ಸಾವನ್ನಪ್ಪಿದ ರೇಣುಕಾಗೆ ಬಸವರಾಜ ಎಂಬಾತನೊಂದಿಗೆ ಅನೈತಿಕ ಸಂಬಂಧವಿದ್ದು, ಇದರೊಟ್ಟಿಗೆ ಇನ್ನೊಬ್ಬರ ಜೊತೆಗೆ ಸಲುಗೆ ಬೆಳೆದಿತ್ತು ಎನ್ನಲಾಗಿದೆ. ಈ ಕಾರಣಕ್ಕಾಗಿಯೇ ಮೊದಲನೇ ಪ್ರಿಯಕರ ಬಸವರಾಜ ಕೋಪಗೊಂಡು ಆಕೆಯನ್ನು ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.ಇದು ಪೂರ್ವನಿಯೋಜಿತ ಕೊಲೆ ಎಂದು ಮೃತಳ ಸಹೋದರ ಲಕ್ಕಪ್ಪ ನಿಗರಿ ಮುದ್ದೇ ಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.
ರೇಣುಕಾಳ ಜೊತೆ ಬಸಪ್ಪ ಕೂಡ ವಿಷಸೇವನೆ ಮಾಡಿದ್ದು ಆತನನ್ನು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಇದೀಗ ಆತ ಚೇತರಿಸಿಕೊಳ್ಳುತ್ತಿದ್ದು ಪೊಲೀಸರ ವಿಚಾರಣೆಗೆ ಒಳಗಾಗಿದ್ದಾನೆ.