ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ಜಾರಿಗೆ ತಂದ ನಂತರ ಬಿಎಸ್ಪಿ ಜತೆಗಿನ ಹೊಸ ಮೈತ್ರಿಯೊಂದಿಗೆ ಸುಖ್ ಬೀರ್ ಸಿಂಗ್ ಬಾದಲ್ ನೇತೃತ್ವದ ಪಕ್ಷ ಹಲವಾರು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಲೆಕ್ಕಾಚಾರ ಹೊಂದಿದೆ ಎಂದು ವರದಿ ತಿಳಿಸಿದೆ.
ಬಿಎಸ್ಪಿ ಮೈತ್ರಿ ಪಂಜಾಬ್ ನ 13 ಸ್ಥಾನಗಳಲ್ಲಿ 11 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಮಾಯಾವತಿ ನೇತೃತ್ವದ ಬಿಎಸ್ಪಿ ಸ್ಪರ್ಧಿಸಿದ್ದ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಅಕಾಲಿ ದಳ 10ರಲ್ಲಿ ಎಂಟು ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು ಎಂದು ವರದಿ ತಿಳಿಸಿದೆ.