-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪತ್ನಿ ವಿಚ್ಛೇದನ ಕೇಳಿದಳೆಂದು ಮನನೊಂದು ಬಾವಿಗೆ ಹಾರಿದ ಗಂಡ....

ಪತ್ನಿ ವಿಚ್ಛೇದನ ಕೇಳಿದಳೆಂದು ಮನನೊಂದು ಬಾವಿಗೆ ಹಾರಿದ ಗಂಡ....

 ತಿಪಟೂರು:  ವಿಚ್ಛೇದನ ಬೇಕು ಎಂದ ಪತ್ನಿ ಮಾತಿಗೆ ಮನನೊಂದು ಗಂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಸಮೀಪದ ಮಡೇನೂರು  ಕಾಲೋನಿಯಲ್ಲಿ ಸಂಭವಿಸಿದೆ.

 ಅರಸೀಕೆರೆ ತಾಲೂಕು ನಾರಾಯಣಘಟ್ಟಿಹಳ್ಳಿ ನಿವಾಸಿ ಗಂಗಾಧರ್ (39) ಮೃತ ದುರ್ದೈವಿ. ಈತನಿಗೆ 17 ವರ್ಷದ ಹಿಂದೆ ಅನಿತಾ ಎಂಬಾಕೆ ಜತೆ ಮದುವೆ ಆಗಿತ್ತು. ಕೌಟುಂಬಿಕ ಕಲಹದಿಂದ ಪತಿಯನ್ನು ತೊರೆದಿದ್ದ ಅನಿತಾ, 7 ವರ್ಷದ ಹಿಂದೆಯೇ ತವರು ಸೇರಿದ್ದಳು. ಈ ನಡುವೆ ಪತ್ನಿ ತುರುವೇಕೆರೆ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹಂತದಲ್ಲಿ ಇತ್ತು. ಪತ್ನಿ ದೂರಾವಾಗುತ್ತಾಳೆ ಎಂದು ಮನನೊಂದ ಗಂಗಾಧರ್, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮಾಂತರ ಠಾಣೆ ಎಸ್​ಐ ಕೃಷ್ಣಕುಮಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99