-->

ಮತ್ತೆ ಮಹಾಭಾರತದ ಕಥೆ ನೆನಪಿಸಿದ ಘಟನೆ- ಗಂಗೆಯಲ್ಲಿ ಪೆಟ್ಟಿಗೆಯಲ್ಲಿ ತೇಲಿ ಬಂತು ಮಗು!

ಮತ್ತೆ ಮಹಾಭಾರತದ ಕಥೆ ನೆನಪಿಸಿದ ಘಟನೆ- ಗಂಗೆಯಲ್ಲಿ ಪೆಟ್ಟಿಗೆಯಲ್ಲಿ ತೇಲಿ ಬಂತು ಮಗು!

ಗಾಜಿಪುರ: ನವಜಾತ ಶಿಶುವನ್ನು ಪೆಟ್ಟಿಗೆಯಲ್ಲಿಟ್ಟು ಗಂಗಾನದಿಯಲ್ಲಿ ತೇಲಿ ಬಿಟ್ಟಿರುವ ಘಟನೆ ದಾದ್ರಿಘಾಟ್​ ಬಳಿ ನಡೆದಿದೆ. 

ಪೆಟ್ಟಿಗೆಯಲ್ಲಿ ಕಂಡುಬಂದ ಜನನ ಪ್ರಮಾಣಪತ್ರದ ಪ್ರಕಾರ ಮಗುವಿನ ಹೆಸರು ಗಂಗಾ.ಗಾಳಿ ಜೋರಾಗಿ ಬೀಸಿದ್ದರಿಂದ ಮರದ ಪೆಟ್ಟಿಗೆಯು ದಡಕ್ಕೆ ಬಂದಿತ್ತು. ಅದರಲ್ಲಿ ಮಗು ಅಳುವ ಶಬ್ದ ಕೇಳಿ ಬಂದಿದ್ದು, ಸ್ಥಳೀಯರು ಆ ಬಾಕ್ಸ್​ ಅನ್ನು ತೆರೆದು ನೋಡಿದಾಗ ಅದರಲ್ಲಿ ಮಗು ಇರುವುದು ಪತ್ತೆಯಾಗಿದೆ.

ಗಂಗೆಯಲ್ಲಿ ತೇಲಿಬಂದ ಈ ಮಗು ನಿಜಕ್ಕೂ ದೇವತೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 21 ದಿನದ ಮಗುವಿದ್ದ ಆ ಪೆಟ್ಟಿಗೆಯಲ್ಲಿ ದುರ್ಗಾದೇವಿ ಮತ್ತು ವಿಷ್ಣುವಿನ ಫೋಟೋಗಳಿದ್ದವು. ಇದರೊಂದಿಗೆ ಮಗುವಿನ ಜಾತಕ ಕೂಡ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗುಲ್ಲು ಎಂಬ ವ್ಯಕ್ತಿ ಮಗುವನ್ನು ಮನೆಗೆ ಕರೆದೊಯ್ದು ಸ್ನಾನ ಮಾಡಿಸಿ ಹಾಲು ಕೊಟ್ಟಿದ್ದಾರೆ. ಸದ್ಯ ಬಾಲಕಿ ಪೊಲೀಸ್ ರಕ್ಷಣೆಯಲ್ಲಿದ್ದಾಳೆ. ಸೋಮವಾರ ಸಂಜೆ, ಯುವಕ ಮತ್ತು ಯುವತಿಯರಿಬ್ಬರು ಮಲ್ಲಾ ಬಳಿಯ ದಾದ್ರಿ ಘಾಟ್‌ಗೆ ಬಂದು ಮಗು ನೀಡುವಂತೆ ಕೇಳಿದಾಗ ಗುಲ್ಲು ನಿರಾಕರಿಸಿದ್ದಾರೆ. ಅಲ್ಲದೆ, ಆ ಮಗುವನ್ನು ಬೆಳೆಸುವ ಜವಾಬ್ದಾರಿಯನ್ನು ನಾವೇ ಹೊರುತ್ತೇವೆ ಎಂದು ಅವರು ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದು ವಾರದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99