-->
ಬ್ಯೂಟಿಪಾರ್ಲರ್ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ- ನಾಲ್ವರ ಆರೋಪ ಸಾಬೀತು...

ಬ್ಯೂಟಿಪಾರ್ಲರ್ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ- ನಾಲ್ವರ ಆರೋಪ ಸಾಬೀತು...

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣದ ನಾಲ್ವರು ಆರೋಪಿಗಳ ಮೇಲಿದ್ದ ಆರೋಪ ಸಾಬೀತಾಗಿದೆ.

2015ರ ಏ.18ರಂದು ಶೃಂಗೇರಿಯಲ್ಲಿ ಬ್ಯೂಟಿ ಪಾರ್ಲರ್ ಯುವತಿಯ ಮೇಲೆ ಗಣೇಶ್, ಕಬೀರ್, ಮಜೀದ್ ಹಾಗೂ ಪಾಲ್ ಪಿಂಟೋ ಎಂಬುವರು ಆ್ಯಸಿಡ್ ಎರಚಿದ್ದರು. ಶೃಂಗೇರಿ ಪೊಲೀಸ್ ಠಾಣಾಧಿಕಾರಿ ಸುಧೀರ್ ಹೆಗ್ಡೆ 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಾದ ಪ್ರತಿವಾದಗಳನ್ನು ಆಲಿಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನ ದೋಷಿಗಳೆಂದು ಆದೇಶಿಸಿದ್ದು ಶಿಕ್ಷೆಯ ಪ್ರಮಾಣವನ್ನು ಜು.15ರಂದು ಘೋಷಿಸಲಿದ್ದಾರೆ. 

Ads on article

Advertise in articles 1

advertising articles 2

Advertise under the article