-->

ವಿದ್ಯಾರ್ಥಿಗಳಿಂದ ಹಗಲು ದರೋಡೆಗಿಳಿದ ಕಾಲೇಜ್ ವಿರುದ್ದ ಕ್ರಮಕ್ಕೆ NSUI ವತಿಯಿಂದ ಮನವಿ

ವಿದ್ಯಾರ್ಥಿಗಳಿಂದ ಹಗಲು ದರೋಡೆಗಿಳಿದ ಕಾಲೇಜ್ ವಿರುದ್ದ ಕ್ರಮಕ್ಕೆ NSUI ವತಿಯಿಂದ ಮನವಿ



(ಗಲ್ಫ್ ಕನ್ನಡಿಗ)ಕೊರೊನದಿಂದ ಜನಸಾಮಾನ್ಯರು ಆರ್ಥಿಕವಾಗಿ ಕಂಗೆಟ್ಟಿರುವ ಈ ಸಂದರ್ಭದಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಪೂರ್ಣ ಪ್ರಮಾಣದ ಫೀಸು ಜುಲೈ 31 ರ ಒಳಗಾಗಿ ಕಟ್ಟಬೇಕೆಂದು K.V.G ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುತ್ತೋಲೆ ಹೊರಡಿಸಿದೆ. ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳಿಗೆ ಯಾವುದೇ ಸ್ಕಾಲರ್ಶಿಪ್ ಅಥವಾ ಅರಿವು ಲೋನ್ ಬಂದಿಲ್ಲ ಅದರೊಂದಿಗೆ ಹೆತ್ತವರಿಗೆ ಉದ್ಯೋಗವೂ ಇಲ್ಲ..ಕಾಲೇಜು ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಸ್ಯೆಯನ್ನು ಅರ್ಥಮಾಡಿಕೊಂಡು ಫೀಸ್ ಕಟ್ಟಲು ಈಗಾಗಲೇ ಹೊರಡಿಸಿರುವ ದಿನಾಂಕವನ್ನು ಮುಂದೂಡಬೇಕು ಮತ್ತು ಸೂಕ್ತ ಸಮಯಾಕಾಶವನ್ನು ನೀಡಬೇಕೆಂದು NSUI ಸುಳ್ಯ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಆಶೀಕ್ ಅರಂತೋಡು ರವರ ನೇತೃತ್ವದಲ್ಲಿ ಸಹಾಯಕ ಕಮಿಷನರ್ ಯತೀಶ್ ಉಳ್ಳಾಳ್, ತಹಶೀಲ್ದಾರ್ ಅನಂತಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕರು ಅಂಗಾರ, ಜಿಲ್ಲಾ ಪಂಚಾಯಿತಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ರವರಿಗೆ NSUI ವತಿಯಿಂದ ಮನವಿ ನೀಡಲಾಯಿತು.
(ಗಲ್ಫ್ ಕನ್ನಡಿಗ) ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, NSUI ಉಪಾಧ್ಯಕ್ಷ ಕೀರ್ತನ್ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶಾಝಿಲ್, ಅಫ್ನಾನ್ ಅರಂಬೂರ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99