-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಆಳ್ವಾಸ್ ‘’ಅನ್ವೇಷಣಾ’’- ರಿಸರ್ಚ್  ಫೋರಂ ಉದ್ಘಾಟನೆ

ಆಳ್ವಾಸ್ ‘’ಅನ್ವೇಷಣಾ’’- ರಿಸರ್ಚ್ ಫೋರಂ ಉದ್ಘಾಟನೆ




ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಬಿ.ಎಸ್.ಡಬ್ಲೂ ಹಾಗೂ ಫುಡ್ ಆ್ಯಂಡ್ ನ್ಯೂಟ್ರೀಷನ್ ವಿಭಾಗದ ವತಿಯಿಂದ ‘’ಅನ್ವೇಷಣಾ’’ ರಿಸರ್ಚ ಫೋರಂ  ಉದ್ಘಾಟನಾ ಕಾರ್ಯಕ್ರಮವು ಸುಂದರಿ ಆನಂದ ಆಳ್ವ ಕ್ಯಾಂಪಸ್‍ನಲ್ಲಿ ಜರುಗಿತು.


ಆಳ್ವಾಸ್ ಕಾಲೇಜಿನ ಸಂಶೋಧನಾ ವಿಭಾಗದ ಸಂಯೋಜಕ ಡಾ. ಸುಕೇಶ್, ಸಂಶೋಧನೆಯ ಹಲವು ಆಯಾಮಗಳ ಬಗ್ಗೆ ಮಾಹಿತಿ ನೀಡಿದರು.  ಸಂಶೋಧನೆಯ ಕೌಶಲ್ಯ ತರಗತಿಯಲ್ಲಿ ಪಾಠ ಕೇಳುವುದರಿಂದ ಬರುವುದಲ್ಲ, ಪರಸ್ಪರ ಚರ್ಚಿಸಿ ಪ್ರಶ್ನೆಗಳು ಹುಟ್ಟಿಕೊಂಡಾಗ, ಉತ್ತರವನ್ನು ಸಂಶೋಧನೆಯ ಮೂಲಕ ಕಂಡುಕೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.   ಸಂಶೋಧನೆಯ ಪ್ರಕ್ರಿಯೆಗೆ ಹೆಚ್ಚಿನ ಒದು ಅಗತ್ಯ ಎಂದು ತಿಳಿಸಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುರಿಯನ್ ವಿದ್ಯಾರ್ಥಿಗಳು ಪರಸ್ಪರ ಚರ್ಚೆ ನಡೆಸುವುದರಿಂದ ಯಾವುದೇ ವಿಷಯದ ಆಳ-ಅಗಲ ತಿಳಿಯಲು ಸಾಧ್ಯ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ತಿಳಿಸಿದರು. ಪದವಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ. ಮಧುಮಾಲ ಕೆ. ಹಾಗೂ ಫುಡ್ ಆಂಡ್ ನ್ಯೂಟ್ರೀಷನ್ ವಿಭಾಗದ ಮುಖ್ಯಸ್ಥೆ ಆಶಿತಾ, ಸಮಾಜಕಾರ್ಯ ವಿಭಾಗದ ಡಾ ಸಪ್ನಾ ಉಪಸ್ಥಿತರಿದ್ದರು. ಉಪನ್ಯಾಸಕಿ ಮಧುರಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99