ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂಬಾತ ಕುಡಿದು ಮಹಿಳೆಯ ಮುಂದೆ ಅಸಭ್ಯವಾಗಿ ವರ್ತಿಸಿದ್ದ. ಈತನ ರಂಪಾಟವನ್ನು ವಿಡಿಯೋ ಮಾಡಿದ ಸ್ಥಳೀಯರು ಪೊಲೀಸರಿಗೆ ಕೊಟ್ಟಿದ್ದು. ಇದರಿಂದ ಕೋಪಗೊಂಡ ಆತನ ಮಕ್ಕಳಾದ ಮಹೇಂದ್ರ ಮತ್ತು ಸಂತೋಷ್ ಎಂಬವರು, ಇಂದು ಮೂವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ದಾಂಧಲೆ ನಡೆಸಿದ್ದಾರೆ.
ಅಸಭ್ಯವಾಗಿ ವರ್ತಿಸಿದ ತಾಂಡವಮೂರ್ತಿ ಮತ್ತು ಹಲ್ಲೆ ನಡೆಸಿದ ಆತನ ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ.