
ಕಾರವಾರ: ಸೋಂಕಿತರ ಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯಕ್ಕೇ ಮಾದರಿ: ಡಾ.ಹರೀಶಕುಮಾರ್.ಕೆ
Tuesday, August 18, 2020
ಕಳೆದ ಹಲವು ತಿಂಗಳುಗಳಿಂದ ಇಡೀ ವಿಶ್ವ ಕೊವಿಡ್-19 ಮಹಾ ಮಾರಿಯ ವಿರುದ್ದ ಹೊರಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆ ಕೂಡಾ ಈ ಮಹಾ ಮಾರಿಯ ವಿರುದ್ದ ನಿರಂತರ ಹೋರಾಟ ನಡೆಸುತ್ತಿದ್ದು, ಜಿಲ್ಲೆಯ ಪ್ರಜ್ಞಾವಂತ ನಾಗರೀಕರು ಲಾಕ್ ಡೌನ್ ನಿಯಮಗಳನ್ನು ಹಾಗೂ ಅನ್ ಲಾಕ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿರುವದರಿಂದ , ಜಿಲ್ಲೆಯಲ್ಲಿ ಸೋಂಕು ವ್ಯಾಪಿಸುವದನ್ನು ಬಹುತೇಕ ನಿಯಂತ್ರಣ ಸಾಧಿಸುವಲ್ಲಿ ಯಶಸ್ಸು ಕಾಣುತ್ತಿದೆ. ಜಿಲ್ಲಾಡಳಿತವು ಪ್ರಮುಖವಾಗಿ ಕೊವಿಡ್-19 ಸಮುದಾಯಕ್ಕೆ ಹರಡದಂತೆ ಹಾಗೂ ಸೋಂಕಿತರ ಮರಣ ಸಂಬವಿಸದಂತೆ ಚಿಕಿತ್ಸೆ ನೀಡುವ ಬಗ್ಗೆ ಹೆಚ್ಚಿನ ಗಮನವನ್ನು ನೀಡಿದ್ದು, ನಿರಂತರವಾಗಿ ಸೋಂಕು ಪತ್ತೆ ಪರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸುತ್ತಿದ್ದು, ರಾಜ್ಯದಲ್ಲೇ ಅತ್ಯಂತ ಕಡಿಮೆ ಅಂದರೆ ಸರಿ ಸುಮಾರು 5-6% ರಷ್ಷು ಸೋಂಕು ಪತ್ತೆಯಾಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ ಒಟ್ಟೂ 46406 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕೇವಲ 3368 ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿರುತ್ತದೆ. ಈ ಪೈಕಿ 2420 ಜನರು ಸಂಪೂರ್ಣ ಗುಣಮುಖರಾಗಿದ್ದು, ಕೇವಲ 33 ಸಾವಿನ ಪ್ರಕರಣಗಳು ಇರುತ್ತದೆ. ರಾಜ್ಯದಲ್ಲಿ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕನ್ನಡ ಜಿಲ್ಲೆಯು ಕೊವಿಡ್-19 ಸೋಂಕನ್ನು ಸಮರ್ಥವಾಗಿ ನಿಭಾಯಿಸಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್.ಕೆ ರವರು ತಿಳಿಸಿದರು.
ಈ ಯಶಸ್ಸಿಗೆ ಕಾರಣೀಕರ್ತರಾದ ಜಿಲ್ಲೆಯ ಜನರಿಗೆ, ಜನ ಪ್ರತಿನಿಧಿಗಳಿಗೆ , ಕರೋನಾ ವಾರಿಯರ್ಸ ಗಳಾಗಿ ಕಾರ್ಯ ನಿರ್ವಹಿಸಿದ ವೈದ್ಯರು, ದಾದಿಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ , ಸಿಬ್ಬಂದಿಗಳು ಮತ್ತು ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪಂಚಾಯತರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಗರಸ್ಥಳಿಯ ಸಂಸ್ಥೆಗಳ ಅಧಿಕಾರಿ , ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ತಿಳಿಸಿದ ಜಿಲ್ಲಾಧಿಕಾರಿಗಳು. ಮಾಧ್ಯಮಗಳು ಕೂಡಾ ಹಗಳಿರುಳೆನ್ನದೆ ಕೊವಿಡ್ ಗೆ ಸಂಬಂದಿಸಿದಂತೆ ಮಾಹಿತಿಯನ್ನು ಸಂಗ್ರಹಿಸಿ ಜಿಲ್ಲೆಯ ಜನರಿಗೆ ತಲುಪಿಸಿದ್ದಲ್ಲದೇ , ಜನರಲ್ಲಿ ಜಾಗೃತಿಯನ್ನು ಮೂಡಿಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿದ್ದು, ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು ಕರೋನಾ ವಾರಿಯರ್ಸಗಳಂತೆ ಜಿಲ್ಲಾಡಳಿತದೊಂದಿಗೆ ಕೈಜೊಡಿಸಿ ಕೆಲಸ ನಿರ್ವಹಿಸಿದ್ದು ಅವರಗೂ ಕೂಡಾ ಧನ್ಯವಾದಗಳನ್ನು ತಿಳಿಸಿದರು
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣದಲ್ಲಿದೆಯೆಂದು ನಾವು ಈ ಹಂತದಲ್ಲಿ ಮೈಮರೆಯುವ ಹಾಗಿಲ್ಲ. ಕೊವಿಡ್-19 ಇದು ಬಹುಬೇಗ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವದರಿಂದ ಇದರ ನಿಯಂತ್ರಣ ಸಾರ್ವಜನಿಕರ ಸಹಕಾರವಿಲ್ಲದೇ ಸಾಧ್ಯವಾಗುವದಿಲ್ಲ. ಮುಂದಿನ ದಿನಗಳಲ್ಲಿ ಗಣೇಶ ಚತುರ್ಥಿ ಹಾಗೂ ಇತರೇ ಸಾಲು ಸಾಲು ಹಬ್ಬಗಳು ಇರುತ್ತಿದ್ದು, ಜಿಲ್ಲೆಯ ನಾಗರೀಕರು ಈ ಹಿಂದಿನಂತೆಯೇ ಸಮಾಜಿಕ ಅಂತರ , ವೈಯುಕ್ತಿಕ ಸ್ವಚ್ಚತೆ ಹಾಗೂ ಉತ್ತಮ ಆರೋಗ್ಯವನ್ನು ಕಾಯ್ದುಕೊಂಡು, ಕೊವಿಡ್-19 ಅನ್ ಲಾಕ್ ಮಾರ್ಗಸೂಚಿಯ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿ ಉತ್ತರ ಕನ್ನಡ ಜಿಲ್ಲೆಯನ್ನು ಕರೋನಾ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.