-->
ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ: ದೇಶದಲ್ಲಿಯೇ ಮೊತ್ತಮೊದಲ ಪ್ರಕರಣ

ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ: ದೇಶದಲ್ಲಿಯೇ ಮೊತ್ತಮೊದಲ ಪ್ರಕರಣ

ಮೈಸೂರು: ಮಧುಮೇಹದೊಂದಿಗೆ ಮೂತ್ರಪಿಂಡ ಕಾಯಿಲೆಗೆ ಒಳಗಾಗಿದ್ದ 35 ವರ್ಷದ ಗರ್ಭಿಣಿಯೋರ್ವರು ಅಂಗಾಂಗ ಕಸಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದರೂ ಅಪೋಲೊ  ಬಿಜಿಎಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ‌‌. ಇದೊಂದು ಭಾರೀ ವಿರಳ ಪ್ರಕರಣವಾಗಿದೆ. ಅಲ್ಲದೆ ದೇಶದಲ್ಲೇ ಈ ರೀತಿಯ ಹೆರಿಗೆಯು ಮೊತ್ತಮೊದಲ ಪ್ರಕರಣವಾಗಿದೆ.

ಮಹಿಳೆಯು ಕಳೆದ ಮೂರು ವರ್ಷಗಳ ಹಿಂದೆ ಏಕಕಾಲಿಕ ಮೇದೋಜ್ಜಿರಕ ಗ್ರಂಥಿ, ಕಿಡ್ನಿ ಕಸಿ(ಎಸ್‌ಪಿಕೆಟಿ)ಗೆ ಮಹಿಳೆ ಒಳಗಾಗಿದ್ದರು‌. ಬಾಲ್ಯದಲ್ಲಿಯೇ ಮಧುಮೇಹ ಮತ್ತು ಡಯಾಲಿಸಿಸಸ್‌ನೊಂದಿಗೆ ದೀರ್ಘ ಕಾಲದ ಮೂತ್ರ ಪಿಂಡ (ಸಿಕೆಡಿ) ಕಾಯಿಲೆಯಿಂದಲೂ ಅವರು ಬಳಲುತ್ತಿದ್ದರು. ಕುವೆಂಪು ನಗರದ ಅಪೋಲೋ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ಈ ಗರ್ಭಿಣಿಗೆ ಹೆರಿಗೆಯಾಗಿದ್ದು, ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ.

ಈ ಯಶಸ್ವಿ ಹೆರಿಗೆ ದೇಶದಲ್ಲಿಯೇ ಮೊತ್ತ ಮೊದಲನೆಯದಾಗಿದೆ. ಎಸ್‌ಪಿಕೆಟಿ ನಂತರದ ರೋಗಿಯು ಸ್ವಾಭಾವಿಕವಾಗಿ ಗರ್ಭಧರಿಸಲು ಮತ್ತು ಆರೋಗ್ಯಕರ ಮಗುವಿಗೆ ಜನ್ಮ ನೀಡಲು ಸಾಧ್ಯವಾದ ಮೊದಲ ಪ್ರಕರಣ ಇದಾಗಿದೆ.

ಕಸಿ ಶಸ್ತ್ರ ಚಿಕಿತ್ಸಕ ಕನ್ಸಲ್ಟೆಂಟ್ ಡಾ.ಸುರೇಶ್‌ ರಾಘವಯ್ಯ, ಸ್ತ್ರೀ ರೋಗ ತಜ್ಞರಾದ ಡಾ.ಬಿ.ಪಿ ಅಂಜಲಿ, ಅರಿವಳಿಕೆ ತಜ್ಞರಾದ ಡಾ.ಅಂದಿತಾ ಮುಖರ್ಜಿ ಈ ಚಿಕಿತ್ಸಾ ತಂಡದಲ್ಲಿದ್ದರು ಎಂದು ಆಪೊಲೊ ಬಿಜಿಎಸ್ ಆಸ್ಪತ್ರೆಯ ಆಡಳಿತ ವಿಭಾಗದ ಉಪಾಧ್ಯಕ್ಷ ಎನ್.ಜಿ.ಭರತೀಶ್ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article