ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಪತ್ನಿಯ ಮೇಲೆ ಅನುಮಾನ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಪತಿ!

ಹುಬ್ಬಳ್ಳಿ: ಶೀಲ ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕುಸುಗಲ್ಲ ಗ್ರಾಮದಲ್ಲಿ ನಡೆದಿದೆ. 

ಮೈರುನ್ನೀಸಾ ಸೈಫ ಅಲಿ  (31) ಕೊಲೆಯಾಗಿದ್ದಾರೆ.  ಪತಿ ಸೈಫ್ ಅಲಿ, ಪತ್ನಿಯ ಶೀಲದ ಬಗ್ಗೆ ಅನುಮಾನ ಪಡುತ್ತಿದ್ದ. ಶುಕ್ರವಾರ ರಾತ್ರಿ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದಾನೆ. ನಂತರ ಆಕೆಯ ತಲೆಯಮೇಲೆ ಕಲ್ಲು ಎತ್ತಿಹಾಕಿ ಹಾಕಿದಾಗ ತೀವ್ರ ರಕ್ತಸ್ರಾವವಾಗಿ ಗಂಭೀರ ಗಾಯಗೊಂಡಿದ್ದ ಮೈರುನ್ನೀಸಾ ಅವರನ್ನು ಕಿಮ್ಸ್ ಗೆ ದಾಖಲಿಸಲಾಗುತ್ತು. ಚಿಕಿತ್ಸೆ ಫಲಿಸದೆ ರವಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ತೆರಳಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW