ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಹೋರಾಟಕ್ಕೆ ಸಿದ್ಧ ಲಾಲೂ ಯಾದವ್

ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾದಳದ ಅಧ್ಯಕ್ಷ ಲಾಲೂ ಪ್ರಸಾದ ಯಾದವ್ ಮತ್ತೆ ಹೋರಾಟಕ್ಕೆ ತೊಡೆ ತಟ್ಟಿ ಸಿದ್ಧವಾಗುತ್ತಿದ್ದಾರೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ, ಅವರ ಪಕ್ಷವಾದ ರಾಷ್ಟ್ರೀಯ ಜನತಾದಳಕ್ಕೆ ಅವರೇ ನಾಯಕರು, ಪ್ರಣಾಳಿಕೆ ಎಲ್ಲ.

ಇತರ ಪಕ್ಷಗಳ ಚುನಾವಣೆ ಸಿದ್ಧತೆಯ ಆರಂಭಕ್ಕೆ ಮುಂಚೆಯೇ, ಲಾಲೂ ಪ್ರಸಾದ ಯಾದವ್, ತಮ್ಮ ಒಂದು ಕಾಲದ ಮಿತ್ರ, ಅನಂತರದ ರಾಜಕೀಯ ವೈರಿ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ರಾಮ್ ವಿಲಾಸ ಪಾಸ್ವಾನ್‌ರ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಚುನಾವಣೆ ಪ್ರಣಾಳಿಕೆ ಇನ್ನೂ ಸಿದ್ಧವಾಗಿಲ್ಲ. ಆದರೆ ಮುಂದಿನ ಚುನಾವಣೆಯಲ್ಲಿ ತಮ್ಮ ಕೂಟದ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ನಾನೇ ಎಂದು ಪ್ರಕಟಿಸಿದ್ದಾಗಿದೆ. ಅದನ್ನು ಪ್ರಶ್ನಿಸುವವರು ಅವರ ಪಕ್ಷದಲ್ಲೂ ಇಲ್ಲ, ಹೊರಗಡೆಯೂ ಇಲ್ಲ.

ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲೂ ಗೊಂದಲವೇನೂ ಇಲ್ಲ. ಲಾಲೂ ಪ್ರಸಾದ ಯಾದವ್ ಅವರೇ ಎಲ್ಲ ಅಭ್ಯರ್ಥಿಗಳನ್ನು ಆರಿಸುವುದು. ಇದುವರೆಗೆ ಪಕ್ಷದಲ್ಲಿ, ವಿಧಾನ ಮಂಡಲದಲ್ಲಿ ಪ್ರಮುಖವಾದ ಕುರ್ಚಿಯಲ್ಲಿ ಭದ್ರವಾಗಿ ಕೂತಿದ್ದ ಲಾಲೂ ಪತ್ನಿ ರಾಬ್ಡೀದೇವಿ ಪ್ರಾಯಶಃ ಅವರ ವಿಚಾರವನ್ನೇ ಬದಲಾಯಿಸಬೇಕಾಗಬಹುದು.

ಲಾಲೂ ಪ್ರಸಾದ ಯಾದವ್ ಅವರಿಗೀಗ ೬೩ ವರ್ಷ. ಸ್ವಾತಂತ್ರ್ಯ ಬಂದ ವರ್ಷದಲ್ಲಿ ಜನ್ಮತಾಳಿದ ಲಾಲೂ ಅಪ್ಪಟ ದೇಸೀ ರಾಜಕಾರಣಿಯಂತೆ ವರ್ತಿಸಿದರೂ, ಅವರು ಉನ್ನತ ಮಟ್ಟದ ವ್ಯಾಸಂಗ ಲಾಭ ಪಡೆದವರೇ, ಪಟನಾ ವಿಶ್ವವಿದ್ಯಾಲಯದಲ್ಲಿ ಎಂ.ಎ., ಎಲ್‌ಎಲ್‌ಬಿ ಪದವಿ ಗಳಿಸಿ, ಸಾರ್ವಜನಿಕ ಜೀವನಕ್ಕೆ ಧುಮುಕಿದವರೇ.

ವಿದ್ಯಾರ್ಥಿ ದೆಸೆಯಲ್ಲೇ ಸಂಘಟನೆಯಲ್ಲಿ ಆಸಕ್ತಿ. ಅದರಲ್ಲೂ ಸಾಮಾಜಿಕ ನ್ಯಾಯದ ವಿತರಣೆಯನ್ನು ಪ್ರತಿಪಾದಿಸುತ್ತಿದ್ದ ಜಯಪ್ರಕಾಶ ನಾರಾಯಣ, ರಾಮಮನೋಹರ ಲೋಹಿಯಾ, ಕರ್ಪೂರಿ ಠಾಕೂರ್ ಅವರೆಲ್ಲರ ಅಭಿಮಾನಿ. ತುರ್ತು ಪರಿಸ್ಥಿತಿಯ ಕಾಲದಲ್ಲಿ ಹೇಳಿಕೊಳ್ಳುವಂತಹ ಹೋರಾಟದ ಪಾತ್ರವಿಲ್ಲ ದಿದ್ದರೂ, ಜೈಲಿನ ದರ್ಶನವಾಗಿತ್ತು.

ಅದೇ ಒಂದು ದೊಡ್ಡ ಅರ್ಹತೆಯ ರೂಪವನ್ನು ತಾಳಿ ೨೯ನೇ ವಯಸ್ಸಿಗೇ ಲೋಕಸಭೆಯ ಸದಸ್ಯತ್ವ ವನ್ನೂ ಗಳಿಸಿಕೊಟ್ಟಿತ್ತು. ಆರಂಭದಲ್ಲಿ ಲಾಲೂ ಪ್ರಸಾದ ಯಾದವ್ ಅವರದ್ದು, ಕಾಂಗ್ರೆಸ್ ವಿರೋಧಿ ರಾಜಕೀಯವೇ. ಆದರೆ ಉತ್ತರ ಭಾರತದ ರಾಜ್ಯಗಳಲ್ಲಿ ಕಾಂಗ್ರೆಸ್ ದುರ್ಬಲವಾಗಿ, ಅದರ ಸ್ಥಾನವ ನ್ನು ಭಾರತೀಯ ಜನತಾಪಕ್ಷ ಆಕ್ರಮಿಸಲು ಪ್ರಯತ್ನಿಸಿದಾಗ ಲಾಲೂ ಕಾಂಗ್ರೆಸ್‌ನ ಪ್ರಧಾನ ಪ್ರಚಾರ ಕರಾಗಿಯೇ ಕೆಲಸ ಮಾಡಿದ್ದೂ ನಿಜ. ಅದರಿಂದ ಏನೂ ಪ್ರಯೋಜನವಾಗಲಿಲ್ಲ ಎನ್ನುವುದು ಬೇರೆ ಮಾತು.

ಬಿಹಾರದ ಹೊರಗಿನ ಜನರಿಗೆ ಲಾಲೂ ಪ್ರಸಾದ ಯಾದವ್‌ರ ಪರಿಚಯವಾಗಿದ್ದು, ಅವರು ಮುಖ್ಯ ಮಂತ್ರಿಯಾದಾಗಲೇ ಅದರಲ್ಲೂ ಒಂದು ರಾಜ್ಯದ ಮುಖ್ಯಮಂತ್ರಿ ಎಮ್ಮೆಯ ಮೇಲೆ ಸವಾರಿ ಮಾಡು ವ ಚಿತ್ರ ಬೇರೆ ಯಾವ ರಾಜ್ಯದಿಂದಲೂ ಹೊರಗೆ ಬರುವುದು ಅಸಾಧ್ಯವೇನೋ.

ಎಮ್ಮೆಯ ಮೇಲೆ ಕೂತ ಲಾಲೂ ಒಂದು ಕಾಲದಲ್ಲಿ ಸಮಗ್ರ ಬಿಹಾರದ ಬಡವರು, ಹಿಂದುಳಿದವರ ನೈಜ ಹಾಗೂ ಸಹಜ ಪ್ರತಿನಿಧಿಯಂತೆಯೇ ಕಾಣಿಸಿದರು. ‘ನಾವೇನೂ ಬಡಜನರಿಗೆ, ಹಿಂದುಳಿದ ವರಿಗೆ ಐಶ್ವರ್ಯವನ್ನು ತಂದು ಕೊಟ್ಟಿಲ್ಲ. ಆದರೆ ಅನ್ಯಾಯದ ವಿರುದ್ಧ ಪ್ರತಿಭಟಿಸಲು ಅಗತ್ಯವಾದ ಜ್ಞಾನ ಹಾಗೂ ಧ್ವನಿಯನ್ನು ಒದಗಿಸಿದ್ದೀನಿ‘ ಎನ್ನುತ್ತಾರೆ ಅವರು.

ಲಾಲೂ ಅವರ ಮಾತಿನ ಶೈಲಿ (ಅಂತರಂಗ-ಬಹಿರಂಗ) ವಿಶಿಷ್ಟವಾದದ್ದು, ಕಷ್ಟ ಕಾಲದಲ್ಲಿ, ಸಂತೋ ಷದ ಸಮಯದಲ್ಲಿ ಅವರ ಮಾತಿನ ಮೋಡಿ ಜನರ ಮನಸ್ಸನ್ನು ಸೆರೆ ಹಿಡಿದಿಡುವುದು ಖಂಡಿತ.

ವೇಷ ಭೂಷಣದಲ್ಲೂ ಅಷ್ಟೇ. ಅಚ್ಚ ಭಾರತೀಯ-ಬಿಹಾರಿ ಶೈಲಿ . ಕಡ್ಡಿ ಮುರಿದರೆ ತುಂಡಾಗಿ ಎರಡಾ ಗುವಂತಹ ಪದಗಳ ಬಳಕೆ. ಅವರ ಪ್ರಕಟಿತ ಗುರಿಯೂ ಸ್ಪಷ್ಟ. ಅವರ ಸಾಧನೆಗೆ ಅನುಸರಿಸಿದ ಮಾರ್ಗದ ವಿಚಾರದಲ್ಲಿ ಭಿನ್ನಾಭಿಪ್ರಾಯವಿರಬಹುದು. ಬಿಹಾರದ ಆಡಳಿತ ಈಗ ಪ್ರತಿಶತ ೭೫ರಷ್ಟು ಹಿಂದುಳಿದ, ದಲಿತ, ಮುಸ್ಲಿಮ್ ಸಮಾಜಗಳ ಪ್ರತಿನಿಧಿಗಳಿಂದಲೇ ನಡೆಯುತ್ತಿದೆ ಎನ್ನುವುದು ಅವರ ಹೆಮ್ಮೆ. ಮಂಡಲ್- ಮಂದಿರದ ವಿವಾದದ ಕಾಲದಲ್ಲಿ ಸಮಷ್ಟಿಪುರದ ಗಂಗಾ ತೀರದಲ್ಲಿ ಲಾಲ್‌ಕೃಷ್ಣ ಅಡ್ವಾಣಿಯವರ ರಾಮರಥ ಯಾತ್ರೆಯನ್ನೇ ಹಿಡಿದು ನಿಲ್ಲಿಸಿದ್ದನ್ನು ಅವರು ಒಂದು ದೊಡ್ಡ ಸಾಧನೆ ಎಂದೇ ಭಾವಿಸುತ್ತಾರೆ.

ಅದರ ಪರಿಣಾಮವಾಗಿ ವಿ.ಪಿ. ಸಿಂಗ್‌ರ ಸರ್ಕಾರದ ಪತನವಾಗಿದ್ದರೆ, ಅದರ ಜವಾಬ್ದಾರಿಯನ್ನು ಬೇರೆಯವರು ಹೊರಬೇಕಂತೆ. ಲಾಲೂ ಯಾದವ್ ೧೯೬೦-೭೦ರ ಸಮಾಜವಾದೀ ಆಂದೋಲನ, ಚಿಂತನೆಗಳಿಂದಲೇ ರೂಪಗೊಂಡ ಜನರ ಮಧ್ಯೆ ಕೆಲಸ ಮಾಡಿಯೇ ಮೇಲೆ ಬಂದ ರಾಜಕಾರಣಿ.

ಆದರೆ ಅಧಿಕಾರದ ಸ್ಥಾನ-ಮಾನ ಸಿಕ್ಕಿದ ಅನಂತರ ಅವರು ಪ್ರಚಾರಗಳಿಸಿದ್ದು ಭ್ರಷ್ಟಾಚಾರದ ಆರೋಪಗಳ ತನಿಖೆಯ ಮೂಲಕ. ಸಾವಿರ ಕೋಟಿ ರೂಪಾಯಿಗಳ ದನದ ಮೇವಿನ ಹಂಚಿಕೆಯ ಭ್ರಷ್ಟಾಚಾರದ ತನಿಖೆಯ ಸಂಬಂಧದಲ್ಲಿ ಜೈಲಿಗೂ ಹೋಗಬೇಕಾಯಿತು. ಅವರ ಪರವಾಗಿ ಪತ್ನಿ ರಾಬಡೀ ದೇವಿ ಅವರೇ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದರು. ಅಷ್ಟೇ ಅಲ್ಲ ಬಿಹಾರದಲ್ಲಿ ಒಂದು ವಿಧಾನಸಭೆ ಚುನಾವಣೆಯನ್ನೂ ಗೆದ್ದರು.

ರಾಜಕೀಯದಲ್ಲಿ ಜನತಾದಳದ ಅಧ್ಯಕ್ಷರಾಗಿದ್ದ ಲಾಲೂ, ಆ ಪಕ್ಷವನ್ನೇ ಒಡೆದು, ತಮ್ಮದೇ ಆದ ರಾಷ್ಟ್ರೀಯ ಜನತಾ ದಳವನ್ನು ಸ್ಥಾಪಿಸಿದರು. ಅದು ಪ್ರಾದೇಶಿಕ ಮಟ್ಟದ ಸ್ಥಿತಿಯಲ್ಲೇ ಉಳಿದು ಬಿಟ್ಟಿತು.

ಒಮ್ಮೆ ಲಾಲೂ ಪ್ರಸಾದ ಯಾದವ್ ಲೋಕಸಭೆ ಚುನಾವಣೆಯಲ್ಲಿ ಶರದ್ ಯಾದವ್ ವಿರುದ್ಧ ಸೋತಿ ದ್ದೂ ಉಂಟು. ಮತ್ತೆ ಗೆದ್ದಿದ್ದೂ ಉಂಟು. ರೈಲ್ವೆ ಮಂತ್ರಿಯಾಗಿ ಲಾಲೂ ಪ್ರಸಾದ ಯಾದವ್, ಲಾಭ ಗಳಿಕೆಯಲ್ಲಿ ದೊಡ್ಡ ರೀತಿಯ ಜಾದೂ ಮಾಡಿದ್ದು ಆಡಳಿತ ತಜ್ಞರ ಗಮನವನ್ನು ಸೆಳೆದಿತ್ತು.

ಅಹಮದಾಬಾದ್‌ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳೂ ಅದರಲ್ಲಿ ಆಸಕ್ತಿಯನ್ನು ತೋರಿಸಿದ್ದರು. ಆದರೆ ಇನ್ನೂ ಆ ಲಾಭದ ರಹಸ್ಯ ಜನರಿಗೆ ಅರ್ಥವಾಗುವಂತೆ ಬಯ ಲಾಗಿಲ್ಲ.

ಈಗಿನ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ಒಂದು ಕಾಲದಲ್ಲಿ ಲಾಲೂ ಪ್ರಸಾದ ಯಾದವ್‌ ರ ಸಂಗಾತಿಯೇ. ಆದರೆ ಕಾರಣಾಂತರಗಳಿಂದ ಜಾರ್ಜ್ ಫರ್ನಾಂಡಿಸ್ ಹಾಗೂ ನಿತೀಶ್ ಕುಮಾರ್ ಕೈಜೋಡಿಸಿ,ಬಿಜೆಪಿಯ ಜತೆ ಸೇರಿ ಲಾಲೂ ಸರ್ಕಾರವೇ ಬೀಳುವಂತೆ ಮಾಡಿದ್ದೂ ಆಯಿತು.

ಸುಮಾರು ೩೫ ವರ್ಷಗಳ ದೀರ್ಘಕಾಲದ ಸಕ್ರಿಯ ರಾಜಕೀಯದಲ್ಲಿ ಲಾಲೂ ಪ್ರಸಾದ ಯಾದವ್ ಅಧಿಕಾರದಲ್ಲಿರಲಿ, ಇಲ್ಲದೇ ಇರಲಿ, ಪ್ರಚಾರ ಮಾಧ್ಯಮದ ಗಮನದಿಂದ ದೂರವಾಗಿಲ್ಲ. ಅತ್ಯಂತ ಅದ್ಧೂರಿಯಾಗಿ ನಡೆಸಿದ ಮಗಳ ಮದುವೆಯ ವಿಚಾರವೇ ಆಗಿರಬಹುದು, ಮಗನಿಗೆ ಕ್ರಿಕೆಟ್ ಟೆಸ್ಟ್ ತಂಡದಲ್ಲಿ ಅವಕಾಶ ಸಿಗದೇ ಇರುವ ಘಟನೆಯೇ ಆಗಿರಬಹುದು, ಲಾಲೂ ವಿವಾದವನ್ನು ಸೃಷ್ಟಿಸದೇ ಬಿಡುವುದಿಲ್ಲ.

ಈಗ ಲೋಕಸಭೆಯಲ್ಲಿ ಅವರ ಪಕ್ಷದ ಸದಸ್ಯರ ಸಂಖ್ಯೆ ಬೆರಳೆಣಿಕೆಗೆ ನಿಲುಕುವಷ್ಟು ಕುಗ್ಗಿದ್ದರೂ ಎಂ.ಪಿ.ಗಳ ವೇತನ- ಭತ್ಯದ ಹೆಚ್ಚಳದ ಆಂದೋಲನದಲ್ಲಿ ಬಹುದೊಡ್ಡ ಪಾತ್ರವನ್ನೇ ನಿರ್ವಹಿಸಿ, ಎಲ್ಲ ಪಕ್ಷಗಳ ಎಂ.ಪಿ.ಗಳ ಕೃತಜ್ಞತೆಗೂ ಪಾತ್ರರಾಗಿದ್ದಾರೆ.

ಲೋಕಸಭೆಯ ಅಧಿವೇಶನ ಮುಗಿದ ಕೂಡಲೇ ಲಾಲೂಪ್ರಸಾದ ಯಾದವ್ ಬಿಹಾರದ ಹೋರಾಟ ದಲ್ಲಿ ಧುಮುಕುತ್ತಾರೆ. ಬಿಹಾರದ ಚುನಾವಣೆ ಪ್ರಚಾರ ಸಮರದಲ್ಲಿ ಲಾಲೂ ಪ್ರಸಾದ ಯಾದವ್ ಉರುಳಿಸಲಿರುವ ವಿಶಿಷ್ಟ ಘೋಷಣೆಗಳ ಹಾಗೂ ಒಂದು ಸಾಲಿನ ವಾಕ್ಯಗಳ ಮನರಂಜನೆ ಇನ್ನು ಆರಂಭ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕನ್ನಡಪ್ರಭ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-09-01 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri