ಮದ್ದೂರು: ದಲಿತರ ದೇವಳ ಪ್ರವೇಶ; ನಿಷೇಧಾಜ್ಞೆ ಜಾರಿ |
ಪ್ರಕಟಿಸಿದ ದಿನಾಂಕ : 2010-03-22
ಮಂಡ್ಯ, ಮಾ.೨೧: ಮದ್ದೂರು ತಾಲೂಕಿನ ಎಸ್.ಐ.ಹೊನ್ನಲಗೆರೆ ಗ್ರಾಮದಲ್ಲಿ ಗ್ರಾಮದೇವತೆ ಬೇವಿ ನಮ್ಮ ದೇವಾಲಯಕ್ಕೆ ರವಿವಾರ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪೊಲೀಸರ ಅನುಮತಿ ಪಡೆದು ದಲಿತರು ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆನ್ನಲಾಗಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಗ್ರಾಮ ದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಗ್ರಾಮದೇವತೆ ಬೇವಿನಮ್ಮ ದೇವಾ ಲಯ ಜೀರ್ಣೋದ್ಧಾರ ಕಾರ್ಯದ ವೇಳೆ ದಲಿತರು ದೇವಾಲಯಕ್ಕೆ ಪ್ರವೇ ಶಿಸಿ ಪೂಜೆ ಸಲ್ಲಿಸಿದ್ದರಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅರ್ಚಕರನ್ನು ಹೊರತುಪಡಿಸಿ ಕಾಮ ಗಾರಿ ಪೂರ್ಣಗೊಳ್ಳುವವರೆಗೆ (೪೮ ದಿನಗಳು) ಯಾರೂ ದೇವಾಲಯಕ್ಕೆ ಪ್ರವೇಶಿಸದಂತೆ ಆದೇಶ ಹೊರಡಿಸಿತ್ತು.
ಇತ್ತೀಚೆಗಷ್ಟೇ ಕಾಮಗಾರಿ ಪೂರ್ಣ ಗೊಂಡಿದ್ದರಿಂದ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ದಲಿತರು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದರು. ಶಾಂತಿಸಭೆ ನಡೆಸಿದ್ದ ಪೊಲೀಸ್ ಅಧಿಕಾರಿಗಳು ದೇವಾಲಯ ಪ್ರವೇಶಿಸಲು ಅನುಮತಿ ನೀಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು (ಮಾ.೨೧) ದಲಿತರು ದೇವಾ ಲಯಕ್ಕೆ ಪ್ರವೇಶಿಸಿ ಪೂಜೆ ಸಲ್ಲಿಸಿ ದರು. ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿ ಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ರಂಗಪ್ಪ, ತಹಶೀ ಲ್ದ್ದಾರ್ ವಾಣಿ, ಡಿವೈಎಸ್ಪಿ ಅಬ್ದುಲ್ ಖಲೀಂ, ಸಿಪಿಐ ಕೃಷ್ಣಪ್ಪ, ಪಿಎಸ್ಐ ವೆಂಕಟೇಗೌಡ ಶಾಂತಿ ಕಾಪಾಡಬೇಕೆಂದು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ವರದಿಯ ವಿವರಗಳು |
 |
ಕೃಪೆ : ವಾರ್ತಾಭಾರತಿ ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-22 00:00:00
|
|
|