ಕವಿತಾ(17) ಅಣ್ಣನಿಂದಲೇ ಮೃತಪಟ್ಟ ದುರ್ದೈವಿ. ಕಳೆದ ಕೆಲ ತಿಂಗಳಿಂದ ಕವಿತಾಳ ಸಹೋದರ ಮಲೈರಾಜ್ ಮೊಬೈಲ್ನಲ್ಲಿ ಫೇಸ್ಬುಕ್, ವಾಟ್ಸ್ಆ್ಯಪ್ ಬಳಕೆ ಮಾಡುತ್ತಿದ್ದಳು. ಹಾಗೂ ರಾತ್ರಿಯಿಡೀ ಗೇಮ್ ಆಡುತ್ತಿದ್ದಳು. ಇದರಿಂದ ಆಕ್ರೋಶಗೊಂಡ ಮಲೈರಾಜ ಇನ್ನು ಮುಂದೆ ಮೊಬೈಲ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದ್ದನು. ಅಣ್ಣನ ಮಾತು ಕೇಳದ ಕವಿತಾ ತನ್ನ ಕೆಲಸ ಮುಂದುವರೆಸಿದ್ದಳು. ನಿನ್ನೆ ಸಂಜೆ ಈ ವಿಚಾರದ ಬಗ್ಗೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕುಪಿತಗೊಂಡಿರುವ ಮಲೈರಾಜ ಕುಡುಗೋಲಿನಿಂದ ಸಹೋದರಿ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮಲೈರಾಜನನ್ನ ಬಂಧನ ಮಾಡಿದ್ದು, ತನಿಖೆ ನಡೆಸುತ್ತಿದ್ದಾರೆ.