ಉಡುಪಿ: `ಕಾರಂತ ಕಲಾಗ್ರಾಮದಲ್ಲಿ ಕನ್ನಡ ಭವನ ನಿರ್ಮಾಣ': ವಿ.ಎಸ್.ಆಚಾರ್ಯ |
ಪ್ರಕಟಿಸಿದ ದಿನಾಂಕ : 2010-03-21
ಉಡುಪಿ, ಮಾ.೨೦: ಉಡುಪಿ ಸಮೀಪದ ೮೦ ಬಡಗುಬೆಟ್ಟು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರು ವ ಕಾರಂತ ಕಲಾಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ `ಕನ್ನಡ ಭವನ'ವನ್ನು ನಿರ್ಮಿಸ ಲು ವ್ಯವಸ್ಥೆ ಕಲ್ಪಿಸುವುದಾಗಿ ರಾಜ್ಯ ಗೃಹ ಸಚಿವ ಡಾ.ವಿ.ಎಸ್. ಆಚಾರ್ಯ ಭರವಸೆ ನೀಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ವತಿಯಿಂದ ಅಂಬಲಪಾಡಿ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನದ ನಿ.ಬೀ.ಅಣ್ಣಾಜಿ ಬಲ್ಲಾಳ್ ವೇದಿಕೆಯಲ್ಲಿ ಇಂದು ಆರಂಭಗೊಂಡ ಉಡು ಪಿ ಜಿಲ್ಲಾ ಆರನೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಡಾ.ಶಿವರಾಮ ಕಾರಂತರ ಹೆಸರಿನಲ್ಲಿ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಕಾರಂತ ಕಲಾಗ್ರಾಮ ಹಾಗೂ ಕಾರಂತ ವನ ಪ್ರದೇಶದಲ್ಲೇ ಕನ್ನಡ ಭವನವನ್ನು ನಿರ್ಮಿಸಿದರೆ ಅದರಿಂದ ಜನರಿಗೆ ಹೆಚ್ಚಿನ ಪ್ರಯೋಜನವಾಗಬಹುದೆಂಬ ನಿರೀಕ್ಷೆಯಿಂದ ಇಂಥ ಯೋಜನೆ ಹಾಕಿ ಕೊಳ್ಳಲಾಗಿದೆ ಎಂದವರು ಹೇಳಿದರು.
ರಾಜ್ಯ ಸರಕಾರ ಇದೀಗ ಸಂಸ್ಕೃತ ವಿವಿಯನ್ನು ಸ್ಥಾಪಿಸಲು ಮುಂದಾಗಿದ್ದು, ಇದರಲ್ಲಿ ಹಿಡನ್ ಎಜೆಂಡಾ ಏನೂ ಇಲ್ಲ. ಕನ್ನಡಿಗರು ಇದನ್ನು ಸ್ವಾಗತಿ ಸಬೇಕು ಎಂದು ಅವರು ಹೇಳಿದರು.

ಸಮ್ಮೇಳನ ಸಂದರ್ಭದಲ್ಲಿ ಕಸಾಪ ಹೊರತಂದಿರುವ ನಾಲ್ಕು ಹಾಗೂ ಇತರರ ಏಳು ಪುಸ್ತಕಗಳ ನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಬಿಡುಗಡೆ ಗೊಳಿಸಿದರು. ಬಳಿಕ ಮಾತನಾಡಿದ ಅವರು, ಅನುದಾನಿತ ಕನ್ನಡ ಭಾಷಾ ಮಾಧ್ಯಮದ ಶಾಲೆಗಳಿಗೆ ಸರಕಾರ ವಿಶೇಷ ಪ್ರೋತ್ಸಾಹ ನೀಡಬೇಕೆಂದು ಅವರು ಒತ್ತಾಯಿಸಿದರು.
ಪುಸ್ತಕ ಮಳಿಗೆಗಳನ್ನು ದ.ಕ.ಜಿಲ್ಲಾ ಕ.ಸಾ.ಪ.ಅಧ್ಯಕ್ಷ ಪ್ರದೀಪ್ಕುಮಾರ್ ಕಲ್ಕೂರ ಉದ್ಘಾಟಿಸಿ ದರು. ಕಾಸರ ಗೋಡು ಕಸಾಪ ಅಧ್ಯಕ್ಷ ಎಸ್.ವಿ.ಭಟ್ ಉಪಸ್ಥಿತರಿದ್ದರು.

ಉಡುಪಿಯ ಬಹುಭಾಷಾ ವಿದ್ವಾಂಸ ಡಾ.ಯು.ಪಿ.ಉಪಾಧ್ಯಾಯ ಸಮ್ಮೇಳನಾಧ್ಯಕ್ಷರಾಗಿದ್ದರು. ಕಳೆದ ಸಮ್ಮೇಳನದ ಅಧ್ಯಕ್ಷ ಡಾ.ನಾ.ಮೊಗಸಾಲೆ ಉಪಸ್ಥಿತರಿದ್ದರು.
ಸಮ್ಮೇಳನ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಕೆ.ರಘುಪತಿ ಭಟ್ ಸ್ವಾಗತಿಸಿದರು. ಕಸಾಪ ಜಿಲ್ಲಾಧ್ಯಕ್ಷ ಅಂಬಾತನಯ ಮುದ್ರಾಡಿ ಪ್ರಾಸ್ತಾವಿಕ ಮಾತನಾಡಿದರು. ಎಸ್.ಆರ್. ಅರುಣ ಕುಮಾರ್ ಸಮ್ಮೇಳನಾಧ್ಯಕ್ಷರನ್ನು ಪರಿಚಯಿಸಿದರು. ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ವಂದಿಸಿದರು. ಡಾ.ಪಾದೇಕಲ್ಲು ವಿಷ್ಣು ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಮೆರವಣಿಗೆ: ಇದಕ್ಕೆ ಮುನ್ನ ಸಮ್ಮೇಳನದ ಅಧ್ಯಕ್ಷರ ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆ ಬ್ರಹ್ಮ ಗಿರಿ ಲಯನ್ಸ್ ವೃತ್ತದಿಂದ ಆರಂಭಗೊಂಡು ಅಂಬಲಪಾಡಿ ದೇವಸ್ಥಾನದವರೆಗೆ ನಡೆಯಿತು. ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರೆ, ಶಾಸಕ ರಘುಪತಿ ಭಟ್ ಕನ್ನಡ ಧ್ವಜಾರೋಹಣ ಹಾಗೂ ಅಂಬಾತನಯ ಮುದ್ರಾಡಿ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು.
ವರದಿಯ ವಿವರಗಳು |
 |
ಕೃಪೆ : ವಾಭಾ/ಚಿತ್ರ-ದುರ್ಗಪ್ರಸಾಸ್ ಕೆ. ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-21 00:00:00
|
|
|