-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ದಕ್ಷಿಣ ಕನ್ನಡದಲ್ಲಿ 21 ವರ್ಷದ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ದಕ್ಷಿಣ ಕನ್ನಡದಲ್ಲಿ 21 ವರ್ಷದ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ



ಮಂಗಳೂರು;  ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ 21 ವರ್ಷದ ಯುವತಿಯೊಬ್ಬಳು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಉದ್ಯಮಿ ನೆಲ್ಯಾಡಿ ವಿ.ಜೆ.ಜೋಸೆಫ್ ಎಂಬವರ ಪುತ್ರಿ ನವ್ಯಾ ಜೋಸೆಫ್ (21)ಆತ್ಮಹತ್ಯೆ ಮಾಡಿಕೊಂಡವರು. 

ನವ್ಯಾ ಜೋಸೆಫ್  ಮಂಗಳೂರು ಸೈಂಟ್ ಅಲೋಸಿಯಸ್ ಕಾಲೇಜಿನಲ್ಲಿ ಬಿಬಿಎ ಪದವಿ ಮುಗಿಸಿದ ಬಳಿಕ ಮನೆಯಲ್ಲಿದ್ದರು. ನಿನ್ನೆ ರಾತ್ರಿ ಸುಮಾರು 10:30ರ ವೇಳೆಗೆ ತನ್ನ ಕೊಠಡಿಯೊಳಗೆ ಮಲಗಿದ್ದ ನವ್ಯಾ ಜೋಸೆಫ್ ಇಂದು ಬೆಳಿಗ್ಗೆ 8 ಗಂಟೆಯಾದರೂ ಬಾಗಿಲು ತೆರೆದಿರಲಿಲ್ಲ.

 ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ಮೊಬೈಲ್‌ಗೆ  ಕರೆಮಾಡಿದರೂ ಸ್ವೀಕರಿಸಲಿಲ್ಲ. ಬಳಿಕ ತಂದೆ ವಿ.ಜೆ.ಜೋಸೆಫ್‌ರವರು ಬಾಗಿಲು ಮುರಿದು ಒಳಪ್ರವೇಶಿಸಿದ ವೇಳೆ ನವ್ಯಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ನವ್ಯಾ ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99