
ಅಣ್ಣಾಮಲೈ ಬಳಿಕ ಸಸಿಕಾಂತ್ ಸೆಂಥಿಲ್ ಸರದಿ: ರಾಜಕೀಯದ ಅಂಗಣಕ್ಕೆ ಜಿಗಿದ ಮಾಜಿ ಡಿಸಿ
ನವದೆಹಲಿ: ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಳಿಕ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜಕೀಯದ ಅಂಗಣಕ್ಕೆ ಇಳಿಯಲಿದ್ದಾರೆ.
ನಾಳೆ ನವದೆಹಲಿಯಲ್ಲಿ ಅವರು ಅಧಿಕೃತವಾಗಿ ರಾಷ್ಟ್ರೀಯ ಪಕ್ಷ ಸೇರಲಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಆ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದುಕೊಳ್ಳಲಿದ್ದಾರೆ.
ತಮಿಳುನಾಡು ರಾಜ್ಯದಲ್ಲಿ ಪಕ್ಷದ ಸಂಘಟನೆಯಲ್ಲಿ ಅವರು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಷ್ಟ್ರೀಯ ಸ್ಥರದಲ್ಲಿ ಅವರಿಗೆ ಉತ್ತಮ ಸ್ಥಾನ ಸಿಗುವ ಸಾಧ್ಯತೆ ಇದೆ.
ಇದೇ ವೇಳೆ, ಅಣ್ಣಾಮಲೈ ಅವರಿಗೂ ಬಿಜೆಪಿ ಪಕ್ಷದಲ್ಲಿ ರಾಷ್ಟ್ರೀಯ ಮಟ್ಟದ ಸ್ಥಾನಮಾನವನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ