-->

ಗಮನಿಸಿ; ಇಂದು ಮಂಗಳೂರು ಗೋಲಿಬಾರ್ ವಿಚಾರಣೆ ನಡೆಯುವುದಿಲ್ಲ

ಗಮನಿಸಿ; ಇಂದು ಮಂಗಳೂರು ಗೋಲಿಬಾರ್ ವಿಚಾರಣೆ ನಡೆಯುವುದಿಲ್ಲ


(ಗಲ್ಫ್ ಕನ್ನಡಿಗ)ಮಂಗಳೂರು :- 2019 ಡಿಸೆಂಬರ್ 19ರಂದು ನಡೆದ ಮಂಗಳೂರು ಗೋಲಿಬಾರ್ ಪ್ರಕರಣದ ಸಾಕ್ಷ್ಯ ಅಥವಾ ಹೇಳಿಕೆ ದಾಖಲಿಸುವ ವಿಚಾರಣೆ ಇಂದು ನಡೆಯುವುದಿಲ್ಲ ಎಂದು  ತನಿಖಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

(ಗಲ್ಫ್ ಕನ್ನಡಿಗ) ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡೇಟಿನಿಂದ ಶ ನೌಶಿನ್ ಹಾಗೂ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ಇವರನ್ನು ಸರಕಾರ ನೇಮಿಸಿ ಆದೇಶ ಹೊರಡಿಸಿತ್ತು.


(ಗಲ್ಫ್ ಕನ್ನಡಿಗ) ಈ ಸಂಬಂಧ ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿಗಳು ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶವನ್ನು ಇಂದು (ಆಗಸ್ಟ್ 11 ರಂದು) ಪೂರ್ವಾಹ್ನ 11.00 ಗಂಟೆಯಿಂದ ಅಪರಾಹ್ನ 1.00 ಗಂಟೆ ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿ ವಿಧಾನಸೌಧ, ಮಂಗಳೂರು, ಇಲ್ಲಿ ನಿಗಧಿಪಡಿಸಲಾಗಿತ್ತು  .

ಆದರೆ ಆ.11ರಂದು  ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರು ಉಡುಪಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು , ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಅವರ ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿರುವುದರಿಂದ  ಸದರಿ ವಿಚಾರಣೆಯನ್ನು ನಡೆಸಲು  ಅನಾನುಕೂಲವಾಗಿರುವುದರಿಂದ ಅದನ್ನು ಮುಂದೂಡಲಾಗಿದೆ. ಮುಂದಿನ ವಿಚಾರಣಾ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99