ಸ್ವಾಗತ, | ವ್ಯಾಲಿಡಿಟಿ:

ನಿಮ್ಮ ಪೇಜ್ ಲೋಡ್ ಆಗುತ್ತಿದೆ...

ದಯವಿಟ್ಟು ಕಾಯಿರಿ

ಗಲ್ಫ್ ಕನ್ನಡಿಗ ನ್ಯೂಸ್ ಓದಿ

ಗೂಗಲ್ ಲಾಗಿನ್ ಆಗಿ 24 ಗಂಟೆಗೆ 1 ರೂಪಾಯಿ ಪಾವತಿಸಿ

CASHFREE ADMIN LOGIN

ಬಾಲ್ಯವಿವಾಹಕ್ಕೆ ಬೇಸತ್ತು ಮನೆ ಬಿಟ್ಟು ಓಡಿ ಬಂದ ಬಾಲಕಿ...

ಕೋಲಾರ: ಬಾಲ್ಯ ವಿವಾಹದಿಂದ ಬೇಸತ್ತು ಬುಧವಾರ ರಾತ್ರೋರಾತ್ರಿ ಮನೆ ಬಿಟ್ಟು ಬಂದಿದ್ದ ಬಾಲಕಿಯನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹಳೇಪಾಳ್ಯ ಗ್ರಾಮದಲ್ಲಿ ನಡೆದಿದೆ.

ಬಾಲಕಿಯ ರಕ್ಷಣೆಕಳೆದ ಒಂದು ವಾರದ ಹಿಂದೆ ಬಾಲಕಿಗೆ ಮದುವೆ ಮಾಡಲಾಗಿತ್ತು. ಇದರಿಂದ ಮನನೊಂದಿದ್ದ ಆಕೆ ನಿನ್ನೆ ರಾತ್ರಿ ಮನೆ ಬಿಟ್ಟು ಬಂದಿದ್ದಳು.  ರಾಷ್ಟ್ರೀಯ ಹೆದ್ದಾರಿ 75ರ ನಂಗಲಿ ಬಳಿಯ ಹೆದ್ದಾರಿಯಲ್ಲಿ ಇದ್ದ ಬಾಲಕಿಯನ್ನ ವಿಚಾರಣೆ ನಡೆಸಿ, ಆಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರಿಗೆ ಒಪ್ಪಿಸಿದ್ದಾರೆ. 

ಪೋಷಕರು ಈ ಮದುವೆ ಮಾಡಿಸಿದ್ದು, ಇಷ್ಟವಿಲ್ಲದ ಕಾರಣ ಮನೆ ಬಿಟ್ಟು ಬಂದಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ಅಧಿಕಾರಿಗಳು ಬಾಲಕಿಯಿಂದ ಪೋಷಕರ ಮಾಹಿತಿ ಪಡೆದು ಕ್ರಮ ಜರುಗಿಸಲು ಮುಂದಾಗಿದ್ದಾರೆ.