ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

Breaking News ; ರಾಜ್ಯದಲ್ಲಿ ಜೂನ್ 7 ವರೆಗೆ ಲಾಕ್ ಡೌನ್ ವಿಸ್ತರಣೆ- ಮುಖ್ಯಮಂತ್ರಿ


ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್​ಡೌನ್​ ನ್ನು ವಿಸ್ತರಣೆ ಮಾಡಲಾಗಿದೆ.

ಈ ಬಗ್ಗೆ ಇಂದು ಮುಖ್ಯಮಂತ್ರಿ ಬಿಎಸ್​ವೈ ಮಹತ್ವದ ಆದೇಶ ಹೊರಡಿಸಿದ್ದಾರೆ.ಸಚಿವರೊಂದಿಗೆ ದಭೆ  ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.ಜೂನ್​​ 7ರ ಬೆಳಗ್ಗೆ 6 ಗಂಟೆಯವರೆಗೆ ಲಾಕ್​ಡೌನ್​ ವಿಸ್ತರಣೆಯಾಗಲಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಜಾರಿಗೊಂಡಿರುವ ಲಾಕ್ ಡೌನ್ ಮುಂದಿನ 14 ದಿನಗಳ ಕಾಲ  ಮುಂದುವರೆಯಲಿದೆ.ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್​ ಮಾರ್ಗಸೂಚಿ ನಿಯಮ ಪಾಲನೆ ಕಡ್ಡಾಯವಾಗಿದ್ದು, ಬೆಳಗ್ಗೆ 6ರಿಂದ 10ಗಂಟೆವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ   ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW