
Mangalore; ಅಡ್ಯಾರ್ ನಲ್ಲಿ ಭೀಕರ ಅಪಘಾತ- ಇಬ್ಬರು ಸಾವು
Friday, May 28, 2021
ಮಂಗಳೂರು: ಮಂಗಳೂರಿನ ಅಡ್ಯಾರ್ ನಲ್ಲಿ ಟ್ಯಾಂಕರ್ ಗೆ ಹಿಂಬದಿಯಿಂದ ಓಮ್ನಿ ಕಾರು ಢಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಎಂ ಡಿ ಹುನಿಜ್ (33), ದಾವೂದ್ (27 ) ಮೃತರು. ಮಂಗಳೂರಿನಿಂದ ಬಿಸಿ ರೋಡ್ ಗೆ ಹೋಗುತ್ತಿದ್ದ ಓಮ್ನಿ ಕಾರು ಅಡ್ಯಾರ್ ಬಳಿ ಟ್ಯಾಂಕರ್ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದರು.ಆದರೆ ಎಂ ಡಿ ಹುನಿಜ್ (33), ದಾವೂದ್ (27 ) ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಓಮ್ನಿ ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.