-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೇರೊಬ್ಬನೊಂದಿಗೆ ಓಡಿಹೋದ ಮಗನ ಹೆಂಡತಿಯನ್ನು ಕೊಂದು ಠಾಣೆಗೆ ಶರಣಾದ ಮಾವ..

ಬೇರೊಬ್ಬನೊಂದಿಗೆ ಓಡಿಹೋದ ಮಗನ ಹೆಂಡತಿಯನ್ನು ಕೊಂದು ಠಾಣೆಗೆ ಶರಣಾದ ಮಾವ..


ಪೂರ್ವ ಗೋದಾವರಿ : ಸೊಸೆ ಬೇರೆ ಯುವಕನೊಂದಿಗೆ ಓಡಿ ಹೋದಳೆಂದುುು ಆಕೆಯನ್ನು ಮಾವ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆೆ.

ಪ್ರಿಯಾಮಣಿ (25) ಮೃತ ದುರ್ದೈವಿ. ಈಕೆಯ ಮದುವೆ ವಿಜಯ್ಕುಮಾರ್ ಎಂಬಾತನೊಂದಿಗೆ ಆಗಿದ್ದು ಈ ದಂಪತಿಗೆ ಒಬ್ಬ ಮಗನಿದ್ದಾನೆ.ವಿಜಯ್​ಕುಮಾರ್​ ಕೆಲಸದ ನಿಮಿತ್ತವಾಗಿ ಕತಾರ್​ಗೆ ತೆರಳಬೇಕಾಯಿತು.ಮನೆಯಲ್ಲಿ ಒಂಟಿಯಾಗಿದ್ದ ಪ್ರಿಯಾಮಣಿಗೆ ಯುವಕನೊಬ್ಬನ ಪರಿಚಯವಾಗಿದೆ. ಬಳಿಕ ಇವರ ಪರಿಚಯದಿಂದಾಗಿ ಪ್ರಿಯಾ ಜೊತೆ ಆ ಯುವಕ ಬಹಳ ಸಲುಗೆಯಿಂದಿರುತ್ತಿದ್ದ. ಇಬ್ಬರು ಪ್ರೀತಿಯಲ್ಲಿದ್ದರು ಎನ್ನಲಾಗ್ತಿದೆ. ಅಷ್ಟೇ ಅಲ್ಲದೇ ಈ ತಿಂಗಳು 22 ರಂದು ಪ್ರಿಯಾಮಣಿ ಆ ಯುವಕನೊಂದಿಗೆ ಮನೆ ಬಿಟ್ಟು ಓಡಿ ಹೋಗಿದ್ದಳು. ಸೊಸೆ ಪ್ರಿಯಾಮಣಿ ನಾಪತ್ತೆಯಾಗಿದ್ದಾಳೆ ಎಂದು ಮಾವ ಸತ್ಯನಾರಾಯಣ ಪೊಲೀಸ್​ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಪೊಲೀಸರು ಅವರಿಬ್ಬರನ್ನು ಹುಡುಕಿ ವಾಪಸ್​ ಕರೆಸಿ ಕೌನ್ಸಿಲಿಂಗ್​ ಬಳಿಕ ಕುಟುಂಬಸ್ಥರಿಗೆ ಒಪ್ಪಿಸಿದ್ದರು. ನಂತರ ಮನೆಯಲ್ಲಿ ಮಾವ ಮತ್ತು ಸೊಸೆಯ ನಡುವೆ ಜಗಳವಾಗಿದೆ. ಇವರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ್ದು, ಮಾವ ಸತ್ಯನಾರಾಯಣ ಸೊಸೆ ಪ್ರಿಯಾಮಣಿಗೆ ಚಾಕುವಿನಿಂದ ಹಲವಾರು ಬಾರಿ ಚುಚ್ಚಿ ಕೊಲೆ ಮಾಡಿದ್ದಾರೆ. 

ಕೊಲೆ ಮಾಡಿದ ಬಳಿಕ ಸತ್ಯನಾರಾಯಣ ನೇರ ಪೊಲೀಸ್​ ಠಾಣೆಗೆ ತೆರಳಿ ಶರಣಾದರು. ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99