ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

Mangalore- ಬೆಳ್ತಂಗಡಿಯಲ್ಲಿ ಮದುವೆಯಾಗುವ ಭರವಸೆ ನೀಡಿ ಯುವತಿಯೊಂದಿಗೆ ಸಲುಗೆ- ಗರ್ಭಿಣಿಯಾದ ಬಳಿಕ ವಂಚನೆ


ಮಂಗಳೂರು: ಮದುವೆಯಾಗುವುದಾಗಿ ಭರವಸೆ ನೀಡಿ  ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ವಂಚನೆ ಮಾಡಿದ  ಯುವಕನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಿರಣ್ ಬಂಧಿತ ಆರೋಪಿ. ಈತ ಯುವತಿಯೊಂದಿಗೆ ಸಲುಗೆಯಿಂದ ಇದ್ದು, ಹುಡುಗಿಯ ಮನೆಗೆ ಹೋಗಿ ಬರುತ್ತಿದ್ದ. ಇವರಿಬ್ಬರ ನಡುವೆ ಸಲುಗೆ ಬೆಳೆದು ಆತ ಆಕೆಗೆ ಮದುವೆಯಾಗುವುದಾಗಿಯೂ ನಂಬಿಸಿದ್ದನು. ಯುವತಿಯ ಆಕ್ಷೇಪದ ನಡುವೆ ಲೈಂಗಿಕವಾಗಿ ಬಳಸಿಕೊಂಡು ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆ‌ . ಇದೀಗ ಯುವತಿ ಏಳೂವರೆ ತಿಂಗಳ ಗರ್ಭಿಣಿಯಾಗಿದ್ದು ಮದುವೆಯಾಗದೆ ವಂಚನೆ ಮಾಡಿದ ಕಿರಣ್ ವಿರುದ್ಧ ದೂರು ದಾಖಲಿಸಿದ್ದಾಳೆ.  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಕಿರಣ್ ನನ್ನು ಬಂಧಿಸಿದ್ದಾರೆ.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW