ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಸುಪ್ರಿಮ್ ಕೋರ್ಟ್ ನೀಡಿದ ತಡ ರಾತ್ರಿಯವರೆಗೂ ಮಹಿಳೆಯರಿಗೆ ಕೆಲಸ ಮಾಡುವ ಹಕ್ಕು :ಇದು ದುಡಿಮೆಯೋ? ಶೋಷಣೆಯೋ?

ಸುಪ್ರೀಂ ಕೋರ್ಟ್ ಮಹಿಳೆಯರಿಗೆ ತಡ ರಾತ್ರಿಯವರೆಗೂ ಕೆಲಸ ಮಾಡುವ ‘ಹಕ್ಕ’ನ್ನು ಕೊಟ್ಟಿ ದ್ದು, ಈ ಹಕ್ಕಿಗಾಗಿ ಒಂದು ವರ್ಗ ಸಂಭ್ರಮಿಸಿದ್ದೂ ನಡೆದು ವರ್ಷವೇ ಉರುಳಿದೆ. ಈ ತೀರ್ಪನ್ನು ಬಳಸಿಕೊಂಡು, ಮಹಿಳೆಯರನ್ನು ತಡ ರಾತ್ರಿಯವರೆಗೆ ಬಲವಂತವಾಗಿ ಕೆಲಸ ಮಾಡಿಸುವ ಪರಿಪಾಠ ಆರಂಭವಾಗಿ, ಅದು ಪರೋಕ್ಷವಾಗಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವ ಅಸ್ತ್ರವಾಗಿ ಮಾರ್ಪಟ್ಟದನ್ನೂ ಈ ಅವಧಿಯಲ್ಲಿ ನಾವು ಕಂಡಿದ್ದೇವೆ. ಇದೀಗ ಬಾರ್‌ಗಳಲ್ಲಿ ಮಹಿಳೆಯರನ್ನು ಮದ್ಯ ಸರಬರಾಜು ಅಥವಾ ‘ಗ್ರಾಹಕ ಸೇವೆ’ಗೆ ನೇಮಿಸುವ ವಿಷಯದಲ್ಲಿ ಚರ್ಚೆ ನಡೆದಿದೆ.

ಈ ಹಿಂದೆ ಲೈವ್ ಬ್ಯಾಂಡ್‌ಗಳ ವಿರುದ್ಧ ನಮ್ಮ ಸರಕಾರ ಕೆಂಗಣ್ಣು ಬೀರಿತ್ತು. ಅದೇ ಸರಕಾರ ಇದೀಗ ಪರೋಕ್ಷವಾಗಿ ಮತ್ತೆ ಬಾರ್‌ಗಳಲ್ಲಿ ಮಹಿಳೆಯರನ್ನು ತುರುಕಿಸುವ ಕೆಲಸದಲ್ಲಿ ಉತ್ಸಾಹ ತೋರಿಸುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಬಾರ್, ಕ್ಲಬ್ ಮತ್ತು ಮದ್ಯದಂಗಡಿಗಳಲ್ಲಿ ಮದ್ಯ ಸರಬರಾಜಿಗೆ ಮಹಿಳೆಯರನ್ನು ನೇಮಕ ಮಾಡುವುದಕ್ಕೆ ಅನುಮತಿ ದೊರೆತಂತೆ, ಈ ನೇಮಕಾತಿಗೆ ಪೊಲೀಸ್ ಆಯುಕ್ತ ಶಂಕರ ಬಿದರಿ ಕಟ್ಟುನಿಟ್ಟಿನ ಶರತ್ತುಗಳನ್ನು ವಿಧಿಸಿದ್ದಾರೆ. ಬಾರ್ ಮಾಲಕರು ಈ ಶರತ್ತುಗಳಿಗೆ ತಮ್ಮ ಆಕ್ಷೇಪಣೆಯನ್ನೂ ವ್ಯಕ್ತಪಡಿಸಿದ್ದಾರೆ.

ಮದ್ಯ ಸರಬರಾಜಿಗೆ ಮಹಿಳೆಯರನ್ನು ನೇಮಿಸಿಕೊಳ್ಳಲು ಮದ್ಯದಂಗಡಿ ಮಾಲಕರು ಕಡ್ಡಾಯ ವಾಗಿ ಪರವಾನಿಗೆ ಪಡೆದುಕೊಳ್ಳಬೇಕು. ನೇಮಕಗೊಳ್ಳುವ ಮಹಿಳೆಯರ ಸಂಖ್ಯೆಯನ್ನು ತಿಳಿಸ ಬೇಕು. ಪಾನ ಗೃಹಗಳಲ್ಲಿ ಕೆಲಸ ಮಾಡುವ ಮಹಿಳೆಯರು ಕಡ್ಡಾಯವಾಗಿ ಸಮವಸ್ತ್ರ ಧರಿಸ ಬೇಕು. ಅಂಗ ಪ್ರದರ್ಶನಕ್ಕೆ ಅವಕಾಶ ವಿರಬಾರದು...ಇತ್ಯಾದಿ ಇತ್ಯಾದಿ ಕಠಿಣ ಶರತ್ತುಗಳನ್ನು ಪೊಲೀಸ್ ಇಲಾಖೆ ವಿಧಿಸಿದೆ. ಇದು ಶ್ಲಾಘನೀಯವೇ ಆಗಿದೆ. ಬಾರ್ ಮಾಲಕರು ಈ ಶರತ್ತು ಗಳನ್ನು ವಿರೋಧಿಸಿದ್ದರೂ, ಅದನ್ನೇನೂ ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಳ್ಳ ಬೇಕಾಗಿಲ್ಲ.

ಆದರೆ ಮುಖ್ಯವಾದ ಪ್ರಶ್ನೆ ಇನ್ನೊಂದಿದೆ. ಈ ಎಲ್ಲ ಶರತ್ತುಗಳನ್ನು ಪೂರೈಸಿದಾಕ್ಷಣ ಈ ಕೆಲಸದಲ್ಲಿ ಮಹಿಳೆ ಯರ ಶೋಷಣೆಯನ್ನು ತಡೆಯಲು ಸಾಧ್ಯವೇ? ಹಾಗೂ ಬಾರ್‌ಗಳಲ್ಲಿ ಮಹಿಳೆ ಯರನ್ನು ದುಡಿಸುವುದು ಎಷ್ಟರ ಮಟ್ಟಿಗೆ ಸರಿ?ಬಾರ್‌ಗಳಲ್ಲಿ ಮಹಿಳೆಯರನ್ನು ದುಡಿಸು ವುದರ ಹಿಂದೆ ದುರುದ್ದೇಶವಿದೆ. ಅದನ್ನು ನಾವು ಯಾವ ಕಾರಣಕ್ಕೂ ದುಡಿಮೆ ಎಂದು ಕರೆಯುವಂತಿಲ್ಲ. ಮಹಿಳೆಯ ಅಸಹಾಯಕತೆಯನ್ನು ಬಳಸಿಕೊಂಡು ಆಕೆಯನ್ನು ಅಲ್ಲಿ ಶೋಷಿಸಲಾಗುತ್ತದೆ. ಬಾರ್‌ಗಳಲ್ಲಿ ಮಹಿಳೆಯನ್ನು ನೇಮಿಸುವ ಉದ್ದೇಶ, ಗ್ರಾಹಕರನ್ನು ಆಕರ್ಷಿಸುವುದಾಗಿದೆ. '

ಅಲ್ಲಿ ಮುಖ್ಯವಾಗುವುದು ಆಕೆಯ ದುಡಿಮೆಯಲ್ಲ. ಬದಲಿಗೆ ದೈಹಿಕ ಆಕರ್ಷಣೆಯನ್ನೇ ಬಾರ್ ಮಾಲಕರು ತಮ್ಮ ಬಂಡವಾಳವನ್ನಾಗಿ ಮಾಡಿಕೊಳ್ಳುತ್ತಾರೆ. ಅಷ್ಟೇ ಅಲ್ಲ. ಪಾನಮತ್ತರಿಂದ ಆಕೆ ಯಾವ ಕ್ಷಣದಲ್ಲೂ ಕಿರುಕುಳವನ್ನು ಎದುರಿಸಲು ಸಿದ್ಧಳಿರಬೇಕಾಗುತ್ತದೆ. ಇಂತಹ ವಾತಾವರಣ ದಲ್ಲಿ ಮಹಿಳೆಯರನ್ನು ಕೆಲಸಕ್ಕೆ ನೇಮಿಸುವುದು ಪರೋಕ್ಷವಾಗಿ ಆಪತ್ತಿಗೆ ತಳ್ಳಿದಂತೆಯೇ ಸರಿ. ಶಂಕರ್ ಬಿದರಿ ಕಠಿಣ ಶರತ್ತುಗಳನ್ನೇನೋ ವಿಧಿಸಿದ್ದಾರೆ.

ಬಾರ್ ನೊಳಗೆ ಈ ಶರತ್ತುಗಳು ಗಾಳಿಗೆ ತೂರಿ ಹೋಗುವ ಎಲ್ಲ ಸಂದರ್ಭಗಳಿವೆ. ಒಂದು ವೇಳೆ ಈ ಶರತ್ತನ್ನು ಪಾಲಿಸಿದರೂ, ಅಲ್ಲಿ ಆಕೆಗೆ ಭದ್ರತೆ ಸಿಗಬೇಕೆಂದೇನೂ ಇಲ್ಲ. ಯಾಕೆಂದರೆ, ಬಾರ್‌ ನಲ್ಲಿ ಪಾನಮತ್ತರಾದ ವರಿಗೆ ವಿವೇಕ ವಿರುವುದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ, ತಮ್ಮ ಸೇವೆ ಮಾಡುವ ಮಹಿಳೆಯರಿಗೆ ಗೌರವ ನೀಡಬೇಕು ಎನ್ನುವ ವಿವೇಚನೆಯೂ ಗ್ರಾಹಕರಲ್ಲಿರುವುದಿಲ್ಲ. ಈ ಸಂದರ್ಭದಲ್ಲಿ ಮಹಿಳೆ ಶೋಷಣೆಗೊಳಗಾಗುವ ಸಂದರ್ಭ ಹೆಚ್ಚು. ಅದನ್ನು ತಪ್ಪಿಸುವುದಕ್ಕೆ ಸಾಧ್ಯವೇ ಇಲ್ಲ.

ಮಹಿಳೆಯ ದುಡಿಮೆಯ ಹಿಂದೆ ಸ್ವಾಭಿಮಾನದ ಬದುಕಿನ ಕನಸಿದೆ. ದುಡಿಮೆ ಆಕೆಯಲ್ಲಿ ಆತ್ಮ ವಿಶ್ವಾಸವನ್ನು ತುಂಬಬೇಕು. ಆಕೆಯನ್ನು ಸಮಾಜ ಹಾಗೂ ಕುಟುಂಬದೊಳಗಿನ ಶೋಷಣೆ ಯಿಂದ ಪಾರು ಮಾಡಬೇಕು. ಆದರೆ ಬಾರ್‌ನ ದುಡಿಮೆ ಆಕೆಯಲ್ಲಿ ಸ್ವಾಭಿಮಾನವನ್ನಾಗಲಿ, ಆತ್ಮ ವಿಶ್ವಾಸವನ್ನಾಗಲಿ ತುಂಬಲಾರದು. ಬದಲಿಗೆ, ಪುರುಷರಿಂದ ಇನ್ನಷ್ಟು ಶೋಷಣೆಯನ್ನು ಆಕೆ ಎದುರಿಸಬೇಕಾಗುತ್ತದೆ. ಜೀವ ಬೆದರಿಕೆಯ ನಡುವೆ ಆಕೆ ಕೆಲಸ ಮಾಡ ಬೇಕಾಗುತ್ತದೆ. ಇದನ್ನು ನಾವು ದುಡಿಮೆ ಎಂದು ಕರೆಯಲು ಸಾಧ್ಯವೇ?

ಇಂತಹ ದುಡಿಮೆ ಆಕೆಯನ್ನು ಇನ್ನಷ್ಟು ದುರ್ಬಲನ್ನಾಗಿಸುತ್ತದೆ. ಪೊಲೀಸ್ ಇಲಾಖೆ ವಿಧಿಸುವ ಶರತ್ತುಗಳನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳಬೇಕು ಎನ್ನುವುದನ್ನು ಬಾರ್ ಮಾಲಕರಿಗೆ ಪ್ರತ್ಯೇಕ ವಾಗಿ ಕಲಿಸಿ ಕೊಡಬೇಕಾಗಿಲ್ಲ. ಹೊಟ್ಟೆಪಾಡು, ಹಸಿವು ಎಂಬಿತ್ಯಾದಿಗಳ ಮರೆಯಲ್ಲಿ ಬಾರ್‌ಗಳಲ್ಲಿ ಮಹಿಳೆಯ ಮೇಲೆ ನಡೆಯುವ ಶೋಷಣೆಯನ್ನು ಪೋಷಿಸುವುದು ಸಲ್ಲ. ಅದು ಸಮಾಜವನ್ನು ಇನ್ನಷ್ಟು ಕೆಡುಕಿನೆಡೆಗೆ ಮುನ್ನಡೆಸುತ್ತದೆ.

ಈ ಹಿನ್ನೆಲೆಯಲ್ಲಿ ‘ಸೇವೆ’ಯ ಹೆಸರಿನಲ್ಲಿ ಬಾರ್‌ನಲ್ಲಿ ಮಹಿಳೆಯ ಮೇಲೆ ನಡೆಯುವ ಶೋಷಣೆಗೆ ರಾಜ್ಯ ಮತ್ತು ಕೇಂದ್ರ ಸರಕಾರ ಯಾವ ಕಾರಣಕ್ಕೂ ಅವಕಾಶ ನೀಡ ಬಾರದು. ಬಾರ್‌ಗಳಲ್ಲಿ ಮಹಿಳೆ ಯರು ದುಡಿಯುವುದಕ್ಕೆ ನಿಷೇಧ ಹೇರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸುಪ್ರೀಂಕೋರ್ಟ್‌ನ ತೀರ್ಪಿನ ವಿರುದ್ಧ ಕಾರ್ಯಪ್ರವೃತ್ತರಾಗಬೇಕು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾಭಾ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-07-29 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............
»ನ್ಯಾ ಸುಧೀಂದ್ರರಾವ್ : ಬಂಗಾರಪೇಟೆಯ ಸ್ಟಾಂಪ್ ವೆಂಡರ್ ಮಗ ಇಂದಿಗೂ ಮನೆ ಸಾಲ ಕಟ್ಟುತ್ತಿರುವ ನ್ಯಾಯಾಧೀಶ
»ಸೈಟು ಪ್ರಶಿಸುವವರ ಕಣ್ಣಿಗೆ ಸಂಘದ ಸಾಮಾಜಿಕ ಬದ್ಧತೆಯೇಕೆ ಕಾಣುವುದಿಲ್ಲ?
»ಕನ್ನಡಿಗರ ಕಣ್ಮಣಿಯಾಗುತ್ತಿರುವ ನಮ್ಮ ಸುವರ್ಣ ವಾರ್ತಾ ವಾಹಿನಿ 24X7
»ಆ ಪಟ್ಟಿಯಲ್ಲಿ ಈ ಪದ್ಯಾಣರ ಹೆಸರಿರಬೇಕಿತ್ತು...!
»ಇದು ನಮ್ಮ ಗ್ರ್ಯಾಂಡ್ ಪ್ರಿಕ್ಸ್: ರಥ V/S ಫಾರ್ಮುಲಾ 1

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri