-->
ನಿಶ್ಚಯವಾಗಿದ್ದ ಮದುವೆ ನಿರಾಕರಿಸಿದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ!

ನಿಶ್ಚಯವಾಗಿದ್ದ ಮದುವೆ ನಿರಾಕರಿಸಿದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ!

ರಾಯಚೂರು : ನಿಶ್ಚಯವಾಗಿದ್ದ ಮದುವೆ ನಿರಾಕರಿಸಿದ ತಂಗಿಯನ್ನು ಅಣ್ಣನೇ ಕೊಡಲಿಯಿಂದ ಕೊಚ್ಚಿ ಕೊಂದಿರುವ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ.

ಶ್ಯಾಮಸುಂದರ ತಂಗಿಯನ್ನು ಕೊಲೆ ಮಾಡಿರುವ ಆರೋಪಿ. ಚಂದ್ರಕಲಾ (22) ಕೊಲೆಯಾದ ಯುವತಿ. ಕೊಲೆಯಾದ ಚಂದ್ರಕಲಾಗೆ ಮಾನವಿ ತಾಲೂಕಿನ ಮದ್ಲಾಪುರ ಗ್ರಾಮದ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಚಂದ್ರಕಲಾ ಹುಡುಗ ಕಪ್ಪಗಿದ್ದಾನೆ ಎನ್ನುವ ಕಾರಣಕ್ಕೆ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಳು.
 
ಇದರಿಂದ ಕೋಪಗೊಂಡ ಅಣ್ಣ ಶ್ಯಾಮಸುಂದರ ಕೊಡಲಿಯಿಂದ ಕೊಚ್ಚಿ ತಂಗಿಯನ್ನು ಕೊಂದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article