
ಮಾಜಿ ಸಿಎಂ ಪುತ್ರನ ಕಾರು ಅಪಘಾತ
(ಗಲ್ಪ್ ಕನ್ನಡಿಗ)ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಪುತ್ರನ ಕಾರು ಅಪಘಾತವಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
(ಗಲ್ಪ್ ಕನ್ನಡಿಗ)ಮಾಜಿ ಸಿಎಂ , ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಅವರು ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಪ್ರಶಾಂತ್ ಶೆಟ್ಟರ್ ಮತ್ತು ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ka05 ar 6577 ನೊಂದಾಣಿಯ ಲಾರಿ ka 03 NE 8 ನಂಬರ್ ನ ಕಾರಿಗೆ ಢಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಒಟ್ಟು ಮೂವರಿಗೆ ಗಾಯಗಳಾಗಿದ್ದು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಲ್ಪ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ)ದಾವಣಗೆರೆಯಿಂದ ಹುಬ್ಬಳ್ಳಿಯ ನಿವಾಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಗಲ್ಪ್ ಕನ್ನಡಿಗ)