ಮ೦ಡ್ಯ: ಆರೋಪಗಳಿಗೆ ಕಿವಿಗೊಡುವುದಿಲ್ಲ: ಸಚಿವ ನರೇಂದ್ರಸ್ವಾಮಿ |
ಪ್ರಕಟಿಸಿದ ದಿನಾಂಕ : 2010-03-21
ಮಂಡ್ಯ, ಮಾ.೨೦: ತನ್ನ ಕ್ಷೇತ್ರದ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುತ್ತಿದ್ದು, ಟೀಕೆ, ಆರೋಪ ಗಳಿಗೆ ಕಿವಿಗೊಡುವುದಿಲ್ಲ ಎಂದು ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವ ಪಿ. ಎಂ. ನರೇಂದ್ರ ಸ್ವಾಮಿ ಹೇಳಿದ್ದಾರೆ.
ಮಳವಳ್ಳಿಯ ಸರಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಶನಿವಾರ ನಡೆದ ತಾಲೂಕುಮ ಟ್ಟದ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಭಿವೃದ್ಧಿ ಕೆಲಗಳನ್ನು ಸಹಿಸದ ಕೆಲವರು ವೃಥಾ ಆರೋಪ ಮಾಡುತ್ತಿದ್ದಾರೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ ಎಂದು ಅವರು ಪರೋಕ್ಷವಾಗಿ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಯವರ ವಿರುದ್ಧ ವಾಗ್ದಾಳಿ ನಡೆಸಿದರು.
ಸಂಕಷ್ಟ ಕಾಲದಲ್ಲಿ ಕ್ಷೇತ್ರದ ಜನತೆ ತನ್ನ ಕೆಹಿಡಿದಿದ್ದಾರೆ. ಯಡಿಯೂರಪ್ಪರವರು ಸಚಿವ ಜವಾ ಬ್ದಾರಿ ಕೊಟ್ಟಿದ್ದಾರೆ. ಸಿಕ್ಕಿರುವ ಅವಕಾಶವನ್ನು ಕ್ಷೇತ್ರದ ಅಭಿವೃದ್ಧಿಗೆ ಸದುಪಯೋಗಪಡಿಸಿಕೊಳ್ಳು ತ್ತಿದ್ದೇನೆ ಎಂದು ಅವರು ತಿಳಿಸಿದರು.
ಸದಢರಾಗಲು ಕರೆ: ೧೦೦ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ತಲಾ ೧ ಲಕ್ಷ ರೂ.ಗಳ ಚೆಕ್ ವಿತರಿಸಿದ ನರೇಂದ್ರಸ್ವಾಮಿ, ಅನುದಾನವನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಸದಢರಾಗಬೇಕೆಂದು ಕರೆ ನೀಡಿದರು.
ಮಹಿಳಾ ಸಂಘಗಳು ತಯಾರಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಮಂಡ್ಯದಲ್ಲಿ ೧.೧೭ ಕೋಟಿ ರೂ.ವೆಚ್ಚದಲ್ಲಿ ಮಹಿಳಾ ಭವನ ನಿರ್ಮಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಭೆಗೆ ನಿರೀಕ್ಷೆಗಿಂತಲೂ ಹೆಚ್ಚು ಜನರು ಪಾಲ್ಗೊಂಡಿದ್ದ ಕಾರಣ ಎಲ್ಲರಿಗೂ ಆಸನ ವ್ಯವಸ್ಥೆ ಕಲ್ಪಿ ಸಲು ಸಾಧ್ಯವಾಗಲಿಲ್ಲ. ಇದರಿಂದ ಕೆರಳಿದ ಸಚಿವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.
ವರದಿಯ ವಿವರಗಳು |
 |
ಕೃಪೆ : ವಾಭಾ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-21
|
|
|