ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಗಣಿ ಅಕ್ರಮದಲ್ಲಿ ಕೇಂದ್ರ, ರಾಜ್ಯ ಸಚಿವರು ಶಾಮೀಲು; ಶೀಘ್ರದಲ್ಲೇ ಇನ್ನೋರ್ವ ಉಪಲೋಕಾಯುಕ್ತರ ನೇಮಕ : ಕಾಂಗ್ರೆಸ್ಸಿಗರ ಬಂಡವಾಳ ಬಯಲು ಮಾಡ್ತೇನೆ: ಸಿಎಂ ಶಪಥ

ಕಾಂಗ್ರೆಸ್ಸಿಗರ ಬಂಡವಾಳ ಬಯಲು ಮಾಡ್ತೇನೆ: ಸಿಎಂ ಶಪಥ  ಗಣಿ ಅಕ್ರಮದಲ್ಲಿ ಕೇಂದ್ರ, ರಾಜ್ಯ ಸಚಿವರು ಶಾಮೀಲು

» ಅಕ್ರಮ ಗಣಿಗಾರಿಕೆ ಯಲ್ಲಿ ತೊಡಗಿರುವ ಪ್ರಭಾವಿ  ನಾಯಕರನ್ನು ಬೆತ್ತಲೆಗೊಳಿಸದಿದ್ದರೆ ತಾನು ಯಡಿಯೂರಪ್ಪನೇ ಅಲ್ಲ.

» ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ ನಡೆದಿರುವ ಅಕ್ರಮ ‘ಗಣಿ’ಯ ತನಿಖೆಯನ್ನು ಲೋಕಾಯುಕ್ತರಿಂದ ನಡೆಸಿ, ಅದರ ಸಮಗ್ರ ವರದಿಯನ್ನು ಬಹಿರಂಗಪಡಿಸುತ್ತೇನೆ. ಯಾರೆಲ್ಲ ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಜನರ ಮುಂದಿಡುತ್ತೇನೆ.

 » ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರನ್ನು ಬಂಧಿಸಿಡಲು ನಮ್ಮಲ್ಲಿರುವ ಜೈಲುಗಳು ಸಾಕಾಗುವುದಿಲ್ಲ. ಇನ್ನಷ್ಟು ಜೈಲುಗಳನ್ನು ಸ್ಥಾಪಿಸುವ ಅನಿವಾರ್ಯವಿದೆ

ಬೆಂಗಳೂರು : ಅಕ್ರಮ ಗಣಿಗಾರಿಕೆ ಕುರಿತು ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಪದೇ ಪದೇ ತಮ್ಮ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಕ್ರಮ ಗಣಿಗಾರಿಕೆಗೆ ಕೇಂದ್ರ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಅದರಲ್ಲಿ ಕೇಂದ್ರ ಸಚಿವರು ಶಾಮೀಲಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದರು.

ಅಕ್ರಮ ಗಣಿಗಾರಿಕೆ ತಡೆಗೆ ಕಾನೂನು ರಚಿಸುವ ಬದಲಿಗೆ ಕೇಂದ್ರ ಸರ್ಕಾರ ಮೌನವಾಗಿರುವುದು ಏಕೆ? ಕುದುರೆಮುಖ ಕಬ್ಬಿಣ ಅದಿರು ಕಂಪೆನಿ ಹಾಗೂ ಭದ್ರಾವತಿಯ ವಿಎಸ್‌ಐಎಲ್‌ ಕಂಪೆನಿ ಗಳಿಗೆ ಗಣಿ ಗುತ್ತಿಗೆ ಮಂಜೂರಾತಿಗೆ ಹಿಂದೆ ಮುಂದೆ ನೋಡುವ ಕೇಂದ್ರ ಸರ್ಕಾರ, ಖಾಸಗಿ ಕಂಪೆನಿ ಗಳಿಗೆ ಗಣಿ ಗುತ್ತಿಗೆಗೆ ಅನುಮತಿ ನೀಡುತ್ತಿರುವುದು ಏಕೆ? ಸರ್ಕಾರಿ ಸ್ವಾಮ್ಯದ ಕಂಪೆನಿ ಗಳು 'ಕೈ ಬಿಸಿ' ಮಾಡಲಿಲ್ಲ ಎಂಬ ಕಾರಣಕ್ಕಾಗಿ ಅವುಗಳ ಪ್ರಸ್ತಾವನೆ ತಿರಸ್ಕರಿಸಲಾಗುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೂ ಗಣಿಗಾರಿಕೆಗೆ ಲೈಸೆನ್ಸ್‌ ನೀಡಲಾಗುತ್ತಿದೆ, ಗುತ್ತಿಗೆ ಅವಧಿಯನ್ನು ನವೀಕರಣ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡರಾದ ವಿ.ಎಸ್‌. ಉಗ್ರಪ್ಪ ಹಾಗೂ ಕೊಂಡಯ್ಯ ಅವರು ಆರೋಪಿಸಿದ್ದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಜತೆಗೆ ತಮ್ಮ ಸರ್ಕಾರದ ಅವಧಿಯಲ್ಲಿ 'ವ್ಯಾಲ್ಯೂ ಅಡಿಷನ್‌' ದೃಷ್ಟಿಯಿಂದ ಸರ್ಕಾರಿ ಸ್ವಾಮ್ಯದ ಹಟ್ಟಿ ಮೈನ್ಸ್‌ ಹಾಗೂ ಸುಶೀಲಮ್ಮ ಅಂಡ್‌ ಕಂಪೆನಿಗೆ ಗಣಿಗಾರಿಕೆಗೆ ಲೈಸೆನ್ಸ್‌ ನೀಡಿರುವುದು ನಿಜ. ಜತೆಗೆ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ ಒಪ್ಪಂದದಂತೆ ಮೌಲ್ಯವರ್ಧಿತ ಸಿದ್ಧ ವಸ್ತುಗಳ ಉತ್ಪಾದನೆಗೆ ಅವಕಾಶವಾಗುವಂತೆ ಕೈಗಾರಿಕೆಗಳನ್ನು ಸ್ಥಾಪಿ ಸಲು ಮುಂದೆ ಬಂದಿರುವ ಹಲವು ಕಂಪೆನಿಗಳಿಗೆ ಗಣಿಗಾರಿಕೆಗೆ ಶಿಫಾರಸು ಮಾಡಲಾಗಿದೆ. ಇದನ್ನು ಹೊರತುಪಡಿಸಿದರೆ ನಮ್ಮ ಸರ್ಕಾರ ಹೊಸ ಲೈಸೆನ್ಸ್‌ ನೀಡಿಲ್ಲ . ಕೆಲವು ಕಂಪೆನಿಗಳ ಲೈಸನ್ಸ್‌ ನವೀಕರಿಸಿದ್ದೇವೆ. ಹಿಂದಿನ ಸರ್ಕಾರಗಳು ಲೈಸನ್ಸ್‌ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು ಕೇಂದ್ರದ ಅನುಮತಿ ಬಂದ ನಂತರ ಅಧಿಸೂಚನೆ ಹೊರಡಿಸುವುದು ಅನಿವಾರ್ಯ ಎಂದು ಸಮರ್ಥಿಸಿಕೊಂಡರು.

ಗಣಿಗಾರಿಕೆಗೆ ನಮ್ಮ ಸರ್ಕಾರ ವಿರೋಧಿಯಲ್ಲ , ಸಂಪೂರ್ಣವಾಗಿ ಗಣಿಗಾರಿಕೆ ನಿಲ್ಲಿಸಬೇಕೆಂಬುದು ನಮ್ಮ ನಿಲುವಲ್ಲ . ಅದಿರು ರಫಿ¤ಗೆ ನಮ್ಮ ವಿರೋಧವಿದೆ. ರಾಜ್ಯದಲ್ಲಿ ಒಂದು ವರ್ಷ ಕಾಲ ಕಬ್ಬಿಣದ ಅದಿರು ರಫ್ತು ನಿಷೇಧಿಸಲು ಅನುಮತಿ ಕೊಡಿ, ನಂತರ ಬೇರೆ ರಾಜ್ಯಕ್ಕೆ ಅನ್ವಯಿಸಿ ಎಂದು ಪ್ರಧಾನಿಗೆ ಮನವಿ ಮಾಡುವೆ. ಕಾನೂನು ಬಾಹಿರವಾಗಿ ಅದಿರು ರಫ್ತು ಮಾಡೊಕೆ ಬಿಡುವುದಿಲ್ಲ . ಸುಪ್ರೀಂಕೋರ್ಟ್‌ಗೆ ಹೋಗಲು ಸಿದ್ಧನಿದ್ದೇನೆ. ಆದರೆ, ಜೆಡಿಎಸ್‌- ಕಾಂಗ್ರೆಸ್‌ ಪಕ್ಷಗಳು ನನ್ನ ಕೈಕಟ್ಟುವುದರಲ್ಲಿ ಅರ್ಥವಿಲ್ಲ ಎಂದು ದೂರಿದರು.

ಭದ್ರಾವತಿಯ ವಿಎಸ್‌ಐಎಲ್‌ ಕಂಪೆನಿಯಲ್ಲಿ ಒಂದು ಕಾಲದಲ್ಲಿ 16 ಸಾವಿರ ಮಂದಿ ನೌಕರ ರಿದ್ದರು, ಈಗ 1,600 ಮಂದಿ ಮಾತ್ರ ಇದ್ದಾರೆ. ಕುದುರೆಮುಖ ಕಬ್ಬಿಣದ ಅದಿರು ಕಂಪೆನಿಗೆ ಅನುಮತಿ ಕೊಡಬೇಕೆಂದು ನಾನು ಶಿಫಾರಸು ಮಾಡಿದ ಮೇಲೂ ಗಣಿಗಾರಿಕೆ ಪ್ರಭಾವಕ್ಕೆ ಬಿದ್ದು 'ಕೈ ಬಿಸಿ' ಮಾಡಲಿಲ್ಲ ಎಂಬ ಕಾರಣಕ್ಕೆ ಕೇಂದ್ರದವರು ಅನುಮತಿ ಕೊಡಲಿಲ್ಲ . ಯಾರು ಕೈಬಿಸಿ ಮಾಡುತ್ತಾರೋ ಅಂಥವರಿಗೆ ಕೇಂದ್ರದವರು ಅನುಮತಿ ಕೊಡುತ್ತಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗಾœಳಿ ನಡೆಸಿದರು.

ಗಣಿಗಾರಿಕೆ ನಡೆಸುವವರು ಬೆವರು ಸುರಿಸುತ್ತಿಲ್ಲ , ಟನ್‌ ಅದಿರನ್ನು 4 ಸಾವಿರ ರೂ.ಗೆ ಮಾರಾಟ ಮಾಡಿ, ಸರ್ಕಾರಕ್ಕೆ 150 ರಿಂದ 200 ರೂ. ಕೊಡುತ್ತಾರೆ. ಇಷ್ಟೆಲ್ಲಾ ಕೇಂದ್ರ ಸರ್ಕಾರಕ್ಕೆ ಗೊತ್ತಿ ದ್ದರೂ ಕೈಕಟ್ಟಿ ಕುಳಿತಿರುವುದು ಏಕೆ? ರಫ್ತು ಬೇಕು ಅನ್ನುವ ಉದ್ದೇಶವಾದರೂ ಏನು? ಕಾನೂನು ಕ್ರಮ ಏಕೆ ಕೈಗೊಳ್ಳುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ರಾತ್ರಿ ಒತ್ತಡ, ಬೆಳಗ್ಗೆ ಟೀಕೆ

ಅಕ್ರಮ ಗಣಿಗಾರಿಕೆಯಲ್ಲಿ ತಮ್ಮ ಹಾಗೂ ತಮ್ಮ ಮಕ್ಕಳನ್ನು ರಕ್ಷಿಸಲು ಮುಂದಾಗಿರುವ ಕೇಂದ್ರದ ಸಚಿವರು ಮತ್ತು ರಾಜ್ಯದ ಮಾಜಿ ಸಚಿವರು, ಹಗರಣ ಬಹಿರಂಗವಾಗದಂತೆ ನನ್ನ ಮೇಲೆ ಒತ್ತಡ ತರುತ್ತಿದ್ದಾರೆ. ರಾತ್ರಿ ಒತ್ತಡ ತರುತ್ತಿದ್ದರೆ, ಬೆಳಗ್ಗೆ ಬಹಿರಂಗವಾಗಿ ಸರಕಾರವನ್ನು ಟೀಕಿಸುತ್ತಿದ್ದಾರೆ ಎಂದ ಯಡಿಯೂರಪ್ಪ, ಇನ್ನು ತಾನು ಈ ನಾಯಕರನ್ನು ಸುಮ್ಮನೆಬಿಡುವುದಿಲ್ಲ. ಇವರ ಜನ್ಮವನ್ನು ಜಾಲಾಡುತ್ತೇನೆ ಎಂದು ಎಚ್ಚರಿಸಿದರು.

ಎರಡು ಕಂಪೆನಿಗಳಿಗೆ ಅನುಮತಿ

ತಾನು ಅಧಿಕಾರಕ್ಕೆ ಬಂದನಂತರ ಯಾವುದೇ ಗಣಿಗಾರಿಕೆಗೆ ಅನುಮತಿ ನೀಡಿಲ್ಲ ಎಂದು ಪುನರುಚ್ಚರಿಸಿದ ಯಡಿಯೂರಪ್ಪ, ತನ್ನ ಅಧಿಕಾರಾವಧಿಯಲ್ಲಿ ಮೌಲ್ಯವರ್ಧಿತ ಆದಾಯ ಹೆಚ್ಚಿಸುವ ಉದ್ದೇಶಕ್ಕಾಗಿ ಸರಕಾರಿ ಸ್ವಾಮ್ಯದ ಹಟಿ ್ಟಗೋಲ್ಡ್ ಮೈನ್ ಮತ್ತು ಖಾಸಗಿ ಸ್ವಾಮ್ಯದ ಸುಶೀಲಮ್ಮ ಆ್ಯಂಡ್ ಕಂಪೆನಿ ಎಂಬ ಎರಡು ಸಂಸ್ಥೆಗಳಿಗೆ ಗಣಿಗಾರಿಕೆಯ ಗುತ್ತಿಗೆಗೆ ಅನುಮತಿ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಕೈಗಾರಿಕೆಗಳಿಗಾಗಿ ಕೇಂದ್ರಕ್ಕೆ ಶಿಫಾರಸು:

ಹಲವು ವರ್ಷಗಳ ಕಾಲ ರಾಜ್ಯವನ್ನಾಳಿದ ಕಾಂಗ್ರೆಸ್, ಮಾಡಿದ ಪಾಪ ಕೂಸನ್ನು ತನ್ನ ಮೇಲೆ ಕೂರಿಸಲು ಮುಂದಾಗಿದ್ದಾರೆ. ಆದರೆ ತನ್ನ ಅಧಿಕಾರಾವಧಿಯಲ್ಲಿ ಯಾವುದೇ ಅಕ್ರಮ ಗಣಿಗಾರಿಕೆಗೆ ಅವಕಾಶ ಮಾಡಿಕೊಟ್ಟಿಲ್ಲ ಎಂದ ಯಡಿಯೂರಪ್ಪ, ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಿದ್ಧ ವಸ್ತುಗಳ ಉತ್ಪಾದನೆಗೆ ಅವಕಾಶವಾಗುವಂತೆ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗಿರುವ ಹಲವು ಕಂಪೆನಿಗಳಿಗೆ ಗಣಿಗಾರಿಕೆ ನಡೆಸಲು ಅನುಮತಿ ಕೋರಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದೇನೆ ಹೊರತು ರಫ್ತು ನಿಷೇಧಕ್ಕೆ ಯಾವುದೇ ಅಕ್ರಮಕ್ಕೆ ಅನುವು ಮಾಡಿಕೊಟ್ಟಿಲ್ಲ ಎಂದರು.

ಅದಿರು ರಫ್ತಿಗೆ ಒತ್ತಡ ಹೇರಲಿ:

ಬಿಜೆಪಿ ಸರಕಾರ ರಾಜ್ಯದಲ್ಲಿ ನಡೆಸುತ್ತಿರುವ ಜನಪರವಾದ ಕೆಲಸ ಕಾರ್ಯವನ್ನು ಸಹಿಸಲಾಗದ ಕಾಂಗ್ರೆಸ್-ಜೆಡಿಎಸ್, ಇಲ್ಲಸಲ್ಲದ ಆರೋಪದಲ್ಲಿ ತೊಡಗಿವೆೆ. ಇವರಿಗೆ ನಿಜವಾದ ಕಾಳಜಿ ಇದ್ದರೆ ಅದಿರು ರಫ್ತು ನಿಷೇಧಕ್ಕೆ ಕೇಂದ್ರದ ಮೇಲೆ ಒತ್ತಡ ಹೇರಲಿ ಎಂದು ಯಡಿಯೂರಪ್ಪ ಸವಾಲು ಹಾಕಿದರು. ಕಾಂಗ್ರೆಸ್ ತನ್ನ ಪಾದಯಾತ್ರೆಯ ಸಂದರ್ಭದಿಂದ ‘ಗಣಿ’ ವಿಷಯದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದೆ. ಅದರೊಂದಿಗೆ ಜೆಡಿಎಸ್ ಕೂಡಾ ಸೇರಿಕೊಂಡಿದೆ. ಇವರಿಗೆ ಮಾಡಲು ಬೇರೆ ಕೆಲಸವಿಲ್ಲ ಎಂದು ಅವರು ಲೇವಡಿ ಮಾಡಿದರು.

ಸುಪ್ರೀಂಕೋರ್ಟಿನವರೆಗೂ ಹೋರಾಟ

ರಾಜ್ಯದಲ್ಲಿ ಅದಿರು ರಫ್ತು ನಿಷೇಧಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್‌ರನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಈಗ ಕೇಂದ್ರ ಸರಕಾರ ತಮ್ಮ ನಿಲುವಿನ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದೆ. ಆದರೆ ತಾವು ಇದನ್ನು ಇಲ್ಲಿಗೇ ಬಿಡುವುದಿಲ್ಲ ಎಂದು ಗುಡುಗಿದ ಮುಖ್ಯಮಂತ್ರಿ ಯಡಿಯೂರಪ್ಪ, ಈ ಕುರಿತ ಹೋರಾಟವನ್ನು ಸುಪ್ರೀಂ ಕೋರ್ಟ್‌ನ ವರೆಗೂ ಕೊಂಡೊಯ್ಯುವುದಾಗಿ ಹೇಳಿದರು.

ಗಣಿಗಾರಿಕೆಗೆ ವಿರೋಧವಿಲ್ಲ

ಬಿಜೆಪಿ ಸರಕಾರ ಗಣಿಗಾರಿಕೆಯನ್ನು ವಿರೋಧಿಸುವುದಿಲ್ಲ. ಅದನ್ನು ನಿಷೇಧಿಸಬೇಕು ಎಂಬುದು ಕೂಡಾ ನಮ್ಮ ಪಕ್ಷದ ನಿಲುವಲ್ಲ. ಆದರೆ ಅದಿರು ರಫ್ತಾಗಬಾರದು ಎಂಬುದು ತಮ್ಮ ನಿಲುವು. ರಾಜ್ಯದ ನೈಸರ್ಗಿಕ ಸಂಪತ್ತು ಇಲ್ಲಿಯೇ ಬಳಕೆ ಆಗಬೇಕು. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚು ಲಾಭ ಆಗಲಿದೆ ಎಂಬುದು ತಮ್ಮ ಅಭಿಪ್ರಾಯ ಎಂದು ಯಡಿಯೂರಪ್ಪ ತಿಳಿಸಿದರು. ಅಕ್ರಮ ಗಣಿಗಾರಿಕೆಯನ್ನು ಮುಚ್ಚಿಹಾಕಲು ಕೇಂದ್ರದ ಸಚಿವರು ಹಾಗೂ ರಾಜ್ಯದ ಮಾಜಿ ಸಚಿವರು ತನ್ನ ಕೈಕಾಲನ್ನು ಹಿಡಿಯುತ್ತಿದ್ದಾರೆ

ಶೀಘ್ರವೇ ಮತ್ತೂಬ್ಬ ಉಪಲೋಕಾಯುಕ್ತ ನೇಮಕ : ಯಡಿಯೂರಪ್ಪ

ಬೆಂಗಳೂರು : ಕಳೆದ 10 ವರ್ಷಗಳಿಂದ ವಿವಿಧ ಬಂದರುಗಳ ಮೂಲಕ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಆಗಿರುವ ಬಗ್ಗೆ ಲೋಕಾಯುಕ್ತದಿಂದ ಸಮಗ್ರ ತನಿಖೆ ನಡೆಸಲಾಗುವುದು, ಲೋಕಾಯುಕ್ತರ ಕೈಬಲಪಡಿಸಲು ಶೀಘ್ರವೇ ಮತ್ತೂಬ್ಬ ಉಪ ಯೋಕಾಯುಕ್ತರನ್ನು ನೇಮಿಸಿ ಅಗತ್ಯ ಸಿಬ್ಬಂದಿಯನ್ನು ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಶುಕ್ರವಾರ ಇಲ್ಲಿ ತಿಳಿಸಿದರು.

ಅಕ್ರಮ ಗಣಿಗಾರಿಕೆ ಕುರಿತು ರಾಜ್ಯ ಸರ್ಕಾರದ ಕಣ್ಣು ತೆರೆಸಿರುವ ಲೋಕಾಯುಕ್ತರನ್ನು ಅಭಿನಂದಿಸುವುದಾಗಿ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ ಅವರು ಅಕ್ರಮ ತಡೆಗೆ ಕಾಂಗ್ರೆಸ್‌ ನಡೆಸಿದ ಪಾದಯಾತ್ರೆ ಪ್ರೇರಣೆ ತಂದಿದೆ. ಜತೆಗೆ ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ರಫ್ತು ತಡೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದ್ದು ಅದಕ್ಕಾಗಿ ಅಭಿಂದನೆ ಸಲ್ಲಿಸುವುದಾಗಿ ಹೇಳಿದರು.

ಬೇಲೆಕೇರಿ ಬಂದರು ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ, ಸಾವಿರಾರು ಕೋಟಿ ರೂ.ಗಳ ಅವ್ಯವಹಾರದ ಸತ್ಯಾಂಶಗಳು ಹೊರ ಬರುತ್ತಿವೆ, ಬಂದರು ಅಧಿ ಕಾರಿಯೊಬ್ಬರನ್ನು ಗುರುವಾರ ಬಂಧಿಸಲಾಗಿದೆ. 10 ವರ್ಷಗಳ ಅಕ್ರಮ ರಫ್ತು ತನಿಖೆಗೆ ಲೋಕಾಯುಕ್ತರಿಗೆ ನೆರವಾಗಲು 15 ದಿನದಲ್ಲಿ ಮತ್ತೂಬ್ಬ ಉಪಲೋಕಾಯುಕ್ತರನ್ನು ನೇಮಿಸಲಾಗುವುದು ಎಂದು ತಿಳಿಸಿದರು.

10 ವರ್ಷಗಳ ಕಾನೂನು ಬಾಹಿರ ರಫ್ತು ಹೊರ ಬರಬೇಕು, ಅದರಲ್ಲಿ ಪ್ರಭಾವಿ ರಾಜಕಾರಣಿಗಳು, ಉದ್ದಿಮೆದಾರರು ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾರೆ. ಚೀನಾಕ್ಕೆ ಅಕ್ರಮಕ್ಕೆ ರಫ್ತು ಆಗಿರುವುದು ಸಾಬೀತಾಗಿದೆ. ಕೆಲವು ಮಾಜಿ ಮಂತ್ರಿಗಳು ಕೈಕಾಲು ಹಿಡಿಯಲು ಶುರು ಮಾಡಿದ್ದಾರೆ. ಅಷ್ಟು ಸುಲಭಕ್ಕೆ ಬಿಡುವುದಿಲ್ಲ . 45 ಕಂಪೆನಿಗಳು ಭಾಗಿಯಾಗಿದ್ದು 58 ಜನರ ಮೇಲೆ ಸಿಐಡಿ ವೊಕದ್ದಮೆ ದಾಖಲಿಸಿದೆ. ಅವರಿಗೋಸ್ಕರವೇ ಒಂದು ಸ್ಪೆಷಲ್‌ ಜೈಲು ಕಟ್ಟಿಸಬೇಕಾಗುತ್ತದೆ. ಅವರು ಯಾರು? ಅವರ ವಿಳಾಸ ಗೊತ್ತಿಲ್ಲವೇ? ಎಂದು ಕಾಂಗ್ರೆಸ್‌ ನಾಯಕರನ್ನು ಪ್ರಶ್ನಿಸಿದ ಯಡಿಯೂರಪ್ಪ ಅವರು, ಪ್ರಭಾವಿ ಕೇಂದ್ರ ಸಚಿವರ ಅವರ ಜತೆಗಿದ್ದಾರೆ ಎಂದು ಬೊಟ್ಟು ಮಾಡಿದರು.

ತಮ್ಮ ಕಾಲದಲ್ಲಿ ಯಾವುದೇ ಅಕ್ರಮ ಲೈಸನ್ಸ್‌ , ನವೀಕರಣ ಆಗಿದ್ದರೆ ಅದನ್ನು ಲೋಕಾಯುಕ್ತಕ್ಕೆ ಸಲ್ಲಿಸಲಿ, ಉಗ್ರಪ್ಪ , ತಿಮ್ಮಪ್ಪ , ಶಿವಕುಮಾರ್‌ ಅವರಂತಹವರಿಗೆ ಉತ್ತರ ಕೊಡಲು ಹೋಗುವುದಿಲ್ಲ , ಪುಕ್ಕಟೆ ಪ್ರಚಾರ ತೆಗೆದುಕೊಳ್ಳುವುದಲ್ಲ ಎಂದು ಕಿಡಿ ಕಾರಿದ ಅವರು ಕಾಂಗ್ರೆಸ್‌ನವರಿಗೆ ಮಾನ, ಮರ್ಯಾದೆ ಇದ್ದರೆ ಆ ರೀತಿ ನಡೆದುಕೊಳ್ಳುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಗಣಿ ಗುತ್ತಿಗೆಗೆ ಮಂಜೂರಾತಿ ಹಾಗೂ ನವೀಕರಣಕ್ಕಾಗಿ ಅಧಿಸೂಚನೆ ಹೊರಡಿಸಿರುವ 13 ಪ್ರಕರಣಗಳಲ್ಲಿ ಅವಶ್ಯಕ ದಾಖಲಾತಿಗಳನ್ನು ಈಗ ಸಲ್ಲಿಸಿದ್ದು ಗಣಿ ಮತ್ತು ಭೂ ವಿಜ್ಞಾನ ನಿರ್ದೆàಶಕರು ಗಣಿ ಗುತ್ತಿಗೆಯನ್ನು ಮಂಜೂರು ಮಾಡಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಗಣಿ ಗುತ್ತಿಗೆಗೆ ಮಂಜೂರಾತಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ ಪ್ರಕರಣಗಳಲ್ಲಿ ಕೇಂದ್ರ ಸರ್ಕಾರವು ಅನುಮತಿ ನೀಡಿದ ನಂತರ ರಾಜ್ಯ ಸರ್ಕಾರ ಅಧಿಸೂಚನೆಯನ್ನು 16 ಗಣಿ ಗುತ್ತಿಗೆಗಳಿಗೆ ಹೊರಡಿಸಿದೆ ಎಂದು ಸರ್ಕಾರದ ತೀರ್ಮಾನಗಳನ್ನು ಯಡಿಯೂರಪ್ಪ ಸಮರ್ಥಿಸಿಕೊಂಡರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-09-03 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*
»SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
»ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
»ನೇತ್ರಾಣಿ ದ್ವೀಪದಲ್ಲಿ ಬಾಂಬ್ ಸ್ಫೋಟ; ಆಕ್ಷೇಪಣೆಗೆ ಆದೇಶ
»ಅಧಿಕಾರ ಇಲ್ಲದ ಕುಮಾರಸ್ವಾಮಿ ಮಾನಸಿಕ ಅಸ್ವಸ್ಥ: ಪುಟ್ಟಣ್ಣಯ್ಯ
»ಹೂವಿನಹಡಗಲಿ: ಬಸ್- ಕ್ರೂಸರ್ ಜೀಪ್ ಢಿಕ್ಕಿ; ಏಳು ಮಂದಿಯ ಸಾವು; ನಾಲ್ವರಿಗೆ ಗಾಯ
»ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
»ಕಲಾಪಕ್ಕೆ ಹಾಜರ್; ಎಲ್ಲರ ಗಮನ ಸೆಳೆದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು
»ಕರ್ನಾಟಕದ ಎರಡು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕಗಳಲ್ಲಿ ಹರೆಕಳ ಹಾಜಬ್ಬನವರ ಜೀವನ ಕಥೆಯ ಸೇರ್ಪಡೆ
»ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು
»ಭಾರತ ಹುಣ್ಣಿಮೆ: ಇಂದು ಸವದತ್ತಿ ಯಲ್ಲಮ್ಮನ ಜಾತ್ರೆ
» ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯ: ಪ್ರತಿಭಟನೆ
»ಯುವತಿಯ ಮೈಮೇಲೆ ಕೈಚಲಕಕ್ಕೆ ಯತ್ನ; ಸಿಕ್ಕಾಪಟ್ಟೆ ಗೂಸಾ
»ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿ ಟ್ರೆಕ್ಕಿಂಗ್: 21 ಮಂದಿ ಬಂಧನ
»ಭರದಿಂದ ಸಾಗಿದ 43ಕೋಟಿ ರೂ ವೆಚ್ಚದ ತುಂಗಭದ್ರಾ ಸೇತುವೆ ಕಾಮಗಾರಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ | ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ನೇಣಿಗೇರಿಸಿ: ಸಿದ್ದು ಗುಡುಗು
»ಸಂಘರ್ಷದ ನಡುವೆಯೂ ಬಿಜೆಪಿ ಚುನಾವಣೆ ಸಿದ್ಧತೆ: ನಾಯಕತ್ವದ ಬಗ್ಗೆ ಚರ್ಚೆ ಬೇಡ: ಈಶ್ವರಪ್ಪ
»ಲೋಕಾಯುಕ್ತ ಸ್ಥಾನದಿಂದ ಹಿಂದೆ ಸರಿದ ಬನ್ನೂರಮಠ: ಕೊನೆಗೂ ಗೆದ್ದ ರಾಜ್ಯಪಾಲರ ಹಠ
»ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಕ್ರಮ: ಶರಣಾಗತರಿಗೆ ತಲಾ 2 ಲಕ್ಷ ರೂ. ದಾಳಿಯಲ್ಲಿ ಸತ್ತ ಪೋಲೀಸ್ ರಿಗೆ 5 ಲಕ್ಷ ರೂ.ಪರಿಹಾರ; ಕಾರ್ಕಳದ ಐಜಿಪಿ- ಎಎನ್‌ಎಫ್ ಹೆಗಲಿಗೆ ನಕ್ಸಲ್ ನಿಗ್ರಹ ಜವಾಬ್ದಾರಿ; 500 ಪೊಲೀಸರಿಗೆ ವಿಶೇಷ ತರಬೇತಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ
»ಹೊಸ ಸರಕಾರಿ ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಶೀಘ್ರದಲ್ಲೇ ಕಾಯ್ದೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri