ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಇ೦ತವರು ಸಾವಿರಾರು ಆಗಲಿ...

ಶ್ರೀ ಅಬ್ದುಲ್ ರಹೀಂ, ಮಂಗಳೂರು ಎಂಬವರ ಪತ್ರ...

ಇತ್ತೀಚೆಗೆ (ಸೆಪ್ಟೆಂಬರ್ ೨) ಮಂಗಳೂರಿನ ಅತ್ತಾವರದಲ್ಲಿ ಸಾರ್ವಜನಿಕ ಶ್ರೀಕ್ರಷ್ಣ ಜಯಂತ್ಯುತ್ಸವ ಸಮಿತಿ ಆಶ್ರಮದಲ್ಲಿ ನಡೆದ "ಮೊಸರುಕುಡಿಗೆ" ಉತ್ಸವದ ಸಂದರ್ಭದಲ್ಲಿ ಕಾರ್ಯಕ್ರಮದ ಸಂಘ ಟಕರು ಪಾಲಿಸಿದ ಒಂದು ಮಾದರಿ, ಸತ್ಸಂಪ್ರದಾಯವನ್ನು ನಾನಿಲ್ಲಿ ಉಲ್ಲೇಖಿಸ ಬಯಸುತ್ತೇನೆ.

ಮೊಸರು ಕುಡಿಕೆ ಉತ್ಸವ ನಡೆದ ಅತ್ತಾವರ ಕಟ್ಟೆಯ ಸುತ್ತಮುತ್ತಲಿರುವ ವಸತಿ ಸಮುಚ್ಚಯ ಗಳಲ್ಲಿ ಬಹಳಷ್ಟು ಮುಸ್ಲಿಂ ಕುಟುಂಬಗಳು ವಾಸಿಸುತ್ತವೆ. ಈಗ ರಂಜಾನ್ ತಿಂಗಳಾಗಿರುವುದ ರಿಂದ, ಸಾಮಾನ್ಯವಾಗಿ ಈ ತಿಂಗಳಲ್ಲಿ ನಮಾಜಿನ ಸಮಯ ಪರಿಪಾಲನೆಯನ್ನು ಮುಸ್ಲಿಮರು ಒಂದಿಷ್ಟು ಹೆಚ್ಚು ಮುತುವರ್ಜಿಯಿಂದ, ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಮತ್ತು ಇದಕ್ಕಾಗಿ ಮಸೀದಿ ಯಿಂದ ಮೊಳಗುವ "ಬಾಂಗ್" ನ ಕರೆಯನ್ನು ಅವಲಂಬಿಸುತ್ತಾರೆ.

ಮೊಸರು ಕುಡಿಕೆ ಉತ್ಸವ ಮದ್ಯಾಹ್ನ ಸುಮಾರು 3 ಗಂಟೆಗೆ ಆರಂಭವಾಗಿತ್ತು. ಮೈಕಿನಲ್ಲಿ ಭರ್ಜರಿ ಯಾಗಿ ಭಕ್ತಿಗೀತೆ, ಚಲನಚಿತ್ರಗೀತೆಗಳು ಪ್ರಸಾರವಾಗುತ್ತಿದ್ದ ಹಿನ್ನೆಲೆಯಲ್ಲಿ ನಾವು ಬಾಂಗ್ ಕರೆ ಕೇಳಿಸುವ ನಿರೀಕ್ಷೆಯನ್ನು ಆ ದಿನದ ಮಟ್ಟಿಗೆ ಕಳಕೊಂಡಿದ್ದೆವು. ಆದರೆ ಆಶ್ಚರ್ಯ ವೆಂಬಂತೆ ಸಂಜೆ 4 ಗಂಟೆಯ ಬಾಂಗಿನ ಕರೆಯಾಗುವಾಗ ಮೈಕಿನಲ್ಲಿ ಬರುತ್ತಿದ್ದ ಗೀತೆಗಳು ಸ್ತಬ್ಧವಾದುವು. ನಾವು ಇದು ಕಾಕತಾಳೀಯವಾಗಿರಬೇಕೆಂದು ತಿಳಿದುಕೊಂಡೆವು.

ಮುಸ್ಸಂಜೆ 7 ರ ಬಾಂಗ್ ಕರೆ ನಾವು ಉಪವಾಸ ವ್ರತ ಮುರಿಯುವ ಕರೆಯಾಗಿರುವುದರಿಂದ ಇದು ನಮಗೆ ಬಹಳ ಪ್ರಾಮುಖ್ಯ. ಈ ಸಮಯದಲ್ಲಿ ಉತ್ಸವದ ಮಂಟಪದಲ್ಲಿ ಬಹಳ ಜೋರಾಗಿ ರಸಮಂಜ ರಿಯಂತಹ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆ ದಿನದ ಮಟ್ಟಿಗೆ ಗಡಿಯಾರ ನೋಡಿ ಉಪವಾಸ ಮುರಿಯುವುದೆಂದು ನಾವು ತೀರ್ಮಾನಿಸಿದೆವು. ಆದರೆ 7 ಗಂಟೆಗೆ ಸರಿಯಾಗಿ ಮತ್ತೊಮ್ಮೆ ಮೈಕು ಸಂಪೂರ್ಣ ನಿಶ್ಯಬ್ಧವಾಯಿತು. ಮಸೀದಿಯ ಬಾಂಗಿನ ಕರೆ ಮುಗಿಯುವವರೆಗೆ ಸ್ವಯಂ ಪ್ರೇರಿತವಾಗಿ ಕಾರ್ಯಕ್ರಮಗಳು ನಿಲ್ಲಿಸಲ್ಪಟ್ಟವು.

ಬಹಳ ವರ್ಷಗಳ ಅನಂತರ ಒಬ್ಬ ಭಾರತೀಯನಾಗಿ ನನ್ನ ದೇಶದ ಬಗ್ಗೆ ನನ್ನ ದೇಶದ ಸಂಸ್ಕ್ರತಿ ಯ ಬಗ್ಗೆ ಅನ್ಯ ಧರ್ಮೀಯರ ಭಾವನೆಗಳನ್ನು ಗೌರವಿಸುವ ನನ್ನ ಸಹೋದರ ಸಮುದಾಯದ ಹ್ರದಯ ವೈಶಾಲ್ಯದ ಬಗ್ಗೆ ಅಭಿಮಾನದಿಂದ ನನ್ನ ಹ್ರದಯ ಹಾಗೂ ಕಣ್ಣುಗಳು ತುಂಬಿ ಬಂದುವು.

ಭಾವನೆಗಳು ಕಲುಷಿತವಾಗಿರುವ ಈ ಸಮಾಜದಲ್ಲಿ ಇಂತಹ ಒಂದು ಸೌಜನ್ಯವನ್ನು ಖಂಡಿತ ವಾಗಿ ಯೂ ನಾನು ಕಾರ್ಯಕ್ರಮ ಸಂಘಟಕರಿಂದ ನಿರೀಕ್ಷಿಸಿರಲಿಲ್ಲ. ಆದರೂ ತಮ್ಮ ನಾಡಿನ ಭವ್ಯ ಸಂಸ್ಕ್ರತಿಯನ್ನು ಹ್ರದಯ ವೈಶಾಲ್ಯವನ್ನು ತಮ್ಮ ನಡೆ ನುಡಿಗಳ ಮೂಲಕ ಈ ಕಾರ್ಯ ಕ್ರಮದ ಸಂಘಟಕರು ತೋರಿಸಿಕೊಟ್ಟು ಮಾದರಿ ಎನಿಸಿದ್ದಾರೆ. ಸಹೋದರತೆಯ ಸಂದೇಶವನ್ನು ಸಾರಿದ್ದಾರೆ. ಮಾತ್ರವಲ್ಲ ಸಾಂಕೇತಿಕವಾಗಿ ಸ್ನೇಹ ಹಸ್ತವನ್ನು ನಮ್ಮತ್ತ ಚಾಚಿದ್ದಾರೆ ಎಂದು ನಾವು ಭಾವಿಸಿದರೆ ಖಂಡಿತಾ ತಪ್ಪಾಗಲಾರದು.

ಈ ಕೊಡುಗೆಯನ್ನು ಅಷ್ಟೇ ಗೌರವದಿಂದ ಪ್ರೀತಿಯಿಂದ ಹಾಗೂ ಕ್ರತಜ್ಞತೆಯಿಂದ ಸ್ವೀಕರಿಸಿ ಅದರಂತೆ ನಡೆದುಕೊಳ್ಳುವ ಜವಾಬ್ದಾರಿ ನನ್ನ ಮುಸ್ಲಿಂ ಸಮಾಜದ ಮೇಲಿದೆ ಎಂಬುದನ್ನು ನನ್ನ ಸಮಾಜ ಬಾಂಧವರು ಗಮನಿಸಬೇಕಾಗಿಯೂ ವಿನಂತಿಸುತ್ತೇನೆ.

ಅತ್ತಾವರ ಸಾರ್ವಜನಿಕ ಶ್ರೀಕ್ರಷ್ಣ ಜಯಂತ್ಯುತ್ಸವ ಸಮಿತಿಗಳಂತಹ ಸಂಘಟನೆಗಳ ಸಂತತಿ ಸಾವಿ ರವಾಗಲಿ, ಇದರ ಸಂಘಟಕರನ್ನು ದೇವರು ಆಶೀರ್ವದಿಸಲೆಂದು ಪ್ರಾರ್ಥಿಸುತ್ತಾ ನನ್ನ ವೈಯಕ್ತಿಕ ಹಾಗೂ ನನ್ನ ಸಮುದಾಯದ ತುಂಬು ಹ್ರದಯದ ಕ್ರತಜ್ಞತೆಗಳನ್ನು ಸಲ್ಲಿಸುತ್ತೇನೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಿಜಯ್ ಸುವರ್ಣ ಕತಾರ್
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-09-08 00:00:00

Tell a Friend

ಪ್ರತಿಸ್ಪಂದನ
Vidyanand shetty, Bujumbura,Burundi
2010-09-10
ಎಂಕ್ ಉಂದು ಸುದ್ದಿ ಕೇಂಡ್ ಬಾರೀ ಕುಶಿ ಆಂಡ್. ಇಂಚಿನೆ ಮಾತೆರ್ಲಾ ಒಟ್ಟಾದು ನಮ್ಮನ ಊರ್ನ ಲಾಯ್ಕ್ ಮಲ್ಪುಗಾ . ದೇವರ್ ಮಾತೆರ್ಗ್ಲಾ ಎಡ್ಡೆ ಬುದ್ದಿ ಕೊರೋಡ್ ಪಣ್ದ್ ದೇವರೆಡೆ ನಟ್ಟೋನ್ವೆ . ಜೈ ಹಿಂದ್
YASHAVANTH G SHETTY, MANGALORE
2010-09-09
Eid Mubarak 2 all Muslim Brothers, Sisters, Dears,Nears & Friends.

Moved reading this article.Thanks Mr. Abdul Rahim,M'lore. It's time let's all stop fighting, misunderstanding, ill treating each other on the basis of religion. & re-iterate once again the unity & Diverse culture of Our 'Great INDIA'with Pride.

U made Indians shine 4 the time being. Let's all pledge 2 continue this right spirit. May Almighty Bless us all & help us bring peace & Harmony amongst us as True Indians -A True Example 2 the whole World.

Zulfiakar, Mangalore / KSA
2010-09-09
ಶ್ರೀ ಅಬ್ದುಲ್ ರೆಹೀಮ್ ನವರ ಪತ್ರವು ಎದೆಗೆ ಹಿಡಿದ ಕನ್ನಡಿಯಂತಿದೆ. ನಿಜವಾಗಿಯೋ ಅತ್ತಾವರ್ಅ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರು ತೋರಿಸಿದ ಮಾದರಿಯು ಜಿಲ್ಲೆಗೆ ಮಾದರಿಯಾಗಿದೆ. ಇಂತಹ ಸಮಿತಿಯು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಇದ್ದರೆ ನಮ್ಮ ಕರ್ನಾಟಕವು ಎಲ್ಲಾ ರಾಜ್ಯಕ್ಕೂ ಮಾದರಿಯಾದೀತು. . ಹಾಗೆಯೇ ಮುಸ್ಲಿಮ್ ಸಮುದಾಯದವರೂ ಸಹಕರಿಸಬೇಕು
ವಿಜಯ್ ಸುವರ್ಣ , ಕತಾರ್
2010-09-08
ಶ್ರೀ ಅಬ್ದುಲ್ ರಹೀಂ, ಮಂಗಳೂರು ರವರ ಈ ಪುಟ್ಟ ಬರಹ ಇಂದು ತಾರೀಕು ೮ನೇ ಸೆಪ್ಟೆಂಬರ್ ನ ಉದಯವಾಣಿ ಕನ್ನಡ ದೈನಿಕದ ಜನತಾವಾಣಿ ವಿಭಾಗದಲ್ಲಿ ಪ್ರಕಟವಾಗಿದೆ. ಅವರ ಮನದಾಳದಿಂದ ತುಂಬಿಬಂದ ಅರ್ಥಪೂರ್ಣ ಬರಹವನ್ನು ಗಲ್ಫ್ ಕನ್ನಡಿಗಕ್ಕೆ ಕಳುಹಿಸಿದ್ದೇನೆ. ಗಲ್ಫ್ ಕನ್ನಡಿಗದ ಪ್ರತಿಸ್ಪಂದನ ವಿಭಾಗದಲ್ಲಿ ಕೆಲವರು ಒಬ್ಬರಿನ್ನೊಬ್ಬರ ಮೇಲೆ ಅನಗತ್ಯವಾಗಿ ಕೆಸರೆರಚಿ ಕೊಳ್ಳುತ್ತಿರುವವರು ಅಬ್ದುಲ್ ರಹೀಂ ರವರ ಈ ಪತ್ರವನ್ನು ಓದಿಯಾದರೂ ನೇರದಾರಿ ಹಿಡಿಯಲಿ ಎಂಬ ಹಾರೈಕೆ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri