-->
Mangalore- ಮಾಸ್ಕ್ ಹಾಕಲು ಹೇಳಿದ್ದಕ್ಕೆ  ಪಿಡಿಒ ಮೇಲೆ ಹಲ್ಲೆ ಪ್ರಕರಣ: 4 ಆರೋಪಿಗಳ ಬಂಧನ

Mangalore- ಮಾಸ್ಕ್ ಹಾಕಲು ಹೇಳಿದ್ದಕ್ಕೆ ಪಿಡಿಒ ಮೇಲೆ ಹಲ್ಲೆ ಪ್ರಕರಣ: 4 ಆರೋಪಿಗಳ ಬಂಧನ


ಮಂಗಳೂರು: ಮಾಸ್ಕ್​ ಧರಿಸದೆ ಅನಗತ್ಯವಾಗಿ ಗುಂಪುಗೂಡಿರುವುದನ್ನು ಪ್ರಶ್ನಿಸಿದ ಪಿಡಿಒ ಮೇಲೆ ಹಲ್ಲೆ ನಡೆಸಿರುವ ನಾಲ್ವರು ಆರೋಪಿಗಳನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.  




ಬಂಟ್ವಾಳ ತಾಲೂಕಿನ ಫರಂಗಿಪೇಟೆ ಮಹಮ್ಮದ್ ಇದಾಯುತುಲ್ಲಾ (25), ಅಹಮ್ಮದ್ ಬಶೀರ್ (30), ಅಬ್ದುಲ್ ಸಿದ್ದೀಕ್ (33) ಹಾಗೂ ಮಂಗಳೂರು ತಾಲೂಕಿನ ಕುತ್ತಾರು, ಮದನಿ ನಗರದ ಅಬೂಬಕ್ಕರ್ ಸಿದ್ದೀಕ್ (26) ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿ ಮನ್ಸೂರ್ ಅಲಿ ಪರಾರಿಯಾಗಿದ್ದಾನೆ.

ಮಲ್ಲೂರು ಗ್ರಾಮ ಪಂಚಾಯತ್ ಪಿಡಿಒ ರಾಜೇಂದ್ರ ಶೆಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಮೇ 25ರಂದು ಮಧ್ಯಾಹ್ನ 1.45ರ ಸುಮಾರಿಗೆ ಕರ್ತವ್ಯದಲ್ಲಿದ್ದ ಸಂದರ್ಭ ಐವರು ಯುವಕರು ಮಾಸ್ಕ್ ಧರಿಸದೆ ಗುಂಪು ಸೇರಿದ್ದರು. ಅಲ್ಲಿಗೆ ಬಂದ ಪಿಡಿಒ ಅವರಿಗೆ ಮಾಸ್ಕ್ ಧರಿಸಲು ಸೂಚನೆ ನೀಡಿದ್ದಾರೆ. ಆದರೆ ಯುವಕರು ಮಾಸ್ಕ್ ಧರಿಸದೆ ಉಡಾಫೆಯಿಂದ ವರ್ತಿಸಿದ್ದಾರೆ. ಈ ಸಂದರ್ಭ ಪಿಡಿಒ ತಮ್ಮ ಮೊಬೈಲ್​ನಿಂದ ಅವರ ಫೋಟೋ ಕ್ಲಿಕ್ಕಿಸಲು ಯತ್ನಿಸಿದಾಗ ಎಲ್ಲರೂ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article