ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಕಾಮಿಸ್ವಾಮಿಗೆ ರಂಜಿತಾ ಮಸಾಜ್; ಹೊಸ ಚಿತ್ರಗಳು ಬಹಿರಂಗ

ಚೆನ್ನೈ, ಗುರುವಾರ, 11 ಮಾರ್ಚ್ 2010( 

ತಾನು ಮಾಡಿರುವುದು 'ಸ್ವಾಮಿ ಸೇವೆ', ಇದನ್ನು ಮಾಧ್ಯಮಗಳು ಅತಿರೇಕವಾಗಿ ಬಿಂಬಿಸಿ ಪ್ರಸಾರ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಕಾಮಿಸ್ವಾಮಿ ಹಗರಣ ಖ್ಯಾತಿ ನಟಿ ರಂಜಿತಾ, ಪರಮಹಂಸ ನಿತ್ಯಾನಂದ ಸ್ವಾಮಿಗೆ ಮಸಾಜ್ ಮಾಡುತ್ತಿರುವ ಹೊಸ ಚಿತ್ರಗಳು ಬಹಿರಂಗಗೊಂಡಿದೆ.

ನಿತ್ಯಾನಂದ ಸ್ವಾಮಿಗೆ ಮಸಾಜ್ ಮಾಡುತ್ತಿರುವ ಈ ಹೊಸ ದೃಶ್ಯಗಳನ್ನು ತಮಿಳು ಟೀವಿ ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದು, ಹಲವು ಪತ್ರಿಕೆಗಳು ಕೂಡ ಚಿತ್ರಗಳನ್ನು ಪ್ರಕಟಿಸಿವೆ. ನಕ್ಕೀರನ್ ಪಾಕ್ಷಿಕದ ವೆಬ್‌ಸೈಟ್ ಮತ್ತು ಯೂಟ್ಯೂಬ್‌ಗಳಲ್ಲೂ ಹರಿದಾಡುತ್ತಿರುವ ಇದು ತಮಿಳುನಾಡಿನಾದ್ಯಂತ ಮತ್ತಷ್ಟು ಕೋಲಾಹಲ ಸೃಷ್ಟಿಗೆ ಕಾರಣವಾಗುತ್ತಿದೆ.

ಇಲ್ಲಿ ರಂಜಿತಾ ಎಂದು ಹೇಳಲಾಗಿರುವ ಮಹಿಳೆ ಸ್ವಾಮಿಯ ಅಂಗಿಯನ್ನು ಅರ್ಧದಷ್ಟು ಬಿಚ್ಚಿ, ಎಣ್ಣೆ ಹಚ್ಚಿ ಮಸಾಜ್ ಮಾಡುವ ದೃಶ್ಯಗಳಿವೆ. ಆದರೆ ಇಲ್ಲಿ ಯಾವುದೇ ಅಶ್ಲೀಲ ಎಂದು ಹೇಳಬಹುದಾದ ದೃಶ್ಯಗಳಿಲ್ಲ. ಸ್ವಾಮಿಗೆ ಸಂಪೂರ್ಣ ಮಸಾಜ್ ಮಾಡಿದ ನಂತರ ರಂಜಿತಾ ಬ್ಯಾಗ್ ಹೆಗಲಿಗೇರಿಸಿಕೊಂಡು ವಾಪಸ್ ಹೋಗುವ ದೃಶ್ಯ ವೀಡಿಯೋದಲ್ಲಿದೆ.

ಭಾರೀ ಸಾಧಕ ನಿತ್ಯಾನಂದ....
ಹೌದು, ಕಳಂಕಿತ ಸ್ವಾಮಿಯ ತಿರುವಣ್ಣಾಮಲೈ ಎಂಬಲ್ಲಿರುವ ಚಿಕ್ಕಪ್ಪ ಕುಮಾರಸ್ವಾಮಿಯವರ ಪ್ರಕಾರ ನಿತ್ಯಾನಂದ ಭಾರೀ ಸಾಧಕನಂತೆ. 'ಡೆಕ್ಕನ್ ಹೆರಾಲ್ಡ್' ಪತ್ರಿಕೆ ಈ ವಿವರಗಳನ್ನು ಪ್ರಕಟಿಸಿದೆ.

ಪೂರ್ವಾಶ್ರಮದಲ್ಲಿ ರಾಜಶೇಖರನ್ ಆಗಿದ್ದ ನಿತ್ಯಾನಂದ ಸ್ವಾಮಿಗೆ ಬಾಲ್ಯದಲ್ಲಿಯೇ ಆಧ್ಯಾತ್ಮದತ್ತ ವಿಪರೀತ ಒಲವಿತ್ತು. ಕೇವಲ 10 ವರ್ಷದವನಾಗಿದ್ದಾಗಲೇ ಜ್ಯೋತಿಷಿಯೊಬ್ಬರು, ಈತ ಮುಂದೊಂದು ದಿನ ಸನ್ಯಾಸಿಯಾಗುತ್ತಾನೆ ಎಂದು ಭವಿಷ್ಯ ನುಡಿದಾಗಲೂ ಹೆತ್ತವರು ತಲೆಕೆಡಿಸಿಕೊಂಡಿರಲಿಲ್ಲ ಎಂದು ಕುಮಾರಸ್ವಾಮಿ ವಿವರಣೆ ನೀಡುತ್ತಾರೆ.

ಈಗ ಸ್ವಾಮಿಯಾಗಿರುವ ರಾಜಶೇಖರನ್ ತಂದೆ ಅರುಣಾಚಲಂ ತಿರುವಣ್ಣಾಮಲೈಯಲ್ಲೇ ಒಂದು ಸಣ್ಣ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಮಗ ಹತ್ತನೇ ತರಗತಿಯನ್ನು ಮುಗಿಸಿದ ಬಳಿಕ ಡಿಪ್ಲೋಮಾ ಓದಿಸುವ ಬಯಕೆ ಅವರದ್ದಾಗಿತ್ತು. ಆದರೆ ಶಿಕ್ಷಣದಲ್ಲಿ ಆಸಕ್ತಿ ಕಳೆದುಕೊಂಡಿದ್ದ ಈತ ಯಂತ್ರ-ಮಂತ್ರಗಳ ಮೊರೆ ಹೋಗಿದ್ದ. ಇದು ಅರುಣಾಚಲಂ ಅರಿವಿಗೆ ಬಂದಿರಲಿಲ್ಲ ಎನ್ನುವುದು ಸ್ವಾಮಿ ಚಿಕ್ಕಪ್ಪನ ಅನಿಸಿಕೆ.

ಯೋಗದ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದ ನಿತ್ಯಾನಂದ ದೇವಿ ಭಕ್ತರಾಗಿದ್ದರು. ಕುಪ್ಪುಮ್ಮಾಳ್ ಎಂಬ ಮಹಿಳೆಯಿಂದ ದೇವಿಯ ಉಪಾಸನಾ ದೀಕ್ಷೆಯನ್ನೂ ಪಡೆದಿದ್ದ ನಿತ್ಯಾನಂದ ಯೋಗಗುರು ರಘುಪತಿ ಎಂಬವರಿಂದ ಯೋಗ ಕಲಿತಿದ್ದ.

1995ರಲ್ಲಿ ಚೆನ್ನೈಗೆ ಬಂದ ಬಾಲಕ ರಾಜಶೇಖರನ್ ಆಟೋ ಕಂಪನಿಯೊಂದರಲ್ಲಿ ಕೆಲಸ ಮಾಡಿದ ಬಳಿಕ ಸನ್ಯಾಸತ್ವ ತೀವ್ರವಾಗಿ ರಾಮಕೃಷ್ಣಾಶ್ರಮಕ್ಕೆ ಸೆಳೆದಿತ್ತು. ಮನೆಯವರು ತೀವ್ರವಾಗಿ ವಿರೋಧಿಸಿದರೂ ವಿರಕ್ತಿಯ ಹಾದಿಗೆ ಹೋಗಿದ್ದ ರಾಜಶೇಖರನ್, ಹಿಮಾಲಯದಲ್ಲೂ ತಪಸ್ಸು ಮಾಡಿದ್ದ.

ಬಳಿಕ ಬೆಂಗಳೂರಿಗೆ ವಾಪಸಾಗಿ ಆಶ್ರಮ ತೆರೆದು, ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಪಡೆದರು. ಸಾವಿರಾರು-ಲಕ್ಷಾಂತರ ಮಂದಿಗೆ ಸಹಾಯ ಮಾಡಿದ್ದ. ಈ ಹಂತದಲ್ಲಿ ವೈಭೋಗದಲ್ಲಿ ಮೆರೆದಾಡಿದ ಸ್ವಾಮಿಗೆ ಲೌಕಿಕ ಜೀವನದತ್ತ ಮನಸ್ಸು ವಾಲಿರಬಹುದು. ಆದರೂ ನಮಗೆ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ನಿತ್ಯಾನಂದನ ಚಿಕ್ಕಪ್ಪ ಕುಮಾರಸ್ವಾಮಿ ವಿವರಣೆ ನೀಡಿದ್ದಾರೆ.

ಕುಂಭಮೇಳಕ್ಕೆ ಪ್ರವೇಶವಿಲ್ಲ...
ವಾರಣಾಸಿಯಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪ್ರತಿಷ್ಠಿತ ಧಾರ್ಮಿಕ ಗುರುಗಳಿಗೆಂದು ಮೀಸಲಾಗಿಡುವ ಸ್ಥಳವನ್ನು ಈ ಬಾರಿ ಕಳಂಕಿತ ಸ್ವಾಮಿ ನಿತ್ಯಾನಂದರಿಗೆ ನೀಡದೇ ಇರಲು ಕುಂಭಮೇಳ ಆಡಳಿತ ಮಂಡಳಿ ನಿರ್ಧರಿಸಿದೆ.

ಪರಮಹಂಸ ನಿತ್ಯಾನಂದ ಸ್ವಾಮಿಯವರಿಗೆ ನೀಡಲು ಉದ್ದೇಶಿಸಿದ್ದ ಸ್ಥಳವನ್ನು ನಿರಾಕರಿಸಲು ನಿರ್ಧರಿಸಲಾಗಿದೆ. ಹಾಗಾಗಿ ಅವರು ಇಲ್ಲಿ ಬಂದು ಧಾರ್ಮಿಕ ಕಾರ್ಯಗಳನ್ನು ನಡೆಸುವಂತಿಲ್ಲ ಎಂದು ಕುಂಭ ಮೇಳ ಆಡಳಿತ ಮಂಡಳಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕುಂಭಮೇಳದಲ್ಲಿದ್ದಾರೆ: ಸ್ವಾಮಿ ವಕೀಲ
ನಿತ್ಯಾನಂದ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂಬ ಆಪಾದನೆಗಳನ್ನು ತಳ್ಳಿ ಹಾಕಿರುವ ಅವರ ವಕೀಲ ಎಂ. ಶ್ರೀಧರ್, 'ನನ್ನ ಕಕ್ಷಿದಾರ ಪ್ರಸಕ್ತ ವಾರಣಾಸಿಯ ಕುಂಭಮೇಳದಲ್ಲಿದ್ದಾರೆ. ಮಾಧ್ಯಮಗಳು ಸ್ವಾಮಿ ವಿರುದ್ಧ ಮಾಡಿರುವ ಆರೋಪಗಳು ಕಪೋಲಕಲ್ಪಿತ ಮಾತ್ರ, ಈ ಕುರಿತು ಯಾವುದೇ ದಾಖಲೆಗಳಿಲ್ಲ. ಅವರ ವಿರುದ್ಧ ಕಾನೂನಿನ ಪ್ರಕಾರ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಯಾರು ಏನು ಬೇಕಾದರೂ ಹೇಳಬಹುದಾಗಿದೆ' ಎಂದಿದ್ದಾರೆ.

ಚೆನ್ನೈಯಲ್ಲೇ ಇದ್ದಾರೆ....
ಕೆಲವು ಮೂಲಗಳ ಪ್ರಕಾರ ನಿತ್ಯಾನಂದ ಕುಂಭಮೇಳಕ್ಕೆ ಹೋಗಿಯೇ ಇಲ್ಲ. ದಾರಿ ತಪ್ಪಿಸುವ ಉದ್ದೇಶದಿಂದ ಈ ಹೇಳಿಕೆಯನ್ನು ನೀಡಲಾಗುತ್ತಿದೆ. ಅವರು ಚೆನ್ನೈಯಲ್ಲೇ ಅವರ ಆಪ್ತರ ಮನೆಯಲ್ಲಿ ಅಜ್ಞಾತವಾಗಿ ಉಳಿದುಕೊಂಡಿದ್ದಾರೆ.

ತಮಿಳು ವಾರ್ತಾ ವಾಹಿನಿಯೊಂದು ನಟಿ ರಂಜಿತಾ ಜತೆ ಸ್ವಾಮಿ ಕಾಮಕೇಳಿಯಲ್ಲಿ ಪಾಲ್ಗೊಂಡ ವೀಡಿಯೋ ತುಣುಕನ್ನು ಪ್ರಸಾರ ಮಾಡಿದ ನಂತರ ತಮಿಳುನಾಡು ಮತ್ತು ಕರ್ನಾಟಕ ಸರಕಾರಗಳು ಅವರ ಹುಡುಕಾಟದಲ್ಲಿವೆ. ಅವರು ಅಡಗಿಕೊಂಡಿದ್ದಾರೆ ಎಂದು ಹೇಳಲಾಗುತ್ತಿರುವ ಮೈಸೂರು, ತಿರುವನಮಲೈ ಮುಂತಾದೆಡೆ ಸತತ ದಾಳಿಗಳನ್ನು ನಡೆಸಲಾಗುತ್ತಿದೆ. ಆದರೆ ಇನ್ನೂ ಪತ್ತೆಯಾಗಿಲ್ಲ.

ಪದೇ ಪದೇ ಪ್ರಸಾರ ಮಾಡೋದು ಕೀಳಭಿರುಚಿಯಂತೆ!
ಹೀಗೆಂದು ಹೇಳಿರುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ವಿ.ಎಸ್. ಆಚಾರ್ಯ. ವಿದ್ಯುನ್ಮಾನ ಮಾಧ್ಯಮಗಳು ಕಳಂಕಿತ ಸ್ವಾಮೀಜಿಯ ಮಂಚಾವತಾರವನ್ನು ಪದೇ ಪದೇ ಪ್ರಸಾರ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಇವರು, ಇದು ಒಳ್ಳೆಯ ಅಭಿರುಚಿಯಲ್ಲ ಎಂದು ಸಲಹೆ ನೀಡಿದ್ದಾರೆ.

ಸ್ವಾಮಿ ಪಾಲ್ಗೊಂಡಿದ್ದಾರೆ ಎಂದು ಆರೋಪಿಸಿರುವ ವೀಡಿಯೋ ತುಣುಕನ್ನು ಪದೇ ಪದೇ ಪ್ರಸಾರ ಮಾಡುವುದು ನಮ್ಮ ಸಂಸ್ಕೃತಿಗೆ ಹೊಂದಿಕೊಳ್ಳುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆಂದು 'ಟೈಮ್ಸ್ ಆಫ್ ಇಂಡಿಯಾ' ತನ್ನ ವರದಿಯಲ್ಲಿ ಹೇಳಿದೆ.

ಈ ಪ್ರಕರಣ ನಡೆದಿರುವುದು ಕರ್ನಾಟಕದಲ್ಲಿ ಎಂದು ತಮಿಳುನಾಡಿನ ಅಧಿಕಾರಿಗಳು ಹೇಳಿರುವುದನ್ನು ಕೇಳಿದ್ದೇನೆ. ಸ್ವಾಮಿ ಭೂಗತರಾಗಿದ್ದಾರೆ. ಈಗ ಹೇಳುತ್ತಿರುವ ಭೂಮಿ ಸರಕಾರಕ್ಕೆ ಸೇರಿಲ್ಲವಾಗಿರುವುದರಿಂದ ನಾವು ಅದನ್ನು ವಶಪಡಿಸಿಕೊಳ್ಳು ವಂತಿಲ್ಲ. ಈ ಸಂಬಂಧ ಯಾರಾದರೂ ದೂರು ನೀಡಿದಲ್ಲಿ, ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ

ನಿತ್ಯಾನಂದನ ಮತ್ತೊಂದು ವೀಡಿಯೋ ಸಂದರ್ಶನ  
ಚೆನ್ನೈ, ಗುರುವಾರ, 11 ಮಾರ್ಚ್ 2010 

ಸ್ವಾಮಿ ನಿತ್ಯಾನಂದರ ಕಾಮಲೀಲೆಗಳು ಚಿತ್ರ ವಿಚಿತ್ರ ತಿರುವುಗಳನ್ನು ಪಡೆದುಕೊಳ್ಳುತ್ತಾ, ನಿತ್ಯಾನಂದ ಸ್ವಾಮಿ ಎಲ್ಲಿದ್ದಾರೆಂಬ ಕುರಿತು ಗೊಂದಲಗಳು ಮುಂದುವರಿದಿರುವಂತೆಯೇ, ಸಂದರ್ಶನವೊಂದರಲ್ಲಿ ನಿತ್ಯಾನಂದ ಸ್ವಾಮಿ ಅವರು, ತಮ್ಮ ಮೇಲಿನ ಆರೋಪಗಳೆಲ್ಲಾ 'ಕುತಂತ್ರ, ಸುಳ್ಳು ಸುದ್ದಿ, ಗಾಳಿ ಸುದ್ದಿ' ಎಂದು ತಳ್ಳಿ ಹಾಕಿದ್ದಾರೆ.

ಸಂಶೋಧಕರೆಂದು ಹೇಳಿಕೊಂಡ ಅಮೆರಿಕ ನಿವಾಸಿ, ರಾಜೀವ್ ಮಲ್ಹೋತ್ರಾ ಎಂಬವರು ಕುಂಭಮೇಳಕ್ಕೆ ಹೋಗಿದ್ದಾರೆ ಎನ್ನಲಾಗತ್ತಿರುವ ನಿತ್ಯಾನಂದ ಸ್ವಾಮಿಯನ್ನು ಅಲ್ಲೇ ಸಂದರ್ಶಿಸಿರುವ ಕುರಿತಾದ ವೀಡಿಯೋ, ನಿತ್ಯಾನಂದ ಧ್ಯಾನಪೀಠದ ವೆಬ್ ಸೈಟಿನಲ್ಲಿ ಲಭ್ಯವಿದೆ.

ಸಂದರ್ಶನದಲ್ಲಿ ಜಮೀನು ಅಕ್ರಮ, ಶ್ರೀಗಂಧ ಪತ್ತೆ, ಅತ್ಯಾಚಾರ ಆರೋಪ, ನಿಗೂಢ ಸಾವಿನ ಆರೋಪ ಮುಂತಾದ ಪ್ರಶ್ನೆಗಳನ್ನು ಕೇಳಲಾಗಿದ್ದರೂ, ಜನರಲ್ಲಿ ಕುತೂಹಲಕ್ಕೆ ಕಾರಣವಾಗಿರುವ ರಂಜಿತಾ ಜತೆಗಿನ ಕಾಮದಾಟದ ಬಗ್ಗೆ ಪ್ರಸ್ತಾಪವೇ ಇರಲಿಲ್ಲ ಎಂಬುದು ಗಮನಾರ್ಹ. ಮಾತ್ರವಲ್ಲದೆ, ಹೊರಗಿನವರ ಸಂದರ್ಶನಕ್ಕೂ ದೊರೆಯುವ ಈ ಸ್ವಾಮೀಜಿ, ಭಾರತೀಯ ಮಾಧ್ಯಮಗಳ ಕೈಗೆ ಅಥವಾ ಪೊಲೀಸರ ಕೈಗೆ ಸಿಗುತ್ತಿಲ್ಲವೇಕೆ ಎಂಬುದೂ ಕುತೂಹಲಕರವಾಗಿದೆ.

ಜಮೀನು ಕಾನೂನುಬದ್ಧ
ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ನಿತ್ಯಾನಂದ, ಬಿಡದಿ ಆಶ್ರಮದ ಜಮೀನನ್ನು ಸಜ್ಜನ್ ರಾವ್ ಎಂಬ ಕೊಡುಗೈ ದಾನಿಯೊಬ್ಬರ ಕುಟುಂಬಿಕರು ನೀಡಿದ್ದು, ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆ ಪತ್ರಗಳೂ ಲಭ್ಯವಿದೆ. ಇದನ್ನು ವೆಬ್ ಸೈಟಿನಲ್ಲಿಯೂ ಪ್ರಕಟಿಸಲಾಗುತ್ತದೆ. ವಿನಾಯಕ ರಾವ್, ಪ್ರತಾಪ ರಾವ್, ಜೀವನರಾವ್ ಸಹೋದರರು ಆಧ್ಯಾತ್ಮಿಕತೆಯ ಮೇಲಿನ ಪ್ರೀತಿಯಿಂದ, ಭಕ್ತಿಯಿಂದ 2003ರಲ್ಲಿ ಜಮೀನು ನೀಡಿದ್ದಾರೆ. ಇಲ್ಲೇ ಒಂದು ಅಶ್ವತ್ಥ ವೃಕ್ಷ ಮತ್ತು ಶಿವ ದೇವಾಲಯವಿದ್ದು, ದೀರ್ಘಕಾಲದಿಂದ ಅದಕ್ಕೆ ಪೂಜೆ ನಡೆಯುತ್ತಿತ್ತು. ಈ ಜಮೀನನ್ನು ಕಾನೂನುಬದ್ಧವಾಗಿಯೇ ಪಡೆದುಕೊಂಡಿರುವುದಾಗಿ ಹೇಳಿದರು.

ಸಾವು ಸಹಜ, ಕೊಲೆಯಲ್ಲ
ಕೆನಡಾದ ಭಕ್ತನೊಬ್ಬನ ನಿಗೂಢ ಸಾವಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ನಿತ್ಯಾನಂದ, ಆತ ಮೇಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದ, ಈ ಬಗ್ಗೆ ಪೋಸ್ಟ್ ಮಾರ್ಟಂ ವರದಿ, ಪೊಲೀಸ್ ವರದಿಗಳು ಎಲ್ಲವೂ ಇದೆ. ಯಾವುದನ್ನೂ ಮುಚ್ಚಿ ಹಾಕಿಲ್ಲ, ಅಪರಾಧವೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಲವಂತವಿಲ್ಲ
ಯುವ ಜನರನ್ನು ಬಲವಂತವಾಗಿ ಆಶ್ರಮದಲ್ಲಿ ಕೂಡಿ ಹಾಕಲಾಗುತ್ತಿದ್ದು, ಈ ಬಗ್ಗೆ ಹೆತ್ತವರೆಲ್ಲ ದೂರು ನೀಡುತ್ತಿದ್ದಾರೆ ಆರೋಪಗಳಿಗೆ ಪ್ರತಿಕ್ರಿಯಿಸುತ್ತಾ,

ಎಲ್ಲರೂ ಸ್ವಇಚ್ಛೆಯಿಂದ ಆಶ್ರಮದಲ್ಲಿದ್ದಾರೆ. ಹೋಗಲು ಬಯಸಿದರೆ ಯಾರು ಬೇಕಾದರೂ ಹೋಗಬಹುದು. ಆಶ್ರಮಕ್ಕೆ ಪೂರ್ಣ ಪ್ರಮಾಣದ ಗೇಟ್ ಕೂಡ ಇಲ್ಲ, ಯಾರು ಬೇಕಾದರೂ ಬಂದು-ಹೋಗಬಹುದು ಎಂದು ಹೇಳಿದರು.

ಅತ್ಯಾಚಾರ ಆರೋಪ ಸುಳ್ಳು
ಅತ್ಯಾಚಾರ ಕುರಿತ ಆರೋಪಗಳಿಗೆ ಪ್ರತಿಕ್ರಿಯಿಸುತ್ತಾ, ಯಾರು ಕೂಡ ಇದುವರೆಗೆ ದೂರು ನೀಡಿಲ್ಲ ಎಂದರಲ್ಲದೆ, ಜನರ ದಾರಿ ತಪ್ಪಿಸಲು, ಭಯ ಹುಟ್ಟಿಸಲು ಈ ರೀತಿಯ ಸುಳ್ಳು ಗಾಳಿ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಆರೋಪಿಸಿದರು.

ಅಕ್ರಮ ಶ್ರೀಗಂಧ ಅಲ್ಲ
ಮಠದಲ್ಲಿ ಅಕ್ರಮ ಶ್ರೀಗಂಧದ ತುಂಡುಗಳು ಲಭಿಸಿರುವ ಆರೋಪಗಳಿಗೆ ಉತ್ತರಿಸಿದ ಅವರು, ಮಠದ ವ್ಯಾಪ್ತಿಯಲ್ಲಿ ಸಾಕಷ್ಟು ಗಂಧದ ಮರಗಳಿವೆ. ಅವುಗಳನ್ನು ಯಾರೋ ಕಳ್ಳರು ತುಂಡು ಮಾಡಿ ಒಯ್ದಿದ್ದಾರೆ. ಹೋಗುವಾಗ ಕೆಲವೊಂದು ಸಣ್ಣಪುಟ್ಟ ತುಂಡುಗಳನ್ನು ಬಿಟ್ಟು ಹೋಗಿದ್ದಾರೆ. ಈ ಬಗ್ಗೆ ನಾವು ಅರಣ್ಯ ಇಲಾಖೆಗೆ ತಿಳಿಸಿದಾಗ, ಅವರು ಇದೆಲ್ಲಾ ಸಾಮಾನ್ಯ ಎಂಬಂತೆ ನಿರ್ಲಕ್ಷಿಸಿದರು. ನೀವೇ ಬಳಸಿ ಎಂದೂ ಹೇಳಿದರು. ಈಗ ಅಕ್ರಮವಾಗಿ ಶ್ರೀಗಂಧ ಸಂಗ್ರಹಿಸಿಟ್ಟಿದ್ದಾರೆ ಎಂದು ದೂರು ನೀಡುತ್ತಿದ್ದಾರೆ. ಇದೆಲ್ಲಾ ಯಾಕೆಂಬುದೇ ಅರ್ಥವಾಗುತ್ತಿಲ್ಲ ಎಂದರು.

ಆರ್ಥಿಕ ಅವ್ಯವಹಾರವಾಗಿಲ್ಲ
ಮಠದಲ್ಲಿ ಯಾವುದೇ ಹಣಕಾಸು ಅವ್ಯವಹಾರ ನಡೆಯುತ್ತಿಲ್ಲ. ನೋಂದಾವಣೆಗೊಂಡಿರುವ ಟ್ರಸ್ಟ್ ಇದೆ. ಮನೋಹರ ಚೌಧುರಿ ಎಂಬ ಖ್ಯಾತ ಆಡಿಟರ್ ಮೂಲಕ ಲೆಕ್ಕ ಪತ್ರ ಇರಿಸಲಾಗುತ್ತಿದೆ. ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳೂ ಪಕ್ಕಾ ಇವೆ. ಇದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ ಎಂದರು.

ಪರಮಹಂಸ ನಿತ್ಯಾನಂದರನ್ನು ಸಂದರ್ಶಿಸಿದ್ದು ತಾವೊಬ್ಬ ಸಂಶೋಧಕ ಎಂದು ತಮ್ಮನ್ನು ಪರಿಚಯಿಸಿಕೊಂಡ ಅಮೆರಿಕದ ಪ್ರಿನ್ಸ್‌ಟನ್ ನಿವಾಸಿ ರಾಜೀವ್ ಮಲ್ಹೋತ್ರಾ. ತಾನು ಕೂಡ ಸ್ವಾಮೀಜಿಯಿಂದಜ ಪ್ರೇರಣೆ, ಬೋಧನೆ ಪಡೆದಿದ್ದು, ಸ್ವಾಮೀಜಿ ಬಗ್ಗೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸತ್ಯಾಂಶ ಅರಿಯಲು ಭಾರತಕ್ಕೆ ಬಂದು, ಕುಂಭ ಮೇಳ ತಾಣದಲ್ಲಿ ಸಂದರ್ಶಿಸುತ್ತಿರುವುದಾಗಿಯೂ ಹೇಳಿಕೊಂಡಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : Web Duniya
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-11 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
»ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
»ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು
»ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು
»ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ
»ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
»ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ; ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
»ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ
»ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ
»ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ
»ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್
»ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ
»ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ
»ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ
» ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ
»ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ
»ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ
»ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ
»ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
»ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು
»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri