-->

ಪ್ರೀತಿ ತಿರಸ್ಕರಿಸಿದ್ದಕ್ಕಾಗಿ ಚಾಕುವಿನಿಂದ ಚುಚ್ಚಿ ಕೊಂದ ಪಾಗಲ್ ಪ್ರೇಮಿ

ಪ್ರೀತಿ ತಿರಸ್ಕರಿಸಿದ್ದಕ್ಕಾಗಿ ಚಾಕುವಿನಿಂದ ಚುಚ್ಚಿ ಕೊಂದ ಪಾಗಲ್ ಪ್ರೇಮಿ

 ಕಡಪ: ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆತಂಕಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಬಡವೇಲು ವಲಯದಲ್ಲಿ ನಡೆದಿದೆ. 

ಬ್ಯಾಡ್​ವೆಲ್​ ವೀರರೆಡ್ಡಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ 18 ವರ್ಷದ ಸಿರಿಷಾಳನ್ನು ಚರಣ್​ ಎಂಬಾತ  ಸದಾ ಹಿಂಬಾಲಿಸುತ್ತಾ ಪ್ರೀತಿ ಮಾಡುವಂತೆ ಒತ್ತಾಯಿಸಿ ಆಕೆ ತಿರಸ್ಕರಿಸಿದಾಗ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.

 ಇದನ್ನು ನೋಡಿದ ಗ್ರಾಮಸ್ಥರು ಚರಣ್​ನನ್ನು ಹಿಡಿದು, ಮರಕ್ಕೆ ಕಟ್ಟಿ, ಚೆನ್ನಾಗಿ ಥಳಿಸಿ.ಆತ ಮೂರ್ಛೆ ಹೋದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪೊಲೀಸರು ಚರಣ್​ನನ್ನು ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99