ಮೃತರನ್ನ ಮಮತಾ(45), ರೂಪಾಲಿ(21), ದಿಯಾ(14), ಪೂಜಾ(15) ಹಾಗೂ ಪವನ್(6) ಎಂದು ಗುರುತಿಸಲಾಗಿದೆ.
ಸುರೇಂದ್ರ ಅನೇಕ ದಿನಗಳಿಂದ ರೂಪಾಲಿಗೆ ಪರಿಚಯವಿದ್ದ ಕಾರಣ ಮೇಲಿಂದ ಮೇಲೆ ಅವರ ಮನೆಗೆ ಭೇಟಿ ನೀಡುತ್ತಿದ್ದನು. ಈ ವೇಳೆ ಆಕೆ ಜತೆ ಸಂಬಂಧ ಹೊಂದಿದ್ದಾನೆ. ತನದಂತರ ಬೇರೆ ಮಹಿಳೆ ಜತೆ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದನು.ಇದರ ಬಗ್ಗೆ ರೂಪಾಲಿಗೆ ಗೊತ್ತಾಗುತ್ತಿದ್ದಂತೆ ಆಕ್ಷೇಪ ವ್ಯಕ್ತಪಡಿಸಿ, ಇಬ್ಬರು ಒಟ್ಟಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಳು. ಇದರಿಂದ ಆಕ್ರೋಶಗೊಂಡಿದ್ದ ಸುರೇಂದ್ರ ತಾಳ್ಮೆ ಕಳೆದುಕೊಂಡಿದ್ದಾನೆ. ಹೀಗಾಗಿ ಎಲ್ಲರ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ತದನಂತರ ಜಮೀನಿನಲ್ಲಿ 8-10 ಆಳದ ಗುಂಡಿ ತೆಗೆದು ಮುಚ್ಚಿ ಹಾಕಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸುರೇಂದ್ರ ಹಾಗೂ ಇತರೆ ನಾಲ್ವರು ಶಂಕಿತರ ಬಂಧನ ಮಾಡಲಾಗಿದ್ದು, ಉಳಿದ ಏಳು ಮಂದಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.