ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಅಕ್ರಮ ಗಣಿ ನಿಯಂತ್ರಿಸುವ ಹೊಣೆ ಕೇಂದ್ರದ್ದು ಅದರೆ ರಪ್ತು ನಿಷೇದ ಅಧಿಕಾರ ರಾಜ್ಯಕ್ಕೆ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸ್ಪಷ್ಟನೆ | ಅಕ್ರಮ ಗಣಿಗಾರಿಕೆ : ಸರ್ವಪಕ್ಷ ಸಭೆಗೆ ಸಿಎಂ ನಿರ್ಧಾರ

ಬೆಂಗಳೂರು : ಅಕ್ರಮ ಗಣಿಗಾರಿಕೆ ನಿಯಂತ್ರಿಸುವ ಸಂಪೂರ್ಣ ಹೊಣೆಗಾರಿಕೆ ಕೇಂದ್ರ ಸರ್ಕಾರದಾಗಿದ್ದು, ಅದಕ್ಕೆ ಪೂರಕವಾಗಿ ಕೆಲಸ ಮಾಡುವುದಷ್ಟೆ ನಮ್ಮ ಕೆಲಸ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಗುರುವಾರ ಸ್ಪಷ್ಟನೆ ನೀಡಿತು.

ಅದಿರು ರಫ್ತು ಮತ್ತು ಸಾಗಾಣೆ ನಿಯಂತ್ರಿಸಿ ಸರ್ಕಾರ ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ವಿ.ಎಸ್‌. ಲಾಡ್‌ ಅಂಡ್‌ ಸನ್ಸ್‌ , ಸೇಸಾ ಗೋವಾ ಸೇರಿದಂತೆ 21 ಕಂಪೆನಿಗಳು ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾ. ಜೆ.ಎಸ್‌. ಖೇಹರ್‌ ಮತ್ತು ನ್ಯಾ. ಅಬ್ದುಲ್‌ ನಜೀರ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಅಶೋಕ್‌ ಹಾರ್ನಳ್ಳಿ ಗುರುವಾರ ವಾದ ಮಂಡಿಸಿದರು.

ಗಣಿಗಾರಿಕೆಯಿಂದ ಕೇಂದ್ರ ಸರ್ಕಾರವೇ ಹೆಚ್ಚಿನ ಲಾಭ ಪಡೆಯುತ್ತಿದೆ. ಜತೆಗೆ ಗಣಿಗಾರಿಕೆಗೆ ಪರವಾನಗಿ ನೀಡುವ ಸಂಪೂರ್ಣ ಅಧಿಕಾರ ಕೇಂದ್ರ ಹೊಂದಿದೆ. ರಾಜ್ಯಗಳು ಕಲ್ಲು ಸೇರಿದಂತೆ ಸಣ್ಣಪುಟ್ಟ ಗಣಿಗಾರಿಕೆಗೆ ರಾಜ್ಯ ಪರವಾನಗಿ ನೀಡುತ್ತದೆ. ಹೆಚ್ಚಿನ ರಾಜಧನ ಸಂದಾಯವಾಗುವುದು ಕೇಂದ್ರಕ್ಕೆ. ಈಗಿರುವಾಗ ಅದಿರು ಗಣಿಗಾರಿಕೆ ನಿಯಂತ್ರಣ ಕುರಿತು ರಾಜ್ಯದ ಮೇಲೆ ಒತ್ತಡ ಹೇರುವುದು ಸರಿಯಲ್ಲ ಎಂದು ವಾದಿಸಿದರು.

ಆದರೂ ಅಕ್ರಮ ಗಣಿಗಾರಿಕೆ ನಿಯಂತ್ರಿಸಲು ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕೇಂದ್ರವೇ ರೂಪಿಸಿರುವ ಎಂಎಂಡಿಆರ್‌ ಕಾಯ್ದೆ ಸೆಕ್ಷನ್‌ 23(ಸಿ) ಬಳಕೆ ಮಾಡಿಕೊಂಡು, ಅದಿರು ಸಾಗಾಣೆ ಮೇಲೆ ನಿಯಂತ್ರಣ ಹೇರಲಾಗಿದೆ ಎಂದು ಸಮರ್ಥಿಸಿಕೊಂಡರು.

ಹೆಚ್ಚಿನ ಲಾಭ ಪಡೆಯುತ್ತಿರುವುದು ಕೇಂದ್ರ ಸರ್ಕಾರ. ಆದರೆ ಭಾರಿ ನಷ್ಟವಾಗುತ್ತಿರುವುದು ರಾಜ್ಯಕ್ಕೆ. ಅದಿರು ಗಣಿಗಾರಿಕೆ ಹಾಗೂ ಸಾಗಾಣೆಯಿಂದ ರಾಜ್ಯದ ರಸ್ತೆಗಳು ಹಾಳಾಗುತ್ತಿವೆ. ಅಂತರ್ಜಲ ನಶಿಸುತ್ತಿದೆ. ಅರಣ್ಯ ಭೂಮಿ ನಾಶವಾಗುತ್ತಿದೆ. ಈಗಿರುವಾಗ ಯಾರದೋ ಲಾಭಕ್ಕೆ ರಾಜ್ಯದ ಖನಿಜ ಸಂಪತ್ತನ್ನು ಹಾಳುಮಾಡುವುದು ಸರಿಯಲ್ಲ. ರಾಜ್ಯದ ಸಂಪತ್ತನ್ನು ರಕ್ಷಿಸಲು ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ ಎಂದರು.

ದೇಶದೊಳಗಿರುವ ಕಾರ್ಖಾನೆಗಳಿಗೆ ಅದಿರು ಸಾಗಿಸಲು ಸರ್ಕಾರದ ಅಭ್ಯಂತರವಿಲ್ಲ. ಆದರೆ ವಿದೇಶಕ್ಕೆ ರಫ್ತು ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ . ಹೊರರಾಜ್ಯಕ್ಕೆ ಅದಿರು ಸಾಗಿಸುವ ಗಣಿ ಮಾಲೀಕರು ರಫ್ತು ಉದ್ದೇಶದಿಂದ ಅದಿರು ಸಾಗಿಸುತ್ತಿಲ್ಲ ಎಂದು ಸರ್ಕಾರಕ್ಕೆ ಪ್ರಮಾಣ ಪತ್ರ ನೀಡಬೇಕು. ಹೊರರಾಜ್ಯಕ್ಕೆ ಸಾಗಿಸಿದ ಅದಿರು ರಫ್ಡಾದರೆ ಗಣಿಗಾರಿಕೆ ಪರವಾನಗಿಯನ್ನೇ ರದ್ದು ಮಾಡಬಹುದೆಂದು ಗಣಿ ಮಾಲೀಕರು ಒಪ್ಪಿಗೆ ಪತ್ರ ನೀಡಿದರೆ ದೇಶಿಯ ಸಾಗಾಣಿಕೆಗೆ ಅನುಮತಿ ನೀಡಲು ಸಿದ್ದವಿರುವುದಾಗಿ ಹೇಳಿದರು.

ರಾಜ್ಯದ 18 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಅದಿರು ಗಣಿಗಾರಿಕೆ ನಡೆಯುತ್ತಿದೆ. 172 ಕಂಪೆನಿಗಳು ಪರವಾನಗಿ ಪಡೆದಿದ್ದರೂ, 104 ಕಂಪೆನಿಗಳು ಮಾತ್ರ ಚಾಲನೆಯಲ್ಲಿವೆ. ಇವುಗಳ ಪೈಕಿ 56 ಕಂಪೆನಿಗಳು ಅರಣ್ಯ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾಗಿದೆ. ಇದರ ಜತೆಗೆ ಉಳಿದ ಕಂಪೆನಿಗಳು ಒಂದಲ್ಲಾ ಒಂದು ರೀತಿಯಲ್ಲಿ ನಿಯಮ ಉಲ್ಲಂಘಿಸಿದ್ದು, ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈಗಿರುವಾಗ ಯಾವ ಕಂಪೆನಿಯೂ ಸಾಚ ಅನ್ನಲು ಸಾಧ್ಯವಿಲ್ಲ ಎಂದು ಅಡ್ವೊàಕೇಟ್‌ ಜನರಲ್‌ ತಿಳಿಸಿದರು.

ರಾಜ್ಯದಲ್ಲಿರುವ ಗಣಿಗಳ ನಿಜವಾದ ಮಾಲೀಕತ್ವ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ವಿಭಾಗೀಯ ಪೀಠ ನಿರ್ದೇಶನ ನೀಡಿ ವಿಚಾರಣೆಯನ್ನು ಸೆ. 16ಕ್ಕೆ ಮುಂದೂಡಿತು.

ಖನಿಜಕ್ಕೆ ಮಾಲೀಕರು ಯಾರು- ಹೈಕೋರ್ಟ್ ಪ್ರಶ್ನೆ 
 ಪ್ರಜಾವಾಣಿ    
 
ಇಲ್ಲಿನ ಖನಿಜಗಳಿಗೆ ರಾಜ್ಯ ಸರ್ಕಾರವೇ ಮಾಲೀಕ. ಈ ಹಿನ್ನೆಲೆಯಲ್ಲಿ ಇಲ್ಲಿಂದ ಅದಿರಿನ ರಫ್ತಿಗೆ ನಿಷೇಧ ಮಾಡುವ ಅಧಿಕಾರ ರಾಜ್ಯಕ್ಕೆ ಇದೆ ಎಂದರು. 

ಬೆಂಗಳೂರು: ರಾಜ್ಯದಲ್ಲಿನ ಖನಿಜಗಳಿಗೆ ಮಾಲೀಕರು ರಾಜ್ಯ ಸರ್ಕಾರವೇ ಅಥವಾ ಕೇಂದ್ರವೇ ಎಂಬ ಬಗ್ಗೆ ಹೈಕೋರ್ಟ್ ಸರ್ಕಾರದಿಂದ ಗುರುವಾರ ಮಾಹಿತಿ ಬಯಸಿತು.ಅದಿರು ರಫ್ತು ನಿಷೇಧ ಮಾಡಿ ಹೊರಡಿಸಲಾದ ಆದೇಶಗಳನ್ನು ಪ್ರಶ್ನಿಸಿ ಗಣಿ ಮಾಲೀಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಮಾಹಿತಿಯನ್ನು ಅಡ್ವೊಕೇಟ್ ಜನರಲ್ ಅಶೋಕ ಹಾರ್ನಹಳ್ಳಿ ಅವರಿಂದ ಬಯಸಿತು.

ಇಲ್ಲಿನ ಖನಿಜಗಳಿಗೆ ರಾಜ್ಯ ಸರ್ಕಾರವೇ ಮಾಲೀಕ. ಈ ಹಿನ್ನೆಲೆಯಲ್ಲಿ ಇಲ್ಲಿಂದ ಅದಿರಿನ ರಫ್ತಿಗೆ ನಿಷೇಧ ಮಾಡುವ ಅಧಿಕಾರ ರಾಜ್ಯಕ್ಕೆ ಇದೆ ಎಂದರು. ಆದರೆ ಕೇಂದ್ರ ಸರ್ಕಾರದ ಪರ ವಕೀಲರು, ಈ ಅಧಿಕಾರ ಕೇಂದ್ರಕ್ಕೆ ಮಾತ್ರ ಇದೆ ಎಂದರು.

ಅದಕ್ಕೆ ಪೀಠ, ಹಾರ್ನಹಳ್ಳಿ ಅವರನ್ನು ಉದ್ದೇಶಿಸಿ, ಅದಿರು ರಫ್ತು ಮಾಡಿದಾಗ ರಾಜಧನವನ್ನು ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡುವಾಗ ರಾಜ್ಯ ಹೇಗೆ ಮಾಲೀಕತ್ವ ಪಡೆಯುತ್ತದೆ ಎಂದು ಪ್ರಶ್ನಿಸಿದರು. ಅದಕ್ಕೆ ಹಾರ್ನಹಳ್ಳಿ ಅವರು, ಸಂವಿಧಾನದ ಪ್ರಕಾರ ಅದಿರಿನ ಕುರಿತಾಗಿ ಕೇಂದ್ರಕ್ಕೆ ಕೆಲವೊಂದು ಅಧಿಕಾರ ವಿದೆ ಅಷ್ಟೇ. ಆದರೆ ರಾಜ್ಯದ ಅಧಿಕಾರವನ್ನು ಅದು ಪಡೆಯುವುದು ಸಲ್ಲದು ಎಂದರು. ಈ ಹಿನ್ನೆಲೆಯಲ್ಲಿ ನಿಜವಾದ ಮಾಲೀಕತ್ವದ ಬಗ್ಗೆ ಪೀಠ ಮಾಹಿತಿ ಬಯಸಿತು.

 ಸರ್ಕಾರದ ಸಮರ್ಥನೆ: ಈ ಮಧ್ಯೆ, ವಾದ ಮಂಡಿಸಿದ ಹಾರ್ನಹಳ್ಳಿ ಅವರು ಅದಿರು ರಫ್ತು ನಿಷೇಧ ಮಾಡಿ ಸರ್ಕಾರ ಹೊರಡಿಸಿರುವ ಆದೇಶಗಳ ಬಗ್ಗೆ ಸಮರ್ಥಿಸಿಕೊಂಡರು. ದಿನನಿತ್ಯ 30ಸಾವಿರಕ್ಕೂ ಅಧಿಕ ಲಾರಿಗಳು ಅದಿರು ತುಂಬಿಸಿಕೊಂಡು ಹೋಗುತ್ತವೆ. ಇದರಿಂದ ರಸ್ತೆಗಳು ಹಾಳಾಗುತ್ತಿದೆ. ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಅರಣ್ಯ ಪ್ರದೇಶ ಗಳನ್ನು ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಲಾಗುತ್ತಿದೆ. ಇವೆಲ್ಲವುಗಳನ್ನು ಗಮನಿಸಿ ಈ ಆದೇಶ ಹೊರಡಿಸಲಾಗಿದೆ ಎಂದರು.

ಅದಕ್ಕೆ ನ್ಯಾ.ಕೇಹರ್ ಅವರು, ಕೊಲೆ, ದರೋಡೆ ನಡೆದಿದೆ ಎಂದ ತಕ್ಷಣ ಎಲ್ಲರನ್ನೂ ಪೊಲೀಸರು ಬಂಧಿಸುತ್ತಾರೆಯೇ, ಇಲ್ಲವಲ್ಲ. ಹಾಗಿದ್ದರೆ ಯಾರು ಅಕ್ರಮ ಎಸಗಿದ್ದಾರೆಯೋ ಅವರ ಮೇಲೆ ಕ್ರಮ ತೆಗೆದುಕೊಳ್ಳಿ, ಅದನ್ನು ಬಿಟ್ಟು ಸಂಪೂರ್ಣವಾಗಿ ನಿಷೇಧಿಸುವುದು ಸರಿಯೇ’ ಎಂದು ಪ್ರಶ್ನಿಸಿದರು.

ಆಗ ಹಾರ್ನಹಳ್ಳಿ ಅವರು, ಅದಿರು ರಫ್ತು ಎಂಬ ಬಗ್ಗೆ ಯಾವುದೇ ಕಾಯ್ದೆಯಲ್ಲಿ ಉಲ್ಲೇಖವಿಲ್ಲ. ಕೇಂದ್ರ ಸರ್ಕಾರದ ನಿಯಮ ಕೂಡ ಇದನ್ನೇ ಹೇಳುತ್ತದೆ. ಈ ಹಿನ್ನೆಲೆಯಲ್ಲಿ ರಫ್ತು ನಿಷೇಧ ಮಾಡಿರುವುದನ್ನು ಪ್ರಶ್ನಿಸುವುದು ಸರಿಯಲ್ಲ ಎಂದರು.

ಅಂತೆಯೇ ಗಣಿಗಾರಿಕೆಯ ಬಗ್ಗೆ ಅಂಕಿ ಅಂಶ ನೀಡಿದ ಅವರು, ರಾಜ್ಯದಲ್ಲಿ ಸುಮಾರು 172 ಗಣಿ ಪ್ರದೇಶಗಳಿವೆ.ಗಣಿಗಾರಿಕೆಗೆ ಅನುಮತಿ ಕೋರಿರುವ 72 ಕಂಪೆನಿಗಳು ಸರ್ಕಾರದ ಆದೇಶಕ್ಕೆ ಕಾಯುತ್ತಿವೆ. 54 ಪ್ರಕರಣಗಳಲ್ಲಿ ಲೋಕಾಯುಕ್ತರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ ಎಂದರು. ವಿಚಾರಣೆಯನ್ನು ಮುಂದೂಡಲಾಯಿತು.

ಅಕ್ರಮ ಗಣಿಗಾರಿಕೆ : ಸರ್ವಪಕ್ಷ ಸಭೆಗೆ ಸಿಎಂ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಅಕ್ರಮ ಅದಿರು ಗಣಿಗಾರಿಕೆ ಮತ್ತು ಅದಿರು ಸಾಗಣೆ ತಡೆಯಲು ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಸದ್ಯವೇ ಸರ್ವಪಕ್ಷ ಸಭೆ ಕರೆದು ಸಲಹೆ,ಸೂಚನೆ ಪಡೆಯಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಇದೇ ತಿಂಗಳು 11 ರಿಂದ 15 ರವರೆಗೆ ಚೀನಾ ಪ್ರವಾಸ ಕೈಗೊಳ್ಳುವ ಮುಖ್ಯಮಂತ್ರಿಗಳು ಪ್ರವಾಸದಿಂದ ಮರಳಿದ ನಂತರ ಸರ್ವಪಕ್ಷ ನಾಯಕರ ಸಭೆ ಕರೆದು ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಾಣೆ ತಡೆಯಲು ಅವರಿಂದ ಸಲಹೆ ಪಡೆಯಲು ನಿರ್ಧರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಸರ್ಕಾರ ಕೈಗೊಂಡ ಕ್ರಮಗಳನ್ನು ಮುಖ್ಯಮಂತ್ರಿಗಳು ಸಭೆಗೆ ವಿವರಿಸಲಿದ್ದಾರೆ.

ಆದರೆ ಅಕ್ರಮ ಗಣಿಗಾರಿಕೆ ವಿವಾದ ರಾಜಕೀಯ ಸ್ವರೂಪ ಪಡೆದಿದೆ. ಪ್ರತಿಪಕ್ಷಗಳು ಮುಖ್ಯಮಂತ್ರಿಗಳ ವಿರುದ್ಧ ವಾಗ್ಧಾಳಿ ನಡೆಸುತ್ತಿವೆ. ಮುಖ್ಯಮಂತ್ರಿಗಳು ಪ್ರತಿಪಕ್ಷಗಳ ಮುಖಂಡರ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಯಶಸ್ವಿಯಾಗುವುದೇ, ಈ ಆಮಂತ್ರಣವನ್ನು ಪ್ರತಿಪಕ್ಷಗಳು ಸ್ವೀಕರಿಸುತ್ತವೆಯೇ? ಎನ್ನುವುದು ಕುತೂಹಲಕ್ಕೆ ಕಾರಣ ವಾಗಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-09-10 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
»ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
»ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು
»ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು
»ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ
»ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
»ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ; ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
»ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ
»ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ
»ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ
»ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್
»ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ
»ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ
»ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ
» ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ
»ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ
»ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ
»ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ
»ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
»ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು
»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri