-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರೀತಿಸಿ ಮದುವೆಯಾದವನ ಜೊತೆ ಬಾಳಿದ್ದು ಒಂದೇ ವರ್ಷ... !! ವಿಧಿಯಾಟ ಬಲ್ಲವರ್ಯಾರು...??

ಪ್ರೀತಿಸಿ ಮದುವೆಯಾದವನ ಜೊತೆ ಬಾಳಿದ್ದು ಒಂದೇ ವರ್ಷ... !! ವಿಧಿಯಾಟ ಬಲ್ಲವರ್ಯಾರು...??

 ಹೊಸನಗರ: ಮದುವೆನೇ ಆಗಲ್ಲ ಎಂದವಳು ತಾನು ಪ್ರೀತಿಸಿದ ಹುಡುಗನೊಂದಿಗೆ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿ ಒಂದು ವರ್ಷ ತುಂಬುವ ಮುನ್ನವೇ ದುರಂತ ಸಾವನ್ನಪ್ಪಿದ್ದಾಳೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಬೆಳಗೋಡು ಸಮೀಪದ ಗೋಳಗೊಂಡೆ ಗ್ರಾಮದ ಸೌಂದರ್ಯಾ(೨೧) ಮೃತ ದುರ್ದೈವಿ. ಈಕೆಗೆ  ಕಾಡಿಗ್ಗೇರಿಯ ಉಮೇಶ್ ಎಂಬಾತನ ಜೊತೆ ಫೇಸ್​ಬುಕ್​ನಿಂದ ಗೆಳೆತನ ಶುರುವಾಗಿ ಕ್ರಮೇಣ ಪ್ರೇಮಾಂಕುರವಾಗಿತ್ತು. ಇವರಿಬ್ಬರ ಜಾತಿ ಬೇರೆ ಎಂಬ ಕಾರಣ ಮನೆಯಲ್ಲಿ ಮದುವೆಗೆ ಒಪ್ಪಿಗೆ ಇರಲಿಲ್ಲ. ವಿರೋಧದ ನಡುವೆಯೂ ಇವರಿಬ್ಬರೂ 2020ರ ನವೆಂಬರ್​ನಲ್ಲಿ ವಿವಾಹವಾಗಿದ್ದರು. ನಂತರ ಸೌಂದರ್ಯ ತನ್ನ ಗಂಡನ ಮನೆಯಲ್ಲಿ ವಾಸವಿದ್ದಳು.

 ತಂಗಿ ಐಶ್ವರ್ಯಾ ಮೃತಪಟ್ಟಾಗ ಶವಸಂಸ್ಕಾರದ ವೇಳೆ ಉಮೇಶ್​ನೊಂದಿಗೆ ಹೋಗಿದ್ದಳು. ಇದಾದ 17 ನೇ ದಿನಕ್ಕೆ ಸೌಂದರ್ಯ ಮೃತದೇಹ ಇವಳ ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅನುಮಾಸ್ಪದವಾಗಿ ಪತ್ತೆಯಾಗಿದೆ. ಮಗಳ ಸಾವಿಗೆ ಅಳಿಯ ಉಮೇಶ್, ಆತನ ತಂದೆ ಪಾಂಡುರಂಗ, ತಾಯಿ ಶಾಂತಮ್ಮ, ಸಹೋದರಿ ರೂಪಾ ಕಾರಣ. ಬೇರೆ ಜಾತಿ ಎಂಬ ಕಾರಣಕ್ಕೆ ನನ್ನ ಮಗಳಿಗೆ ಹಿಂಸೆ ನೀಡಿದ್ದಾರೆ. ಅಲ್ಲದೆ ಉಮೇಶನಿಗೆ ಬೇರೊಂದು ಮದುವೆ ಮಾಡಲು ಯೋಜನೆ ಮಾಡಿದ್ದರು ಎಂದು ಮೃತಳ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. 


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99