-->

ಕಾರವಾರ: ಸೋಂಕಿತರ  ಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯಕ್ಕೇ ಮಾದರಿ: ಡಾ.ಹರೀಶಕುಮಾರ್.ಕೆ

ಕಾರವಾರ: ಸೋಂಕಿತರ ಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯಕ್ಕೇ ಮಾದರಿ: ಡಾ.ಹರೀಶಕುಮಾರ್.ಕೆ

         ಕಳೆದ ಹಲವು ತಿಂಗಳುಗಳಿಂದ ಇಡೀ ವಿಶ್ವ ಕೊವಿಡ್-19 ಮಹಾ ಮಾರಿಯ ವಿರುದ್ದ ಹೊರಾಡುತ್ತಿದೆ.  ಉತ್ತರ ಕನ್ನಡ ಜಿಲ್ಲೆ ಕೂಡಾ ಈ ಮಹಾ ಮಾರಿಯ ವಿರುದ್ದ ನಿರಂತರ ಹೋರಾಟ ನಡೆಸುತ್ತಿದ್ದು, ಜಿಲ್ಲೆಯ ಪ್ರಜ್ಞಾವಂತ ನಾಗರೀಕರು  ಲಾಕ್ ಡೌನ್ ನಿಯಮಗಳನ್ನು ಹಾಗೂ ಅನ್ ಲಾಕ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿರುವದರಿಂದ , ಜಿಲ್ಲೆಯಲ್ಲಿ ಸೋಂಕು ವ್ಯಾಪಿಸುವದನ್ನು ಬಹುತೇಕ ನಿಯಂತ್ರಣ ಸಾಧಿಸುವಲ್ಲಿ ಯಶಸ್ಸು ಕಾಣುತ್ತಿದೆ.   ಜಿಲ್ಲಾಡಳಿತವು ಪ್ರಮುಖವಾಗಿ ಕೊವಿಡ್-19  ಸಮುದಾಯಕ್ಕೆ ಹರಡದಂತೆ ಹಾಗೂ ಸೋಂಕಿತರ ಮರಣ ಸಂಬವಿಸದಂತೆ ಚಿಕಿತ್ಸೆ ನೀಡುವ ಬಗ್ಗೆ ಹೆಚ್ಚಿನ ಗಮನವನ್ನು ನೀಡಿದ್ದು,  ನಿರಂತರವಾಗಿ ಸೋಂಕು ಪತ್ತೆ ಪರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸುತ್ತಿದ್ದು,  ರಾಜ್ಯದಲ್ಲೇ ಅತ್ಯಂತ ಕಡಿಮೆ ಅಂದರೆ ಸರಿ ಸುಮಾರು  5-6% ರಷ್ಷು ಸೋಂಕು ಪತ್ತೆಯಾಗುತ್ತಿದೆ.  ಇದುವರೆಗೂ ಜಿಲ್ಲೆಯಲ್ಲಿ ಒಟ್ಟೂ 46406  ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕೇವಲ 3368 ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿರುತ್ತದೆ. ಈ ಪೈಕಿ 2420 ಜನರು ಸಂಪೂರ್ಣ ಗುಣಮುಖರಾಗಿದ್ದು, ಕೇವಲ 33 ಸಾವಿನ ಪ್ರಕರಣಗಳು ಇರುತ್ತದೆ.  ರಾಜ್ಯದಲ್ಲಿ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕನ್ನಡ ಜಿಲ್ಲೆಯು ಕೊವಿಡ್-19 ಸೋಂಕನ್ನು ಸಮರ್ಥವಾಗಿ ನಿಭಾಯಿಸಿರುತ್ತದೆ  ಎಂದು ಜಿಲ್ಲಾಧಿಕಾರಿ  ಡಾ.ಹರೀಶ್ ಕುಮಾರ್.ಕೆ ರವರು ತಿಳಿಸಿದರು.   
           ಈ ಯಶಸ್ಸಿಗೆ ಕಾರಣೀಕರ್ತರಾದ ಜಿಲ್ಲೆಯ ಜನರಿಗೆ, ಜನ ಪ್ರತಿನಿಧಿಗಳಿಗೆ , ಕರೋನಾ ವಾರಿಯರ್ಸ ಗಳಾಗಿ ಕಾರ್ಯ ನಿರ್ವಹಿಸಿದ  ವೈದ್ಯರು, ದಾದಿಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ , ಸಿಬ್ಬಂದಿಗಳು ಮತ್ತು ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪಂಚಾಯತರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಗರಸ್ಥಳಿಯ ಸಂಸ್ಥೆಗಳ  ಅಧಿಕಾರಿ , ಸಿಬ್ಬಂದಿಗಳಿಗೆ  ಧನ್ಯವಾದಗಳನ್ನು ತಿಳಿಸಿದ ಜಿಲ್ಲಾಧಿಕಾರಿಗಳು. ಮಾಧ್ಯಮಗಳು ಕೂಡಾ  ಹಗಳಿರುಳೆನ್ನದೆ ಕೊವಿಡ್ ಗೆ ಸಂಬಂದಿಸಿದಂತೆ ಮಾಹಿತಿಯನ್ನು ಸಂಗ್ರಹಿಸಿ ಜಿಲ್ಲೆಯ ಜನರಿಗೆ ತಲುಪಿಸಿದ್ದಲ್ಲದೇ , ಜನರಲ್ಲಿ ಜಾಗೃತಿಯನ್ನು ಮೂಡಿಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿದ್ದು, ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು ಕರೋನಾ ವಾರಿಯರ್ಸಗಳಂತೆ  ಜಿಲ್ಲಾಡಳಿತದೊಂದಿಗೆ ಕೈಜೊಡಿಸಿ ಕೆಲಸ ನಿರ್ವಹಿಸಿದ್ದು ಅವರಗೂ ಕೂಡಾ ಧನ್ಯವಾದಗಳನ್ನು ತಿಳಿಸಿದರು
       ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣದಲ್ಲಿದೆಯೆಂದು ನಾವು ಈ ಹಂತದಲ್ಲಿ ಮೈಮರೆಯುವ ಹಾಗಿಲ್ಲ. ಕೊವಿಡ್-19 ಇದು ಬಹುಬೇಗ  ವ್ಯಕ್ತಿಯಿಂದ ವ್ಯಕ್ತಿಗೆ ಹರಡುವದರಿಂದ  ಇದರ ನಿಯಂತ್ರಣ ಸಾರ್ವಜನಿಕರ ಸಹಕಾರವಿಲ್ಲದೇ ಸಾಧ್ಯವಾಗುವದಿಲ್ಲ. ಮುಂದಿನ ದಿನಗಳಲ್ಲಿ ಗಣೇಶ ಚತುರ್ಥಿ  ಹಾಗೂ ಇತರೇ ಸಾಲು ಸಾಲು ಹಬ್ಬಗಳು  ಇರುತ್ತಿದ್ದು, ಜಿಲ್ಲೆಯ ನಾಗರೀಕರು ಈ ಹಿಂದಿನಂತೆಯೇ  ಸಮಾಜಿಕ ಅಂತರ , ವೈಯುಕ್ತಿಕ ಸ್ವಚ್ಚತೆ ಹಾಗೂ ಉತ್ತಮ ಆರೋಗ್ಯವನ್ನು  ಕಾಯ್ದುಕೊಂಡು, ಕೊವಿಡ್-19 ಅನ್ ಲಾಕ್ ಮಾರ್ಗಸೂಚಿಯ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿ ಉತ್ತರ ಕನ್ನಡ ಜಿಲ್ಲೆಯನ್ನು ಕರೋನಾ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99