ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
'ರಾಜಕೀಯ ಪ್ರವೇಶಕ್ಕೆ ಮಹಿಳೆಯರಿಗೆ ತರಬೇತಿ ಬೇಕು.....' : ವಿಶೇಷ ಸ೦ದರ್ಶನದಲ್ಲಿ ಮ೦ಜುಳಾ ನಾಯ್ಡು

ಸಂದರ್ಶನ: ಸುಚೇತನಾ ನಾಯ್ಕ  

ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆಯಾಗಿ ಮಂಜುಳಾ ನಾಯ್ಡು ಅವರು ಅಂತರ ರಾಷ್ಟ್ರೀಯ ಮಹಿಳಾ ದಿನದಂದು (ಮಾರ್ಚ್ 8) ಅಧಿಕಾರ ಸ್ವೀಕರಿಸಿದ್ದಾರೆ. ಬಿ.ಕಾಂ ಪದವಿ ಜೊತೆಗೆ ಕಾನೂನು, ಎಂ.ಬಿ.ಎ ಹಾಗೂ ಅರ್ಥಶಾಸ್ತ್ರದಲ್ಲಿ ಎಂ.ಎ ಪದವಿಗಳನ್ನೂ ಪಡೆದಿರುವ ಮಂಜುಳಾ, ‘ಭೂಮಿಕಾ’ ಜೊತೆ ತಮ್ಮ ಅನುಭವ ಹಂಚಿಕೊಂಡದ್ದು ಹೀಗೆ..

* ಹೊಸ ಹುದ್ದೆಯನ್ನು ಅಲಂಕರಿಸಿದ್ದೀರಿ, ಹೇಗನ್ನಿಸ್ತಾ ಇದೆ..

ತುಂಬಾ ಸಂತಸ ಆಗಿದೆ ಎನ್ನೋದಕ್ಕಿಂತ ಹೆಚ್ಚಾಗಿ, ರಾಜ್ಯದಲ್ಲಿನ ಬಹಳ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ. ಮಾಡಬೇಕಿರುವ ಸುಧಾರಣೆಗಳ ಪಟ್ಟಿ ನನ್ನ ಕಣ್ಣ ಮುಂದಿದೆ ಎನ್ನಬೇಕು. ಈ ಹಿಂದೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಆಂಧ್ರಪ್ರದೇಶ, ಪಾಂಡಿಚೇರಿ, ಕೇರಳ, ಛತ್ತೀಸಗಡ್‌ದಲ್ಲಿ  ಕೆಲಸ ನಿರ್ವಹಿಸಿದ್ದೇನೆ. ಆದಕ್ಕಿಂತ ಹೆಚ್ಚಿನ ಸಂತಸ ಈ ಹುದ್ದೆ ದೊರಕಿಸಿಕೊಟ್ಟಿದೆ.

* ರಾಜಕೀಯ ಕ್ಷೇತ್ರವೆಂದರೆ ಪುರುಷರಿಗೆ ಮೀಸಲು ಎನ್ನುವಂತಹ ಕಾಲದಲ್ಲಿ, ನೀವು ರಾಜಕೀಯ ಪ್ರವೇಶಿಸಿದ್ದು ಹೇಗೆ?

ಅದಕ್ಕೆಲ್ಲ ಕಾರಣ, ನನ್ನ ತಂದೆ ರಂಗಸ್ವಾಮಿ ನಾಯ್ಡು. ದೇವರಾಜು ಅರಸು ಅವರು ಮುಖ್ಯ ಮಂತ್ರಿ ಆಗಿದ್ದ ಕಾಲದಲ್ಲಿ ನನ್ನ ತಂದೆ ಬೆಂಗಳೂರಿನ ಶಾಂತಿನಗರ ಬ್ಲಾಕ್ ಅಧ್ಯಕ್ಷರಾಗಿದ್ದರು. ಆಗಿನ್ನೂ ನನಗೆ 17 ವರ್ಷ ವಯಸ್ಸು. ಕಾಲೇಜಿನ ದಿನಗಳಲ್ಲೇ ವಿದ್ಯಾರ್ಥಿ ಒಕ್ಕೂಟದ ನಾಯಕಿ ಕೂಡ ಆಗಿದ್ದೆ. ನನ್ನ ತಂದೆಗೆ ಮಕ್ಕಳನ್ನು ರಾಜಕೀಯ ಕ್ಷೇತ್ರದಲ್ಲಿಯೇ ಮುಂದುವರಿಸಬೇಕೆನ್ನುವ ಆಸೆ. ಅದಕ್ಕೆ ತಕ್ಕಂತೆ ರಾಜೀವ್‌ಗಾಂಧಿ ಪ್ರಧಾನಿ ಆದಾಗ ಹೆಚ್ಚು ಹೆಚ್ಚು ಹೆಣ್ಣುಮಕ್ಕಳು ರಾಜ ಕೀಯ ಬನ್ನಿ ಅಂತ ಕರೆ ಕೊಟ್ರು. ಇದನ್ನೇ ಉಪಯೋಗಿಸಿಕೊಂಡ ನನ್ನ ತಂದೆ  ನನ್ನನ್ನು ಯುವ ಕಾಂಗ್ರೆಸ್‌ಗೆ ಸೇರಿಸಿದ್ರು.

* ‘ಮಹಿಳೆ ಮತ್ತು ರಾಜಕೀಯ’ ಅಂದಿನ ಹಾಗೂ ಇಂದಿನ ಪರಿಸ್ಥಿತಿ ಹೇಗಿದೆ..?

ಅಂದು ನೀವೆ ಹೇಳಿದಂತೆ ರಾಜಕೀಯ ಎನ್ನೋದು ಪುರುಷರಿಗೆ ಮೀಸಲು ಎಂಬ ವಾದ ಇತ್ತು. ಆದರೆ ಇಂದಿನ ಪರಿಸ್ಥಿತಿ ನೋಡಿದ್ರೆ ತುಂಬಾ ಅಚ್ಚರಿ ಹಾಗೂ ಖುಷಿ ಆಗುತ್ತೆ. ಬಹಳಷ್ಟು ಮಹಿಳೆ ಯರು ರಾಜಕೀಯಕ್ಕೆ ಧುಮುಕಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಯನ್ನೇ ತೆಗೆದುಕೊಳ್ಳಿ. ಸುಮಾರು 67 ಮಂದಿ ಮಹಿಳೆಯರು ಸ್ಪರ್ಧಿಸಲು ಮುಂದೆ ಬಂದಿದ್ದಾರೆ.

* ಅಧ್ಯಕ್ಷೆಯಾಗಿ ನಿಮ್ಮ ಮುಂದಿರುವ ಗುರಿ...?

ಮಾಡಬೇಕಾಗಿದ್ದು ಸಾಕಷ್ಟು ಇದೆ. ನನ್ನ ಮೊದಲ ಆದ್ಯತೆ ಮಹಿಳೆಯರಿಗೆ ಶಿಕ್ಷಣ. ಸದ್ಯ ಬಿ.ಬಿ. ಎಂ.ಪಿ ಚುನಾವಣೆ ನನ್ನ ಮುಂದಿದೆ. ಅದು ಮುಗಿದ ಮೇಲೆ ರಾಜ್ಯದಾದ್ಯಂತ ಪ್ರಯಾಣ ಬೆಳೆ ಸುತ್ತೇನೆ. ಪ್ರತಿಯೊಂದು ಜಿಲ್ಲೆಗಳಿಗೆ ತೆರಳಿ ಅಲ್ಲಿಯ ಜನರ ಅದರಲ್ಲೂ ಮುಖ್ಯವಾಗಿ ಮಹಿಳೆಯರ ಸಮಸ್ಯೆಗೆ ಸ್ಪಂದಿಸುತ್ತೇನೆ. ಗ್ರಾಮೀಣ ಮಹಿಳೆಯರಿಗೆ ಮೊದಲು ಬೇಕಾದದ್ದು  ಆರ್ಥಿಕ ಸ್ವಾವ ಲಂಬನೆ.

ಅದಕ್ಕಾಗಿ ಎಲ್ಲ ವಯೋಮಿತಿ ಹೆಣ್ಣುಮಕ್ಕಳಿಗೆ ಉದ್ಯೋಗ ದೊರಕುವಂತಹ ಕಾರ್ಯಕ್ರಮ ರೂಪಿಸುತ್ತೇನೆ. ಇದರ ಜೊತೆಗೆ ಹೆಚ್ಚು ಹೆಚ್ಚು ಹೆಣ್ಣುಮಕ್ಕಳು ರಾಜಕೀಯಕ್ಕೆ ಪ್ರವೇಶ ಮಾಡುವ ನಿಟ್ಟಿನಲ್ಲಿ ಸಾಕಷ್ಟು ತರಬೇತಿ ನೀಡುವ ಯೋಜನೆ ಹಮ್ಮಿಕೊಳ್ಳುತ್ತೇನೆ. ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ, ಮಕ್ಕಳು ಶಾಲೆಗೆ ಸೇರುವ ಹಾಗೆ ಕಾರ್ಯಕ್ರಮ ರೂಪಿಸಬೇಕಾಗಿದೆ.

ಯುಪಿಎ ಸರ್ಕಾರ ರೈತ ಮಹಿಳೆಯರು, ಗ್ರಾಮೀಣ ಜನತೆ ಹಾಗೂ ಅಸಂಘಟಿತ ವರ್ಗದವರಿ ಗಾಗಿ ಹಲವಾರು ಯೋಜನೆ ರೂಪಿಸಿದೆ. ಆದರೆ ಇವ್ಯಾವುವೂ ಅವರನ್ನು ತಲುಪುತ್ತಾ ಇಲ್ಲ. ಆ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ಕೂಡ ನಮ್ಮ ಮೇಲಿದೆ. ಇದಕ್ಕಾಗಿ ರಾಜಕೀಯ ಪ್ರವೇಶಕ್ಕೆ ಮಹಿಳೆಯರಿಗೆ ಮುಕ್ತ ಆಹ್ವಾನ ನೀಡುತ್ತೇನೆ.

* ರಾಜಕಾರಣಿ ಹಾಗೂ ಭರವಸೆ ಎರಡು ಪದಗಳು ಒಟ್ಟಿಗೇ ಇರುತ್ತವೆ ಎಂಬ ಭಾವನೆ ಎಲ್ಲರಲ್ಲೂ ಇದೆ. ನಿಮ್ಮ ಭರವಸೆಗಳು ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತೆ ಎನಿಸುತ್ತೆ..?

ನನ್ನದು ಬರಿಯ ಭರವಸೆ ಅಲ್ಲ. ಇದನ್ನು ನಾನು ಈ ಹಿಂದೆಯೇ ಸಾಬೀತು ಮಾಡಿ ತೋರಿಸಿ ರುವ ಹೆಮ್ಮೆ ಇದೆ. 1992-93ನೇ ಅವಧಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉಪ ಮೇಯರ್ ಆಗಿ ಕೆಲಸ ನಿರ್ವಹಿದ್ದೆ. ಆಗಿನ್ನೂ ಸ್ತ್ರೀಶಕ್ತಿ ಸಂಘಟನೆಗಳು ಅಷ್ಟಾಗಿ ಇರಲಿಲ್ಲ. ಆ ವೇಳೆ ಮಹಿಳಾ ಕಲ್ಯಾಣ ಇಲಾಖೆ ಎಂದು ಸ್ಥಾಪನೆ ಮಾಡಿದ್ವಿ. ಐದು ಕಂಪ್ಯೂಟರ್, ಟೇಲರಿಂಗ್, ಎಲೆ ಕ್ಟ್ರಿಕಲ್ ತರಬೇತಿ, ಆಟೋರಿಕ್ಷಾ ತರಬೇತಿ ಇತ್ಯಾದಿ ತರಬೇತಿ ಕೇಂದ್ರಗಳನ್ನು ಮಹಿಳೆಯರಿಗಾ ಗಿಯೇ ತೆರೆಯಲಾಯಿತು. ಬೆಂಗಳೂರು ಒಂದರಲ್ಲಿಯೇ 400 ಕೇಂದ್ರ ತೆರೆದ ಹೆಗ್ಗಳಿಕೆ ಅದು. ಇಂದು ಈ ಇಲಾಖೆ ಬೃಹದಾಕಾರವಾಗಿ ಬೆಳೆದಿದೆ.

ಅದಾದ ಮೇಲೆ ಬಾಲಭವನದ ಅಧ್ಯಕ್ಷೆಯಾಗಿ (2000-2003) ನನ್ನ ಅಧಿಕಾರಾವಧಿಯಲ್ಲಿ ಸಾಕಷ್ಟು ಬೆಳವಣಿಗೆ ಆಗಿದೆ. ನಾನು ಅಧಿಕಾರ ಸ್ವೀಕರಿಸಿದಾಗ, ಬಾಲಭವನಕ್ಕೆ ಸಿಗುತ್ತಿದ್ದ ಅನುದಾನ 20 ಲಕ್ಷ ರೂಪಾಯಿ ಮಾತ್ರ. ಆದರೆ ಅಲ್ಲಿ ಈಗ ಸುಮಾರು 20ಕೋಟಿ ರೂಪಾಯಿ ಆಸ್ತಿ ಇರಬಹುದು. ಆ ಮಟ್ಟಕ್ಕೆ ಅದನ್ನು ಇತರರ ಸಹಾಯದೊಂದಿಗೆ ಬೆಳೆಸಿದ್ದೇನೆ. 10 ಎಕರೆ ಜಮೀನು ಪಡೆದು ಮಕ್ಕಳಿಗೆ ವಿವಿಧ ತರಬೇತಿ ಕೂಡ ಅದೇ ಪ್ರಥಮ ಬಾರಿಗೆ ನೀಡಲಾಯ್ತು. ತಾಲ್ಲೂಕು ಮಟ್ಟದಲ್ಲಿಯೂ ಸುಮಾರು 38 ಬಾಲಭವನ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದೆ.

* ಮಹಿಳಾ ಮೀಸಲು ಮಸೂದೆ ಅಂಗೀಕಾರಗೊಂಡಿದೆ. ಇದರ ಬಗ್ಗೆ ನಿಮ್ಮ ಅನಿಸಿಕೆ.

ಹೆಣ್ಣನ್ನು ನಾವು ಜ್ಯೋತಿಗೆ ಹೋಲಿಸ್ತೇವೆ. ಇಂದು ಆ ಜ್ಯೋತಿ ಎಲ್ಲ ಕ್ಷೇತ್ರದಲ್ಲಿಯೂ ತನ್ನ ಬೆಳಕನ್ನು ಚೆಲ್ಲಲು ಈ ಮಸೂದೆ ಅವಕಾಶ ಕಲ್ಪಿಸಿದೆ ಎನ್ನಬಹುದು. ಹೆಣ್ಣಿನಲ್ಲಿ ಎಷ್ಟೇ ಪ್ರತಿಭೆ ಇದ್ದರೂ, ಆಕೆ ಎಲ್ಲ ಕ್ಷೇತ್ರದಲ್ಲಿಯೂ ಮುಂದೆ ಬಂದರೂ ಪುರುಷ ಸಮಾಜ ಎನ್ನುವ ದೃಷ್ಟಿಕೋನ ಇನ್ನೂ ಬದಲಾಗಿಲ್ಲ. ಈ ನಿಟ್ಟಿನಲ್ಲಿ ಸೋನಿಯಾಗಾಂಧಿಯ ನೇತೃತ್ವದಲ್ಲಿ ಈ ಮಸೂದೆ ಅಂಗೀಕಾರಗೊಂಡದ್ದು, ಮಹಿಳೆಯರಿಗೆ ಉಸಿರು ತುಂಬಿದಂತಾಗಿದೆ.

* ಇಷ್ಟು ದೊಡ್ಡ ಹುದ್ದೆಯ ಜೊತೆ ಗೃಹಿಣಿ, ತಾಯಿಯ ಪಾತ್ರವನ್ನೂ ನೀವು ನಿಭಾಯಿಸು ವುದು ಹೇಗೆ..?

ಮಹಿಳೆ ಎಂದರೇನೆ ಎಲ್ಲವನ್ನೂ ನಿಭಾಯಿಸುವವಳು ಎಂದು ಅರ್ಥ. ಇದರ ಜೊತೆಗೆ ಸಾಫ್ಟ್‌ ವೇರ್ ಉದ್ಯೋಗಿಯಾಗಿರುವ ಪತಿ ಕಮಲಾಪತಿ. ಪಿಯುಸಿ ಓದುತ್ತಿರುವ ಮಗ ಹಾಗೂ ನಮ್ಮ ಜೊತೆಗೆ ಇರುವ ಅಮ್ಮ, ತಮ್ಮ ಹೀಗೆ ಎಲ್ಲರ ಸಹಕಾರವೂ ನನಗಿದೆ. ರಾಜ್ಯದ ಜನತೆಯ ಜವಾ ಬ್ದಾರಿ ಹೆಚ್ಚು ಇದೆ. ಸಂಸಾರದ ಜೊತೆಗೆ ರಾಜಕೀಯವನ್ನು ಸಮದೂಗಿಸಿಕೊಂಡು ಹೋಗುವ ಶಕ್ತಿಯೂ ನನಗಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಪ್ರಜಾವಾಣಿ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-13 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri