-->
ಪ್ರಿಯಕರನ ಜೊತೆ ಮದುವೆ ಮಾಡಿಸುವುದಾಗಿ ನಂಬಿಸಿ ಸೊಸೆಯನ್ನೇ ಕೊಲೆಗೈದ ಮಾವ.!!

ಪ್ರಿಯಕರನ ಜೊತೆ ಮದುವೆ ಮಾಡಿಸುವುದಾಗಿ ನಂಬಿಸಿ ಸೊಸೆಯನ್ನೇ ಕೊಲೆಗೈದ ಮಾವ.!!


ಮುದ್ದೇಬಿಹಾಳ:
 ಜೂನ್​​​​​ 9ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿಯ ಇಣಚಗಲ್ ಸೇತುವೆ ಬಳಿ ಅಪ್ರಾಪ್ತೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆಯಾದ ಬಾಲಕಿಯನ್ನು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್​​​ ಠಾಣಾ ವ್ಯಾಪ್ತಿಯ ಬಳುಂಡಗಿ ಗ್ರಾಮದ ಆರತಿ ಮಲ್ಲಪ್ಪ ಬಿಲ್ಲಾಡ (17) ಎಂದು ಗುರುತಿಸಲಾಗಿದೆ.

ಬಾಲಕಿಯ ಸೋದರಮಾವ ಸಿದ್ರಾಮಪ್ಪ ಕಲ್ಲಪ್ಪ ಅವಟಿ (43) ಎಂಬಾತನೇ ಕೊಲೆ ಆರೋಪಿ ಎಂಬುದು ಬಯಲಾಗಿದೆ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article