು ಗಿರಿಯತ್ತ ನೆಟ್ಟಿದೆ. ೨೦೦೪ರಲ್ಲಿ ಗಣಿಗಾರಿಕೆ ಪ್ರಾರಂಭವಾಗಿತ್ತು. ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ನೇತ್ರತ್ವದಲ್ಲಿ ಪರಿಸರವಾದಿಗಳು, ಗ್ರಾಮಸ್ಥರು ತೀವ್ರ ವಿರೋಧ ಒಡ್ಡಿದ ಪರಿಣಾಮ ಗಣಿಗಾರಿಕೆ ಸ್ಥಗಿತಗೊಂ ಡಿದೆ. ಜೊತೆಗೆ ಗಿರಿಯ ಸಂರಕ್ಷಣೆಗಾಗಿ ಕೊಡಚಾದ್ರಿ ಸಂಜೀವಿನಿ ವೇದಿಕೆ ಸಜ್ಜಾಗಿದೆ.

ಆದರೆ ಅದಾಗಲೇ ಗುಡ್ಡ ಅಗೆದು ನೂರಾರು ಟನ್ ಅದಿರು ತೆಗೆದ ಪರಿಣಾಮ ಪಶ್ಟಿಮಘಟ್ಟಕ್ಕೆ ಮುಕುಟಪ್ರಾಯವಾದ ಅಂಬಾರಗುಡ್ಡದಲ್ಲಿ ಭಯಾನಕ ಕಮರಿಗಳು ಬಿದ್ದಿವೆ. ಅದಿರುಮಿಶ್ರಿತ ಮಣ್ಣು ಹೇರಳವಾಗಿ ಸುತ್ತಮುತ್ತಲಿನ ಕೃಷಿ ಜಮೀನಿಗೆ ನುಗ್ಗಿ ರೈತರಲ್ಲಿ ಆತಂಕ ಹುಟ್ಟಿಸಿದೆ.

ರಾಜ್ಯದ ಪ್ರಮುಖ ಲಿಂಗನಮಕ್ಕಿ ಡ್ಯಾಂನಲ್ಲಿ ಒಂದು ಅಂದಾಜಿನ ಪ್ರಕಾರ ಶೇ.೨೪ ರಷ್ಟು ಹೂಳು ತುಂಬಿದ್ದು, ಗುಡ್ಡದ ಮಣ್ಣು ಹೂಳನ್ನು ಇನ್ನಷ್ಟು ಹೆಚ್ಚಿಸಿದೆ.

ಸಂರಕ್ಷಿತ ಅರಣ್ಯ ಪರಿಸರಪ್ರೇಮಿಗಳ ಹೋರಾಟದ ಫಲವಾಗಿ ಅಂಬಾರಗುಡ್ಡ ಗಿರಿಪ್ರದೇಶವನ್ನು ಸರ್ಕಾರ ೨೦೦೮ರಲ್ಲಿ ವಿಶೇಷ ಸಂರಕ್ಷಿತ ಪ್ರದೇಶ ಎಂದು ಘೋಷಿಸಿದೆ. ಭಾರತೀಯ ವಿಜ್ಞಾನ ಮಂದಿರದ ತಂಡವು ನಡೆಸಿದ ಸಂಶೋಧನೆ ಈ ಪ್ರದೇಶದ ಮಹತ್ವ ಸಾರಿದೆ. ಅಲ್ಲದೇ ಜೀವ ವೈವಿಧ್ಯ ಮಂಡಳಿ ಕೂಡ ಸೂಕ್ಷ್ಮ ಜೈವಿಕ ಪರಿಸರ ಎಂದು ಘೋಷಿಸುವಂತೆ ವರದಿ ನೀಡಿದೆ. ಒಟ್ಟಾರೆ ಅಂಬಾರಗುಡ್ಡ ಗಣಿ ವಿಪತ್ತಿನಿಂದ ಕುಸಿದರೇ ಶರಾವತಿ ಕಣಿವೆಯೇ ನಾಶವಾಗುತ್ತದೆ ಎಂಬುದು ತಜ್ಞರ ಅಭಿಮತ.

ಎಲ್ಲಿದೆ?: ಅಂಬಾರಗುಡ್ಡ ಸಾಗರ ತಾಲೂಕಿನ ಕಾರ್ಗಲ್ ಅರಣ್ಯವ್ಯಾಪ್ತಿಗೆ ಸೇರಿದ ಮರಾಠಿ ಗ್ರಾಮದಲ್ಲಿದೆ. ಸಾಗರದಿಂದ ತುಂಬ್ರಿ ಮಾರ್ಗವಾಗಿ, ಹೊಸನಗರದಿಂದ ನಿಟ್ಟೂರು ಮಾರ್ಗವಾಗಿ ಗಿರಿಯನ್ನು ತಲುಪಬಹುದು. ಚಾರಣ ಮಾಡಲು ಚೆನ್ನ. ಗಿರಿವರೆಗೆ ವಾಹನದಲ್ಲೂ ತಲುಪಬಹುದು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕನ್ನಡಪ್ರಭ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-11 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............
»ನ್ಯಾ ಸುಧೀಂದ್ರರಾವ್ : ಬಂಗಾರಪೇಟೆಯ ಸ್ಟಾಂಪ್ ವೆಂಡರ್ ಮಗ ಇಂದಿಗೂ ಮನೆ ಸಾಲ ಕಟ್ಟುತ್ತಿರುವ ನ್ಯಾಯಾಧೀಶ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri