ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಇದೆಂತಹಾ ನ್ಯಾಯ? :ಭಾರೀ ನರರಾಕ್ಷಸನೊಬ್ಬನಿಗೆ ಸಣ್ಣದೊಂದು ಸೊಳ್ಳೆ ಕಚ್ಚಿದರೆ ಏನು ಪ್ರಯೋಜನ

ಭಾರೀ ನರರಾಕ್ಷಸನೊಬ್ಬನಿಗೆ ಸಣ್ಣದೊಂದು ಸೊಳ್ಳೆ ಕಚ್ಚಿದೆ. ಆ ರಾಕ್ಷಸನ ಕುರಿತಂತೆ ನಾವೆಷ್ಟು ಅಸಹಾಯಕರೆಂದರೆ, ಸೊಳ್ಳೆ ಕಚ್ಚುವ ಮೂಲಕ ಆತನಿಗೆ ಸರಿಯಾದ ಶಾಸ್ತಿಯಾಯಿತೆಂಬ ಸಂಭ್ರ ಮದಲ್ಲಿದ್ದೇವೆ. ಸೊಳ್ಳೆ ಕಚ್ಚುವುದನ್ನು ಸಹಿಸಲು ಸಿದ್ಧನಿಲ್ಲದ ನರರಾಕ್ಷಸ ಸಿಟ್ಟಿನಿಂದ ಹೂಂಕರಿಸಿ ದ್ದಾನೆ. ಅದು ರಾಕ್ಷಸನ ಚೀತ್ಕಾರವೆಂಬಂತೆ ಭಾವಿಸಿ ನಮಗೆ ನಾವೇ ಸಮಾಧಾನ ಪಟ್ಟುಕೊಂಡಿ ದ್ದೇವೆ. ನರರಾಕ್ಷಸನನ್ನು ಮುಟ್ಟುವುದಕ್ಕೂ ಅಂಜುವ ಸನ್ನಿವೇಶದಲ್ಲಿ ಕನಿಷ್ಠ ಸೊಳ್ಳೆಯಾದರೂ ಆತನಿಗೆ ಕಚ್ಚಿತಲ್ಲ ಎನ್ನುವ ಆತ್ಮತೃಪ್ತಿ ನಮಗೆ. ಅದೇ ಅವನಿಗಾದ ಶಿಕ್ಷೆ ಎಂದು ನಮ್ಮನ್ನು ನಾವೇ ಸಂತೈಸಿ ಕೊಳ್ಳುತ್ತಿದ್ದೇವೆ.

ಗುಜರಾತಿನಲ್ಲಿ ನಡೆದ, ನಡೆಯುತ್ತಿರುವ ಬೆಟ್ಟದಷ್ಟು ದೊಡ್ಡದಾದ ಅನ್ಯಾಯಕ್ಕೆ, ಅಮಿತ್ ಶಾ ಬಂಧನದಿಂದ ನ್ಯಾಯ ಸಿಕ್ಕಿದೆ ಎಂದು ಭಾವಿಸಿದವರಿಗೆಲ್ಲ ಮೇಲಿನ ಕತೆಯನ್ನು ಅನ್ವಯಿಸ ಬಹುದು. ಈ ದೇಶ ಪ್ರಜಾಸತ್ತಾತ್ಮಕವಾದುದು, ಸಂವಿಧಾನ ಇಲ್ಲಿ ಅಸ್ತಿತ್ವದಲ್ಲಿದೆ ಎನ್ನುವುದನ್ನು ನಂಬಿದ ತಪ್ಪಿಗೆ ನಾವೆಲ್ಲರೂ, ಅಮಿತ್ ಶಾನಿಗೆ ಶಿಕ್ಷೆಯಾಗಿಯೇ ಬಿಟ್ಟಿತು ಎಂದು ಸಂಭ್ರಮ ಪಡಬೇಕಾಗಿದೆ. ಭಾರೀ ಗದ್ದಲದೊಂದಿಗೆ ಸಿಬಿಐ ಅಮಿತ್ ಶಾನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಬಿಟ್ಟುಕೊಟ್ಟಿತು.

ಕನಿಷ್ಠ ವಿಚಾರಣೆಗಾಗಿ ಕಸ್ಟಡಿಗೂ ಕೇಳಲಿಲ್ಲ. ಒಂದು ದೊಡ್ಡ ಅನ್ಯಾಯದ ಹಿಂದಿರುವ ಆರೋಪಿ ಯನ್ನು ಸಿಬಿಐ ವಿಚಾರಣೆ ನಡೆಸಿದ ರೀತಿ ಇದು. ಅಮಿತ್ ಶಾನ ಕುರಿತಂತೆ ಸಿಬಿಐ ಜೊತೆಗಿರುವ ದಾಖಲೆಗಳನ್ನು ಗಣನೆಗೆ ತೆಗೆದುಕೊಂಡರೆ, ಆತ ಎಂದೋ ಬಂಧನಕ್ಕೊಳಗಾಗಬೇಕಾಗಿತ್ತು. ಆದರೆ ಮೀನಾಮೇಷ ಎಣಿಸಿ, ಹಲವು ತಿಂಗಳ ಬಳಿಕ ಆತನಿಗೆ ನೋಟಿಸ್ ಜಾರಿ ಮಾಡಿತು. ಇದೀಗ ಅನಿವಾರ್ಯವಾಗಿ ಆತನನ್ನು ಬಂಧಿಸಿದೆ. ಅಥವಾ ಬಂಧಿಸಿದಂತೆ ಮಾಡಿ, ಆತನ ಬಿಡುಗಡೆಗೆ ದಾರಿ ಸುಗಮ ಮಾಡಿ ಕೊಟ್ಟಿದೆ.

ಅಮಿತ್‌ಶಾನ ರಾಜೀನಾಮೆ, ಶರಣಾಗತಿ ಇತ್ಯಾದಿ ನಾಟಕಗಳನ್ನು ಒಂದೇ ಮಾತಿನಲ್ಲಿ ನರರಾಕ್ಷ ಸನೊಬ್ಬನಿಗೆ ಸೊಳ್ಳೆ ಕಚ್ಚಿದ ರೀತಿ ಎಂದು ಬಣ್ಣಿಸಬಹುದಾಗಿದೆ. ಸಂವಿಧಾನ ಮತ್ತು ಪ್ರಜಾಸತ್ತೆ ಯ ಒಂದು ಅಣಕು ಪ್ರದರ್ಶನ ಇದು. ಅಂದ ಹಾಗೆ, ಈ ಕತೆಯಲ್ಲಿ ಬರುವ ನರರಾಕ್ಷಸ ಅಮಿತ್ ಶಾ ಅಲ್ಲ ಎನ್ನುವುದನ್ನು ನಾವು ನೆನಪಿನಲ್ಲಿಡ ಬೇಕಾಗಿದೆ.

ಅಮಿತ್ ಶಾ ಇಲ್ಲಿ ನೆಪ ಮಾತ್ರ. ಸೊಳ್ಳೆ ನಿಜಕ್ಕೂ ಕಚ್ಚಿರುವುದು ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿಗೆ. ಸಿಬಿಐ ಬಂಧಿಸಿರುವುದು ಅಮಿತ್ ಶಾನನ್ನೇ ಆಗಿದ್ದರೂ, ಅದು ಪರೋಕ್ಷ ವಾಗಿ ಗುರಿ ಮಾಡಿರುವುದು ನರೇಂದ್ರ ಮೋದಿಯನ್ನು. ಆತನನ್ನು ಮುಟ್ಟುವ ಧೈರ್ಯವಿಲ್ಲ ಎನ್ನುವ ಕಾರಣಕ್ಕೆ, ಶಾನನ್ನು ಕಚ್ಚಿದೆ.

ಸೊಹ್ರಾಬುದ್ದೀನ್ ಎನ್‌ಕೌಂಟರ್, ಆತನ ಪತ್ನಿಯ ಬರ್ಬರ ಹತ್ಯೆ, ಬಳಿಕ ಈ ಘಟನೆಯ ಒಬ್ಬನೇ ಒಬ್ಬ ಸಾಕ್ಷಿ ತುಳಸಿ ಪ್ರಜಾಪತಿಯ ಹತ್ಯೆ ಇವೆಲ್ಲ ಗುಜರಾತ್‌ನ ಹತ್ಯಾಕಾಂಡ ಸರಣಿಯ ಉಪಕತೆಗಳು ಮಾತ್ರ. ಗೃಹ ಸಚಿವ ಇದರಲ್ಲಿ ನೇರ ಶಾಮೀಲಾಗಿದ್ದಾನೆ ಎನ್ನುವ ಕಾರಣಕ್ಕಾಗಿ ನಾವು ಬೆಚ್ಚಿ ಬೀಳಬೇಕಾಗಿಲ್ಲ. ಇಡೀ ಗುಜರಾತ್ ಸರಕಾರವೇ ಇದರಲ್ಲಿ ಶಾಮೀಲಾಗಿದೆ.

ಗುಜರಾತ್‌ನಲ್ಲಿ ನಡೆದ ಸಾಲು ಸಾಲು ಎನ್‌ಕೌಂಟರ್‌ಗಳ ನೇತೃತ್ವವನ್ನು ವಹಿಸಿರುವುದೇ ಅಲ್ಲಿನ ಮುಖ್ಯಮಂತ್ರಿ ನರೇಂದ್ರ ಮೋದಿ. ಉಳಿದವರೆಲ್ಲ ಆತನ ಆಜ್ಞಾವರ್ತಿಗಳು. ಕೋಮುಗಲಭೆಯ ಹೆಸರಿನಲ್ಲಿ ಸಹಸ್ರಾರು ಮುಸ್ಲಿಮರ ಬರ್ಬರ ಹತ್ಯಾಕಾಂಡದಿಂದ ಹಿಡಿದು, ಪೊಲೀಸ್ ನಕಲಿ ಎನ್‌ಕೌಂಟರ್ ಪ್ರಕರಣಗಳವರೆಗೆ ಎಲ್ಲದರಲ್ಲೂ ಮೋದಿಯ ಕೈವಾಡವಿದೆ. ಇದು ಇಡೀ ದೇಶಕ್ಕೆ ಗೊತ್ತಿರುವ ಸತ್ಯ. ಅಮಿತ್ ಶಾ ಮೋದಿಯ ಬಲಗೈ ಬಂಟ.

ಆತನ ಸೂಚನೆಯಂತೆ ತನ್ನ ಖಾತೆಯನ್ನು ಶಾ ದುರುಪಯೋಗ ಪಡಿಸಿಕೊಂಡ ಅಷ್ಟೇ. ಗುಜರಾತ್‌ನಲ್ಲಿ ನಡೆದ ಹತ್ಯೆಗಳಿಗಾಗಿ ನಿಜಕ್ಕೂ ಶಿಕ್ಷೆಯಾಗಬೇಕಾದುದು ನರೇಂದ್ರ ಮೋದಿಗೆ. ಸೊಹ್ರಾಬುದ್ದೀನ್ ಎನ್‌ಕೌಂಟರ್‌ಗೆ ಸಂಬಂಧಿಸಿ ಸಿಬಿಐ ನ್ಯಾಯವನ್ನೇನೂ ಕೊಟ್ಟಿಲ್ಲ. ನಕಲಿಎನ್‌ ಕೌಂಟರ್ ನಡೆದು ಸುಮಾರು ಐದು ವರ್ಷಗಳ ಬಳಿಕ ಅಮಿತ್‌ಶಾನ ವಿಚಾರಣೆಗೆ ಸಿಬಿಐ ಮುಂದಾಗಿದೆ. ಆತನಿಗೆ ಶಿಕ್ಷೆಯೇನೂ ಆಗಿಲ್ಲ. ಬರೇ ಆತನ ವಿಚಾರಣೆಗಾಗಿ ಸಿಬಿಐ ಇಷ್ಟು ತಿಣುಕಾಡಿತು.

ಆತನನ್ನು ವಿಚಾರಣೆ ನಡೆಸುವುದೇ ಇಷ್ಟು ಕಷ್ಟವೆಂದಾದರೆ, ಆತನಿಗೆ ಸಿಬಿಐ ಶಿಕ್ಷೆ ಕೊಡಿಸುವುದು ನಿಜವೆ? ನರೇಂದ್ರ ಮೋದಿಯ ಬಂಟನ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಇಷ್ಟೆಲ್ಲ ಕಷ್ಟ ವಾಯಿತೆಂದ ಮೇಲೆ ನರೇಂದ್ರ ಮೋದಿ ಯನ್ನು ಸಿಬಿಐ ವಿಚಾರಣೆ ನಡೆಸುತ್ತದೆ ಮತ್ತು ಆತನಿಗೆ ಶಿಕ್ಷೆ ನೀಡುತ್ತದೆ ಎಂದು ನಾವು ಊಹಿಸುವುದಾದರೂ ಸಾಧ್ಯವೆ?

ಎಲ್ಲಿಯವರೆಗೆ ನರೇಂದ್ರ ಮೋದಿಗೆ ಶಿಕ್ಷೆಯಾಗುವುದಿಲ್ಲವೋ ಅಲ್ಲಿಯವರೆಗೆ, ಗುಜರಾತ್‌ನ ಸಂತ್ರಸ್ತರಿಗೆ ನ್ಯಾಯ ಸಿಗುವುದು ಸಾಧ್ಯವಿಲ್ಲ. ಬಹಿರಂಗವಾಗಿ ಕಾನೂನಿನ ನೇತೃತ್ವದಲ್ಲೇ ನಡೆದ ಹತ್ಯಾಕಾಂಡ ಕ್ಕೊಳಗಾದವರಿಗೆ ನ್ಯಾಯ ಸಿಕ್ಕಿಲ್ಲವೆಂದರೆ, ನಾವು ಈ ದೇಶದಲ್ಲಿ ಸಂವಿಧಾನ, ಪ್ರಜಾಸತ್ತೆ ಅಸ್ತಿತ್ವದಲ್ಲಿದೆ ಎಂದು ಒಪ್ಪಬೇಕಾದರೂ ಯಾಕೆ?

ಸಿಬಿಐಯನ್ನು ಕಾಂಗ್ರೆಸ್ ಪಕ್ಷ ದುರುಪಯೋಗ ಪಡಿಸಿದೆ ಎಂದು ಹೇಳುತ್ತಿದೆ ಬಿಜೆಪಿ. ನಿಜ. ಸಿಬಿಐಯನ್ನು ಕೆಲ ಕಾಂಗ್ರೆಸ್ ಮುಖಂಡರು ದುರುಪಯೋಗ ಪಡಿಸಿದ ಕಾರಣದಿಂದಲೇ, ನರೇಂದ್ರ ಮೋದಿ ಮತ್ತು ಆತನ ಸಹಚರರು ಇನ್ನೂ ಸಿಬಿಐ ಬಲೆಗೆ ಬೀಳದೆ ಗುಜರಾತಿನಲ್ಲಿ ಯಶಸ್ವಿಯಾಗಿ ದರ್ಬಾರು ನಡೆಸುತ್ತಿದ್ದಾರೆ. ಸಿಬಿಐಯನ್ನು ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ನಾಯಕರು ಬಿಟ್ಟಿದ್ದರೆ, ಅಮಿತ್ ಶಾ ಮಾತ್ರವಲ್ಲ, ನರೇಂದ್ರ ಮೋದಿಯೂ ಇಂದು ಜೈಲಲ್ಲಿರಬೇಕಾಗಿತ್ತು.

ದೇಶದ ಮುಂದೆ ಹುಲಿ ಹಿಡಿಯುವ ನಾಟಕವಾಡುತ್ತಿರುವ ಸಿಬಿಐ ಒಂದು ಇಲಿಯನ್ನಾದರೂ ಹಿಡಿದ ಉದಾಹರಣೆ ನಮ್ಮ ಮುಂದಿದೆಯೆ? ಕಾಂಗ್ರೆಸ್ ನಾಯಕರು ಮನಸ್ಸು ಮಾಡಿದ್ದರೆ, ಗುಜರಾತಿನ ಆರೋಪಿಗಳಿಗೆ ಕನಿಷ್ಠ ಶಿಕ್ಷೆಯಾದರೂ ಆಗುತ್ತಿತ್ತು. ಆದರೆ ನಡೆಯುತ್ತಿರುವುದೇನು? ಕಾಂಗ್ರೆಸ್ ಹೊಡೆದಂತೆ ನಟಿಸುತ್ತಿದೆ. ಬಿಜೆಪಿ ಅತ್ತಂತೆ ನಾಟಕವಾಡುತ್ತಿದೆ. ನಾವೆಲ್ಲ ಈ ಪ್ರಹಸನವನ್ನು ಮೂರ್ಖರಂತೆ ನೋಡಿ, ಸಂಭ್ರಮ ಪಟ್ಟುಕೊಳ್ಳುತ್ತಿದ್ದೇವೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾಭಾ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-07-26 00:00:00

Tell a Friend

ಪ್ರತಿಸ್ಪಂದನ
sunil, uppinangady
2010-11-01
Sohrabudhin is not a NATIONAL LEDER, he is a criminal..
Aveen, Bangalore
2010-08-03
ಮಾನ್ಯರೇ, ನಿಮ್ಮ ಅಂಕಣವನ್ನು ಓದಿದೆ. ತೆಗೆದು ಹಾಕಲಾರದ ಕೆಲವು ಮಾತಿದ್ದರೂ ಒಪ್ಪುವಂಥಾ ಒಂದು ಮಾತೂ ಅಂಕಣದಲ್ಲಿ ಪ್ರಸ್ತಾಪವಾಗಿಲ್ಲ.. ಏಕ ಕುಮ್ಕವಾಗಿ ಘಟನೆಯ ಹಿನ್ನಲೆಯನ್ನು ವೀಕ್ಷಿಸಿ ಅಭಿಪ್ರಾಯ ವ್ಯಕ್ತಪಡಿಸುವುದಕ್ಕಿಂಥ 3rd party ಸ್ತಾನದಲ್ಲಿ ನಿಮ್ಮ ವಿಶ್ಲೇಷಣೆಯನ್ನ ಬರೆಯಿರಿ. ನಿಮಗೆ ಘಟನೆಯ ಪೂರ್ವಾಪರ ಬೇಕಿದ್ದಲ್ಲಿ ಕೆಳಗಿನ ಕೊಂಡಿಯನ್ನು ನೋಡಿ.

http://www.vijaykarnatakaepaper.com

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............
»ನ್ಯಾ ಸುಧೀಂದ್ರರಾವ್ : ಬಂಗಾರಪೇಟೆಯ ಸ್ಟಾಂಪ್ ವೆಂಡರ್ ಮಗ ಇಂದಿಗೂ ಮನೆ ಸಾಲ ಕಟ್ಟುತ್ತಿರುವ ನ್ಯಾಯಾಧೀಶ
»ಸೈಟು ಪ್ರಶಿಸುವವರ ಕಣ್ಣಿಗೆ ಸಂಘದ ಸಾಮಾಜಿಕ ಬದ್ಧತೆಯೇಕೆ ಕಾಣುವುದಿಲ್ಲ?
»ಕನ್ನಡಿಗರ ಕಣ್ಮಣಿಯಾಗುತ್ತಿರುವ ನಮ್ಮ ಸುವರ್ಣ ವಾರ್ತಾ ವಾಹಿನಿ 24X7
»ಆ ಪಟ್ಟಿಯಲ್ಲಿ ಈ ಪದ್ಯಾಣರ ಹೆಸರಿರಬೇಕಿತ್ತು...!
»ಇದು ನಮ್ಮ ಗ್ರ್ಯಾಂಡ್ ಪ್ರಿಕ್ಸ್: ರಥ V/S ಫಾರ್ಮುಲಾ 1

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri