| ಇತ್ತೀಚಿನ 20 ಪ್ರಮುಖ ವರದಿಗಳು |
|
|
|
ನೈಸ್ ಯೋಜನೆಗೆ ಭೂಸ್ವಾಧೀನ: ರೈತರಿಗೆ ಹೆಚ್ಚುವರಿ ಭೂಮಿ ನೀಡಲು ಸರಕಾರ ಬದ್ಧ: ಯಡಿಯೂರಪ್ಪ |
ಪ್ರಕಟಿಸಿದ ದಿನಾಂಕ : 2010-03-19
ಬೆಂಗಳೂರು, ಮಾ.೧೮: ನೈಸ್ ಯೋಜನೆ ಸಲುವಾಗಿ ಸ್ವಾಧೀನಪಡಿಸಿಕೊಂಡಿರುವ ಹೆಚ್ಚುವರಿ ಭೂಮಿಯನ್ನು ರೈತರಿಗೆ ನೀಡಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.
೧೯೯೮ರಲ್ಲಿ ಮೂಲ ಒಪ್ಪಂದದಂತೆ ನೈಸ್ ಸಂಸ್ಥೆಗೆ ೧೩,೨೦೩೭ ಎಕರೆ ನೀಡಬೇಕಿದ್ದು, ಬದಲಿಗೆ ೧೮,೭೦೧ ಎಕರೆ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚುವರಿಯಾಗಿರುವ ಭೂಮಿಯನ್ನು ರಾಜ್ಯ ಸರಕಾರ ರೈತರಿಗೆ ವಾಪಸ್ ನೀಡಲಿದೆ ಎಂದು ಹೇಳಿದರು.
ಜೆಡಿಎಸ್ನ ಎಚ್.ಡಿ.ರೇವಣ್ಣ ಬಜೆಟ್ ಮೇಲೆ ಚರ್ಚೆ ಮಾಡುವ ವೇಳೆ ನೈಸ್ ವಿಷಯವನ್ನು ಪ್ರಸ್ತಾಪಿಸುತ್ತಿದ್ದಂತೆ ಎದ್ದು ನಿಂತ ಮುಖ್ಯಮಂತ್ರಿ, ಈ ವಿಷಯವಾಗಿ ದಿನ ಪೂರ್ತಿ ಚರ್ಚೆಯಾಗಲಿ. ಆರೋಪ ಮಾಡಿ ಪರಾರಿಯಾಗುವ ಧೋರಣೆ ಬೇಡ. ಇದೇ ಅಧಿವೇಶನದಲ್ಲಿ ಸಮಗ್ರ ಚರ್ಚೆ ಯಾಗಿ ವಿವಾದಕ್ಕೆ ಇತಿಶ್ರೀ ಹಾಡೋಣ. ನಕ್ಷೆಯೇ ಇಲ್ಲದೆ ಮೊದಲು ಒಪ್ಪಂದಕ್ಕೆ ಸಹಿ ಹಾಕಿ ಈಗ ಅಪ್ಪ-ಮಕ್ಕಳು ಸದನದ ಒಳಗೆ ಮತ್ತು ಹೊರಗೆ ನನ್ನ ಮೇಲೆ ಆರೋಪ ಮಾಡಿ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ ಎಂದರು.
ಯಾವುದೇ ಕಾರಣಕ್ಕೂ ನೈಸ್ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಮೊದಲು ರಸ್ತೆ ನಿರ್ಮಾಣವಾಗಲು ಅವಕಾಶ ನೀಡಿ ಎಂದು ಯಡಿಯೂರಪ್ಪ ಮನವಿ ಮಾಡಿದರು.
ಮೂಲ ಒಪ್ಪಂದದಂತೆ ೬೦ ವರ್ಷ ಬಾಳುವ ಸಿಮೆಂಟ್ ರಸ್ತೆ ನಿರ್ಮಿಸಬೇಕು. ಆದರೆ, ಮೂಲ ಒಪ್ಪಂದದಂತೆ ಯಾವುದೂ ನಡೆದಿಲ್ಲ. ತಮ್ಮ ಬಳಿ ಎಲ್ಲ ದಾಖಲೆಗಳಿದ್ದು, ಸರಕಾರಕ್ಕೆ ಒಪ್ಪಿಸಲು ಸಿದ್ಧನಿದ್ದೇನೆ. ಕೆಲವು ಸಭೆಗಳ ದಾಖಲೆಗಳು ಸರಕಾರದ ಬಳಿಯೂ ಇಲ್ಲ. ಸರಕಾರದ ಪ್ರಧಾನ ಕಾರ್ಯದರ್ಶಿಯೊಬ್ಬರು ದಾಖಲೆಗಳನ್ನು ನೀಡು ವಂತೆ ನೈಸ್ ಸಂಸ್ಥೆಗೆ ಪತ್ರ ಬರೆದಿದ್ದಾರೆ. ಎಲ್ಲ ದಾಖಲೆ ಗಳನ್ನು ಅಶೋಕ್ ಖೇಣಿ ತಮ್ಮ ಬಳಿ ಇರಿಸಿಕೊಂಡಿ ದ್ದಾರೆ. ಸರಕಾರದ ಬೇಜವಾಬ್ದಾರಿಯಿಂದ ರೈತರು ತಮ್ಮ ಭೂಮಿ ಕಳೆದುಕೊಳ್ಳುತ್ತಿದ್ದಾರೆ ಎಂದು ರೇವಣ್ಣ ಟೀಕಿಸಿದರು.
ಹಳೇ ವಿಷಯವನ್ನೇ ಚರ್ಚೆ ಮಾಡುತ್ತಿದ್ದಾರೆ ಎಂದು ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಆಕ್ಷೇಪಿಸಿದ್ದ ರಿಂದ ಕೆಲಕಾಲ ರೇವಣ್ಣ ಮತ್ತು ಕಟ್ಟಾ ನಡುವೆ ಮಾತಿನ ಚಕಮಕಿ ನಡೆಯಿತು. ಬಜೆಟ್ಗೆ ಸೀಮಿತ ವಾಗಿ ಮಾತನಾಡುವಂತೆ ಸಭಾಧ್ಯಕ್ಷರು ರೇವಣ್ಣರಿಗೆ ತಾಕೀತು ಮಾಡಿದರು. ಇದು ಬೊಕ್ಕಸಕ್ಕೆ ನಷ್ಟವಾದ ಹಗರಣ, ಆದ್ದರಿಂದ ಬಜೆಟ್ಗೆ ಸಂಬಂಧಿಸಿದೆ ಎಂದು ರೇವಣ್ಣ ಸಮರ್ಥಿಸಿಕೊಂಡರು.
ಆಡಳಿತ ಪಕ್ಷದ ಶಾಸಕರು ರೇವಣ್ಣನವರ ಮಾತಿಗೆ ಅಡ್ಡಿ ಪಡಿಸಿದಾಗ ನೆರವಿಗೆ ಬಂದ ಮುಖ್ಯಮಂತ್ರಿ ‘ಅಂದುಕೊಂಡಿದ್ದನ್ನು ಹೇಳದಿದ್ದರೆ ರೇವಣ್ಣನವರಿಗೆ ನಿದ್ದೆ ಬರಲ್ಲ, ಸಮಾಧಾನ ಆಗಲ್ಲ. ಹೇಳಲಿ ಬಿಡಿ’ ಎಂದರು. ೨೦ ತಿಂಗಳ ಆಡಳಿತದಲ್ಲಿ ಪರಸ್ಪರ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೀರಿ ಎಂದು ಸಿದ್ದರಾಮಯ್ಯ ಛೇಡಿಸಿದರು.
ಯಡಿಯೂರಪ್ಪ ಮತ್ತು ರೇವಣ್ಣನವರ ಆರೋಪ ಪ್ರತ್ಯಾರೋಪಗಳ ನಡುವೆ ಮಧ್ಯೆ ಪ್ರವೇಶಿಸಿದ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ನಿಮ್ಮ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ಲೂಟಿಯಾಗಿರುವಂತಿದೆ. ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಅಥವಾ ಜಂಟಿ ಸದನ ಸಮಿತಿ ರಚನೆ ಮಾಡಿ ವಿಚಾರಣೆ ಮಾಡಿ ಎಂದು ಆಗ್ರಹಿಸಿದರು.
ಮುಖ್ಯಮಂತ್ರಿಯ ಮೇಲೂ ಅನುಮಾನ ಇರುವುದರಿಂದ ರಾಜ್ಯದ ಜನರ ಕ್ಷಮೆ ಕೇಳಿ ಎಂದು ಅವರು ಹೇಳಿದರು. ಇದರಿಂದ ಕೋಪಗೊಂಡ ಯಡಿಯೂರಪ್ಪ ಹಗರಣ ನಡೆದಿರುವುದು ಕಾಂಗ್ರೆಸ್-ಜೆಡಿಎಸ್ ಸರಕಾರದ ಅವಧಿಯಲ್ಲಿ ನೀವು ಕ್ಷಮೆ ಕೇಳಬೇಕು ಎಂದು ಪ್ರತಿವಾದಿಸಿದರು.
ಹಗರಣಕ್ಕೂ ನನಗೂ ಸಂಬಂಧವಿಲ್ಲ, ನಾನೇಕೆ ಕ್ಷಮೆ ಕೇಳಬೇಕು. ತಪ್ಪು ಮಾಡಿದವರು ಕೇಳಲಿ. ಸಿಬಿಐ ತನಿಖೆಗೆ ಒಪ್ಪಿಸಿ ಆರೋಪಿಗಳು ಜೈಲಿಗೆ ಹೋಗಲಿ ಎಂದು ಸಿದ್ದರಾಮಯ್ಯ ಕೆಂಡ ಮಂಡಲ ವಾದರು. ಎಕರೆಗೆ ೧೦ ರೂಪಾಯಿ ನಿಗದಿ ಮಾಡಿದ್ದು ಕಾಂಗ್ರೆಸ್ ಸರಕಾರ, ರಸ್ತೆ ಉದ್ಘಾಟನೆ ಮಾಡಿದ್ದು ಕಾಂಗ್ರೆಸ್ ನಾಯಕರು ಎಂದು ಸಾರಿಗೆ ಸಚಿವ ಅಶೋಕ್ ತಿರುಗೇಟು ನೀಡಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ರಾಮದಾಸ್ ಮಧ್ಯ ಪ್ರವೇಶಿಸಲು ಬಂದಾಗ ಇನ್ನಷ್ಟು ಕೋಪಗೊಂಡ ಸಿದ್ದರಾಮಯ್ಯ, ಇವರ್ಯಾರ್ರಿ ಎಂದು ಪ್ರಶ್ನಿಸಿದರು. ರಾಜಕೀಯ ಕಾರ್ಯದರ್ಶಿಯಾಗಿ ಒಂದು ದಿನವೂ ಕಚೇರಿಗೆ ಹೋಗಿಲ್ಲ. ಈಗ ಬಂದಿದ್ದೀರಾ ಎಂದು ಲೇವಡಿ ಮಾಡಿದರು.
ಮತ್ತೆ ರೇವಣ್ಣ ಚರ್ಚೆ ಮುಂದುವರಿಸಿದಾಗ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರು ತಿರುಗಿ ಬಿದ್ದರು. ನಮ್ಮ ಭಾಗದಲ್ಲಿ ನೈಸ್ ಎಂದರೆ ಗೊತ್ತಿಲ್ಲ. ದಿನ ಅಧಿವೇಶನದಲ್ಲಿ ನೈಸ್ ಚರ್ಚೆಯೇ ಆಗುತ್ತದೆ ನೀವೇಕೆ ಅಧಿವೇಶನಕ್ಕೆ ಹೋಗುತ್ತಿದ್ದೀರಿ ಎಂದು ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಅಭಿವೃದ್ಧಿ ಕುರಿತು ಚರ್ಚೆ ಮಾಡಲು ಬಿಡಿ ಎಂದು ಪ್ರಕಾಶ್ ಹುಕ್ಕೇರಿ, ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡರು. ಇದನ್ನು ಜೆಡಿಎಸ್ ಶಾಸಕರು ಪ್ರತಿಭಟಿಸಿದಾಗ ಪ್ರತಿಪಕ್ಷಗಳ ಶಾಸಕರ ನಡುವೆಯೇ ವಾಗ್ವಾದ ನಡೆಯಿತು. ಕಾಂಗ್ರೆಸ್ ಶಾಸಕರ ಹೇಳಿಕೆಗಳನ್ನು ಕಡತದಿಂದ ತೆಗೆಯಬೇಕು ಎಂದು ಜೆಡಿಎಸ್ ಶಾಸಕರು ಒತ್ತಾಯಿಸಿದರು.
ಪರಿಶೀಲಿಸುವ ಭರವಸೆ ನೀಡಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಚರ್ಚೆಯನ್ನು ಅಂತ್ಯಗೊಳಿಸಿದರು.
ವರದಿಯ ವಿವರಗಳು |
 |
ಕೃಪೆ : ವಾರ್ತಾಭಾರತಿ ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-19 00:00:00
|
|
|
|
| »ಶೋಭಾ ತಂದೆ ವೈಕುಂಠಕ್ಕೆ ಯಡ್ಡಿ ಪಟಾಲಂ ಹಾಜರ್ | | »ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ' | | »ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು? | | »ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ | | »ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated) | | »ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು | | »ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್ನ ನಾಲ್ವರ ಅವಾನತು | | »ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ | | »ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ | | »ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ | | »ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ | | »ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ | | »ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ | | »ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್ | | »ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ | | »ಕಾಂಗ್ರೆಸ್ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ | | »ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ | | » ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ | | »ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ | | »ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ | | »ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ | | »ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ.. | | »ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು | | »ಅಶ್ಲೀಲ ಕಲಾಪಕ್ಕೆ ಸದನ ಬಲಿ | | »ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ | | »ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ | | »ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ | | »ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ | | »ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ | | »‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ | | »ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ | | »ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ? | | »ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ | | »ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ | | »ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ | | »ಬಿಬಿಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ | | »ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್ ಚಾರಿಯಟ್' 'ಹೌಸ್ ಫುಲ್ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು | | »ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು | | »ಯೋಗ ವಿಜ್ಞಾನ ಶಿಬಿರ: ಬಜೆಟ್ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿಎಂ | | »ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update) | | »ಸದನದಲ್ಲಿ ಮೊಬೈಲ್ ಫೋನ್ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್ ಮಂತ್ರಿ ಸ್ಥಾನಕ್ಕೆ ರಾಜಿನಾಮೆ | | »ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು | | »ಆಧಾರ್ ಕಾರ್ಡ್ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ | | »50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ | | »ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ | | »ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ | | »ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್ | | »ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ | | »ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ | | »ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ | |