-->

ಸಿಕ್ಕಾಪಟ್ಟೆ ಮೊಬೈಲ್ ಬಳಕೆ.. ಕೊನೆಗೆ ಅಣ್ಣನಿಂದಲೇ ಕೊಲೆಯಾದ ತಂಗಿ..!!

ಸಿಕ್ಕಾಪಟ್ಟೆ ಮೊಬೈಲ್ ಬಳಕೆ.. ಕೊನೆಗೆ ಅಣ್ಣನಿಂದಲೇ ಕೊಲೆಯಾದ ತಂಗಿ..!!

ತೂತುಕುಡಿ (ತಮಿಳುನಾಡು): ಅತಿಯಾದ ಮೊಬೈಲ್​ ಬಳಕೆ ಮಾಡ್ತಿದ್ದ ಸಹೋದರಿಯನ್ನ ಅಣ್ಣನೊಬ್ಬ ಕೊಲೆ ಮಾಡಿರುವ ಘಟನೆ ತೂತುಕುಡಿಯ ವಾಸವಪ್ಪಪುರಂ ಗ್ರಾಮದಲ್ಲಿ ನಡೆದಿದೆ. 

 ಕವಿತಾ(17) ಅಣ್ಣನಿಂದಲೇ ಮೃತಪಟ್ಟ ದುರ್ದೈವಿ. ಕಳೆದ ಕೆಲ ತಿಂಗಳಿಂದ ಕವಿತಾಳ ಸಹೋದರ ಮಲೈರಾಜ್ ಮೊಬೈಲ್​​ನಲ್ಲಿ ಫೇಸ್​ಬುಕ್​, ವಾಟ್ಸ್​​​ಆ್ಯಪ್​ ಬಳಕೆ ಮಾಡುತ್ತಿದ್ದಳು. ಹಾಗೂ ರಾತ್ರಿಯಿಡೀ ಗೇಮ್​ ಆಡುತ್ತಿದ್ದಳು. ಇದರಿಂದ ಆಕ್ರೋಶಗೊಂಡ ಮಲೈರಾಜ ಇನ್ನು ಮುಂದೆ ಮೊಬೈಲ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದ್ದನು. ಅಣ್ಣನ ಮಾತು ಕೇಳದ ಕವಿತಾ ತನ್ನ ಕೆಲಸ ಮುಂದುವರೆಸಿದ್ದಳು. ನಿನ್ನೆ ಸಂಜೆ ಈ ವಿಚಾರದ ಬಗ್ಗೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕುಪಿತಗೊಂಡಿರುವ ಮಲೈರಾಜ ಕುಡುಗೋಲಿನಿಂದ ಸಹೋದರಿ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. 

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮಲೈರಾಜನನ್ನ ಬಂಧನ ಮಾಡಿದ್ದು, ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99